ಚಾಮರಾಜನಗರ, ಜೂ.6- ಜಿಲ್ಲೆಯ ಹನೂರು ತಾಲೂಕಿನ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ದೇವಾಲಯದ ದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿ, ಜೂ.8ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಕೆಲ ಷರತ್ತುಗಳೊಂ ದಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ. ದೇವಾಲಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಹಾಗೂ ಭಕ್ತಾದಿಗಳೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ವ್ಯವಸ್ಥೆ ಮಾಡಬೇಕು. ದೇವಾ ಲಯದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ನಿಂದ ತಪಾಸಣೆ ನಡೆಸಬೇಕು. ಭಕ್ತಾದಿಗಳು ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಲು…
ಮೋದಿ ಸಾಧನೆ ಮನೆ ಮನೆಗೂ ಮುಟ್ಟಲಿ
June 7, 2020ಚಾಮರಾಜನಗರ, ಜೂ.6(ಎಸ್ಎಸ್)- ಕೇಂದ್ರ ದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಅವಧಿಯ ಮೊದಲ ವರ್ಷದ ಸಾಧನೆಯನ್ನು ಜಿಲ್ಲೆಯ ಮನೆ ಮನೆಗೂ ತಿಳಿಸಲಾಗುವುದು ಎಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, `ಮೋದಿ ಸರ್ಕಾರ-2, ಒಂದು ವರ್ಷ’ ಎಂಬ ಶೀರ್ಷಿಕೆಯ ಕರಪತ್ರವನ್ನು ಜಿಲ್ಲೆಯ ಎಲ್ಲಾ ಮನೆಗಳಿಗೆ ಹಂಚಲಾಗುವುದು ಎಂದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 2ನೇ ಅವಧಿಗೆ ಆಯ್ಕೆಯಾಗಿ ಒಂದು ವರ್ಷ ಪೂರೈಸಿ ದ್ದಾರೆ….
ಚಾ.ನಗರಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ಸಂಸದ ಆರ್.ಧ್ರುವನಾರಾಯಣ್
June 7, 2020ಚಾಮರಾಜನಗರ, ಜೂ. 6- ಕಾಂಗ್ರೆಸ್ ಸರ್ಕಾರದ ಅವಧಿ ಯಲ್ಲಿ ಜಿಲ್ಲೆಗೆ ಅಪಾರ ಕೊಡುಗೆ ನೀಡಲಾಗಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ನÀಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದÀರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭವನ್ನು ಕೊರೊನಾ ಹಿನ್ನೆಲೆ ಮುಂದೂಡಲಾಗಿದೆ ಎಂದ ಅವರು, ಬಿಜೆಪಿ ಸರ್ಕಾರದ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ಜನರಿಗೆ ತಲುಪಿದೆ ಎಂಬ ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡಲಾಗುತ್ತದೆ. ಆದ್ದರಿಂದ…
ಕೊಳ್ಳೇಗಾಲದಲ್ಲಿ ಬೆಂಕಿ ಅವಘಡ: ಬಟ್ಟೆ ಅಂಗಡಿ ಸಂಪೂರ್ಣ ಭಸ್ಮ
June 7, 2020ಕೊಳ್ಳೇಗಾಲ, ಜೂ.6- ಪಟ್ಟಣದ ದಕ್ಷಿಣ ಬಡಾವಣೆಯಲ್ಲಿರುವ ಮೀನಾಕ್ಷಿ ಟೈಕ್ಸ್ಟೈಲ್ಸ್ ಅಂಗಡಿಗೆ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಬೆಂಕಿ ಅವಘಡದಲ್ಲಿ ಅಂಗಡಿ ಮಾಲೀಕ ಪೂನಂಸಿಂಗ್ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇಂದು ರಾತ್ರಿ 9.30ರ ಸುಮಾರಿನಲ್ಲಿ ವ್ಯಾಪಾರ ಮುಗಿಸಿ ಅಂಗಡಿಯ ಶಟ್ಟರ್ ಅನ್ನು ಮುಕ್ಕಾಲುಭಾಗ ಮುಚ್ಚಿ ಮಾಲೀಕ ದಿನದ ವಹಿವಾಟಿನ ಲೆಕ್ಕ ನೋಡುತ್ತಿದ್ದರು ಎಂದು ಹೇಳಲಾಗಿದ್ದು, ಹಠಾತ್ತನೇ ಭಾರೀ ಶಬ್ದದೊಂದಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಅದೇ ವೇಳೆ ಶಟ್ಟರ್ ಕಿತ್ತು ಬಂದಿದ್ದು,…
ಚಾಮರಾಜನಗರದಲ್ಲಿ ಕೋವಿಡ್ ಪರೀಕ್ಷೆಯ ಪಿಸಿಆರ್ ಪ್ರಯೋಗಾಲಯ ಉದ್ಘಾಟನೆ
May 7, 2020ಚಾಮರಾಜನಗರ, ಮೇ 6(ಎಸ್ಎಸ್)-ರಾಜ್ಯ ಸರ್ಕಾರದ ಅನು ಮೋದನೆಯೊಂದಿಗೆ ಜಿಲ್ಲೆಯ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯಲ್ಲಿ 1.79 ಕೋಟಿ ವೆಚ್ಚದಲ್ಲಿ ಕೋವಿಡ್-19 ಪರೀಕ್ಷಿಸುವ ಪಿಸಿಆರ್ ಪ್ರಯೋಗಾಲಯ ಪ್ರಾರಂಭಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ಕುಮಾರ್ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೈಕ್ರೋ ಬಯಾಲಜಿ ವಿಭಾಗದಲ್ಲಿ ಕೋವಿಡ್-19 ಪರೀಕ್ಷೆ ಸೇರಿದಂತೆ ಪಿಸಿಆರ್ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಬಳಿಕ, ಮಾತನಾಡಿದ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಇತರೆ ಪರೀಕ್ಷೆ ಹಾಗೂ ಸಂಶೋಧನೆಗಳಿಗಾಗಿ ಪಿಸಿಆರ್ ಪ್ರಯೋಗಾಲಯವನ್ನು…
ಚಾಮರಾಜನಗರ ಜಿಲ್ಲಾಡಳಿತದಿಂದ ಸರಳ ಭಗೀರಥ ಮಹರ್ಷಿ ಜಯಂತಿ ಆಚರಣೆ
May 1, 2020ಚಾಮರಾಜನಗರ, ಏ.30- ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ವತಿ ಯಿಂದ ಭಗೀರಥ ಮಹರ್ಷಿ ಅವರ ಜಯಂತಿಯನ್ನು ಕೋವಿಡ್-19 ಹಿನ್ನೆಲೆ ಯಲ್ಲಿ ಸರಳವಾಗಿ ಹಾಗೂ ಸಾಂಕೇತಿಕ ವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಆಯೋಜಿಸಲಾಗಿದ್ದ ಸರಳ ಕಾರ್ಯಕ್ರಮವನ್ನು ಶಾಸಕ ಸಿ. ಪುಟ್ಟರಂಗ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎಸ್. ಮಹೇಶ್ ದೀಪ ಬೆಳಗುವ ಮೂಲಕ ಉದ್ಘಾ ಟಿಸಿದರು. ಇದೇ ಸಂದರ್ಭದಲ್ಲಿ ಮಾತ ನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಭಗೀರಥ ಮಹರ್ಷಿ ಅವರ ಸಾಧನೆ ಸಿದ್ದಾಂತ…
ವಾರಕ್ಕೆ ಒಂದು ದಿನವಾದ್ರೂ ಮದ್ಯ ಬೇಕು
May 1, 2020ಚಾಮರಾಜನಗರ, ಏ.30(ಎಸ್ಎಸ್)- ಮದ್ಯದಂಗಡಿಗಳು ಮುಚ್ಚಿರುವುದರಿಂದ ಕಳ್ಳಭಟ್ಟಿ ದಂಧೆ ಹೆಚ್ಚಾಗಿದೆ. ಮದ್ಯ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದ ರಿಂದ ಗ್ರೀನ್ಝೋನ್ ಇರುವ ಕಡೆಗಳಲ್ಲಿ ವಾರಕ್ಕೆ ಒಂದು ದಿನವಾದರೂ ಎಣ್ಣೆ ಅಂಗಡಿಗಳನ್ನು ತೆರೆಯುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸರ್ಕಾವರನ್ನು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ವೈನ್ಸ್ಟೋರ್ಸ್ಗಳನ್ನು ಮುಚ್ಚಿರುವುದರಿಂದ ಸರ್ಕಾರಕ್ಕೆ ಲಾಸ್ ಆಗುತ್ತಿದೆ. ಮದ್ಯ ಮಾರಾಟ ದಂಧೆ ಯಾಗಿದೆ. ದಿನವೂ ಕುಡಿಯಲೇ ಬೇಕು ಎನ್ನುವವರು 10 ಪಟ್ಟು ಹೆಚ್ಚು ಹಣ ನೀಡಿ ಕುಡಿಯುತ್ತಿದ್ದಾರೆ. ಲೋಕಲ್ ಡ್ರಿಂಕ್ಸ್ಗೆ 400 ರೂ., 500 ರೂ….
ಕೇಂದ್ರ ಸ್ಥಾನದಲ್ಲಿರದೆ ಓಡಾಡುತ್ತಿದ್ದ 14 ಅಧಿಕಾರಿ, ನೌಕರರಿಗೆ ಡಿಸಿ ನೋಟಿಸ್
May 1, 2020ಚಾಮರಾಜನಗರ, ಏ.30- ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡದೇ ಚಾಮರಾಜನಗರ ತಾಲೂಕಿನ ಬಾಣಹಳ್ಳಿ ಚೆಕ್ಪೆÇೀಸ್ಟ್ ಮೂಲಕ ಪ್ರತಿದಿನ ಮೈಸೂರಿಗೆ ಸಂಚರಿಸುತ್ತಿರುವ 14 ಅಧಿಕಾರಿ, ನೌಕರರಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ನಗರದ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶು ಪಾಲರಾದ ಭಾರತಿ, ಯಳಂದೂರು ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿ ಸೋಮಶೇಖರ್, ಪ್ರಥಮ ದರ್ಜೆ ಸಹಾಯಕ ಎಂ.ಆರ್. ರವೀಂದ್ರ, ಚಾಮರಾಜ ನಗರದ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಎಂಜಿನಿಯರ್ ಚಿದಾನಂದ್, ಗುಂಡ್ಲುಪೇಟೆ ತಾಲೂಕಿನ…
ಚಾಮರಾಜನಗರದಲ್ಲಿ ಸರಳವಾಗಿ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ
April 27, 2020ಚಾಮರಾಜನಗರ, ಏ.26- ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಬಸವಣ್ಣನವರು ಮಹಾನ್ ಮಾನ ವತಾವಾದಿ. ತಮ್ಮ ಅನುಭವ ಮಂಟಪದಲ್ಲಿ ಎಲ್ಲರಿಗೂ ಸರಿ ಸಮಾನವಾದ ಅವಕಾಶ ಮಾಡಿ ಕೊಡುವ ಮೂಲಕ ಸಮಾನತೆಯ ಮಹತ್ವವನ್ನು…
ಸಾಮಾಜಿಕ ಅಂತರ ಕಾಪಾಡುವಲ್ಲಿ ಗಿರಿಜನರು ಮೊದಲಿಗರು
April 25, 2020ಯಳಂದೂರು,ಏ.24-ಲಾಕ್ಡೌನ್ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ಗಿರಿಜನರು ಮೊದಲಿಗರು ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು. ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಿರಿಜನರ ಕಾಲೋನಿಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕೊರೊನಾ ಇಡೀ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದೆ. ಈ ಮಹಾಮಾರಿ ವಿರುದ್ಧ ಇಡೀ ವಿಶ್ವವೇ ಸಮರ ಸಾರಿದೆ. ಇದಕ್ಕೆ ಮನೆಯಲ್ಲಿರುವುದೇ ಮದ್ದು. ಸರ್ಕಾರ ಲಾಕ್ಡೌನ್ ಮಾಡಿದ್ದು ಇದಕ್ಕೆ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ಈ ನಿಟ್ಟಿನಲ್ಲಿ ಕಾಡಿನಲ್ಲಿ ವಾಸ ಮಾಡುವ ಬುಡಕಟ್ಟು ಸೋಲಿಗ ಜನಾಂಗದವರು…