ಹನೂರು, ಏ.23- ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸೋಲಿಗ ಹಾಗೂ ಸವಿತಾ ಸಮಾಜದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಹನೂರು ಭಾಗದ ಸವಿತಾ ಸಮಾಜ ದವರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಠ ಕ್ಕೊಳಗಿರುವ ಕ್ಷೇತ್ರದ ಸೋಲಿಗ ಹಾಗೂ ಸವಿತಾ ಸಮಾಜಕ್ಕೆ ಆಹಾರ ಕಿಟ್ ವಿತರಿಸ ಲಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದು ವಾಡಿ, ಸತ್ತೇಗಾಲ, ಮಾರ್ಟಳ್ಳಿ, ಲೊಕ್ಕನ ಹಳ್ಳಿ, ಮ.ಮ.ಬೆಟ್ಟ…
ಕೃಷಿ ಪದಾರ್ಥಗಳನ್ನು ಗ್ರಾಪಂ ವ್ಯಾಪ್ತಿಯಲ್ಲೇ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮನವಿ
April 23, 2020ಚಾಮರಾಜನಗರ ಏ.22- ರೈತರು ಬೆಳೆದ ಪದಾರ್ಥ ಗಳನ್ನು ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲೇ ಮಾರಾಟ ಮಾಡಲು ಸೂಕ್ತ ವ್ಯವಸ್ಥೆ ಮಾಡಿ ಕೊಡುವಂತÉ ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಮನವಿ ಸಲ್ಲಿಸಲಾಯಿತು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಕಾರ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಕೊರೊನಾ ಲಾಕ್ಡೌನ್ ನಿಂದಾಗಿ ರೈತರು ಬೆಳೆದ ಪದಾರ್ಥಗಳ ಮಾರಾಟಕ್ಕೆ ತುಂಬಾ ತೊಂದರೆಯಾಗಿದೆ. ಕೆಲವು ರೈತರು…
37 ಜನರ ಗಂಟಲಿನ ದ್ರವ ಮಾದರಿ ಪರೀಕ್ಷೆಗೆ
April 23, 2020ಚಾಮರಾಜನಗರ, ಏ.22- ಜಿಲ್ಲೆಯಿಂದ ಐಎಲ್ಐ ರೋಗಲಕ್ಷಣ ಗಳು ಕಂಡುಬಂದಿರುವ 37 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಇಂದು ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಏಪ್ರಿಲ್ 20ರಂದು 36 ಮಂದಿ ಹಾಗೂ ಏಪ್ರಿಲ್ 21ರಂದು 27 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳು ಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸ ಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ….
ಕರ್ನಾಟಕ ಆಹಾರ ನಿಗಮದ ಉಗ್ರಾಣಕ್ಕೆ ಡಿಸಿ ದಿಢೀರ್ ಭೇಟಿ: ದಾಸ್ತಾನು ಪರಿಶೀಲನೆ
April 22, 2020ಚಾಮರಾಜನಗರ, ಏ.21- ನಗರದ ಕರ್ನಾಟಕ ಆಹಾರ ನಾಗರಿಕ ಸರಬ ರಾಜು ನಿಗಮದ ಉಗ್ರಾಣಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಂಗಳವಾರ ದಿಢೀರ್ ಭೇಟಿ ನೀಡಿ ಪಡಿತರ ಆಹಾರ ಧಾನ್ಯಗಳ ದಾಸ್ತಾನನ್ನು ಪರಿಶೀಲಿಸಿದರು. ಯಾವ ಸುಳಿವು ನೀಡದೇ ಅನೀಕ್ಷಿತ ವಾಗಿ ಆಹಾರ ನಿಗಮದ ಉಗ್ರಾಣಕ್ಕೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು, ಆಹಾರ ನಿಗಮದ ಉಗ್ರಾಣದಲ್ಲಿದ್ದ ಪಡಿತರಗಳ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಿದರು. ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಿರುವ ಪಡಿತರ ಪ್ರಮಾಣ, ಎತ್ತುವಳಿ ಹಾಗೂ ದಾಸ್ತಾನು ಮಾಡಿರುವ ಲೆಕ್ಕಪತ್ರ ಪರಿ ಶೀಲಿಸಿದ ಅವರು ಭೌತಿಕ ಹಾಗೂ ಲಿಖಿತ…
ಪುಣಜನೂರು ಚೆಕ್ಪೋಸ್ಟ್, ಅಂಗನವಾಡಿ ಕೇಂದ್ರಕ್ಕೆ ಶಾಸಕ ಭೇಟಿ: ಪರಿಶೀಲನೆ
April 22, 2020ಚಾಮರಾಜನಗರ ಏ.21- ತಾಲೂಕಿನ ಕಾಡಂಚಿನ ಗ್ರಾಮ ಪುಣಜನೂರಿನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಸರ್ಕಾರದ ವತಿಯಿಂದ ವಿತರಿಸಿರುವ ಆಹಾರ ಧಾನ್ಯ ಗಳ ದಾಸ್ತಾನನ್ನು ಪರಿಶೀಲಿಸಿದರು. ಪುಣಜನೂರಿನಲ್ಲಿ ವಾಸಿಸುವ ಗಿರಿಜನರಿಗೆ ಸರ್ಕಾರದಿಂದ ಪೂರೈಕೆ ಯಾಗಲಿರುವ ಪೌಷ್ಟಿಕ ಆಹಾರದ ಧಾನ್ಯ ಗಳಾದ ಅಕ್ಕಿ, ರಾಗಿ, ಜೋಳ, ಸಕ್ಕರೆ, ಬೆಲ್ಲ, ಅಡುಗೆ ಎಣ್ಣೆ, ತುಪ್ಪ ಆಹಾರ ಪದಾರ್ಥ ಗಳ ಪ್ರಮಾಣವನ್ನು ಪರಿಶೀಲಿಸಿದರು. ನಂತರ ಕೊರೊನಾ ಹಿನ್ನೆಲೆಯಲ್ಲಿ ತಪಾಸಣೆಗಾಗಿ ಪುಣಜನೂರಿನಲ್ಲಿ ನಿರ್ಮಿಸಿರುವ ಚೆಕ್ಪೋಸ್ಟ್ಗೆ ಭೇಟಿ ನೀಡಿ ಅಗತ್ಯ ವಸ್ತುಗಳ ಸಾಗಾಣಿಕೆ…
ಕಾಡಿಗೆ ಬೆಂಕಿಹಚ್ಚಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ನಾಲ್ವರ ಬಂಧನ
April 22, 2020ಹನೂರು, ಏ.21- ಕಾಡಿಗೆ ಬೆಂಕಿಯಿಟ್ಟು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ನಾಲ್ವರು ಖದೀಮರನ್ನು ಬಂಧಿಸಿರುವ ಘಟನೆ ಕಾವೇರಿ ವನ್ಯಧಾಮದ ಕೊತ್ತನೂರು ವಲಯದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಜಾಗೇರಿ ಗ್ರಾಮದ ವಿನ್ಸೆಂಟ್, ಸಗಾಯ್ ರಾಜ್, ಚಾರ್ಲಿಸ್ ಸವರಿನಾಥನ್ ಹಾಗೂ ಜ್ಞಾನ ಪ್ರಕಾಶ್ ಬಂಧಿತ ಬೇಟೆಗಾರರು. ಆರೋಪಿ ಗಳು ಕಾಡಿಗೆ ಬೆಂಕಿಯಿಟ್ಟು ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನ ಬೇರೆಡೆಗೆ ಸೆಳೆದು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು ಎನ್ನಲಾಗಿದೆ. ಈ ಹಿಂದೆಯೂ ಬೇಟೆಯಾಡಿ ಆರೋಪಿಗಳು ಸಿಕ್ಕಿಬಿದ್ದಿದ್ದರು ಎಂದು ಡಿ ಎಫ್ಓ ಡಾ.ಎಸ್. ರಮೇಶ್ ತಿಳಿಸಿದ್ದಾರೆ. ಪರಿಕರಗಳ ವಶ:…
ಚಾಮರಾಜನಗರ ಜಿಲ್ಲೆಯಲ್ಲಿ ಕಲ್ಲಂಗಡಿ ಖರೀದಿಸಿದ ಸಂಸದ ಡಿ.ಕೆ.ಸುರೇಶ್
April 21, 2020ಚಾಮರಾಜನಗರ, ಏ.20- ಕೊರೊನಾ ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ರೈತರಿಗೆ ಚೈತನ್ಯ ತುಂಬುವ ಸಲುವಾಗಿ ರೈತರಿಂದ ಹಣ್ಣು, ತರಕಾರಿ ಖರೀದಿಸಿ ತಾವು ಪ್ರತಿನಿಧಿಸುತ್ತಿರುವ ಬೆಂಗಳೂರು ಗ್ರಾಮಾಂತರ ಲೋಕ ಸಭಾ ಕ್ಷೇತ್ರದ ಬಡವರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಜಿಲ್ಲೆಯ ಹೂಗ್ಯಂ ಗ್ರಾಪಂ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿ ರೈತ ನಾಗೇಂದ್ರ, ನಾಗರಾಜು ಅವರು 18 ಎಕರೆ ಭೂಮಿಯಲ್ಲಿ ಬೆಳೆದಿದ್ದ ಕಲ್ಲಂಗಡಿ ತೋಟಕ್ಕೆ ಖುದ್ದು ಭೇಟಿದ ಅವರು, ಕೆಜಿಗೆ 6 ರೂ.ನಂತೆ ಕಲ್ಲಂಗಡಿ ಹಣ್ಣು ಖರೀದಿಸಿದರು. ಪಕ್ಕದಲ್ಲೇ ಬೆಳೆದಿದ್ದ…
ಪುರಾಣಿ ಪೋಡಿಗೆ ಡಿಸಿ ಭೇಟಿ: ಸೋಲಿಗರಿಗೆ ಪೌಷ್ಟಿಕ ಆಹಾರ ವಿತರಣೆ
April 21, 2020ಚಾಮರಾಜನಗರ, ಏ.20- ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯ ಪುರಾಣಿ ಪೋಡಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸೋಮವಾರ ಭೇಟಿ ನೀಡಿ ಸೋಲಿಗರ ಕುಟುಂಬ ಗಳಿಗೆ ಪೌಷ್ಟಿಕ ಆಹಾರ ವಿತರಿಸಿ, ಅಹವಾಲು ಆಲಿಸಿದರು. ಜಿಲ್ಲಾ ಎಸ್ಪಿ ಹೆಚ್.ಡಿ ಆನಂದಕುಮಾರ್ ಅವರೊಡನೆ ಪುರಾಣಿ ಪೋಡಿಗೆ ಭೇಟಿ ಕೊಟ್ಟ ಜಿಲ್ಲಾಧಿಕಾರಿಗಳು, ರಾಗಿ, ತೊಗರಿಬೇಳೆ, ಅಲಸಂದೆ, ಕಡ್ಲೇಕಾಳು, ಅಡುಗೆ ಎಣ್ಣೆ, ನಂದಿನಿ ತುಪ್ಪ, ಮೊಟ್ಟೆ ಸೇರಿದಂತೆ 1600 ರೂ. ಮೌಲ್ಯದ ವಿವಿಧ ಆಹಾರ, ದಿನಸಿ ಸಾಮಗ್ರಿಗಳನ್ನೊಳಗೊಂಡ ಪೌಷ್ಠಿಕ ಆಹಾರವನ್ನು ಪ್ರತಿ ಸೋಲಿಗ ಕುಟುಂಬಗಳಿಗೆ ವಿತರಿಸಿದರು….
ಮಹದೇಶ್ವರಸ್ವಾಮಿ ದೇವಸ್ಥಾನದ 32 ಟನ್ ಅಕ್ಕಿ ಬಡಗ್ರಾಮಸ್ಥರಿಗೆ ವಿತರಣೆ
April 20, 2020ಚಾಮರಾಜನಗರ, ಏ.19- ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿ ಹಾಗೂ ಕಾಡಂ ಚಿನ ಪ್ರದೇಶಗಳ 6500 ಕುಟುಂಬ ಗಳಿಗೆ ಶ್ರೀ ಮಲೆ ಮಹ ದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ತಲಾ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ಇದಕ್ಕಾಗಿ ಒಟ್ಟು 32 ಟನ್ ಅಕ್ಕಿ ಬಳಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದರು. ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳಿಂದ ಕಾಣಿಕೆ…
ದಿನ್ನಳ್ಳಿಯಲ್ಲಿ ಕೋಳಿಗಳ ಅನುಮಾನಾಸ್ಪದ ಸಾವು
April 20, 2020ಚಾಮರಾಜನಗರ, ಏ.19- ಹನೂರು ತಾಲೂಕು ರಾಮಾಪುರ ಹೋಬಳಿಯ ದಿನ್ನಳ್ಳಿ ಗ್ರಾಮದಲ್ಲಿ ಸ್ಥಳೀಯ ಕೋಳಿಗಳು, ಮಾಂಸದ ಕೋಳಿಗಳು ಹಾಗೂ ಕಾಗೆಗಳು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳೀಯ ಪಶು ವೈದ್ಯರು ಹಾಗೂ ತಾಲೂಕು ಸಹಾಯಕ ನಿರ್ದೇಶಕ ರೊಡನೆ ಖುದ್ದು ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಸಿ.ವೀರಭಧ್ರಯ್ಯ ತಿಳಿಸಿದ್ದಾರೆ. ಕೋವಿಡ್-19ರ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಸ್ಯಾನಿಟೈಸರ್ ಹಾಗೂ ಹೈಪೋಕ್ಲೋ ರೈಡ್ನ್ನು ಸಿಂಪಡಿಸಿರುವುದರಿಂದ ಅಥವಾ ಯಾವುದಾದರೂ ವಿಷ ಪದಾರ್ಥದ ಮೇವನ್ನು…