ಗುಂಡ್ಲುಪೇಟೆ, ಡಿ.9(ಸೋಮ್.ಜಿ)- ರಾಜ್ಯದ ವಿಧಾನಸಭಾ ಉಪ ಚುನಾವಣೆಯಲ್ಲಿ 15 ಸ್ಥಾನಗಳಲ್ಲಿ 12 ಸ್ಥಾನವನ್ನು ಬಿಜೆಪಿ ಜಯಗಳಿಸಿದ ಹಿನ್ನೆಲೆಯಲ್ಲಿ ಶಾಸಕ ಸಿ.ಎಸ್.ನಿರಂಜನಕುಮಾರ್ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು. ಪಟ್ಟಣದ ಎಂಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಸಮಾವೇಶಗೊಂಡ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜೈ, ನಿರಂಜನ ಕುಮಾರ್ಗೆ ಜೈ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನಿರಂಜನ ಕುಮಾರ್, ಇದೊಂದು ಉತ್ತಮವಾದ-ಫಲಿತಾಂಶ. ಜನತೆ 15 ಸ್ಥಾನಗಳಿಗೆ 12…
ಹನೂರಿನಲ್ಲೂ ಬಿಜೆಪಿ ಗೆಲುವಿನ ಸಂಭ್ರಮ
December 10, 2019ಹನೂರು, ಡಿ.9- ಉಪಚುನಾವಣೆ ಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚು ಸ್ಥಾನ ಗಳನ್ನು ಬಿಜೆಪಿ ಗೆಲುವು ಸಾಧಿಸಿದೆ. ಯಡಿ ಯೂರಪ್ಪನವರ ಸರ್ಕಾರ ಮೂರೂವರೆ ವರ್ಷಗಳ ಕಾಲ ಸುಭದ್ರವಾಗಿ ನಡೆಯ ಲಿದೆ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು. ಹನೂರು ಪಟ್ಟಣದ ಬಸ್ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪರಿಮಳನಾಗಪ್ಪ ನೇತೃತ್ವದಲ್ಲಿ ಕಾರ್ಯ ಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದ ನಂತರ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಪಕ್ಷ ಜನರ ನಿರೀಕ್ಷೆ ಮೀರಿ 12 ಸ್ಥಾನಗಳನ್ನು ಪಡೆಯುವ ಮೂಲಕ…
ಡಿ.15, ರಾಜ್ಯಮಟ್ಟದ ಡಾ. ವಿಷ್ಣುವರ್ಧನ್ ಚಿತ್ರಗೀತೆ ಗಾಯನ ಸ್ಪರ್ಧೆ
December 10, 2019ಚಾಮರಾಜನಗರ, ಡಿ.9- ನಗರದ ಕನ್ನಡ ನೆಲ-ಜಲ ಸಾಂಸ್ಕøತಿಕ ವೇದಿಕೆಯಿಂದ ರಾಜ್ಯಮಟ್ಟದ ಡಾ.ವಿಷ್ಣುವರ್ಧನ್ ಚಲನಚಿತ್ರ ಗೀತೆಗಳ ಗಾಯನ ಸ್ಪರ್ಧೆಯನ್ನು ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಇರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ದಿ.15ರ ಭಾನುವಾರ ಬೆಳಗ್ಗೆ 10-30ಕ್ಕೆ ಹಮ್ಮಿಕೊಳ್ಳಲಾಗಿದೆ. “ವಿಷ್ಣು- ನೆನಪಿನೋತ್ಸವ”À ಅಂಗವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಮೊದಲನೆ ಬಹುಮಾನ 5000 ನಗದು, ಎರಡನೇ ಬಹುಮಾನ 3000 ಮತ್ತು ಮೂರನೇ ಬಹುಮಾನ 2000 ನಗದು ನೀಡಲಾಗುವುದು. ಸಮಾಧಾನಕರ ಬಹುಮಾನಕ್ಕೆ ಮೂವರನ್ನು ಆಯ್ಕೆ ಮಾಡಲಾಗುವುದು. ಭಾಗವಹಿಸಲು ಇಚ್ಚಿಸುವವರು ಸ್ಪರ್ಧೆಯ ದಿನದಂದು ಬೆಳಗ್ಗೆ…
ಚಾಮರಾಜನಗರ, ಯಳಂದೂರಲ್ಲೂ ಹನುಮ ಸ್ಮರಣೆ
December 10, 2019ಚಾಮರಜನಗರ, ಡಿ.9(ಎಸ್ಎಸ್)- ಚಾಮರಾಜನಗರದ ರಾಮಸಮುದ್ಯದಲ್ಲಿ ಇರುವ ಹರಳುಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಇರುವ ಅಭಯ ಕಾರ್ಯಸಿದ್ಧಿ ಆಂಜ ನೇಯಸ್ವಾಮಿ ದೇವಸ್ಥಾನದಲ್ಲಿ ಸೋಮ ವಾರ ಹನುಮಜಯಂತಿಯನ್ನು ಅದ್ಧೂರಿ ಯಾಗಿ ಆಚರಿಸಲಾಯಿತು. ಹನುಮಜಯಂತಿ ಅಂಗವಾಗಿ ಶ್ರೀ ಆಂಜನೇಯಸ್ವಾಮಿ ದೇವರಿಗೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ಅನ್ನಸಂತರ್ಪಣೆ ನಡೆಯಿತು. ಯಳಂದೂರು ವರದಿ: ಪಟ್ಟಣದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ…
ಗುಂಡ್ಲುಪೇಟೆಯಲ್ಲಿ ಹನುಮ ಜಯಂತಿ
December 10, 2019ಗುಂಡ್ಲುಪೇಟೆ, ಡಿ.9(ಸೋಮ್.ಜಿ)- ಪಟ್ಟಣದ ಜೋಡಿ ರಸ್ತೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆ ಯಿಂದ ಆಚರಣೆ ಮಾಡಲಾಯಿತು. ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ವಿಶೇಷವಾದ ಹೂವಿನ ಅಲಂಕಾರಗಳೊಂದಿಗೆ ತಳಿರು ತೋರಣ ಸೇರಿದಂತೆ ವಿದ್ಯುತ್ ದೀಪಾಲಂಕಾರ ಗಳಿಂದ ಸಿಂಗಾರಗೊಳಿಸಲಾಗಿತ್ತು. ಸಂಜೀವಿನಿ ಪರ್ವತವನ್ನು ಕೈಯಲ್ಲಿ ಎತ್ತು ನಿಂತ ಭಂಗಿಯಲ್ಲಿರುವ ಕಲ್ಲಿನ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂ ಕಾರಗೊಳಿಸಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ನಡೆಸಲಾಯಿತು. ಪುರಸಭಾ ಮಾಜಿ ಅಧ್ಯಕ್ಷ ಎಂ.ಪುಟ್ಟರಂಗನಾಯಕ್ ಮತ್ತು ಕುಟುಂಬದವರು ಭಕ್ತಾದಿಗಳಿಗಾಗಿ ಅನ್ನಸಂತ ರ್ಪಣೆ…
ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
December 10, 2019ಚಾಮರಾಜನಗರ, ಡಿ. 9- ನಾನಾ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಧ್ವನಿ ಕೊಳಚೆ ಪ್ರದೇಶಗಳ ಮಹಿಳಾ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ದೇವಾ ಲಯದಲ್ಲಿ ಆವರಣದಲ್ಲಿ ಸಮಾವೇಶ ಗೊಂಡ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾ ಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ನಿಷೇಧಿಸಿ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾ ಯಿಸಿದರು….
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವರ ದಿಢೀರ್ ಭೇಟಿ: ರೋಗಿಗಳ ಕುಂದು-ಕೊರತೆ ವಿಚಾರಣೆ, ನಂತರ ವಾರ್ಡ್ನಲ್ಲೇ ವಾಸ್ತವ್ಯ
September 25, 2019ಚಾಮರಾಜನಗರ, ಸೆ.24(ಎಸ್ಎಸ್)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಾದ ಬಿ.ಶ್ರೀರಾಮುಲು ಅವರು ಇಂದು ದಿಢೀರ್ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿಯೇ ವಾಸ್ತವ್ಯ ಹೂಡುವ ಮೂಲಕ ರೋಗಿಗಳ ಹಾಗೂ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಜಿಲ್ಲಾ ಆಸ್ಪತ್ರೆಗೆ ರಾತ್ರಿ 9ರ ವೇಳೆಗೆ ಆಗಮಿಸಿದ ಸಚಿವರು, ಮೊದಲು ಕಣ್ಣಿನ ಚಿಕಿತ್ಸೆಗೆ ದಾಖ ಲಾಗಿರುವ ರೋಗಿಗಳ ವಾರ್ಡಿಗೆ ಭೇಟಿ ನೀಡಿ ರೋಗಿಗಳ ಕುಂದು-ಕೊರತೆ ವಿಚಾರಿಸಿದರು. ರೋಗಿಗಳ ಹಾಸಿಗೆಯಲ್ಲಿಯೇ ಕುಳಿತು ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ, ಔಷಧೋಪಚಾರಗಳ ಬಗ್ಗೆ ರೋಗಿಗಳಿಂದಲೇ ಮಾಹಿತಿ…
ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ಯಶಸ್ವಿ
June 26, 2019ಚಾಮರಾಜನಗರ, ಜೂ.25 (ಎಸ್ಎಸ್)- ಗುಂಡ್ಲುಪೇಟೆಯಲ್ಲಿ ಯುವಕನ ಬೆತ್ತಲೆ ಮೆರವಣಿಗೆ ಹಾಗೂ ಸಂತೇಮರಹಳ್ಳಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಎಸ್ಐಟಿ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಮತ್ತು ದಲಿತ ಸಂಘಟನೆ ಗಳ ಒಕ್ಕೂಟ ಮಂಗಳವಾರ ಕರೆ ನೀಡಿದ್ದ ಚಾಮರಾಜನಗರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಯಿತು. ಬಂದ್ಗೆ ವರ್ತಕರ ಸಂಘ ಬೆಂಬಲ ವ್ಯಕ್ತಪಡಿಸಿದ್ದ ಕಾರಣ ಅಂಗಡಿ-ಮುಂಗಟ್ಟು ಗಳು ಬಾಗಿಲು ಮುಚ್ಚಿದ್ದವು. ಇದರಿಂದ ಜನನಿಬಿಡ ಪ್ರದೇಶಗಳಾದ ದೊಡ್ಡ ಮತ್ತು ಚಿಕ್ಕ ಅಂಗಡಿ ಬೀದಿ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು….
ಚಾಮರಾಜನಗರ ಬಳಿ ಗಾಯಗೊಂಡಿದ್ದ ಚಿರತೆ ಸೆರೆ
May 21, 2019ಚಾ.ನಗರ: ಗಾಯಗೊಂಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿರುವ ಘಟನೆ ತಾಲೂಕಿನ ಹೊನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ಸೋಮವಾರ ನಡೆದಿದೆ. ಹೊನ್ನಹಳ್ಳಿ ಗ್ರಾಮದ ಮಹದೇವಶೆಟ್ಟಿ ಎಂಬುವರ ಪಂಪ್ಸೆಟ್ ಜಮೀನಿನ ಮನೆ ಮುಂದೆ ಚಿರತೆ ಮಲಗಿರುವುದನ್ನು ಮಹದೇವಶೆಟ್ಟಿ ಪುತ್ರ ನಾಗರಾಜು ಗಮನಿ ಸಿದ್ದಾರೆ. ಇದರಿಂದ ಗಾಬರಿಗೊಂಡ ನಾಗ ರಾಜು ಈ ವಿಷಯವನ್ನು ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವುದಕ್ಕಿಂತ ಮುನ್ನವೇ ಚಿರತೆ ಮನೆ ಮುಂದಿನ ಜಾಗ ದಿಂದ ಜಮೀನಿನ ಪಕ್ಕದಲ್ಲಿದ್ದ ಕಾಲುವೆಗೆ…
ದುಡಿಮೆಯಲ್ಲಿ ದೇವರು ಕಂಡ ಕಾಯಕಯೋಗಿಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯ
May 8, 2019ಚಾಮರಾಜನಗರ: ಕಾಯಕವೇ ಕೈಲಾಸ ತತ್ವದ ಮೂಲಕ ದುಡಿಮೆಯಲ್ಲಿ ದೇವರನ್ನು ಕಂಡ ಕಾಯಕಯೋಗಿ ಬಸವಣ್ಣನವರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗ ದೊಂದಿಗೆ ಸರಳವಾಗಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಉದ್ಘಾ ಟಿಸಿ ಅವರು ಮಾತನಾಡಿದರು. ಕುವೆಂಪು ಅವರು 20ನೇ ಶತಮಾನ ದಲ್ಲಿ ವಿಶ್ವಮಾನವತೆಯ ಕನಸು ಕಂಡಿದ್ದರು. ಅದನ್ನು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಜಾರಿಗೊಳಿಸಿದ್ದರು. ಜನ ಸಾಮಾನ್ಯ ರಿಗೆ ಅರ್ಥವಾಗುವ…