ಹನೂರು, ಸೆ.27(ಸೋಮು)- ರೈತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ದೇಶದ್ಯಾಂತ ಕರೆ ಕೊಟ್ಟಿರುವ ಭಾರತ್ ಬಂದ್ಗೆ ಪಟ್ಟಣದಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯಿಂದಲೇ ಸಂಯುಕ್ತ ಕಿಸಾನ್ ಮೋರ್ಚಾ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ, ಎಸ್ಡಿಪಿಐ, ಜೆಡಿಯು ಇನ್ನಿತರೆ ಪ್ರಗತಿಪರ ಸಂಘಟನೆಯವರು ಪಟ್ಟಣದಲ್ಲಿ ಜಮಾಯಿಸಿ ವರ್ತಕರು ಮತ್ತು ಸಾರ್ವಜನಿಕರ ಸಹಕಾರದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಭಾರತ್ ಬಂದ್ಗೆ ಬೆಂಬಲ ಸೂಚಿಸಿದರು. ರೈತ ಸಂಘಟನೆ ಮತ್ತು ವಿವಿಧ ಪ್ರಗತಿಪರ ಸಂಘಟನೆಯ ನೂರಾರು ಜನತೆ ಪಟ್ಟಣದ ಟಿಎಪಿಎಂಸಿ…
ಗುಂಡ್ಲುಪೇಟೆಯಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ
September 28, 2021ಗುಂಡ್ಲುಪೇಟೆ, ಸೆ.27(ಸೋಮ್.ಜಿ)- ಕೃಷಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಗಳಿಗೆ ತಿದ್ದುಪಡಿ ವಿರೋಧಿಸಿ ರೈತ ಸಂಘ, ಹಸಿರು ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುಂಜಾನೆ 6 ಗಂಟೆಯಿಂದಲೇ ರಸ್ತೆ ಗಿಳಿದ ರೈತ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಕಾರ್ಯ ಕರ್ತರು ಎಲ್ಲಾ ಅಂಗಡಿ ಮುಂಗಟ್ಟುಗಳ ಮಾಲೀಕರ ಮನವೊಲಿಸಿ ಬಾಗಿಲು ಮುಚ್ಚಿಸಿ ದರು. ನಂತರ ಬೆಂಗಳೂರು- ನೀಲಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ…
ಭಾರತ್ ಬಂದ್: ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
September 28, 2021ಚಾಮರಾಜನಗರ, ಸೆ.27(ಎಸ್ಎಸ್)- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳಿಂದ ಸೋಮವಾರ ಕರೆ ನೀಡಿದ್ದ ಭಾರತ್ ಬಂದ್ಗೆ ಜಿಲ್ಲೆಯಾ ದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಸಂಘಟನೆಗಳ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ನಗರದ ದೊಡ್ಡ ಅಂಗಡಿ ಬೀದಿಯಲ್ಲಿ ಕೆಲವು ಅಂಗಡಿ-ಮುಂಗಟ್ಟುಗಳು ಮುಚ್ಚಿ ದ್ದರೆ, ಇನ್ನು ಕೆಲವು ತೆರೆದಿದ್ದವು. ಹೀಗಾಗಿ ಅಂಗಡಿ ಬೀದಿಯಲ್ಲಿ ಜನ ಸಂಚಾರ ವಿರಳ ವಾಗಿತ್ತು. ಅಂಗಡಿ ಬೀದಿ ಹೊರತುಪಡಿಸಿ ದರೆ, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಬಹುತೇಕ ಅಂಗಡಿ…
ಅರಣ್ಯ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ
September 12, 2021ಚಾಮರಾಜನಗರ, ಸೆ.11(ಎಸ್ಎಸ್)- ಅರಣ್ಯ ಸಂಪತ್ತಿನ ಸಂರಕ್ಷಣೆ ಮಾಡು ವುದು ನಮ್ಮೆಲ್ಲರ ಹೊಣೆಯಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ಪುರಿ ಹೇಳಿದರು. ನಗರದ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯ ಕ್ರಮದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಅರಣ್ಯ ಸೇರಿದಂತೆ ಕೆರೆ-ಕಟ್ಟೆ, ಬೆಟ್ಟ-ಗುಡ್ಡಗಳು ಸಾರ್ವಜನಿಕ ಆಸ್ತಿ ಗಳಾಗಿದ್ದು, ಅವುಗಳ ಸಂರಕ್ಷಣೆ ಪ್ರತಿ ಯೊಬ್ಬರ ಕರ್ತವ್ಯವಾಗಿದೆ ಎಂದು ಸಂವಿ ಧಾನದಲ್ಲಿ ಹೇಳಿದ್ದು,…
ಗಜಪಯಣಕ್ಕೆ ಶಾಸಕರಿಂದ ಚಾಲನೆ
September 12, 2021ಚಾಮರಾಜನಗರ, ಸೆ.11(ಎಸ್ಎಸ್)- ನಗರದ ಶ್ರೀ ವಿದ್ಯಾಗಣಪತಿ ಮಂಡಳಿಯು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ರಥದ ಬೀದಿಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಶುಕ್ರವಾರ ಭೂ ರಕ್ಷ ಗಣಪತಿಯ ಮೂರ್ತಿ ಪ್ರತಿಷ್ಠಾಪಿಸಿದೆ. ಶುಕ್ರವಾರ ಮಧ್ಯಾಹ್ನ 12.30ರಿಂದ 1.30ರೊಳಗಿನ ಶುಭ ಅಭಿಜಿನ್ ಮುಹೂರ್ತದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸ ಲಾಯಿತು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಸಾರಾ ಥಾಮಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ರಾಜ್, ಶ್ರೀವಿದ್ಯಾಗಣಪತಿ ಮಂಡಳಿ ಅಧ್ಯಕ್ಷ ಚಿಕ್ಕರಾಜು, ಗೌರವ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ, ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಬಿಜೆಪಿ…
ಉತ್ಸಾಹದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಚಿಣ್ಣರು
September 7, 2021ಚಾಮರಾಜನಗರ, ಸೆ.6- ಜಿಲ್ಲೆಯಲ್ಲಿ 6, 7 ಹಾಗೂ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಶಾಲೆಯ ಶಿಕ್ಷಕರು ಮಕ್ಕಳನ್ನು ಅದ್ಧೂರಿ ಯಾಗಿ ಬರಮಾಡಿಕೊಂಡರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂ ವರೆ ವರ್ಷಗಳಿಂದಲೂ ಮುಚ್ಚಿದ್ದ ಶಾಲೆ ಗಳನ್ನು ಇಂದಿನಿಂದ ಆರಂಭ ಮಾಡುವಂತೆ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕು ವ್ಯಾಪ್ತಿಯಲ್ಲಿ ತರಗತಿಗಳು ಆರಂಭಗೊಂಡವು. 6-8ನೇ ತರಗತಿ ಆರಂಭ ಹಿನ್ನೆಲೆಯಲ್ಲಿ ಶಾಲೆಗಳ ಕೊಠಡಿಗಳಿಗೆ ಸ್ಯಾನಿಟೈಸರ್ ಮಾಡಿಸಲಾಗಿತ್ತು. ಅಲ್ಲದೇ ಶಾಲೆಗಳಿಗೆ ಆಗಮಿ ಸಿದ…
ಬಿಜೆಪಿ ಸರ್ಕಾರ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
September 7, 2021ಚಾಮರಾಜನಗರ, ಸೆ.6- ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮ ವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾ ನದ ಆವರಣದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರ ಜತ್ತಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾ ಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ಕೇಂದ್ರ, ರಾಜ್ಯ ಸರ್ಕಾ ರದ ವಿರುದ್ಧ ಆಕ್ರೋಶ…
ಕಬ್ಬಿಗೆ ಎಫ್ಆರ್ಪಿ ದರ ಏರಿಕೆಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ
September 7, 2021ಚಾಮರಾಜನಗರ, ಸೆ.6- ಕಬ್ಬಿಗೆ ಎಫ್ ಆರ್ಪಿ ದರವನ್ನು ಏರಿಕೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟ ಕದ ಪದಾಧಿಕಾರಿಗಳು ನಗರದ ಹೊರ ವಲಯದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ 209 ತಡೆದು ಪ್ರತಿಭಟನೆ ನಡೆಸಿದರು. ನಗರದ ಹೊರವಲಯದ ರೇಷ್ಮೆ ಮಾರು ಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಕೇಂದ್ರ ಸರ್ಕಾರವು ಕಬ್ಬಿನ…
ಹನೂರು ಕ್ಷೇತ್ರದಲ್ಲಿ ಜೆಡಿಎಸ್ ಬಲವರ್ಧನೆಗೆ ಶ್ರಮಿಸುತ್ತೇನೆ: ಎಂ.ಆರ್.ಮಂಜುನಾಥ್
August 29, 2021ಹನೂರು, ಆ.28(ಸೋಮು)- ಜೆಡಿ ಎಸ್ಗೆ ಸೇರ್ಪಡೆಗೊಂಡಿರುವ ಮುಖಂ ಡರ ಜೊತೆಗೂಡಿ ಕ್ಷೇತ್ರದಲ್ಲಿ ಪಕ್ಷ ಬಲಪಡಿಸುವ ಮೂಲಕ ನಿರಂತರವಾಗಿ ಜನತೆಯ ಸೇವೆಗೆ ಮುಂದಾಗುತ್ತೇನೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎಂ.ಆರ್.ಮಂಜು ನಾಥ್ ತಿಳಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಮುಖಂ ಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಹಿನೆÀ್ನಲೆಯಲ್ಲಿ ಪಟ್ಟಣದ ಜೆಡಿಎಸ್ ಕಚೇರಿ ಯಲ್ಲಿ ಶನಿವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳಿಯವಾಗಿ ಜನಮನ್ನಣೆ ಗಳಿಸಿರುವ ಸಿಂಗನಲ್ಲೂರು ಶಿವಪ್ರಕಾಶ್, ಬಾಬು, ಶಾಗ್ಯ ರವಿಕುಮಾರ್, ಎಲ್ಲೇಮಾಳ ಗ್ರಾಪಂ ಉಪಾಧ್ಯಕ್ಷ…
ಉಮ್ಮತ್ತೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
August 29, 2021ಚಾಮರಾಜನಗರ, ಆ.28(ಎಸ್ಎಸ್)- ತಾಲೂಕಿನ ಉಮ್ಮತ್ತೂರು ಕೆರೆಗೆ ನೀರು ಹರಿಸದೇ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆರೆ ಮುಂಭಾಗ ಶನಿ ವಾರ ಸಂಜೆ ಉಮ್ಮತ್ತೂರು ಕೆರೆ ಪುನಶ್ಚೇ ತನ ಸಮಿತಿ ವತಿಯಿಂದ ಅಚ್ಚುಕಟ್ಟುದಾ ರರು ಹಾಗೂ ರೈತರು ದಿಢೀರ್ ಪ್ರತಿಭಟನೆ ನಡೆಸಿದರು. ನೀರು ಹರಿಸುವವರೆಗೂ ಹಗಲು ರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾ ಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಉಮ್ಮತ್ತೂರು ದೊಡ್ಡ ಕೆರೆ ಪಕ್ಕದ ಕೊಟ್ಟೂರು ಬಸವೇಶ್ವರ ದೇವಾಲಯದ ಎದುರು ಶನಿ ವಾರ ಮಧ್ಯಾಹ್ನ ರೈತರು ಸಭೆ ನಡೆಸಿ, ಕೆರೆಗೆ…