ಚಾಮರಾಜನಗರ: ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡರ ಮನೆ ಹಾಗೂ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯ ಕರ್ತರು ನಡೆಸಿದ ದಾಳಿ ಖಂಡಿಸಿ ಬಿಜೆಪಿ ಚಾಮರಾಜನಗರ ಕ್ಷೇತ್ರದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಂ.ಎಸ್. ಫೃಥ್ವಿರಾಜ್ ಅವರ ನೇತೃತ್ವ ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ಜೆಡಿಎಸ್ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು….
ಸಾಮೂಹಿಕವಾಗಿ 108 ಸೂರ್ಯ ನಮಸ್ಕಾರ
February 13, 2019ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ರಥಸಪ್ತಮಿ ಅಂಗವಾಗಿ ದೇವಾ ಲಯಗಳಲ್ಲಿ ವಿಶೇಷ ಪೂಜಾ ಕೈಂಕ ರ್ಯಗಳು ಜರುಗಿದವಲ್ಲದೆ, ವಿದ್ಯಾರ್ಥಿ ಗಳು, ಯೋಗಾಸಕ್ತರು ಇಂದು ಮುಂಜಾ ನೆಯೇ ಸಾಮೂಹಿಕವಾಗಿ 108 ಸೂರ್ಯ ನಮಸ್ಕಾರ ಮಾಡಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿ, ಜಿಲ್ಲಾ ಶಾಖೆ ಹಾಗೂ ಸೇವಾ ಭಾರತಿ ಟ್ರಸ್ಟ್ನಿಂದ ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ರಥಸಪ್ತಮಿ ಅಂಗವಾಗಿ ಏರ್ಪ ಡಿಸಿದ್ದ 9ನೇ ವರ್ಷದ ಸಾಮೂಹಿಕ 108 ಸೂರ್ಯ ನಮಸ್ಕಾರಕ್ಕೆ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಬಸವರಾಜ ಚಾಲನೆ ನೀಡಿದರು. ಹೆಚ್ಚುವರಿ…
ವಕೀಲನ ಮೇಲಿನ ಹಲ್ಲೆ, ಸುಳ್ಳು ದೂರು ದಾಖಲು ಆರೋಪ ನ್ಯಾಯಕ್ಕಾಗಿ ಬೀದಿಗಿಳಿದ ಜಿಲ್ಲಾ ವಕೀಲರು
February 13, 2019ಚಾಮರಾಜನಗರ: ಗುಂಡ್ಲುಪೇಟೆಯ ವಕೀಲ ಡಿ.ರವಿ ಅವರ ಮೇಲೆ ಹಲ್ಲೆ ಹಾಗೂ ಸುಳ್ಳು ದೂರು ದಾಖ ಲಿಸಿರುವುದಾಗಿ ಆರೋಪಿಸಿ 6 ದಿನಗಳಿಂದ ನಡೆಸುತ್ತಿದ್ದ ಹೋರಾಟವನ್ನು ಇಂದು ತೀವ್ರಗೊಳಿಸಿದ ಜಿಲ್ಲಾ ವಕೀಲರು, ತಪ್ಪೆ ಸಗಿರುವ ಇಬ್ಬರು ಪೊಲೀಸ್ ಅಧಿಕಾರಿ ಗಳನ್ನು ಅಮಾನತುಗೊಳಿಸುವಂತೆ ಬೀದಿ ಗಿಳಿದು ಪ್ರತಿಭಟಿಸಿದರು. ನಗರದ ನ್ಯಾಯಾಲಯ ಆವರಣದಲ್ಲಿ ಇರುವ ಜಿಲ್ಲಾ ವಕೀಲರ ಸಂಘದಲ್ಲಿ ಜಮಾ ಯಿಸಿದ ಜಿಲ್ಲೆಯ ವಕೀಲರು, ಗುಂಡ್ಲು ಪೇಟೆ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣೇ ಗೌಡ, ಸಬ್ಇನ್ಸ್ಪೆಕ್ಟರ್ ಲತೇಶ್ಕುಮಾರ್ ಸೇರಿದಂತೆ ಎಸ್ಪಿ ಧರಮೇಂದ್ರಕುಮಾರ್ ಮೀನಾ ವಿರುದ್ಧ…
ವಿದ್ಯುತ್ ಅವಘಡ: ಎರಡು ಮನೆ ಭಸ್ಮ
February 13, 2019ಹನೂರು: ಆಕಸ್ಮಿಕ ವಿದ್ಯುತ್ ಅವಘಡದಿಂದ ತಡರಾತ್ರಿ ಎರಡು ಮನೆಗಳು ಭಸ್ಮವಾಗಿರುವ ಘಟನೆ ಸಮೀಪದ ದಿನ್ನಳ್ಳಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ. ಗ್ರಾಮದ ಮುಸ್ಲಿಂ ಬಡಾವಣೆಯ ಅಬ್ದುಲ್ಮುನಾಫ್, ಅಬ್ದುಲ್ ರಿಯಾಜ್ ಅವರ 2 ಮನೆಗಳು ವಿದ್ಯುತ್ ಅವಘಡದಿಂದ ಸಂಭವಿಸಿದ ಆಕಸ್ಮಿಕ ಬೆಂಕಿಗೆ ಭಸÀ್ಮವಾಗಿದೆ. ಘಟನೆಯಿಂದ ಎಚ್ಚೆತ್ತ ಎರಡೂ ಕುಟುಂಬಗಳ ಸದಸ್ಯರೂ ಹೊರಗೆ ಬಂದಿದ್ದರಿಂದ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಹಂಚಿನ ಮನೆಯಾದ ಕಾರಣ ಮನೆಯಲ್ಲಿದ್ದ ಬಟ್ಟೆ, ದಿನಸಿ, ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಪರಿಹಾರಕ್ಕೆ ಒತ್ತಾಯ:…
ಗುಂಡ್ಲುಪೇಟೆ ಶ್ರೀವಿಜಯ ನಾರಾಯಣಸ್ವಾಮಿ ರಥೋತ್ಸವ
February 13, 2019ಗುಂಡ್ಲುಪೇಟೆ: ರಥಸಪ್ತಮಿಯ ಅಂಗವಾಗಿ ಪಟ್ಟಣದ ಪುರಾತನ ಪ್ರಸಿದ್ಧ ಶ್ರೀ ವಿಜಯನಾರಾಯಣಸ್ವಾಮಿಯ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಪ್ರತಿ ವರ್ಷದಂತೆ ಈ ಬಾರಿಯೂ ಸಹ ರಥಸಪ್ತಮಿಯ ಅಂಗವಾಗಿ ಮುಜ ರಾಯಿ ಇಲಾಖೆಗೆ ಸೇರಿದ ಈ ದೇವಸ್ಥಾನವನ್ನು ಸುಣ್ಣಬಣ್ಣಗಳಿಂದ ಶುಚಿಗೊಳಿಸಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ರಥೋತ್ಸವದ ಪ್ರಯುಕ್ತ ಕಳೆದ ನಾಲ್ಕು ದಿನಗಳಿಂದ ವಿಶೇಷ ಪೂಜಾ ಕೈಂಕರ್ಯ ಉತ್ಸವಾದಿಗಳನ್ನು ಜರುಗಿದವು. ರಥ ಸಪ್ತಮಿಯ ಮಂಗಳವಾರ ಮಧ್ಯಾಹ್ನ 12.30ಕ್ಕೆ ಮುಜರಾಯಿ ಅಧಿ ಕಾರಿಯೂ ಆದ ತಹಶೀಲ್ದಾರ್ ನಂಜುಂಡಯ್ಯ ರಥಕ್ಕೆ ಪೂಜೆ…
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಹಕಾರ
February 12, 2019ಅರಸೀಕೆರೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನಿಚಾಮರಾಜನಗರ, ಫೆ. 11- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಇದೇ ಫೆ.17ರಿಂದ ಜರುಗುವ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ದಿಂದ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು. ತಮ್ಮ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳು, ಕನ್ನಡ ಸಂಘಟನೆ ಗಳ ಮುಖಂಡರು, ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಜಿಲ್ಲಾಡಳಿತದಿಂದ ಅವಶ್ಯವಿರುವ ನೆರವು ನೀಡಲಾಗುತ್ತದೆ….
ಎಂಡಿಎನ್ ಜನ್ಮದಿನ ಗ್ರಾಮ ಸ್ವರಾಜ್ಯ ದಿನವಾಗಿ ಆಚರಣೆ
February 12, 2019ಚಾಮರಾಜನಗರ: ಫೆ.13ರ ಪೆÇ್ರ. ಎಂಡಿಎನ್ ಜನ್ಮ ದಿನಾಚರಣೆಯನ್ನು ಜಿಲ್ಲಾ ರೈತ ಸಂಘ ಗ್ರಾಮ ಸ್ವರಾಜ್ಯ ದಿನವನ್ನಾಗಿ ಆಚರಿಸುತ್ತಿದೆ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪೆÇ್ರ.ಎಂಡಿಎನ್ ಪ್ರತಿಷ್ಠಾನದ ಆಶ್ರಯದಲ್ಲಿ ಎಂಡಿಎನ್ ಸ್ಮಾರಕವಿರುವ ಅಮೃತಭೂಮಿಯಲ್ಲಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಅಲ್ಲಿನ ರೈತರ ಬಗ್ಗೆ ಶ್ರಮಿಸಿ ರುವ ಓರ್ವರನ್ನು ಸನ್ಮಾನಿಸಲಾಗುವುದು. ಬಳಿಕ ಸಾವಯವ ಸಂತೆ ಆರಂಭ ಕುರಿತು ರೈತರ ಸಭೆ ನಡೆಸಲಾಗುವುದು ಎಂದು ಹೇಳಿದ ಅವರು, ಫೆ.24ರಂದು ಚಾಮರಾಜ…
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು
February 12, 2019ಗುಂಡ್ಲುಪೇಟೆ: ಕ್ಷೇತ್ರದಲ್ಲಿನ ಗ್ರಾಮೀಣ ಪ್ರದೇಶದ ರಸ್ತೆಗಳು ಇನ್ನೂ ಸಹ ದುಸ್ಥಿತಿಯಲ್ಲಿದ್ದು, ಹಂತ ಹಂತವಾಗಿ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ವಿವಿಧ ಗ್ರಾಮಗಳ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬಡಾವಣೆ ಗಳಲ್ಲಿನ ಕಾಂಕ್ರಿಟ್ ರಸ್ತೆ ಕಾಮಗಾರಿ ಹಾಗೂ ಬಾಚಹಳ್ಳಿ, ಬಂಡೀಪುರ, ಬಾಚ ಹಳ್ಳಿ ಹುಲ್ಲಾಪುರ-ಕಡಬೂರು ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ತೊರವಳ್ಳಿ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ,…
ಪ್ರತ್ಯೇಕ ಪ್ರತಿಭಟನೆ; ಬಿಜೆಪಿ ವಿರುದ್ಧ `ಕೈ’ ಆಕ್ರೋಶ, ಶಿಕ್ಷಣ ಸಚಿವರ ನೇಮಕಕ್ಕೆ ಸಂಘಟನೆ ಆಗ್ರಹ
February 10, 2019ಚಾಮರಾಜನಗರ: ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಆಪರೇಷನ್ ಕಮಲ ನಡೆಸುತ್ತಿರುವುದಾಗಿ ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹಾಗೂ ಶಿಕ್ಷಣ ಸಚಿವರನ್ನು ನೇಮಿಸದೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳ ನಡೆ ಖಂಡಿಸಿ ನಗರದಲ್ಲಿಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯ ಕರ್ತರು ಪ್ರತ್ಯೇಕವಾಗಿ ಪ್ರತಿಭಟಿಸಿದರು. ಕಾಂಗ್ರೆಸ್ ಆಕ್ರೋಶ: ರಾಜ್ಯದಲ್ಲಿ ಆಡ ಳಿತದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಆಪರೇಷನ್ ಕಮಲ ನಡೆಸಿ ಪತನಗೊಳಿಸುವ ಹುನ್ನಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯ ಕರ್ತರು ಆರೋಪಿಸಿದರು. ನಗರದ ಸತ್ತಿ ರಸ್ತೆಯಲ್ಲಿ ಇರುವ ಪಕ್ಷದ…
ವಕೀಲನ ಮೇಲೆ ದೌರ್ಜನ್ಯ ಆರೋಪ ತಪ್ಪೆಸಗಿರುವ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ 2 ದಿನ ಗಡುವು
February 10, 2019ಚಾಮರಾಜನಗರ: ಜಿಲ್ಲಾ ವಕೀಲರ ಸಂಘದ ಸದಸ್ಯ ಹಾಗೂ ಗುಂಡ್ಲುಪೇಟೆ ವಕೀಲ ರವಿ ಅವರನ್ನು ವಿನಾಕಾರಣ ಬಂಧಿಸಿದ ಗುಂಡ್ಲುಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಬಾಲಕೃಷ್ಣೇಗೌಡ, ಸಬ್ಇನ್ಸ್ ಪೆಕ್ಟರ್ ಲತೇಶ್ ಕುಮಾರ್ರನ್ನು ಇನ್ನೆರೆಡು ದಿನದಲ್ಲಿ ಅಮಾನತ್ತುಗೊಳಿಸದಿದ್ದರೆ, ರಾಜ್ಯಾದ್ಯಂತ ಹೋರಾಟ ವಿಸ್ತರಿಸುವುದಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರ ಇಂದುಶೇಖರ್ ಎಚ್ಚರಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕೀಲ ರವಿ ಅವರ ಮೇಲೆ ಎಫ್ಐಆರ್ ದಾಖಲಾಗಿರಲಿಲ್ಲ. ಅರೆಸ್ಟ್ ವಾರೆಂಟ್ ಸಹ ಜಾರಿ ಆಗಿರಲಿಲ್ಲ. ಅಲ್ಲದೆ ರವಿ ಅವರಿಗೆ…









