ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಇದೇ ತಿಂಗಳ 15 ರಿಂದ ಪಾಸ್ಪೋರ್ಟ್ ಸೇವಾ ಕೇಂದ್ರ ಕಾರ್ಯಾ ರಂಭವಾಗಲಿದೆ. ಈ ಮೂಲಕ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಲಿದೆ. ಚಾಮರಾಜನಗರ ಸಂತೇಮರಹಳ್ಳಿ ವೃತ್ತದ ಬಳಿ ಇರುವ ಮುಖ್ಯ ಅಂಚೆ ಕಚೇರಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭವಾಗಲಿದ್ದು ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಂಸದ ಆರ್.ಧ್ರುವನಾರಾ ಯಣ್ ಕಳೆದ…
ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ದಸಂಸ ಪ್ರತಿಭಟನೆ
February 7, 2019ಯಳಂದೂರು: ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ದಸಂಸನ ಜಿಲ್ಲಾ ಸಂಚಾಲಕ ಸಿ. ರಾಜಣ್ಣ ಮಾತನಾಡಿ, ಯಳಂದೂರು ತಾಲೂಕು ಕೇಂದ್ರವಾಗಿದೆ. ಇಲ್ಲಿ 30 ಹಾಸಿಗೆಗಳ ಆಸ್ಪತ್ರೆ ಮಾತ್ರ ಇದೆ. ಆದರೆ ಒಳ ಹಾಗೂ ಹೊರ ರೋಗಿಗಳ ಸಂಖ್ಯೆ ಅಧಿಕವಾಗಿದೆ. ಮೂಲ ಸೌಕರ್ಯಗಳಿಲ್ಲದೆ ವೈದ್ಯರು ಹಾಗೂ ಶುಶ್ರೂಶಕರಿಗೆ ಸಮಸ್ಯೆಯಾಗಿದೆ. ಕೊಠಡಿ ಹಾಗೂ ಹಾಸಿಗೆ ಕೊರತೆಯಿಂದ ದೂರದ ಚಾಮರಾಜನಗರ, ಕೊಳ್ಳೇಗಾಲ, ಮೈಸೂರಿನ ಆಸ್ಪತ್ರೆಗೆ…
ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ
February 7, 2019ಗುಂಡ್ಲುಪೇಟೆ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಎಸ್ಸಿ ಮತ್ತು ಎಸ್ಟಿ ಬಡಾವಣೆಯ ರಸ್ತೆಗಳನ್ನು ಉತ್ತಮವಾಗಿ ಕಾಂಕ್ರೀಟಿಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್ ನಿರಂಜನ್ ಕುಮಾರ್ ಹೇಳಿದರು. ತಾಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಪರಿ ಶಿಷ್ಠ ಜಾತಿ ಮತ್ತು ಪಂಗಡಗಳ ಬಡಾವಣೆಯ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಗ್ರಾಮೀಣ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರ ಬಡಾವಣೆಗಳ ರಸ್ತೆಗಳನ್ನೂ ಕಾಂಕ್ರೀ ಟಿಕರಣ ಮಾಡಲಾಗುವುದು…
ಬೆಂಗಳೂರಿನಲ್ಲಿರುವ ಸ್ವೀಕಾರ ಕೇಂದ್ರದ ವಿರುದ್ಧ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ಪ್ರತಿಭಟನೆ
February 6, 2019ಚಾಮರಾಜನಗರ: ಬೆಂಗಳೂರಿನಲ್ಲಿನ ಸ್ವೀಕಾರ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳು ವಂತೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಮಹಿಳಾ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಪಕ್ಷದ ಮಹಿಳಾ ಮೋರ್ಚಾ ಆಶ್ರಯ ದಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಸಾಗಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಬೆಂಗಳೂರು ನಗರದಲ್ಲಿನ ನಿಮ್ಹಾನ್ಸ್ ಕೇಂದ್ರದಲ್ಲಿನ ಸ್ವೀಕಾರ ಕೇಂದ್ರವು ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
February 6, 2019ಸಂತೇಮರಹಳ್ಳಿ: ಸಂತೇಮರ ಹಳ್ಳಿ ಭಾಗದ ಹಲವು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಗುದ್ದಲಿ ಪೂಜೆ ನೆರವೇರಿಸಿದರು. ಸಮೀಪದ ಕೆಂಪನಪುರ ಗ್ರಾಮದ ಎಸ್.ಸಿ ಬಡಾವಣೆಯಲ್ಲಿ 15 ಲಕ್ಷದ ರೂ. ವೆಚ್ಚ ದಲ್ಲಿ ಕಾಂಕ್ರಿಟ್ ಮತ್ತು ಚರಂಡಿ ಕಾಮಗಾ ರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಬಜೆಟ್ ಹತ್ತಿರವಿರುವುದರಿಂದ ತುರ್ತಾಗಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು, ಸಂಬಂಧಪಟ್ಟ ಇಂಜಿನಿಯರ್ ಹಾಗೂ ಗುತ್ತಿಗೆದಾರರು ಶೀಘ್ರವಾಗಿ ಕಾಮಗಾರಿ ಪೂರ್ಣ ಗೊಳಿ ಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ…
ಗುಣಾತ್ಮಕ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ; ಸಚಿವ ಸಿ.ಪುಟ್ಟರಂಗ ಶೆಟ್ಟಿ
February 6, 2019ಚಾಮರಾಜನಗರ: ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ಕಿವಿಮಾತು ಹೇಳಿದರು. ನಗರದ ಉಪ್ಪಾರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಬೈಸಿಕಲ್ಗಳನ್ನು ವಿತರಿಸಿ ಅವರು ಮಾತನಾಡಿದರು. ಶಿಕ್ಷಣ ಬಹಳ ಮಹತ್ವವಾದದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಶಿಕ್ಷಣ ಪಡೆಯ ಬೇಕು. ಯಾರೂ ಸಹ ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳಿಗಾಗಿ ಆಸ್ತಿ ಮಾಡುವುದನ್ನು ಬಿಟ್ಟು, ಮಕ್ಕಳನ್ನೇ ಆಸ್ತಿಯಾಗಿ ಮಾಡಿ ಎಂದು ಪೋಷಕರಿಗೆ ಸಲಹೆ…
ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಸಂಘಟನೆಗಳ ಭಾರೀ ಪ್ರತಿಭಟನೆ
February 5, 2019ಹನೂರು: ಮಲೆಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮಗಳ ಜನತೆಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾ ಯಿಸಿ ಕರವೇ ಸ್ವಾಭಿಮಾನಿ ಬಣ ಹಾಗೂ ಕೊಳ್ಳೇಗಾಲ ತಾಲೂಕು ಜಯ ಕರ್ನಾಟಕ ಸಂಘಟನೆಗಳು ಹನೂರು ಪಟ್ಟಣ ದಲ್ಲಿಂದು ಭಾರೀ ಪ್ರತಿಭಟನೆ ನಡೆಸಿದರು. ಹನೂರು ಪಟ್ಟಣದ ಟಿ.ಕೆ.ಎನ್ ಪೆಟ್ರೋಲ್ ಬಂಕ್ನಿಂದ ಹೊರಟ ಮೆರ ವಣಿಗೆ ಪ್ರತಿಭಟನಾಕಾರರು, ಪಟ್ಟಣದ ಖಾಸಗಿ ಬಸ್ ನಿಲ್ದಾಣ ಹಾಗೂ ಅಂಬೇ ಡ್ಕರ್ ವೃತ್ತದಿಂದ ಸಾಗಿ ಹನೂರು ವಿಶೇಷ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿ ಧರಣಿ ನಡೆಸಿದರು….
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
February 5, 2019ಗುಂಡ್ಲುಪೇಟೆ: ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮೀಣ ಪ್ರದೇಶದ ರಸ್ತೆಗಳ ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ತಾಲೂಕಿನ ಕುರುಬರಹುಂಡಿ ಸಮೀಪದ ನಾಗರತ್ನಮ್ಮ ಕಾಲೋನಿಯಲ್ಲಿ 10 ಲಕ್ಷ ರೂ.ಗಳ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಜನತೆಗೆ ನೀಡಿದ ಭರವಸೆಯಂತೆ ಗ್ರಾಮಾಂತರ ಪ್ರದೇಶದಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದ ಹತ್ತು ಹಲವು ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ…
ಸಂಚಾರಿ ನಿಯಮ ಪಾಲಿಸಿದರೆ ಅಪಘಾತಗಳ ನಿಯಂತ್ರಣ
February 5, 2019ಚಾಮರಾಜನಗರ: ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು. ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಹನ ಸವಾರರು ಪ್ರಾದೇಶಿಕ ಸಾರಿಗೆ ಇಲಾಖೆ ನಿಯಮಗಳನ್ನು ಪಾಲಿಸಬೇಕು. ಆಗ ಮಾತ್ರ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು. ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿ ರಸ್ತೆಯನ್ನು ಬಳಕೆ ಮಾಡುತ್ತಾರೆ. ಇದರಿಂದ ವಾಹನ ಚಾಲಕರಲ್ಲದೆ, ಸಾರ್ವಜನಿಕರು ಸಹ ಸಂಚಾರಿ ನಿಯಮಗಳನ್ನು ಪಾಲಿಸÀ…
ಚಿರತೆ ದಾಳಿಗೆ ಕರು ಬಲಿ; ಜನತೆಯಲ್ಲಿ ಆತಂಕ
February 5, 2019ಗುಂಡ್ಲುಪೇಟೆ: ಪಟ್ಟಣದ ಜನನಿಬಿಡ ಬಡಾವಣೆಯಲ್ಲಿ ಚಿರತೆಯೊಂದು ಕರುವನ್ನು ತಿಂದು ಹಾಕಿರುವ ಘಟನೆ ನಡೆದಿದೆ. ಪಟ್ಟಣದ ಜೆಎಸ್ಎಸ್ ಕಾಲೇಜು ಪಕ್ಕದ ಅಶ್ವಿನಿ ಬಡಾವಣೆ ಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ಸೋಮವಾರ ಬೆಳಿಗ್ಗೆ ಕರುವಿನ ಕಳೇಬರ ನೋಡಿ ಬಡಾವಣೆ ನಿವಾಸಿ ಗಳು ಭಯಬೀತರಾಗಿದ್ದಾರೆ. ಬಡಾವಣೆಯಲ್ಲಿರುವ ಬಸವಣ್ಣ ಎಂಬುವರ ಮನೆಯ ಸಮೀಪ ಅರೆಬರೆ ತಿಂದು ಹಾಕಿದ್ದ ಕರುವಿನ ಕಳೇಬರ ಪತ್ತೆಯಾಗಿದ್ದು, ಅದರ ಪಕ್ಕದಲ್ಲಿ ಚಿರತೆಯ ಹೆಜ್ಜೆ ಗುರುತು ಕಂಡು ಬಂದಿದೆ. ಇದರಿಂದ ಆತಂಕಕ್ಕೊಳಗಾದ ನಿವಾಸಿಗಳು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು….










