ಚಾಮರಾಜನಗರ: ಸಮಾನ ವೇತನ ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಅ.25ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖಾ ಗುತ್ತಿಗೆ ನೌಕ ರರ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಮಂಗಳವಾರ ಆಯೋ ಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಮುಖಂಡ ಹೇಮಂತ್ಕುಮಾರ್ ಈ ವಿಷಯ ತಿಳಿಸಿದರು. ಸಾರ್ವಜನಿಕ ಆರೋಗ್ಯ ಇಲಾಖೆ ಬಲ ಗೊಳ್ಳಬೇಕು. ಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು ಎಂಬ ಹಕ್ಕೊತ್ತಾಯ ಮುಂದಿಟ್ಟುಕೊಂಡು ರಾಜ್ಯದ…
ಕಾಡಿನಿಂದ ಹೊರ ಬರುವವರಿಗೆ ಸೂಕ್ತ ಪರಿಹಾರ
October 24, 2018ಕೊಳ್ಳೇಗಾಲ: ಸಂಸದ ಧ್ರುವನಾರಾಯಣ್ ಆದೇಶದ ಮೇರೆಗೆ ಕಾಡಂಚಿನ ಗ್ರಾಮಗಳ ಸಂಪರ್ಕ ರಸ್ತೆ ಅಭಿವೃದ್ಧಿ ಹಾಗೂ ಕಾಡು ಬಿಟ್ಟು ಹೊರ ಬರುವವರಿಗೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಲೆ ಮಹದೇಶ್ವರ ವನ್ಯಜೀವಿ ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಏಡುಕೊಂಡಲು ತಿಳಿಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅರಣ್ಯ ಪ್ರದೇಶದ ಕಾಡಂಚಿನ ಗ್ರಾಮಗಳಾದ ದೊಡ್ಡಾಣೆ, ತುಳಸಿಕೆರೆ, ಮೆದುಗನಾಣೆ, ಎಲಚಿಕೆರೆ ಸೇರಿದಂತೆ ವಿವಿಧ ಗ್ರಾಮಗಳ ಮುಖಂಡರು ಮತ್ತು ರೈತ ಮುಖಂಡ ಹೊನ್ನೂರು ಪ್ರಕಾಶ್…
ತೆರಕಣಾಂಬಿ ತಾಪಂ ಉಪ ಚುನಾವಣೆ `ಕೈ’ ಅಭ್ಯರ್ಥಿ ಪರ ಬಿರುಸಿನ ಪ್ರಚಾರ
October 24, 2018ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ನಾಯ್ಕ ಪರ ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಬಿರುಸಿನ ಪ್ರಚಾರ ನಡೆಸಿದರು. ತೆರಕಣಾಂಬಿ ಮತ್ತು ತೆರಕಣಾಂಬಿಹುಂಡಿ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ ಗಣೇಶ್ ಪ್ರಸಾದ್ ತಮ್ಮ ತಂದೆ ಮಾಜಿ ಸಚಿವ ದಿ.ಮಹದೇವಪ್ರಸಾದ್ ಮತ್ತು ತಾಯಿ ಡಾ.ಮೋಹನಕುಮಾರಿ ಅವಧಿಯಲ್ಲಿ ಗ್ರಾಮದ ಕೆರೆಗಳಿಗೆ ನೀರು ತುಂಬಿಸಿದ್ದು, ನೂತನ ಬಸ್ ನಿಲ್ದಾಣ, ಎಪಿಎಂಸಿ ಪ್ರಾಂಗಣ ನಿರ್ಮಾಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಐಟಿಐ ಕಾಲೇಜುಗಳ ನಿರ್ಮಾಣ…
ಬಸವಣ್ಣರ ಅನುಭವ ಮಂಟಪದಿಂದ ಮಾದರಿ ಆಡಳಿತ
October 23, 2018ಚಾಮರಾಜನಗರ: 12ನೇ ಶತಮಾನದ ಶ್ರೀ ಬಸವಣ್ಣ ಅವರ ಅನುಭವ ಮಂಟಪದ ಆಡಳಿತ ದೇಶಕ್ಕೆ ಮಾದರಿ ಆಗಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಶ್ರಯದಲ್ಲಿ ನಗರದ ಸರ್ಕಾರಿ ಪೇಟೆ ಶಾಲೆ ಆವರಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಬಸವಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಮೌಢ್ಯತೆ, ಅಸಮಾನತೆ, ಕಂದಾ ಚಾರದ ವಿರುದ್ಧ ಹೋರಾಟ ನಡೆಸಿದ್ದರು. ಸಮಾನತೆಗಾಗಿ ಹೋರಾಟ…
ಬೇಗೂರು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
October 23, 2018ಬೇಗೂರು: ಬೇಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಗ್ರಾ.ಪಂ ಕಚೇರಿ ಆವರಣದಲ್ಲಿ ನಡೆಯಿತು. ಹಿಂದಿನ ಅಧ್ಯಕ್ಷ ಬಿ.ಎಸ್.ಚೇತನ್ ಹಾಗೂ ಉಪಾಧ್ಯಕ್ಷೆ ಚೈತ್ರಾ ಅವರ ವಿರುದ್ದ 12 ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ದ್ದರಿಂದ ಅ.22ರಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ವಿಶೇಷ ಸಭೆ ಕರೆಯ ಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಮಹ ದೇವಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಬೆಳಚಲ ವಾಡಿಯ ಸತೀಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರೇಮಾ…
ತಂದೆ ಕೊಲೆಗೈದ ಆರೋಪಿಗಳನ್ನು ಬಂಧಿಸಲು ಆರ್ಮುಗಂ ಆಗ್ರಹ
October 23, 2018ಕೊಳ್ಳೇಗಾಲ: ನನ್ನ ಹಾಗೂ ನನ್ನ ಪತ್ನಿ ಮೇಲೆ ಮಾರ ಣಾಂತಿಕ ಹಲ್ಲೆ ನಡೆಸಿ, ನನ್ನ ತಂದೆ ಕೊಲೆ ಗೈದ 7 ಮಂದಿ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಳನಿ ಮೇಡು ಗ್ರಾಮದ ಆರ್ಮುಗಂ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಈ ಸಂಬಂಧ ವೀರಶೈವ ಮುಖಂಡರೂ, ಮಾಜಿ ಅಧ್ಯಕ್ಷರೂ ಆದ ಬಸವರಾಜು ಸಮ್ಮುಖದಲ್ಲಿ ಡಿವೈಎಸ್ಪಿ ಅವರಿಗೆ ದೂರು ನೀಡಲಾಗಿದೆ. ಸೆಪ್ಟೆಂಬರ್ 6ರಲ್ಲಿ ಏಕಾಏಕಿ ನಮ್ಮ ತೋಟದ ಮನೆಗೆ…
ಚಾಮರಾಜನಗರದಲ್ಲಿ ಡಾ.ಅಂಬೇಡ್ಕರ್ 127ನೇ ಜನ್ಮದಿನಾಚರಣೆ
October 22, 2018ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಜನರಲ್ಲಿರುವ ದೃಷ್ಠಿಕೋನ ಬದಲಾಯಿಸಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಸಚಿವ ಹಾಗೂ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ 127ನೇ ಜನ್ಮ ದಿನಾಚರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಅವರನ್ನು ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರನ್ನು (ಗಾಂಧೀಜಿ) ಯಾವ ಜಾತಿ ಎಂದು…
ಅರ್ಥಪೂರ್ಣವಾಗಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ
October 22, 2018ಚಾಮರಾಜನಗರ: ದೇಶದ ಭದ್ರತೆ, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಗಾಗಿ ಜೀವದ ಹಂಗು ತೊರೆದು ಹೋರಾಡಿ ವೀರ ಮರಣವನ್ನಪ್ಪಿದ ಪೊಲೀ ಸರಿಗೆ ಗೌರವ ನಮನ ಸಲ್ಲಿಸುವ ಸಲು ವಾಗಿ ನಡೆದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮ ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆಯಿತು. ಜಿಲ್ಲಾ ಪೊಲೀಸ್ ಕವಾಯಿತು ಮೈದಾನ ದಲ್ಲಿ 60ನೇ ವರ್ಷದ ಪೊಲೀಸ್ ಹುತಾ ತ್ಮರ ದಿನದ ಸ್ಮರಣೆ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾ ಗಿದ್ದ ಗೌರವ ವಂದನೆ ಕಾರ್ಯಕ್ರಮವು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೌರವಾನ್ವಿತ ಜಿಲ್ಲಾ ಮತ್ತು…
ಬಂಡೀಪುರದಲ್ಲಿ ಫ್ಲೈಓವರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ
October 22, 2018ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನ ದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು ಎಂದು ಒತ್ತಾ ಯಿಸಿದ ಬಂಡೀಪುರ ಸಮೀಪದ ಕಾಡಂಚಿನ ಯುವಕರು ಹಾಗೂ ಪರಿಸರ ಪ್ರೇಮಿಗಳು ಬಂಡೀಪುರ ಹುಲಿಯೋಜನೆಯ ಮೇಲು ಕಾಮನಹಳ್ಳಿ ಬಳಿ ಪ್ರತಿಭಟನೆ ನಡೆಸಿದರು. ಕಾಡಂಚಿನ ಜಕ್ಕಹಳ್ಳಿ, ಮಂಗಲ, ಎಲ್ಚೆಟ್ಟಿ, ಕರಕಲಮಾದಹಳ್ಳಿ, ಚಿಕ್ಕತುಪ್ಪೂರು, ದೊಡ್ಡತುಪ್ಪೂರು ಗ್ರಾಮದ ನೂರಕ್ಕೂ ಹೆಚ್ಚಿನ ಯುವಕರು ಹಾಗೂ ಸ್ವಯಂಸೇವಾ ಸಂಸ್ಥೆಗಳ ಸದಸ್ಯರು ಮೇಲುಕಾಮನಹಳ್ಳಿ ಬಳಿ ಬೆಳಗಿನಿಂದ ಮಧ್ಯಾಹ್ನದವರೆಗೂ ಪ್ರತಿಭಟನೆ ನಡೆಸಿದರು. ಕೇರಳ ನೆಲಂಬೂರಿಗೆ ರೈಲ್ವೇ ಸಂಪರ್ಕ ಕಲ್ಪಿಸಲು ಬಂಡೀಪುರ ಹುಲಿಯೋಜನೆಯ ಅರಣ್ಯ ಪ್ರದೇಶದಲ್ಲಿ ಫ್ಲೈಓವರ್…
ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಸಹಕರಿಸಲು ಮನವಿ
October 22, 2018ಚಾಮರಾಜನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ದೋಷರಹಿತ ವಾಗಿ ತಯಾರಿಸುವ ನಿಟ್ಟಿನಲ್ಲಿ ಕೈಗೊಂಡಿ ರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ರಾಜ ಕೀಯ ಪಕ್ಷಗಳು ಸಹಕಾರ ನೀಡಬೇ ಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಸಂಬಂಧ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ದಿನಾಂಕ 01.01.2019 ಕ್ಕೆ ಅರ್ಹತಾ ದಿನಾಂಕವೆಂದು ನಿಗದಿಪಡಿಸಿ, ವಿಧಾನಸಭಾ…