ಚಾಮರಾಜನಗರ, ಜು.19(ಎಸ್ಎಸ್)- ಜಿಲ್ಲೆಯಲ್ಲಿ ಸೋಮವಾರ ಎಸ್ಎಸ್ ಎಲ್ಸಿ ಪರೀಕ್ಷೆಯು ಯಾವುದೇ ಗೊಂದಲ ಗಳು ಇಲ್ಲದೆ ಸುಸೂತ್ರವಾಗಿ ನಡೆಯಿತು. ಶೇ. 99.73ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯ ಮೊದಲ ದಿನವಾದ ಸೋಮವಾರ ಕೋರ್ ವಿಷಯಗಳಾದ ವಿಜ್ಞಾನ, ಗಣಿತ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಿತು. ಈ ವಿಷಯಗಳಿಗೆ ಜಿಲ್ಲೆಯಲ್ಲಿ ಒಟ್ಟು 11,963 ವಿದ್ಯಾರ್ಥಿಗಳು ಪರೀಕ್ಷೆಗೆ ತೆಗೆದುಕೊಂಡಿದ್ದರು. ಈ ಪೈಕಿ 6,226 ಬಾಲಕರು, 5,705 ವಿದ್ಯಾರ್ಥಿ ಗಳು ಸೇರಿ ಒಟ್ಟು 11,931 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು….
ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ 31 ಕೈಗಾರಿಕಾ ಘಟಕಗಳಿಗೆ ಅನುಮೋದನೆ
July 19, 2021ಚಾಮರಾಜನಗರ, ಜು.18- ತಾಲೂ ಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ 31 ಕೈಗಾರಿಕಾ ಘಟಕಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡಿದ್ದು, ಇದರಿಂದ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಉದ್ಯಮ ಚಟುವಟಿಕೆಗಳು ಗರಿಗೆದರಲಿವೆ. ಅಲ್ಲದೇ, ಸಣ್ಣ ಪ್ರಮಾಣದ ಕೈಗಾರಿಕಾ ನಿವೇ ಶನಗಳನ್ನು ಒದಗಿಸಲು 118.44 ಎಕರೆ ಜಮೀನಿನಲ್ಲಿ ಕೈಗಾರಿಕಾ ಸಬ್ ಲೇಔಟ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ವಸಾಹುತುವಿನಲ್ಲಿ ಈಗಾಗಲೇ ಹಲವು ಕೈಗಾರಿಕೆಗಳು ಕಾರ್ಯ ಆರಂಭ…
ಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಲು ಕರೆ
July 18, 2021ಚಾಮರಾಜನಗರ, ಜು.17- ಲಿಂಗತ್ವ ಅಲ್ಪ ಸಂಖ್ಯಾತರು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿ, ಸಬಲರಾಗಿ ಸ್ವಾವಲಂಬಿಗಳಾಗ ಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನಪುರಿ ಕರೆ ನೀಡಿದರು. ನಗರದ ಜಿಲ್ಲಾ ನ್ಯಾಯಾಲಯ ಆವ ರಣದಲ್ಲಿರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮತಾ ಸೊಸೈಟಿ, ಇವರ ಸಹಯೋಗದಲ್ಲಿ ಆಯೋಜಿಸಿದ್ದ ಲಿಂಗತ್ವ ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಕಾನೂನು ಅರಿವು…
ಜಿಲ್ಲೆಯಲ್ಲಿ ನೂತನ ವಿವಿ ಸ್ಥಾಪನೆಗೆ ಅಗತ್ಯ ನೆರವು
July 17, 2021ಚಾಮರಾಜನಗರ, ಜು.16-ಚಾಮ ರಾಜನಗರ ಜಿಲ್ಲೆಗೆ ಪ್ರತ್ಯೇಕ ನೂತನ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಸರ್ಕಾರ ನಿರ್ಧ ರಿಸಿದ್ದು, ಅಗತ್ಯವಿರುವ ಎಲ್ಲಾ ನೆರವು ಹಾಗೂ ಸಹಕಾರವನ್ನು ಜಿಲ್ಲಾಡಳಿತ ದಿಂದ ನೀಡಲಾಗುವುದು ಎಂದು ಜಿಲ್ಲಾ ಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ನೂತನ ವಿಶ್ವವಿದ್ಯಾನಿಲಯ ಸ್ಥಾಪನೆ ಸಂಬಂಧ ತಮ್ಮ ಕಚೇರಿ ಸಭಾಂಗಣದ ಲ್ಲಿಂದು ನಡೆದ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದಿಂದ ಜಿಲ್ಲೆಯಲ್ಲಿ ಪ್ರತ್ಯೇಕ ನೂತನ ವಿಶ್ವವಿದ್ಯಾನಿಲಯ ಸ್ಥಾಪಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾ ಗಿದೆ….
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
July 17, 2021ಹನೂರು, ಜು.16(ಸೋಮು)-ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಹನೂರು ಹಾಗೂ ರಾಮಾಪುರ ಬ್ಲಾಕ್ ಕಾಂಗ್ರೆಸ್ನಿಂದ ಪಟ್ಟಣದಲ್ಲಿ ಪ್ರತಿಭಟಿಸಲಾಯಿತು. ಪಟ್ಟಣದ ಮಹದೇಶ್ವರ ಕ್ರೀಡಾಂಗಣ ದಿಂದ ಸೈಕಲ್ ಹಾಗೂ ಎತ್ತಿನ ಗಾಡಿಗಳ ಮೂಲಕ ಪ್ರತಿಭಟನಾ ಜಾಥಾ ಆರಂಭಿ ಸಿದ ಕಾರ್ಯಕರ್ತರು, ಖಾಸಗಿ ಬಸ್ ನಿಲ್ದಾಣ ವೃತ್ತದಲ್ಲಿ ಕೆಲಕಾಲ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಳಿಕ ಮೆರವಣಿಗೆ ಮೂಲಕ ಸಾಗಿ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿ ಪ್ರತಿಭಟಿಸಿದರು. ಶಾಸಕ ಆರ್.ನರೇಂದ್ರ ಮಾತನಾಡಿ,…
ಶ್ರೀ ಚಾಮರಾಜೇಶ್ವರಸ್ವಾಮಿ ದರ್ಶನ ಪಡೆದ ಸಚಿವ
July 17, 2021ಚಾಮರಾಜನಗರ, ಜು.16(ಎಸ್ಎಸ್)- ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಚಾಮರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಚಾಮ ರಾಜೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೆಂಪನಂಜಾಂಬ ಮತ್ತು ಚಾಮುಂಡೇಶ್ವರಿದೇವಿಯ ದರ್ಶನ ಪಡೆ ದರು. ದೇವಸ್ಥಾನದ ಒಳಾವರಣದಲ್ಲಿ ಪ್ರದಕ್ಷಿಣೆ ಹಾಕುವ ಮೂಲಕ ದೇವಸ್ಥಾನ ಪರಿಶೀಲಿಸಿದರು. ಈ ವೇಳೆ ಸುದ್ದಿಗಾರರೊಂ ದಿಗೆ ಮಾತನಾಡಿದ ಸಚಿವರು, ಈ ಪುರಾ ತನ ದೇವಸ್ಥಾನದ ಅಭಿವೃದ್ಧಿಗೆ ಕೈಗೊಳ್ಳ ಬಹುದಾದ ಕ್ರಮಗಳ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸ ಲಾಗುವುದು. ಇದಲ್ಲದೆ…
ವಿದ್ಯಾರ್ಥಿನಿಲಯಗಳ ಕಟ್ಟಡ ಶೀಘ್ರ ಪೂರ್ಣಗೊಳಿಸಿ, ದೇಗುಲಗಳ ಆಸ್ತಿ ರಕ್ಷಿಸಿ
July 17, 2021ಚಾಮರಾಜನಗರ, ಜು.16-ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಿಂದ ಕೈಗೊಂಡಿರುವ ವಿದ್ಯಾರ್ಥಿ ನಿಲಯಗಳ ಕಟ್ಟಡ ಹಾಗೂ ಸಮು ದಾಯ ಭವನಗಳನ್ನು ಶೀಘ್ರ ಪೂರ್ಣ ಗೊಳಿಸುವಂತೆ ಹಾಗೂ ದೇವಾಲಯಗಳ ಆಸ್ತಿ ಸಂರಕ್ಷಿಸುವಂತೆ ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಇಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮ…
ಮಾದಪ್ಪನ ಬೆಟ್ಟ ಅಭಿವೃದ್ಧಿಗೆ ಸಹಕರಿಸಲು ಮನವಿ
July 15, 2021ಹನೂರು, ಜು.14(ಸೋಮು)- ತಾಲೂ ಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಬುಧವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಡಾ.ಎಂ. ಆರ್.ರವಿ ಅವರನ್ನು ಶ್ರೀಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀಮಲೆ ಮಹದೇಶ್ವರಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಭಿವೃ ದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ…
ಕೋವಿಡ್ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ
July 15, 2021ಚಾಮರಾಜನಗರ, ಜು.14(ಎಸ್ಎಸ್)- ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟ ವರ ಅಂತ್ಯಕ್ರಿಯೆ ಮಾಡಿ, ಕೊರೊನಾ ಸೋಂಕಿತರು ಹಾಗೂ ಸಂಬಂಧಿಕರಿಗೆ ಆಪತ್ಭಾಂದವರಾಗಿ ಸೇನಾನಿಗಳಾಗಿ ದುಡಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತ ರಿಗೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದರು. ನಗರದ ವಿಶ್ವ ಹಿಂದೂ ಪರಿಷತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕೊರೊನಾ ಸಂದರ್ಭ ದಲ್ಲಿ ಸೇನಾನಿಗಳಾಗಿ ದುಡಿದ ಪಕ್ಷದ 60 ಜನರಿಗೆ ಪಕ್ಷದ ಶಲ್ಯ ಹಾಕಿ, ಹಣ್ಣಿನ ಬುಟ್ಟಿ ನೀಡಿ, ಅವರ ಮೇಲೆ ಪುಷ್ಪ ಮಳೆಗೈದ ಕಟೀಲ್…
ತÉೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಸೈಕಲ್ ಜಾಥಾ
July 14, 2021ಕೊಳ್ಳೇಗಾಲ, ಜು.13- ತೈಲ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಪಕ್ಷ ಮುಖಂಡರು ಪಟ್ಟಣದಲ್ಲಿ ಸೈಕಲ್ ಜಾಥಾ ನಡೆಸುವ ಮೂಲಕ ಪ್ರತಿಭಟಿಸಿದರು. ನಗರದ ಬಸ್ ನಿಲ್ದಾಣದ ಗಣಪತಿ ದೇಗುಲದ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಗಮನ ಸೆಳೆದರು. ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೇಂದ್ರ ಕಳೆದ 1 ತಿಂಗಳಲ್ಲಿ 24 ಬಾರಿ ತೈಲ…