ಕುಟುಂಬಸ್ಥರಿಂದ ಕೊಲೆ ಶಂಕೆ; ದೂರು ದಾಖಲು ಗುಂಡ್ಲುಪೇಟೆ: ಇಲ್ಲಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಚಾಲಕನ ಶವ ಪತ್ತೆಯಾಗಿದೆ. ಪುರಸಭೆ ಕಚೇರಿ ಸಮೀಪವಿರುವ ವಾಣಿಜ್ಯ ಸಂಕೀರ್ಣದ ಮೆಟ್ಟಿಲುಗಳ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವ(40) ಎಂಬಾತನ ಶವ ಕಂಡು ಬಂದಿದೆ. ವಿಷಯ ತಿಳಿದ ಪೆÇಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟ ಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮೃತನ ಪತ್ನಿ ಸುವರ್ಣಮ್ಮ ತನ್ನ ಗಂಡ ಆತ್ಮಹತ್ಯೆ ಮಾಡಿಕೊಂಡಿಲ್ಲ….
ನಗರಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ
August 30, 2018ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರ ಸಭೆಗಳಿಗೆ ಆಗಸ್ಟ್ 31 ರಂದು ನಡೆಯಲಿ ರುವ ಚುನಾವಣೆ ಸಂಬಂಧ ಮತದಾನಕ್ಕೆ ಜಿಲ್ಲಾಡಳಿತವು ಸರ್ವ ಸಿದ್ಧತೆ ಮಾಡಿಕೊಂಡಿದೆ. ಚಾಮರಾಜನಗರ ನಗರಸಭೆಗೆ ಸಂಬಂಧಿ ಸಿದಂತೆ ಒಟ್ಟು 31 ವಾರ್ಡ್ಗಳಿದ್ದು, 26106 ಪುರುಷರು, 27650 ಮಹಿಳೆಯರು, ಇತರೆ 7 ಮತದಾರರು ಸೇರಿದಂತೆ ಒಟ್ಟು 53763 ಮತದಾರರು ಮತ್ತು 4 ಮಂದಿ ಸೇವಾ ಮತದಾರರಿದ್ದಾರೆ. ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 31 ವಾರ್ಡ್ಗಳಿದ್ದು, 21963 ಪುರುಷರು, 22488 ಮಹಿಳೆಯರು, ಇತರೆ 4 ಮತದಾರರು…
ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ನ್ಯಾ.ಜೆ.ಯೋಗೇಶ್
August 28, 2018ಯಳಂದೂರು: ಶ್ರೀ ಗುರು ರಾಘವೇಂದ್ರ ಸಾರ್ವಭೌಮರ 347ನೇ ಆರಾಧನಾ ಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೆ ವಿಶೇಷ ಪೂಜೆ ವಿಭೃಂಜಣೆÉಯಿಂದ ನಡೆಯಿತು. ಪಟ್ಟಣದ ಶ್ರೀವ್ಯಾಸರಾಜ ಮಠದಲ್ಲಿ (ಸೋಸಲೆ ಶಾಖೆ) ಸೋಮವಾರ ಶ್ರೀ ರಾಘವೇಂದ್ರಸ್ವಾಮಿ ಅವರ ಆರಾಧನ ಮಹೋತ್ಸವದಲ್ಲಿ 3 ದಿನಗಳ ಕಾಲ ವಿಶೇಷ ಪೂಜೆ, ಅಭಿಷೇಕಗಳನ್ನು ಏರ್ಪಡಿಸಲಾಗಿದ್ದು, ರಾಯರ ಮಠಕ್ಕೆ ಸಾವಿರಾರು ಸಂಖ್ಯೆ ಯಲ್ಲಿ ಭಕ್ತರು ಭೇಟಿ ನೀಡಿ ರಾಯರ ದರ್ಶನ ಪಡೆಯುತ್ತಿದ್ದಾರೆ. ಮಠದಿಂದ ಬರುವ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯ ನಡೆಯುತ್ತಿದೆ. ಮೊದಲ…
ನಾರಾಯಣ ಗುರು ಆದರ್ಶ ಸುಧಾರಣೆ ಇಂದಿಗೂ ಅವಶ್ಯ
August 28, 2018ಚಾಮರಾಜನಗರ: ‘ಬ್ರಹ್ಮಶ್ರೀ ನಾರಾಯಣ ಗುರು ಅವರು 19ನೇ ಶತಮಾನದಲ್ಲಿ ಆರಂಭಿಸಿದ ಸಾಮಾಜಿಕ ಸುಧಾರಣೆಗಳು ಪ್ರಸ್ತುತ ಸಂದರ್ಭಕ್ಕೂ ಅವಶ್ಯಕವಾಗಿವೆ’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮಶ್ರೀ ನಾರಾಯಣಗುರು ಅವರು ಸಾಮಾಜಿಕ ಸಮಾನತೆಗೆ ಅನೇಕ ಸುಧಾರಣೆಗಳನ್ನು ತಂದರು. ಎಲ್ಲಾ ಜಾತಿಗಳು ಸಮಾನ ಎಂದು ಪ್ರತಿಪಾದಿಸಿ ದರು….
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ಹಾಕಿದರೆ ಪ್ರಕರಣ ದಾಖಲು: ಗುಂಡ್ಲುಪೇಟೆ ಪಟ್ಟಣ ಪೊಲೀಸರಿಂದ ಎಚ್ಚರಿಕೆ
August 28, 2018ಗುಂಡ್ಲುಪೇಟೆ: ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಹಾಗೂ ಪ್ರಚೋದನ ಕಾರಿ ಪೋಸ್ಟ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾ ಗುವುದು ಎಂದು ಪಟ್ಟಣದ ಪೊಲೀಸರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿಗೆ ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ದ ಮಾನಹಾನಿಕರ ಪೋಸ್ಟ್ ಹಾಕಿರುವ ಬಗ್ಗೆ ಆ. 26ರಂದು ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಳಿಕ ಪ್ರಧಾನಿ ನರೇಂದ್ರಮೋದಿ, ಮಾಜಿ ಮುಖ್ಯಮಂತ್ರಿ…
ಪಿಎಸ್ಐ ದೀಪಕ್ಗೆ ಮುಖ್ಯಮಂತ್ರಿ ಪದಕ
August 27, 2018ಚಾಮರಾಜನಗರ: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆಗಾಗಿ ಕೊಡ ಮಾಡುವ ‘ಮುಖ್ಯಮಂತ್ರಿ ಪದಕ’ಕ್ಕೆ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಲ್.ದೀಪಕ್ ಭಾಜನರಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ದೀಪಕ್ ಅವರು ಸಲ್ಲಿ ಸುತ್ತಿರುವ ಉತ್ತಮ ಸೇವೆಯನ್ನು ಪರಿ ಗಣಿಸಿ ಈ ಪದಕ ನೀಡಲಾಗಿದೆ. ಪ್ರಸ್ತುತ ಚಾಮರಾಜನಗರದ ಸಂಚಾರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದೀಪಕ್, ಚಾಮ ರಾಜನಗರದಲ್ಲಿ ಸಂಚಾರಿ ನಿಯಮಗಳನ್ನು ಜಾರಿಗೊಳಿಸಲು ಅಪಾರವಾಗಿ ಶ್ರಮಿಸುತ್ತಿ ದ್ದಾರೆ. ಇದಲ್ಲದೇ ಫುಟ್ಪಾತ್ ತೆರವು ಕಾರ್ಯಾಚರಣೆಯಲ್ಲೂ…
ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಚುನಾವಣೆ ಅಖಾಡಕ್ಕಿಳಿದ ಕಾಂಗ್ರೆಸ್, ಬಿಜೆಪಿ ನಾಯಕರು
August 27, 2018ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಯ ಸದಸ್ಯ ಸ್ಥಾನಕ್ಕೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಚಾರದ ಕಾವು ಮತ್ತಷ್ಟು ಬಿರುಸುಗೊಂಡಿದೆ. ಇದು ನಗರಸಭೆಯ ಚುನಾವಣಾ ಪ್ರಚಾರ… ಪ್ರಚಾರದ ವಿಚಾರ ಏನೆಂದರೆ, ಇದೇ ತಿಂಗಳ 31ರಂದು ನಡೆಯಲಿರುವ ನಗರ ಸಭಾ ಚುನಾವಣೆ…. ವಾರ್ಡ್ನಿಂದ…. ಪಕ್ಷದಿಂದ (ಪಕ್ಷೇತರ) ಸ್ಪರ್ಧಿಸಿರುವ …….ಅಭ್ಯರ್ಥಿಗೆ ತಮ್ಮ ಅತ್ಯಮೂಲ್ಯವಾದ ಮತಗಳನ್ನು ನೀಡಿ ಅವರನ್ನ ಜಯ ಶೀಲರನ್ನಾಗಿ ಮಾಡಿ ತಮ್ಮಗಳ ಸೇವೆ ಮಾಡಲು ಅವಕಾಶ ಕಲ್ಪಿಸುವಂತೆ ವಿನಂತಿ ಎಂಬ ಧ್ವನಿವರ್ಧಕದ ಕೂಗು ಎಲ್ಲಾ ವಾರ್ಡ್ಗಳಲ್ಲಿ ಕೇಳಿ ಬರುತ್ತಿದೆ. ಧ್ವನಿವ…
9 ಬಿಜೆಪಿ ಬಂಡಾಯ ಅಭ್ಯರ್ಥಿಗಳ ಅಮಾನತ್ತು
August 27, 2018ಚಾಮರಾಜನಗರ: ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿ ಸಿರುವ ಪಕ್ಷದ 9 ಮುಖಂಡರನ್ನು ಅಮಾನತ್ತುಗೊಳಿಸಲಾಗಿದೆ. ಚಾಮರಾಜನಗರ ನಗರಸಭೆಯ 17ನೇ ವಾರ್ಡ್ನಿಂದ ಸ್ಪರ್ಧಿಸಿರುವ ಸಿ.ಎ.ಬಸವಣ್ಣ, 23ನೇ ವಾರ್ಡ್ನಿಂದ ಸ್ಪರ್ಧಿಸುವ ಕಲ್ಯಾಣಿ ಮಂಜುನಾಥ್, ಎನ್.ಮಂಜುಳ ನಾರಾಯಣ್, 26ನೇ ವಾರ್ಡ್ನಿಂದ ಸ್ಪರ್ಧಿಸಿರುವ ರೂಪ ಭಾನುಪ್ರಕಾಶ್, 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜೇಬಿ ಮಹದೇವಪ್ಪ, 30ನೇ ವಾರ್ಡ್ನಿಂದ ಸ್ಪರ್ಧಿಸಿರುವ ಎಂ.ಬಸವರಾಜು ಅವರನ್ನು ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಎಸ್.ನಾಗೆಂದ್ರಸ್ವಾಮಿ ತಿಳಿಸಿದ್ದಾರೆ….
ಬೇಗೂರು ಗ್ರಾಪಂನಲ್ಲಿ ಇ-ಸ್ವತ್ತು ನೀಡಿಕೆಯಲ್ಲಿ ಅವ್ಯವಹಾರ ಆರೋಪ
August 27, 2018ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ನೀಡಿಕೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆಯುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಜಿಲ್ಲಾ ಸಂಘಟನಾ ಸಂಚಾ ಲಕ ಎಂ.ಬಿ.ಚಿಕ್ಕಣ್ಣ ಮತ್ತು ಮುಖಂಡ ಲಿಂಗಪ್ಪ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಮುಖ ಹೋಬಳಿ ಕೇಂದ್ರವಾದ ಬೇಗೂರು ಗ್ರಾಮಪಂಚಾಯಿತಿಯಲ್ಲಿ ಇ ಸ್ವತ್ತು ನೀಡಿಕೆಯಲ್ಲಿ ರಾಜಾರೋಷವಾಗಿ ಹಣ ಪೀಕಲಾಗುತ್ತಿದೆ. ಹಲವು ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೂ ಸಹ ಇ-ಸ್ವತ್ತು ನೀಡುವುದರೊಂದಿಗೆ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಇದಕ್ಕೆ ಪಿಡಿ ನೇರ…
ಕಾಂಗ್ರೆಸ್ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟೀಕೆ: ದೂರು ದಾಖಲು
August 27, 2018ಗುಂಡ್ಲುಪೇಟೆ: ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಮತ್ತು ಮುಖಂಡರು ಪತ್ರಿಕಾ ಗೋಷ್ಠಿ ನಡೆಸಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅಧಿಕಾರಕ್ಕೆ ಬಂದು ನೂರು ದಿನಗು ಕಳೆದಿದ್ದರೂ ಸಹ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಿಲ್ಲ ಎಂದು ಟೀಕಿಸಿದ್ದ ಹಿನ್ನೆಲೆಯಲ್ಲಿ ಗಣೇಶ್ ಪ್ರಸಾದ್ ವಿರುದ್ಧ ಅವಾಚ್ಯ ಹಾಗೂ ಅಶ್ಲೀಲ ಪದಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ಬಗ್ಗೆ ಪಟ್ಟಣ ಠಾಣೆ ಪೆÇಲೀಸರಿಗೆ ದೂರು ನೀಡಲಾಗಿದೆ. ಕಳೆದ ಆ.24ರಂದು ಪಟ್ಟಣದ ಹೋಟೆಲೊಂದರಲ್ಲಿ ಸುದ್ದಿ ಗೋಷ್ಠಿ ನಡೆಸಿದ ಗಣೇಶ್ ಪ್ರಸಾದ್ ಹಾಗೂ ಮುಖಂಡರು, ನಿರಂಜನಕುಮಾರ್ ಆಯ್ಕೆಯಾಗಿ…