ಹನೂರು, ಜು.12(ಸೋಮು)- ಮನೆಗಳಲ್ಲಿ ಒಣಕಸ ಹಾಗೂ ಹಸಿಕಸವನ್ನು ವಿಂಗಡಿಸಿ ವಾಹನಕ್ಕೆ ಹಾಕುವುದರ ಮೂಲಕ ಪಟ್ಟಣದ ಸ್ವಚ್ಛತೆಗೆ ಪಟ್ಟಣ ಪಂಚಾಯಿತಿಯೊಂದಿಗೆ ಸಹಕಾರ ನೀಡಬೇಕು ಎಂದು ಪಪಂ ಮುಖ್ಯಾಧಿಕಾರಿ ಮೂರ್ತಿ ತಿಳಿಸಿದರು. ಪಟ್ಟಣದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸೋಮವಾರ ಜಿಲ್ಲಾ ಗ್ರೀನ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿ ವತಿ ಯಿಂದ ಕಸ ವಿಂಗಡಣೆ ಹಾಗೂ ಸ್ವಚ್ಛತೆ ಸಂಬಂಧ ಆಟೋ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಜನರು…
ಹನೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
July 13, 2021ಹನೂರು, ಜು.12(ಸೋಮು)- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮ ವಾರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ್ ರವಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೋವಿಡ್ ಸಂಕಷ್ಟದ ಕಾಲ ದಲ್ಲಿ ಜೀವ ಭಯದ ಹಂಗನ್ನು ತೊರೆದು ಸೇವೆ ಸಲ್ಲಿಸಲಾಗಿದೆ. ಹಾಗಾಗಿ, ಸರ್ಕಾರ ಈ ಬಗ್ಗೆ ಮನ ಗಂಡು ನಮಗೆ ಹಲವು ಸೌಕರ್ಯ ಗಳನ್ನು ಒದಗಿಸಿಕೊಡಬೇಕು. ಈ ದಿಸೆಯಲ್ಲಿ ಕೋವಿಡ್ ಕರ್ತವ್ಯನಿರತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸುರಕ್ಷತೆಗೆ ಬಗ್ಗೆ ಹೆಚ್ಚಿನ ಆದ್ಯತೆ…
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
July 13, 2021ಗುಂಡ್ಲುಪೇಟೆ, ಜು.12(ಸೋಮ್.ಜಿ)- ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸೋಮ ವಾರ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂ ಡರು ಸೈಕಲ್ ಜಾಥಾ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಹೊರಟ ಸೈಕಲ್ ಜಾಥಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡಿತು. ಟೌನ್ ಹಾಗೂ ಬೇಗೂರು ಕಾಂಗ್ರೆಸ್ ಕಮಿಟಿಯು ಜಂಟಿಯಾಗಿ ಆಯೋಜಿ ಸಿದ್ದ ಸೈಕಲ್ ಜಾಥಾದಲ್ಲಿ ಪಾಲ್ಗೊಂಡು ಮುಖಂಡ ಹೆಚ್.ಎಂ.ಗಣೇಶ್ಪ್ರಸಾದ್ ಮಾತನಾಡಿ, ಕೇಂದ್ರ ಸರ್ಕಾರ ಅಡುಗೆ ಅನಿಲ ಸೇರಿದಂತೆ ಪೆಟ್ರೋಲ್ ಹಾಗೂ…
‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕಾರ್ಯಕ್ರಮಕ್ಕೆ ಚಾಲನೆ
July 11, 2021ಹನೂರು, ಜು.10(ಸೋಮು)- ಕೃಷಿ ಇಲಾಖೆಯಲ್ಲಿ ರೈತರಿಗೆ ಅನೇಕ ಸೌಲಭ್ಯ ಗಳ ಜೊತೆಗೆ ಉಪಯುಕ್ತ ಮಾಹಿತಿ ಯನ್ನು ನೀಡಲಾಗುತ್ತಿದ್ದು, ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಮಗ್ರ ಕೃಷಿ ಅಭಿ ಯಾನ 2020-21ನೇ ಸಾಲಿನ ‘ಇಲಾಖೆ ಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಹಾಗೂ ಮುಂಗಾರು ರೈತರ ಬೆಳೆ ಸಮೀಕ್ಷೆ ಕಾರ್ಯ ಕ್ರಮಕ್ಕೆ ಚಾಲನೆ ಮತ್ತು ಕೃಷಿ ಯಂತ್ರೋಪ ಕರಣಗಳ…
ಈ ವರ್ಷವೂ ಶ್ರೀ ಚಾಮರಾಜೇಶ್ವರ ರಥೋತ್ಸವ ಇಲ್ಲ
July 11, 2021ಚಾಮರಾಜನಗರ, ಜು.10- ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಭರವಸೆ ಈಡೇರಿದ್ದರೆ, ಅಥವಾ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವವು ಇದೇ ತಿಂಗಳ 23ರಂದು ನಡೆಸಬೇಕಿತ್ತು. ಆದರೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಹಾಗೂ ಕೊರೊನಾ ಕಾರಣದಿಂದ ಈ ಬಾರಿಯೂ ಇತಿಹಾಸ ಪ್ರಸಿದ್ಧವಾದ ಶ್ರೀಚಾಮ ರಾಜೇಶ್ವರ ಸ್ವಾಮಿ ರಥೋತ್ಸವ ನಡೆಯುತ್ತಿಲ್ಲ. ಶ್ರೀಚಾಮರಾಜೇಶ್ವರಸ್ವಾಮಿ ರಥೋ ತ್ಸವವು ನೂರಾರು ವರ್ಷಗಳಿಂದ ಆಷಾಢ ಮಾಸದಲ್ಲಿ ಜರುಗುತ್ತಿತ್ತು. ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಜನರು…
ದಿನಸಿ ಕಿಟ್ ಪಡೆಯಲು ಮುಗಿಬಿದ್ದ ಕಾರ್ಮಿಕರು
July 10, 2021ಕೊಳ್ಳೇಗಾಲ,ಜು.9(ಎನ್.ನಾಗೇಂದ್ರ)-ಕೊಳ್ಳೇಗಾಲದಲ್ಲಿ ಕಟ್ಟಡ ಕಾರ್ಮಿಕರಿಗಾಗಿ ದಿನಸಿ ಕಿಟ್ ವಿತರಣೆ ಸಂದರ್ಭದಲ್ಲಿ ಸಾವಿ ರಾರು ಕಾರ್ಮಿಕರು ಮುಗಿಬಿದ್ದ ಹಿನ್ನೆಲೆ ಯಲ್ಲಿ ನೂಕು ನುಗ್ಗಲು ಉಂಟಾಯಿತು. ಪರಿಸ್ಥಿತಿ ನಿಯಂತ್ರಣಕ್ಕಾಗಿ ನಗರ ಠಾಣೆ ಪೆÇಲೀಸರು ಲಘು ಲಾಠಿ ಪ್ರಹಾರ ಮಾಡಿದ ಘಟನೆಯೂ ಜರುಗಿತು.ಸೂಕ್ತ ವ್ಯವಸ್ಥೆ, ಕೋವಿಡ್ ನಿಯ ಮಕ್ಕೂ ಅಗತ್ಯ ಕ್ರಮ ತೆಗೆದುಕೊಳ್ಳದೆ ಕಾರ್ಮಿಕ ಇಲಾಖೆ ಕೈಚೆಲ್ಲಿದ ಕಾರಣ ಕ್ಕಾಗಿ ಕಿಟ್ ಪಡೆಯಲು ಕಾರ್ಮಿಕರು ಮುಗಿಬಿದ್ದರಲ್ಲದೆ, ಸರತಿ ಸಾಲಿನಲ್ಲಿ ಸಾಗದೆ ಜನದಟ್ಟಣೆ ಏರ್ಪಟ್ಟಿತು. ಅನಿ ವಾರ್ಯವಾಗಿ ಪೆÇಲೀಸ್ ಸಿಬ್ಬಂದಿ ನಡೆಸಿದ ಲಘು ಲಾಠಿ…
ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ
July 10, 2021ಬದನಗುಪ್ಪೆ, ಜು.9(ಮಲ್ಲಣ್ಣ)-ಚಾಮರಾಜ ನಗರ-ಮುತ್ತಿಗೆ ಗ್ರಾಮದ ಸಮೀಪವಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವ ರಣದಲ್ಲಿ ವರುಣಾ ಕ್ಷೇತ್ರ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಶ್ರೀ ಬೀರ ಲಿಂಗೇಶ್ವರಸ್ವಾಮಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರು, ಈ ಭವನ ನಿರ್ಮಾಣಕ್ಕೆ ಹಿಂದು ಳಿದ ವರ್ಗಗಳ ಇಲಾಖೆಯಿಂದ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ಇದು ನನ್ನ ಕ್ಷೇತ್ರವಾಗಿಲ್ಲದಿದ್ದರೂ ನನ್ನ ತಂದೆಯ ಹಾಗೂ ನನ್ನ ಮೇಲಿನ ಪ್ರೀತಿ, ವಿಶ್ವಾಸ,…
ಮುಂಬರುವ ಚುನಾವಣೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ
July 10, 2021ಚಾಮರಾಜನಗರ, ಜು.9(ಎಸ್ಎಸ್)- ಮುಂಬರುವ ಜಿಪಂ, ತಾಪಂ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾ ಲಯದಲ್ಲಿ ನಡೆದ ತಾಲೂಕು ಗ್ರಾಮಾಂತರ ಮಂಡಲ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಬಿಜೆಪಿ ದೇಶದ ಉದ್ದಗಲಕ್ಕೂ ಕಾರ್ಯಕರ್ತರ ಪಡೆ ಹೊಂದಿರುವ ಏಕೈಕ ಪಕ್ಷ. `ಸರ್ವ ಸ್ಪರ್ಶಿ ಸರ್ವ ವ್ಯಾಪಿ’ ತತ್ವದಡಿ ಬೆಳೆದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್….
ತೆರಕಣಾಂಬಿ ರೈತ ಸಂಪರ್ಕ ಕೇಂದ್ರಕ್ಕೆ ಡಿಸಿ ದಿಢೀರ್ ಭೇಟಿ
July 10, 2021ಚಾಮರಾಜನಗರ, ಜು.9-ಗುಂಡ್ಲು ಪೇಟೆ ತಾಲೂಕಿನ ತೆರಕಣಾಂಬಿ ರೈತ ಸಂಪರ್ಕ ಕೇಂದ್ರಕ್ಕೆ ಇಂದು ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಕೃಷಿ ಚಟುವಟಿಕೆಗೆ ಸಂಬಂಧಿಸಿದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಪರಿಶೀ ಲಿಸಿದರು. ಬೇಡಿಕೆಯಿರುವ ಕೆಲ ಬಿತ್ತನೆ ಬೀಜಗಳ ದಾಸ್ತಾನು ಮುಗಿದಿದ್ದರೂ ಮಾಹಿತಿ ನೀಡದೆ ಇರುವ ಬಗ್ಗೆ ಸಿಬ್ಬಂದಿಯನ್ನು ತೀವ್ರ ತರಾಟೆ ತೆಗೆದುಕೊಂಡರು. ತೆರಕಣಾಂಬಿ ಹೋಬಳಿ ರೈತ ಸಂಪರ್ಕ ಕೇಂದ್ರಕ್ಕೆ ಇಂದು ಬೆಳಗ್ಗೆಯೇ ಭೇಟಿ ನೀಡಿದ ಜಿಲ್ಲಾಧಿಕಾರಿ, ದಾಸ್ತಾನು ಮಾಡಲಾಗಿ ರುವ ಬಿತ್ತನೆ ಬೀಜಗಳು, ಲಘು ಪೋಷ ಕಾಂಶವನ್ನು…
ಪೌರಕಾರ್ಮಿಕರಿಗೆ ಸುರಕ್ಷಾ ಆರೋಗ್ಯ ಕಿಟ್ ವಿತರಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಸೂಚನೆ
July 8, 2021ಚಾಮರಾಜನಗರ, ಜು.7- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೈಜ್ಞಾನಿಕ ಆರೋಗ್ಯ ಪರಿ ಕರಗಳ ಸುರಕ್ಷಾ ಕಿಟ್ಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ವಿತರಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲೆಯ ಪೌರಕಾರ್ಮಿಕರಿಗೆ ನಗರ, ಸ್ಥಳೀಯ ಸಂಸ್ಥೆಗಳು ಒದಗಿಸುತ್ತಿ ರುವ ವಿವಿಧ ಸೌಲಭ್ಯಗಳ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….