ಚಾಮರಾಜನಗರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಆಗಸ್ಟ್ 17 ರಂದು ಸಾರ್ವತ್ರಿಕ ರಜೆ ಘೋಷಿಸಿದ ಹಿನ್ನಲೆಯಲ್ಲಿ ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭೆ ಚುನಾ ವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ ಪರಿಷ್ಕøತ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಪರಿಷ್ಕ್ರತ ಚುನಾವಣಾ ವೇಳಾ ಪಟ್ಟಿ ಪ್ರಕಾರ ನಾಮಪತ್ರ ಸಲ್ಲಿಸಲು ಆಗಸ್ಟ್ 18 ಕಡೆಯ ದಿನವಾಗಿದೆ. ಆಗಸ್ಟ್ 20ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು…
ಕಾರು-ಸ್ಕೂಟಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ
August 18, 2018ಚಾಮರಾಜನಗರ: ಕಾರು ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಕೂಟಿಯಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿ ರುವ ಘಟನೆ ತಾಲೂಕಿನ ಹರದನಹಳ್ಳಿ ಗ್ರಾಮದ ಕ್ರಾಸ್ನಲ್ಲಿ ಶುಕ್ರವಾರ ನಡೆದಿದೆ. ಈರೋಡ್ ಜಿಲ್ಲೆಯ ವಿಜಯಮಂಗಳಂನ ಕಾರ್ತಿಕ್ ಹಾಗೂ ಶಂಕರ್ ಗಾಯ ಗೊಂಡವರಾಗಿದ್ದು, ಈಗ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ತಿಕ್ ಮತ್ತು ಶಂಕರ್ ಸ್ಕೂಟಿಯಲ್ಲಿ ಸತ್ತಿಯಿಂದ ಚಾಮರಾಜನಗರಕ್ಕೆ ಬರು ತ್ತಿದ್ದರು. ಈ ವೇಳೆ ಹರದನಹಳ್ಳಿ ಗ್ರಾಮದ ಬಳಿ ಇರುವ ಕ್ರಾಸ್ನಲ್ಲಿ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ…
ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಚುನಾವಣೆ ಪ್ರಮುಖ ಪಕ್ಷಗಳಿಂದ ಟಿಕೆಟ್ ಪಡೆಯಲು ಲಾಬಿ
August 15, 2018ಚಾಮರಾಜನಗರ: ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿ ಅಧಿಸೂಚನೆ ಹೊರಬಿದ್ದಿದೆ. ಅಧಿಸೂಚನೆ ಹೊರಬಿದ್ದು 5 ದಿನ ಆದರೂ ಸಹ ಚಾಮರಾಜನಗರ ನಗರಸಭೆ ಸ್ಪರ್ಧೆ ಬಯಸಿ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಕೊಳ್ಳೇ ಗಾಲ ನಗರಸಭೆಗೆ ಇದುವರೆವಿಗೂ ಯಾರೊ ಬ್ಬರು ಉಮೇದುವಾರಿಕೆ ಸಲ್ಲಿಸಿಲ್ಲ. ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರ ಸಭೆಯ ತಲಾ 31 ವಾರ್ಡ್ಗಳ ಸದಸ್ಯ ಸ್ಥಾನಕ್ಕೆ ಇದೇ ತಿಂಗಳ 29ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸುವ ಕಾರ್ಯ 10ರಿಂದಲೇ ಆರಂಭ ವಾಗಿದೆ….
ಕಬಿನಿ, ಕೆಆರ್ಎಸ್ನಿಂದ ಹೆಚ್ಚು ನೀರು ಬಿಡುಗಡೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ಮನವಿ
August 15, 2018ಚಾಮರಾಜನಗರ: ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್. ಅಣೆಕಟ್ಟೆಯಿಂದ ಹೆಚ್ಚು ನೀರನ್ನು ನದಿಗೆ ಬಿಡುತ್ತಿರುವ ಹಿನ್ನಲೆಯಲ್ಲಿ ಕೊಳ್ಳೆಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್, ಕೆಆರ್ಎಸ್ ಅಣೆ ಕಟ್ಟೆಯಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆಯು ಅಧಿಕವಾಗುತ್ತಿರುವುದರಿಂದ ಕೆಆರ್ಎಸ್ ಅಣೆಕಟ್ಟೆಯಿಂದ ಇನ್ನು ಹೆಚ್ಚಿನ ನೀರನ್ನು ಬಿಡುವ ಸಾಧ್ಯತೆ ಇರುವುದಾಗಿ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ…
ಕೇಂದ್ರಿಯ ವಿದ್ಯಾಲಯದಲ್ಲಿ ಮಾತೃಭಾಷೆ ಅಳವಡಿಸಲು ಶಿಫಾರಸು
August 14, 2018ಚಾಮರಾಜನಗರ: ‘ಕೇಂದ್ರಿಯ ವಿದ್ಯಾಲಯಗಳಲ್ಲಿ ಆಯಾ ರಾಜ್ಯಗಳ ಮಾತೃಭಾಷೆಯನ್ನು ಒಂದು ವಿಷಯವನ್ನಾಗಿ ಅಳವಡಿಸುವ ಬಗ್ಗೆ ಸರ್ಕಾರದ ಮಟ್ಟ ದಲ್ಲಿ ಪ್ರಯತ್ನ ನಡೆಸುತ್ತೇನೆ’ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರಗಳ ಹಾಗೂ ಸಂಸತ್ತಿನ ವ್ಯವಹಾರಗಳ ಖಾತೆ ಸಚಿವ ಅನಂತ ಕುಮಾರ್ ಹೇಳಿದರು. ತಾಲೂಕಿನ ಮಾದಾಪುರ-ಕಿರಗಸೂರು ಬಳಿ 16 ಕೋಟಿ ರೂ. ವೆಚ್ಚದಡಿ ನಿರ್ಮಾಣ ಗೊಂಡಿದ್ದ ಕೇಂದ್ರಿಯ ವಿದ್ಯಾಲಯದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಮಾತೃಭಾಷೆ ಇಲ್ಲದಿದ್ದರೆ ಸಂಸ್ಕೃತಿ ಇಲ್ಲ. ಬದುಕು ಇರುವುದಿಲ್ಲ. ಹಳ್ಳಿ ಬದುಕು ಇರು ವುದೇ ಇಲ್ಲ….
ಕೆರೆಗಳ ಭರ್ತಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ
August 14, 2018ಗುಂಡ್ಲುಪೇಟೆ: ‘ತಾಲೂಕಿನ ಎಲ್ಲಾ ಕೆರೆಗಳಿಗೂ ನದಿಮೂಲ ದಿಂದ ನೀರು ತುಂಬಿಸುವ ಯೋಜನೆ ಯನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಸಿ.ಎಸ್.ನಿರಂಜನ್ಕುಮಾರ್ ಹೇಳಿದರು. ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡರು ಮತ್ತು ಪದಾಧಿಕಾರಿಗಳು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶಗಳಿಗೆ ರಸ್ತೆ, ಚರಂಡಿ, ಅಗತ್ಯವಿರುವಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಆದ್ಯತೆ ನೀಡಲಾ ಗಿದೆ. ಕ್ಷೇತ್ರದ ಜನತೆ ನನ್ನ ಮೇಲೆ ಹೆಚ್ಚಿನ ವಿಶ್ವಾಸವಿಟ್ಟು ಜಯಶಾಲಿಯಾಗಿಸಿದ್ದಾರೆ. ಅವರ ಸೇವೆ ಮಾಡುವುದರೊಂದಿಗೆ ಅವರ ಋಣ…
ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಎಚ್ಎಸ್ಎಂ ಕೊಡುಗೆ ಅಪಾರ
August 14, 2018ಗುಂಡ್ಲುಪೇಟೆ: ‘ಮಾಜಿ ಸಚಿವ ದಿ.ಮಹದೇವ ಪ್ರಸಾದ್ ಅವರು ಜೀವಿತ ಅವಧಿಯ ಉದ್ದಕ್ಕೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದರು’ ಎಂದು ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ಹೇಳಿದರು. ತಾಲೂಕಿನ ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ದಿವಂಗತ ಎಚ್.ಎಸ್.ಮಹದೇವ ಪ್ರಸಾದ್ ಅವರ 60ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ಎಸ್.ಎಲ್.ವಿ.ಗ್ರೂಪ್ಸ್ ಮಾಲೀಕ ಉದ್ಯಮಿ ಆರ್.ಯಶವಂತಕುಮಾರ್ ಆಯೋಜಿಸಿದ್ದ ಉಚಿತ ಕಣ್ಣು ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ನನ್ನ ಅಣ್ಣನ 60ನೇ ವರ್ಷದ ಹುಟ್ಟುಹಬ್ಬ ಆಚರಣೆ ವೇಳೆಯಲ್ಲಿ ಪ್ರತಿ ವರ್ಷವೂ ಕೂಡ ಅನೇಕ…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
August 14, 2018ಚಾಮರಾಜನಗರ: ಖಾಯಂ ನೌಕರರನ್ನಾಗಿ ನೇಮಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ನೌಕರರು, ಅಕ್ಷರ ದಾಸೋಹ ಅಡುಗೆಯವರು, ಸಹಾಯಕಿ ಯರು ಹಾಗೂ ಕಂಪ್ಯೂಟರ್ ಆಪರೇ ಟರ್ಸ್ಗಳು ಪ್ರತಿಭಟನೆ ನಡೆಸಿದರು. ಹಳೇ ಖಾಸಗಿ ಬಸ್ ನಿಲ್ದಾಣದಿಂದ ಮೆರ ವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ತೆರಳಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು. ಬಳಿಕ, ಯಳಂದೂರು ತಹಶೀಲ್ದಾರ್ ಚಂದ್ರ ಮೌಳಿ ಅವರಿಗೆ ಮನವಿ ಸಲ್ಲಿಸಿದರು. ನೋಟಿಫಿಕೇಷನ್ ನಂ.ಕೆಎಇ 152 ಎಲ್ಎಂಡಬ್ಲ್ಯು 2008, ಬೆಂಗಳೂರು ದಿನಾಂಕ…
ರಾಷ್ಟ್ರಕ್ಕೆ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ
August 13, 2018ಚಾಮರಾಜನಗರ: ಬ್ರಾಹ್ಮಣ ಸಮಾಜ ಇಡೀ ರಾಷ್ಟ್ರಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್.ಎ.ರಾಮದಾಸ್ ಅಭಿಪ್ರಾಯಪಟ್ಟರು. ಜಿಲ್ಲಾ ಬ್ರಾಹ್ಮಣ ಸಂಘ ನಗರದ ನಂದಿ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಬ್ರಾಹ್ಮಣ ಪ್ರಥಮ ಸಮ್ಮೇಳನದಲ್ಲಿ ಅವರು ವಿಪ್ರ ಸ್ಮರಣ ಸಂಚಿಕೆಯನ್ನು ಬಿಡು ಗಡೆಗೊಳಿಸಿ ಮಾತನಾಡಿದರು. ಬ್ರಾಹ್ಮಣ ಸಮುದಾಯ ಸ್ವಂತ ಶಕ್ತಿ, ಬುದ್ಧಿವಂತಿಕೆ ಹಾಗೂ ದೂರದೃಷ್ಟಿಯಿಂದ ದೇಶಕ್ಕೋಸ್ಕರ ನಾನಾ ಕೊಡುಗೆಗಳನ್ನು ನೀಡಿದೆ. ಬ್ರಾಹ್ಮಣ ಸಮಾಜದವರು ಪ್ರಧಾನಮಂತ್ರಿಗಳಾಗಿ, ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಈ ವೇಳೆ…
ಬಂಡೀಪುರ ರಾತ್ರಿ ಸಂಚಾರ ಮುಕ್ತಗೊಳಿಸಿದರೆ ರಾಜ್ಯ ಬಂದ್, ಉಗ್ರ ಹೋರಾಟ
August 13, 2018ಗುಂಡ್ಲುಪೇಟೆ: ಯಾವುದೇ ಕಾರಣಕ್ಕೂ ಬಂಡೀಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡಬಾರದು ಎಂದು ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜು ಆಗ್ರಹಿಸಿದರು. ತಾಲೂಕಿನ ಬಂಡೀಪುರ ರಾಷ್ಟ್ರೀಯ ಹೆದ್ದಾರಿ ಯಲ್ಲಿ ರಾತ್ರಿ ನಿಷೇಧವನ್ನು ತೆರವುಗೊಳಿಸಲು ಯತ್ನಿಸುತ್ತಿರುವ ಕೇರಳ ರಾಜ್ಯದ ಮನವಿಯನ್ನು ರಾಜ್ಯ ಸರ್ಕಾರ ಗಣನೆಗೆ ತೆಗೆದುಕೊಳ್ಳಬಾರದು ಮತ್ತು ರಾತ್ರಿ ನಿಷೇ ಧವನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಬಂಡೀಪುರ ಹೆದ್ದಾರಿ ತಡೆದು ಒಂದು ಗಂಟೆಗೂ ಹೆಚ್ಚು…