ಚಾಮರಾಜನಗರ: ತಾಲೂಕಿನ ಅಮಚವಾಡಿ ಗ್ರಾಮದ ಹಾಲು ಉತ್ಪಾದ ಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ನಾಗೇಶ್ರಾಜೇ ಅರಸ್ ಮತ್ತು ಉಪಾಧ್ಯಕ್ಷರಾಗಿ ಬಸವರಾಜು ಆಯ್ಕೆಯಾಗಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ರಾಜೇ ಅರಸ್ ಮತ್ತು ಬಸವರಾಜಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜು ಮತ್ತು ಸೋಮಣ್ಣ ನಾಮಪತ್ರ ಸಲ್ಲಿಸಿದರು. ಚುನಾವಣಾಧಿ ಕಾರಿ ಶಿಲ್ಪ ಅವರು ಎರಡು ಸ್ಥಾನಕ್ಕೂ ಸಲ್ಲಿ ಸಿದ ನಾಮಪತ್ರಗಳನ್ನು ಪರಿಶೀಲನೆ ಮಾಡಿದ ಬಳಿಕ ಅಧ್ಯಕ್ಷ…
ಹರವೆಯಲ್ಲಿ ಎಚ್ಎಸ್ಎಂ ಹುಟ್ಟುಹಬ್ಬ ಉಚಿತ ಕಣ್ಣಿನ ತಪಾಸಣಾ ಶಿಬಿರ
August 6, 2018ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದಲ್ಲಿ ಮಾಜಿ ಸಚಿವ ದಿ.ಎಚ್.ಎಸ್.ಮಹದೇವಪ್ರಸಾದ್ ಅವರ 60ನೇ ಹುಟ್ಟುಹಬ್ಬದ ಅಂಗವಾಗಿ ಎಚ್ಎಸ್ಎಂ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸದಸ್ಯ ಕೆರೆಹಳ್ಳಿ ನವೀನ್, ಮಹದೇವ ಪ್ರಸಾದ್ ರಾಜ್ಯದ ಧೀಮಂತ ನಾಯಕರಾಗಿದ್ದು, ಅವರ ಅವಧಿಯಲ್ಲಿ ಮಾಡಿದ ಉತ್ತಮ ಜನಪರ ಕೆಲಸಗಳು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ಅವರ ನಿಧನದ ನಂತರವೂ ಜನರು ಅವರ ಬಗ್ಗೆ ಉತ್ತಮ ಭಾವನೆ ಹೊಂದಿದ್ದು, ಅವರಲ್ಲಿದ್ದ ಸಾಮಾಜಿಕ ಕಳಕಳಿಯ ಪ್ರತೀಕ ವಾಗಿ…
ಸಂವಿಧಾನ, ಮೀಸಲಾತಿಗೆ ಅಪಾಯ ಬಂದಿದೆ: ಮೈಸೂರು ಉರಿಲಿಂಗಿಪೆದ್ದಿಮಠದ ಜ್ಞಾನಪ್ರಕಾಶಸ್ವಾಮೀಜಿ ಅಭಿಮತ
August 6, 2018ಚಾಮರಾಜನಗರ: ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನ, ಮೀಸಲಾತಿಗೆ ಅಪಾಯ ಬಂದಿರುವ ಕಾರಣದಿಂದ ನಾವೆಲ್ಲರೂ ಒಗ್ಗಟ್ಟಾಗಿ ಸಂವಿಧಾನವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಮೈಸೂರು ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ನಗರದ ಸೆಸ್ಕಾಂ ಉಪವಿಭಾಗದ ಆವ ರಣದಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸ್ಥೆ ವಿಭಾಗೀಯ ಸಮಿತಿ, ವೃತ್ತ ಸಮಿತಿ ವತಿಯಿಂದ ನಡೆದ 127ನೇ ಭೀಮ ಸಂಭ್ರಮ-2018 ಸಮಾರಂಭ ವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದ ಹೆಣ್ಣುಮಕ್ಕಳಿಗೆ ಬದುಕು,…
ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರ್ಪಡೆ: ಕೊಂಗಳ್ಳಿ ಬೆಟ್ಟದಲ್ಲಿ ರಾತ್ರಿ ವಾಸ್ತವ್ಯ ನಿಷೇಧ
August 5, 2018ಚಾಮರಾಜನಗರ: ಕನ್ನಡಿಗರೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದ ತಮಿಳುನಾಡಿಗೆ ಸೇರಿರುವ ತಾಳವಾಡಿ ಸಮೀಪದ ಕೊಂಗಳ್ಳಿ ಶ್ರೀಮಲ್ಲಿಕಾರ್ಜುನಸ್ವಾಮಿ ಸನ್ನಿಧಿಯಲ್ಲಿ (ಕೊಂಗಳ್ಳಿ ಬೆಟ್ಟ) ಇನ್ನೂ ಮುಂದೆ ಭಕ್ತಾಧಿಗಳು ವಾಸ್ತವ್ಯ ಇರುವಂತಿಲ್ಲ! ಕೊಂಗಳ್ಳಿ ಬೆಟ್ಟ ಪ್ರದೇಶವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಅರಣ್ಯ ಇಲಾಖೆ ಕಳೆದ 1 ವಾರದಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀಕೊಂಗಳ್ಳಿ ಮಲ್ಲಿಕಾರ್ಜುನಸ್ವಾಮಿ ದೇವಾಲಯದ ಆವರಣದಲ್ಲಿ ಭಕ್ತರನ್ನು ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಉಳಿದುಕೊಳ್ಳಲು ಅವಕಾಶ ನೀಡುತ್ತಿಲ್ಲ. ಮಾಮೂಲಿಯಂತೆ ರಾತ್ರಿ ವಾಸ್ತವ್ಯ ಹೂಡಲು ಬರುವ…
ಶಾಲೆಯಲ್ಲಿ ಕುಕ್ಕರ್ ಸಿಡಿದು ಬಾಲಕಿಗೆ ಗಾಯ
August 5, 2018ಕೊಳ್ಳೇಗಾಲ: ಬಿಸಿಯೂಟ ತಯಾರಿಸಿಟ್ಟಿದ್ದ ಕುಕ್ಕರ್ ಸಿಡಿದು ಬಾಲಕಿಯೊಬ್ಬಳಿಗೆ ಗಾಯವಾಗಿರುವ ಘಟನೆ ಹನೂರು ಶೈಕ್ಷಣಿಕ ವಲಯದ ಕೆ.ಗುಂಡಾಪುರ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ರಾಜೇಶ್ವರಿ ಗಾಯಗೊಂಡವರು. ಶಾಲೆಯ ಅಡುಗೆಮನೆ ಕೊಠಡಿಯಲ್ಲಿ ಸಿಬ್ಬಂದಿ ಅಡುಗೆ ತಯಾರಿಸಿಟ್ಟಿದ್ದರು. ಈ ವೇಳೆ ವಿದ್ಯಾರ್ಥಿನಿ ರಾಜೇಶ್ವರಿ ಅಡುಗೆ ಮನೆ ಕೊಠಡಿಗೆ ಬಂದು ಅದೇ ತಾನೆ ಬಿಸಿಯೂಟ ತಯಾರಿಸಿಟ್ಟಿದ್ದ ಕುಕ್ಕರ್ನ ಮುಚ್ಚಳವನ್ನು ತೆಗೆದಿದ್ದರಿಂದ ಘಟನೆ ಸಂಭವಿಸಿದೆ. ಇದರಿಂದ ಬಾಲಕಿಯ ಕೈ, ಕಾಲುಗಳಿಗೆ ಗಾಯವಾಗಿದ್ದು ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….
ಸಂಘಟನೆಗಾಗಿ ಉಪ್ಪಾರ ಹೋರಾಟ ಸಮಿತಿ ಅಗತ್ಯ
August 5, 2018ಯಳಂದೂರು: ‘ಉಪ್ಪಾರ ಸಮುದಾಯದ ಸಂಘಟನೆ ಮಾಡುವ ನಿಟ್ಟಿನಲ್ಲಿ ತಾಲೂಕು ಕೇಂದ್ರದಲ್ಲಿ ಉಪ್ಪಾರ ಹೋರಾಟ ಸಮಿತಿ ರಚನೆ ಅಗತ್ಯವಾಗಿದೆ’ ಎಂದು ಜಿಲ್ಲಾ ಉಪ್ಪಾರ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ವೈ.ಕೆ.ಮೋಳೆ ನಾಗರಾಜು ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಗ್ರಾ.ಪಂ. ಮಾಜಿ ಸದಸ್ಯ ಗಣಿಗನೂರು ಬಂಗಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉಪ್ಪಾರ ಯುವ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಜನಾಂಗದಲ್ಲಿ ಈಗಾಗಲೇ ಹಲವಾರು ಸಂಘಟನೆಗಳು ಇದೆ. ಆದರೂ ಉಪ್ಪಾರ ಸಮುದಾಯಕ್ಕೆ ಅನ್ಯಾಯವಾಗುವ ಸಂದರ್ಭದಲ್ಲಿ ಯಾರು ಪ್ರಶ್ನಿಸುತ್ತಿಲ್ಲ. ಕಳೆದ…
ಕಾರು-ಬೈಕ್ ಡಿಕ್ಕಿ: ಸವಾರ ಸಾವು
August 5, 2018ಬೇಗೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಮೀಪದ ಅರೇಪುರ ಗೇಟ್ ಬಳಿ (ರಾಷ್ಟ್ರೀಯ ಹೆದ್ದಾರಿ 766ರಲ್ಲಿ) ನಡೆದಿದೆ. ಮೈಸೂರು ಜಿಲ್ಲೆಯ ಪಡುವಾರಹಳ್ಳಿ ಗ್ರಾಮದ ಯೇಸುದಾಸ್(40) ಮೃತಪಟ್ಟವರು.ಯೇಸುದಾಸ್ ಮೈಸೂರಿನಿಂದ ಗುಂಡ್ಲುಪೇಟೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಂಜಗೂಡಿನ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಯೇಸುದಾಸ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭರಚುಕ್ಕಿ ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ
August 4, 2018ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿಯಲ್ಲಿ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ನಿಗದಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್ಕುಮಾರ್ ಇಂದು ಭರ ಚುಕ್ಕಿಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ಕಾರ್ಯಕ್ರಮ ನಡೆಯುವ ಜಲಪಾತದ ಬಳಿಯ ಸ್ಥಳಕ್ಕೆ ಭೇಟಿ ಕೊಟ್ಟು ವೇದಿಕೆ ನಿರ್ಮಾಣ, ಗಣ್ಯರು, ಆಹ್ವಾನಿತರು, ವೀಕ್ಷಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ…
ದಾನ ಧರ್ಮಕ್ಕೆ ಗುಂಡ್ಲುಪೇಟೆ ಪ್ರಸಿದ್ಧ
August 4, 2018ಗುಂಡ್ಲುಪೇಟೆ: ಹಿಂದಿನಿಂದಲೂ ತಾಲೂಕಿನಲ್ಲಿ ಹೆಚ್ಚಿನ ದಾನಿಗಳು ಸಾರ್ವಜನಿಕರಿಗೆ ಉಪಯೋಗವಾಗುವಂತಹ ರೀತಿಯಲ್ಲಿ ದಾನ ಧರ್ಮದ ಕಾರ್ಯಗಳನ್ನು ಮಾಡಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಶಾಸಕ ಸಿ.ಎಸ್. ನಿರಂಜನ್ಕುಮಾರ್ ಹೇಳಿದರು. ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಆವ ರಣದಲ್ಲಿ ನಿರ್ಮಾಣವಾಗಿರುವ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಸ್ಮರಣಾ ರ್ಥವಾಗಿ ಪ್ರಸಾದ್ ಕುಟುಂಬದವರು ನಿರ್ಮಿಸಿದ ಸಭಾಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಮುಂತಾದ ಸಾರ್ವಜನಿಕರಿಗೆ ಉಪ ಯೋಗವಾಗುವ ರೀತಿಯಲ್ಲಿ ದಾನ ಮಾಡುವ ದಾನಿಗಳನ್ನು ನೆನೆಯಬೇಕು….
ದೇಶದ ಸಾರ್ವಭೌಮತ್ವ, ಸಾಮರಸ್ಯ ಸಾರುವ ಸಂಕೇತ ರಾಷ್ಟ್ರಧ್ವಜ
August 4, 2018ಕೊಳ್ಳೇಗಾಲ: ದೇಶದ ಅಖಂಡತೆ ಸಾರ್ವಭೌಮತ್ವ. ಸಾಮರಸ್ಯ ಸಾರುವ ಏಕೈಕ ಸಂಕೇತ ರಾಷ್ಟ್ರಧ್ವಜ ಆಗಿದ್ದು, ಈ ಸಂಕೇತದ ಜೊತೆ ರಾಷ್ಟ್ರಗೀತೆ, ರಾಷ್ಟ್ರದ್ವಜ, ರಾಷ್ಟ್ರ ಲಾಂಛನ, ಸಂವಿಧಾನ ಹಾಗೂ ರಾಷ್ಟ್ರಪತಿ ಎಂಬ ಈ 5 ಅಂಶಗಳು ದೇಶದ ಪಂಚಕಳಸಗಳಿದ್ದಂತೆ. ಅವುಗಳನ್ನು ನಾವು ಎಲ್ಲಿವರೆವಿಗೆ ಸಾಮರಸ್ಯದಿಂದ ಗೌರವಿಸುತ್ತೇವೋ ಅಲ್ಲಿತನಕ ದೇಶದಲ್ಲಿ ನೆಮ್ಮದಿಯ ಬದುಕು ಕಾಣಬಹುದಾಗಿದೆ ಎಂದು ಸಾಹಿತಿ ಹಾಗೂ ಭಾರತ್ ಸೇವಾದಳದ ಕಾರ್ಯದರ್ಶಿ ಪಳನಿಸ್ವಾಮಿ ಜಾಗೇರಿ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ…