ಅರಸೀಕೆರೆ: ಬೃಹತ್ ಕೈಗಾರಿಕಾ ಘಟಕ ಸ್ಥಾಪನೆ ಮಾಡುವುದರ ಮೂಲಕ ತಾಲೂಕಿನಲ್ಲಿ ನಿರುದ್ಯೋಗ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಾಲೂಕಿನ ತಳಲೂರು ಸಮೀಪದ ದೊಡ್ಮನೆ ಫಾರಂಹೌಸ್ನಲ್ಲಿ ನಡೆದ ಅಭಿ ನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ನಮ್ಮ ಸಮ್ಮಿಶ್ರ ಸಹಕಾರದೊಂದಿಗೆ ಸ್ಥಳೀಯ ವಾಗಿ ತರಕಾರಿ ಮಾರುಕಟ್ಟೆಯನ್ನು 5 ಎಕರೆ ಜಾಗದಲ್ಲಿ ನಿರ್ಮಿಸಿ, ಬೆಲೆ ಕುಸಿತದ ವೇಳೆ ಅವರು ಉತ್ಪನ್ನ ಶೇಖರಿಸಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲು ಶ್ರಮಿಸ ಲಾಗುವುದು….
ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ
July 22, 2018ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅ ಚ್ಚುಕಟ್ಟಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಇದೇ ಮೊದಲ ಬಾರಿಗೆ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸುವುದರಿಂದ ಸರಳವಾಗಿ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಹಡಪದ ಅಪ್ಪಣ್ಣ ಅವರ ಬಗ್ಗೆ…
ವಿದ್ಯುತ್ ತಂತಿಗಳ ಮೇಲಿನ ಮರದ ಕೊಂಬೆಗಳ ತೆರವಿಗೆ ಆಗ್ರಹ
July 22, 2018ಬೇಲೂರು: ಹೆದ್ದಾರಿಯ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್ ಸರಬರಾಜು ತಂತಿಗಳ ಮೇಲೆ ರಸ್ತೆಬದಿಯ ಭಾರೀ ಗಾತ್ರದ ಮರಗಳ ಕೊಂಬೆಗಳು ಬಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪಟ್ಟಣದ ಮಿನಿವಿಧಾನಸೌಧ ಮುಂಭಾಗದ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ವಿದ್ಯುತ್ ತಂತಿ ಮಾರ್ಗ ಹಾದುಹೋಗಿದ್ದು, ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಹಾಗೂ ಸಮೀಪ ಬಾಗಿದ್ದು, ಅಪಾಯಕ್ಕೆ ಕಾದು ನಿಂತತಿದೆ. ಹಾಸನದಿಂದ ಚಿಕ್ಕಮಗಳೂರಿಗೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಜೊತೆಗೆ ಮಿನಿ ವಿಧಾನಸೌಧದ ಕೆಲಸಕ್ಕಾಗಿ ಆಗಮಿಸುವ ರೈತರು, ಇನ್ನಿತರರು ತಮ್ಮ…
ಉದ್ಘಾಟನೆ ಮುನ್ನವೇ ಕುಸಿದ ಹಳೇಕೋಟೆ ಬಳಿಯ ಮೈಸೂರು-ಹಾಸನ ಹೆದ್ದಾರಿ ರೈಲ್ವೆ ಮೇಲ್ಸೇತುವೆ ತಡೆಗೋಡೆ
July 22, 2018ಹೊಳೆನರಸೀಪುರ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಹಾಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ ಪ್ರಭಾವಿ ಸಚಿವರೂ ಆದ ಹೆಚ್.ಡಿ.ರೇವಣ್ಣನವರ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳು ಕಳಪೆಯಿಂದ ಕೂಡಿವೆಯೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಲಾರಂಭಿಸಿದೆ. ಹಳೇಕೋಟೆಯ ಹಂಗರಹಳ್ಳಿ ಬಳಿಯ ಮೈಸೂರು-ಹಾಸನ ಹೆದ್ದಾರಿಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಇದಕ್ಕೆ ಸಾಕ್ಷಿಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರೇ ಈ ಬಗ್ಗೆ ಕಿಡಿಕಾರಿದ್ದಾರೆ. ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ಮೇಲ್ಸೇತುವೆಯ ತಡೆಗೋಡೆ ಕುಸಿಯುತ್ತಿದ್ದು, ಕಾಮಗಾರಿಯ…
ಐದು ವರ್ಷದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ
July 22, 2018ಅರಸೀಕೆರೆ: ಐದು ವರ್ಷಗಳ ಅವಧಿಯಲ್ಲಿ ನಗರದಲ್ಲಿ ಸಾಕಷ್ಟು ಮೂಲ ಸೌಲಭ್ಯ ಸಮಸ್ಯೆಗಳನ್ನು ಗರಿಷ್ಠ ಮಟ್ಟದಲ್ಲಿ ಬಗೆಹರಿಸಲು ಪ್ರಯತ್ನಿಸಿದ್ದೇವೆ ಎಂದು ನಗರ ಸಭಾಧ್ಯಕ್ಷ ಎಂ.ಸಮೀವುಲ್ಲಾ ಹೇಳಿದರು. ಇಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರಸಭೆ ಆಡಳಿತವು ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಅನು ಷ್ಠಾನಕ್ಕೆ ತರುವ ಮೂಲಕ ಪ್ರಾಮಾಣಿಕ ಸೇವೆ ಸಲ್ಲಿಸಿದೆ ಎಂದ ಅಧ್ಯಕ್ಷರು, ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆ ಗಳಿದ್ದು, ಆ ನಿಟ್ಟಿನಲ್ಲಿ ಆಗಿರುವ ಮತ್ತು ಆಗ ಬೇಕಾಗಿರುವ…
ಹಾಸನ-ಬೇಲೂರು-ಚಿಕ್ಕಮಗಳೂರು-ಶೃಂಗೇರಿ ರೈಲ್ವೆ ಕಾಮಗಾರಿ ಅನುಷ್ಠಾನ
July 21, 2018ಹಾಸನ: ಹಾಸನ-ಬೇಲೂರು- ಚಿಕ್ಕಮಗಳೂರು-ಶೃಂಗೇರಿ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಶೇ. 50:50 ಅನುಪಾತದಲ್ಲಿ ಕೇಂದ್ರದ ಸಹಯೋಗದೊಂದಿಗೆ ಕೈಗೆತ್ತಿಕೊಳ್ಳ ಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕೇಂದ್ರದ ಅನುದಾನ ಸಹಭಾಗಿತ್ವದಲ್ಲಿ ಹಲವು ಕಾಮ ಗಾರಿಗಳನ್ನು ಕೈಗೊಳ್ಳಲಿದ್ದು, ಹಾಸನ ದಿಂದ ಹೆಚ್ಚು ರೈಲುಗಳ ಸಂಚಾರಕ್ಕೆ ಮನವಿ ಮಾಡಲಾಗಿದೆ. ರೈಲ್ವೆ ಸಚಿವರು ಸಕಾ ರಾತ್ಮಕವಾಗಿ ಸ್ಪಂದಿಸಿದ್ದಾರೆ. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ 60 ಕೋಟಿ ರೂ.ವೆಚ್ಚದ 6…
ಅತಿವೃಷ್ಠಿ ಹಾನಿ ಸ್ಪಷ್ಟ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ
July 21, 2018ಹಾಸನ: ಜಿಲ್ಲೆಯಲ್ಲಿ ಅತಿವೃಷ್ಠಿ ಯಿಂದ ಉಂಟಾಗಿರುವ ಜನ ಜಾನುವಾರು ಹಾಗೂ ವೈಯಕ್ತಿಕ ಮತ್ತು ಸಾರ್ವಜನಿಕ ಆಸ್ತಿಗಳ ಹಾನಿಗೆ ಪ್ರಕೃತಿ ವಿಕೋಪ ನಿಧಿ ಯಿಂದ ಪರಿಹಾರ ನೀಡಬಹುದಾಗಿದ್ದು, ಎಲ್ಲವನ್ನು ಸ್ಪಷ್ಟವಾಗಿ ಅಂದಾಜಿಸಿ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಮ್ಮ ಕಚೇರಿ ಸಭಾಂಗಣದಲ್ಲಿಂದು ತಹಶೀಲ್ದಾರು ಹಾಗೂ ಪಪಂ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಅವರು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹಲವು ರೀತಿಯ…
ಜಿಪಂ ಉಪಾಧ್ಯಕ್ಷರಾಗಿ ಸುಪ್ರದೀಪ್ ಯಜಮಾನ ಅವಿರೋಧ ಆಯ್ಕೆ
July 21, 2018ಹಾಸನ: ಜಿಲ್ಲಾ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಸಕಲೇಶಪುರ ತಾಲೂಕಿನ ಹಾನುಬಾಳು ಕ್ಷೇತ್ರದ ಸುಪ್ರದೀಪ್ ಯಜಮಾನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರು ನೀಡಿದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ನ ಸುಪ್ರದೀಪ್ ಯಜಮಾನ ಆಯ್ಕೆಯಾದರು. ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ನ ಸುಪ್ರದೀಪ್ ಯಜಮಾನ ಅವರು ಮೂರು ನಾಮ ಪುತ್ರ ಸಲ್ಲಿಸಿ ದರು. ಕಾಂಗ್ರೆಸ್ನ ಶ್ರೇಯಸ್ ಪಟೇಲ್ ಹಾಗೂ ಎಸ್.ಡಿ.ರೇವಣ್ಣ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದರು….
ಬಸ್ಪಾಸ್: ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ
July 20, 2018ಹಾಸನ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಎಬಿವಿಪಿ ಹಾಗೂ ಎನ್ಎಸ್ಯುಐ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದವು. ಎಬಿವಿಪಿ: ನಗರದ ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಯವರೆಗೆ ಮೆರವಣಿಗೆ ನಡೆಸಿ ಉಚಿತ ಬಸ್ ಪಾಸ್ ವಿತರಿಸುವಂತೆ ಘೋಷಣೆ ಕೂಗಿದರು. ಪ್ರಸಕ್ತ ಸಾಲಿನಿಂದ ಎಸ್ಸಿ, ಎಸ್ಟಿ ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಿಸುವುದಾಗಿ ಕÀಳೆದ…
ಬೇಲೂರು ಮುಖ್ಯರಸ್ತೆ ಅಗಲೀಕರಣ, ಹೊಳೆಬೀದಿ ಏಕಮುಖ ರಸ್ತೆ!
July 20, 2018ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಲಿಂಗೇಶ್ ಚಿಂತನೆ ಬೇಲೂರು: ‘ಬೇಲೂರು ಪಟ್ಟಣದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯರಸ್ತೆ ಅಗಲೀಕರಣದ ಜೊತೆಗೆ ಹೊಳೆ ಬೀದಿಯನ್ನು ಅಭಿವೃದ್ಧಿಪಡಿಸಿ ಏಕಮುಖ ರಸ್ತೆಯನ್ನಾಗಿ ಮಾರ್ಪಡಿಸಲಾಗುವುದು’ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯಿಂದ ನೀಡಲಾದ ಪೌರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ದೇಶ, ವಿದೇಶದಿಂದ ಸಾವಿರಾರು ಪ್ರವಾಸಿಗರು ಬೇಲೂರಿಗೆ ಬರುತ್ತಾರೆ. ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದ ಅನುಕೂಲಕರ ಸಂಚಾರಕ್ಕೆ ತೊಂದರೆ ಆಗಿದೆ. ಇದನ್ನು ಮನಗಂಡು ಮುಖ್ಯರಸ್ತೆ ಅಗಲೀಕರಣ ಮಾಡುವ ಉದ್ದೇಶದ…