ಬೇಲೂರು: ವಿಧವಾ ವೇತನ ವನ್ನು ಮಂಜೂರು ಮಾಡುವಂತೆ ಒತ್ತಾಯಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗುರುವಾರ ಅರೇಹಳ್ಳಿಯ ನಿಂಗಮ್ಮ ಎಂಬ ವಯೋವೃದ್ಧೆ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಅಂಬೇಡ್ಕರ್ ಯುವಕ ಸಂಘದ ಕಾರ್ಯ ದರ್ಶಿ ನಿಂಗಯ್ಯ, ಎಐಟಿಯುಸಿ ಜಿಲ್ಲಾಧ್ಯಕ್ಷ ಮಹೇಶ್ ಸೇರಿದಂತೆ ಇತರರೊಂದಿಗೆ ಕುಳಿತು ವಿಧವಾ ವೇತನ ಮಂಜೂರು ಮಾಡುವಂತೆ ಘೋಷಣೆ ಕೂಗಿದರು. ವಯೋವೃದ್ಧೆ ನಿಂಗಮ್ಮ ಮಾತನಾಡಿ, ಒಂದು ವರ್ಷದಿಂದ ನನಗೆ ವಿಧವಾ ವೇತನ ಬಂದಿಲ್ಲ. ತಾಲೂಕು ಕಚೇರಿ ಅಧಿಕಾರಿ ಗಳಿಗೆ ಈ ಬಗ್ಗೆ ಮನವಿ…
ಜು.10 ರಂದು ಅಂಗನವಾಡಿ ನೌಕರರ ಪ್ರತಿಭಟನೆ
July 6, 2018ಹಾಸನ: ಅಂಗನವಾಡಿ ನೌಕರರ ಬೇಡಿಕಾ ದಿನಾಚರಣೆ ಅಂಗವಾಗಿ ಜು. 10ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಸಿಐಟಿಯು ಸಂಘ ಟನೆಯ ಪ್ರಧಾನ ಕಾರ್ಯದರ್ಶಿ ಡಿ.ಎಲ್. ರಾಘವೇಂದ್ರ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಐಸಿಡಿಎಸ್ ಯೋಜನೆಯಡಿ ಕೆಲಸ ಮಾಡುವ ಅಂಗನ ವಾಡಿ ನೌಕರರನ್ನು ಅತ್ಯಂತ ಕಡಿಮೆ ಸೌಲಭ್ಯ ದಿಂದ ಹೆಚ್ಚಿನ ಸಮಯ ಕೆಲಸವನ್ನು ಎಲ್ಲ ಇಲಾಖೆಗಳು ಮಾಡಿಸಿಕೊಳ್ಳುತ್ತಿದೆ. ಸರ್ವೇ ಗಳು,…
2023ರೊಳಗೆ ಜಿಲ್ಲೆ ಮಲೇರಿಯಾ ಮುಕ್ತ: ಡಾ.ಸತೀಶ್
July 6, 2018ಹಾಸನ: ‘ಸೊಳ್ಳೆಯಿಂದ ಮಲೇರಿಯಾ ಮತ್ತು ಡೆಂಗ್ಯೂ ಹರಡು ವುದರಿಂದ ಇದರ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಗುರಿ ಹೊಂದಿದ್ದೇವೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಂಗಳವಾರ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆಯಿಂದ ಪತ್ರಕರ್ತರಿಗಾಗಿ ಹಮ್ಮಿ ಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ…
ಸಕಲೇಶಪುರದಲ್ಲಿ ಡಿಸಿಗೆ ಅಹವಾಲುಗಳ ಸುರಿಮಳೆ
July 5, 2018ಸಕಲೇಶಪುರ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ದೂರುಗಳ ಮಳೆಯೇ ಸುರಿಯಿತು.ಪಟ್ಟಣ ಪುರಭವನ ಸಭಾಂಗಣದಲ್ಲಿಂದು ಏರ್ಪಡಿಸಿದ್ದ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ತಾಲೂಕಿನ ಜನತೆ ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು. ಸಭೆಯಲ್ಲಿ ನೂರಾರು ರೈತರು ವೈಯಕ್ತಿಕ ಹಾಗೂ ಗ್ರಾಮದ ಸಮಸ್ಯೆಗಳ ಕುರಿತು ಅಳಲು ತೋಡಿಕೊಂಡರು. ಅಹವಾಲು ಆಲಿಸಿದ ಜಿಲ್ಲಾಧಿಕಾರಿ, ಎಲ್ಲಾ ಅರ್ಜಿಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡು ವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಸಭೆಯಲ್ಲಿ ಭೂಮಿ ಸಂಬಂಧಿಸಿದ ವಿಷಯಗಳ ಕುರಿತು ಹೆಚ್ಚಿನ ದೂರು…
ಮರಳು ಸಾಗಣೆ ತಡೆಗೆ ಪರಿವರ್ತನಾ ವೇದಿಕೆ ಪ್ರತಿಭಟನೆ
July 5, 2018ಹಾಸನ: ಮಳೆಗಾಲ ಮುಗಿಯುವವರೆಗೂ ಮರಳು ಸಾಗಾಣೆ ತಡೆಯುವಂತೆ ಆಗ್ರಹಿಸಿ ಸಕಲೇಶಪುರ ತಾಲೂಕು ಪರಿವರ್ತನಾ ವೇದಿಕೆಯಿಂದ ಪ್ರತಿಭಟಿಸಲಾಯಿತು. ನಗರದ ಡಿಸಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗುವ ಮೂಲಕ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಕಳೆದ 3 ತಿಂಗಳಿಂದ ಸಕಲೇಶಪುರ ತಾಲೂಕಿನ ನಿಡಿಗೆರೆ ಹಾಗೂ ಹಳ್ಳಿ ಬಯಲು ಗ್ರಾಮದಲ್ಲಿ ಹೆಚ್ಚು ಲಾರಿಗಳು ಮರಳು ಸಾಗಾಣೆ ಮಾಡುತ್ತಿರುವುದರಿಂದ ಗ್ರಾಮದ ಪ್ರಮುಖ ರಸ್ತೆ ಸಂಪೂರ್ಣ ಹಾಳಾಗಿದೆ. ಯಾವುದೇ ಸಣ್ಣಪುಟ್ಟ ವಾಹನಗಳ ಮೂಲಕ ನಮ್ಮ ಗದ್ದೆ ತೋಟಗಳಿಗೆ ಗೊಬ್ಬರ ಹಾಗೂ ಇತರೆ ಕೃಷಿಕರ…
ಕಾಂಡಕೊರಕ ಹುಳು ಬಾಧೆ: ಕೃಷಿ ಅಧಿಕಾರಿ, ವಿಜ್ಞಾನಿಗಳಿಂದ ಪರಿಶೀಲನೆ
July 5, 2018ಬೇಲೂರು: ತಾಲೂಕಿನ ಹೆಬ್ಬಾಳು ಗ್ರಾಮದ ಸುತ್ತ-ಮುತ್ತ ರೈತರು ಬೆಳೆದ ಮೆಕ್ಕೆಜೋಳಕ್ಕೆ ತಗಲಿರುವ ಕಾಂಡ ಕೊರಕ ಹುಳು ಬಾಧೆ ಹಿನ್ನೆಲೆಯಲ್ಲಿ ಹಾಸನ ಜಂಟಿ ಕೃಷಿ ನಿರ್ದೇಶಕರು ಹಾಗೂ ಕೃಷಿ ವಿವಿ ವಿಜ್ಞಾನಿಗಳು ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದರು. ಹೆಬ್ಬಾಳು ಗ್ರಾಮದ ಕೃಷಿಕರಾದ ಗೌರಮ್ಮ ಹಾಗೂ ಚಿದಾನಂದ್ ಮತ್ತು ದೊಡ್ಡಬ್ಯಾಡಿಗೆರೆ ಗ್ರಾಮದ ಪರ್ವತಯ್ಯ ಹೊಲದ ಮೆಕ್ಕೆ ಜೋಳದಲ್ಲಿ ಕಾಂಡಕೊರಕ ಹುಳುಗಳಿಂದ ಹಾಳಾದ ಪೈರನ್ನು ವೀಕ್ಷಣೆ ಮಾಡಿದರು. ಹಾಗೆಯೇ ಕಾಂಡಕೊರಕ ಹುಳುಗಳ ಹಾವಳಿಯಿಂದ ಬೆಳೆಯ ಮೇಲೆ ಉಂಟಾಗುವ ಪರಿಣಾಮ ಮತ್ತು…
ಜನಸಂಪರ್ಕ ಸಭೆ ಆರಂಭಿಸಿದ ಡಿಸಿ ರೋಹಿಣಿ ಸಿಂಧೂರಿ: ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
July 3, 2018ಹಾಸನ: ತಾಲೂಕು ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಾಲೂಕು ಕಚೇರಿಗಳಿಗೆ ಭೇಟಿ-ಪರಿಶೀಲನೆ ಸೇರಿದಂತೆ ಸಾರ್ವಜನಿಕ ಕುಂದು ಕೊರತೆ ಆಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ತಾಲೂಕು ಕಚೇರಿಗೆ ಇಂದು ಬೆಳಿಗ್ಗೆ 10.30ಕ್ಕೆ ಭೇಟಿ ನೀಡಿದ ಜಿಲ್ಲಾಧಿ ಕಾರಿ, ಸುಮಾರು ಮೂರೂವರೇ ಗಂಟೆ ಕಾಲ ವಿವಿಧ ಇಲಾಖೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದು ಕೊಂಡರು. ನಂತರ ಜನರಿಂದ 150ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿ, ಅಹವಾಲು ಆಲಿಸಿದರು….
ವೈದ್ಯಕೀಯ ವಸತಿ ನಿಲಯಕ್ಕೆ ಗುದ್ದಲಿಪೂಜೆ
July 3, 2018ಹಾಸನ: ವೈದ್ಯಕೀಯ ವಿದ್ಯಾರ್ಥಿ ನಿಯರ ನೂತನ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಶಾಸಕ ಪ್ರೀತಮ್ ಜೆ.ಗೌಡ ಗುದ್ದಲಿ ಪೂಜೆ ನೆರವೇರಿಸಿದರು. ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ ದಲ್ಲಿ ಮಹಿಳಾ ಮತ್ತು ಪುರುಷರ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಹೆಚ್.ಡಿ. ರೇವಣ್ಣ, ಹಾಸನಾಂಬ ವೈದ್ಯಕೀಯ ವಿದ್ಯಾ ಲಯದಲ್ಲಿ 750 ವಿದ್ಯಾರ್ಥಿಗಳಿದ್ದು, ಅವರಲ್ಲಿ 300 ವಿದ್ಯಾರ್ಥಿನಿಯರಿಗೆ ಅವಕಾಶವಾ ಗುವಂತೆ ವಸತಿನಿಲಯ ನಿರ್ಮಾಣವಾಗ ಲಿದೆ. ಇದಲ್ಲದೆ ಸ್ನಾತಕೋತ್ತರ ವಿದ್ಯಾರ್ಥಿ ಗಳಿಗೂ…
ಪತ್ನಿ ವಿರುದ್ಧ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು
July 3, 2018ಹಾಸನ: ತನ್ನ ಸಾವಿಗೆ ಪತ್ನಿಯೇ ಕಾರಣವೆಂದು ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿದ್ದ ವ್ಯಕ್ತಿವೋರ್ವ ಚಿಕಿತ್ಸೆ ಫಲಿಸದೆ ಅಸುನೀಗಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಮರ್ಕುಲಿ ಗ್ರಾಮದ ನಿವಾಸಿ ರಾಘವೇಂದ್ರ(45) ಮೃತರು. ನನ್ನ ಸಾವಿಗೆ ನನ್ನ ಹೆಂಡತಿಯೇ ಕಾರಣವೆಂದು ಡೆತ್ನೋಟ್ ಬರೆದಿಟ್ಟು ವಿಷ ಸೇವಿಸಿದ್ದ. ಬಳಿಕ ಆತನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಹಲವು ವರ್ಷಗಳಿಂದ ಪತಿ -ಪತ್ನಿ ನಡುವೆ ಕೌಟುಂಬಿಕ ಕಲಹ ಗಳಿತ್ತು ಎನ್ನಲಾಗಿದ್ದು, ಡೆತ್ನೋಟ್ ಆಧರಿಸಿ ರಾಘವೇಂದ್ರನ ಪತ್ನಿ ವಿರುದ್ಧ ಶಾಂತಿ…
ಅರಸೀಕೆರೆ: ನೂತನ ಬಸ್ ನಿಲ್ದಾಣ ನಿರ್ಮಾಣ
July 2, 2018ಅರಸೀಕೆರೆ: ಗ್ರಾಮೀಣ ಮತ್ತು ಎಕ್ಸ್ಪ್ರೆಸ್ ಬಸ್ ನಿಲುಗಡೆಗೆ ನಿಲ್ದಾಣ ಅವ ಶ್ಯಕವಾಗಿದ್ದು, ತಾಂತ್ರಿಕ ಅನುಮೋದನೆ ಯೊಂದಿಗೆ ಶೀಘ್ರವೇ ನೂತನ ಬಸ್ ನಿಲ್ದಾಣ ನಿರ್ಮಿಸಿ, ಹಾಲಿ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭರವಸೆ ನೀಡಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡರ ಕನಸಿನ ಕೂಸಾದ ನೂತನ ಬಸ್ ನಿಲ್ದಾಣ ನಿರ್ಮಾಣ ಮತ್ತು ಅಭಿವೃದ್ಧಿ ವಿಚಾರವಾಗಿ ನಗರಕ್ಕೆ ಇಂದು ಸಂಜೆ ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ಥಳೀಯ ಬಸ್ ಡಿಪೋ ನಿರ್ಮಾಣ ವಾಗಿ 50 ವರ್ಷವಾಗಿದ್ದು, ಈ ಡಿಪೋ ನವೀಕರಣ…