ಹಾಸನ: ಲೋಕಸಭಾ ಕ್ಷೇತ್ರ ಚುನಾವಣೆಗೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ಎ.ಮಂಜು ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ರೋಡ್ ಶೋ ನಡೆಯಿತು. ಮೆರವಣಿಗೆಯುದ್ದಕ್ಕೂ ಸಾವಿರಾರು ಬಿಜೆಪಿ ಕಾರ್ಯ ಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪರ ಘೋಷಣೆ ಕೂಗುತ್ತಾ ಸಂಭ್ರಮಿಸಿದರು. ನಗರದ ಬಿಎಂ ರಸ್ತೆಯಲ್ಲಿ ತೆರೆದ ವಾಹನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅಭ್ಯರ್ಥಿ ಎ.ಮಂಜು ಮಾತನಾಡಿ, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡ ಬೇಕು ಎಂದು…
ಪೌರಕಾರ್ಮಿಕ ದಂಪತಿಗೆ ಎ.ಮಂಜು ಪಾದಪೂಜೆ
March 25, 2019ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಎ.ಮಂಜು ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಹಳೆ ಮಟನ್ ಮಾರ್ಕೆಟ್ ವೃತ್ತ ಕೃಷ್ಣ ಆಸ್ಪತ್ರೆ ಹಿಂಭಾಗ ಇರುವ ಪೌರಕಾರ್ಮಿಕರ ಮನೆಗೆ ಭೇಟಿ ನೀಡಿ ಪೌರ ಕಾರ್ಮಿಕ ದಂಪತಿಗಳಾದ ಚಂದ್ರು ಹಾಗೂ ಅಶ್ವಿನಿ ಅವರಿಗೆ ಪಾದ ಪೂಜೆ ಮಾಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇದೇ ರೀತಿ ಪೌರ ಕಾರ್ಮಿಕರ ಪಾದ ತೊಳೆದಿದ್ದರು. ಅವರನ್ನೇ ನಾನು ಕೂಡ ಹಿಂಬಾಲಿಸುತ್ತಿದ್ದು, ಅವರ ಆದರ್ಶಗಳನ್ನು ಪಾಲಿಸುತ್ತಿದ್ದೇನೆ ಎಂದರು.
ಶಾಸಕ ಶಿವಲಿಂಗೇಗೌಡರ ವಿರುದ್ಧ ಕ್ರಮಕ್ಕೆ ಆಗ್ರಹ
March 25, 2019ಅರಸೀಕೆರೆ: ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವ ಲಿಂಗೇಗೌಡರ ಅವರು ಪ್ರಧಾನಿ ಮೋದಿ ಹೆಸರೇಳಿಕೊಂಡು ಬರುವ ಬಿಜೆಪಿ ಕಾರ್ಯ ಕರ್ತರಿಗೆ ಕಪಾಳ ಮೋಕ್ಷ ಮಾಡಿ ಎಂದು ದೈಹಿಕ ಹಲ್ಲೆಗೆ ಪ್ರಚೋದನೆ ಹೇಳಿಕೆ ನೀಡಿ ದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಬಿಜೆಪಿ ವಕ್ತಾರ ಮತ್ತು ವಕೀಲ ಎನ್.ಡಿ.ಪ್ರಸಾದ್ ನೇತೃತ್ವದಲ್ಲಿ ಕಾರ್ಯ ಕರ್ತರು ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಅವರ ಮೂಲಕ ಚುನಾ ವಣಾ ಆಯೋಗಕ್ಕೆ ಮನವಿ…
ಕ್ಷಯ ನಿವಾರಣೆಗೆ ಸೂಕ್ತ ಚಿಕಿತ್ಸೆ ಪಡೆಯಿರಿ
March 25, 2019ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಸಲಹೆ ಹಾಸನ: ಕ್ಷಯ ರೋಗದ ಬಗ್ಗೆ ಯಾರೂ ಹೆದರಿಕೆ, ಹಿಂಜರಿಕೆ ಪಡುವ ಅಗತ್ಯವಿಲ್ಲ. ಇದೊಂದು ಗುಣಮುಖ ವಾಗಬಲ್ಲ ಖಾಯಿಲೆಯಾಗಿದ್ದು, ಸಕಾಲ ದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕಿದೆ ಎಂದು ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಜಿಲ್ಲಾ ಕ್ಷಯ…
ಇಂದು ವಿದೇಶಾಂಗ ನೀತಿ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣ
March 25, 2019ಮೈಸೂರು: ಮಹಾರಾಜ ಕಾಲೇಜಿನ ಸ್ನಾತಕೋತ್ತರ ಪದವಿಯ ಅಂತಾರಾಷ್ಟ್ರೀಯ ಸಂಬಂಧಗಳು ವಿಭಾಗದ ವತಿಯಿಂದ ಮಾ.25ರಂದು `ಭಾರತೀಯ ವಿದೇಶಾಂಗ ನೀತಿ: 21ನೇ ಶತಮಾನದಲ್ಲಿ ನಿರಂತರತೆ ಮತ್ತು ಬದಲಾವಣೆ’ ಕುರಿತಂತೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿಭಾಗದ ಸಂಯೋಜಕಿ ಡಾ.ಭಾರತಿ ಹೀರೆಮಠ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ವಿಚಾರ ಸಂಕಿರಣಕ್ಕೆ ಅಂದುಬೆಳಿಗ್ಗೆ 9ಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಚಾಲನೆ ನೀಡಲಿದ್ದು, ಮೈಸೂರು ವಿವಿ…
ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಿ
March 24, 2019ಹಾಸನ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬರ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ 8 ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಿತವಾಗಿದ್ದು ಜನ ಜಾನುವಾರುಗಳಿಗೆ ನೀರಿನ ಯಾವುದೇ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾ ಯಿಸಿ ಎಂದು…
ಸಂಭ್ರಮದ ಮಹದೇಶ್ವರ ಜಾತ್ರಾ ಮಹೋತ್ಸವ
March 24, 2019ಗ್ರಾಮಸ್ಥರಿಂದ ಕೋಡಿ ಮಠದ ಶ್ರೀಗಳಿಗೆ ಭಿಕ್ಷಾಟನೆಯ ಗೌರವ ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಶ್ರೀ ಕೋಡಿಮಠ ಮಹಾ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಾರನಹಳ್ಳಿ ಗ್ರಾಮಸ್ಥರು ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತು ಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಅವರಿಗೆ ಭಿಕ್ಷಾಟನೆ ನೀಡಿ ಗೌರವ ಸಮರ್ಪಣೆ ಮಾಡಿದರು. ಕಳೆದ ಎರಡು ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಪ್ರಮುಖ ಧಾರ್ಮಿಕ ಕಾರ್ಯ ಕ್ರಮ ಭಿಕ್ಷಾಟನೆಯು…
ದೇಶದ ಭದ್ರತೆಗಾಗಿ ಬಿಜೆಪಿ ಬೆಂಬಲಿಸಿ: ಎ.ಮಂಜು
March 24, 2019ಬೇಲೂರು: 2019ರ ಲೋಕಸಭಾ ಚುನಾವಣೆ ದೇಶದ ಭದ್ರತೆಯ ಚುನಾವಣೆಯಾಗಿದೆ ಹೊರತು ಎ.ಮಂಜು ಪರವಾದ ಚುನಾವಣೆಯಲ್ಲ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದರು. ಬೇಲೂರು ಪಟ್ಟಣದ ಶ್ರೀ ಮಂಜು ನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯ ಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರು ಚುನಾ ವಣೆಯಲ್ಲಿ ರಾಜಕೀಯ ವಿಶ್ಲೇಷಣೆ ಅರಿಯ ಬೇಕಾಗಿದೆ. ದೇಶದ ಸುಭದ್ರತೆ ಹಾಗೂ ರಕ್ಷಣೆಗಾಗಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಾಗಿದೆ. ಈ ಕಾರಣ ಜಿಲ್ಲೆಯ ಮತ್ತು ತಾಲೂಕಿನ ಪ್ರತಿಯೊಬ್ಬ ಮತದಾ ರರು ಭಾರತೀಯ…
ಜಿಲ್ಲೆಯ ವಿವಿಧೆಡೆ ವಿಶ್ವ ಜಲ ದಿನಾಚರಣೆ
March 24, 2019ಹಾಸನ: ಜಿಲ್ಲೆಯ ವಿವಿಧೆಡೆ ವಿಶ್ವ ನೀರು ದಿನಾಚರಣೆಯನ್ನು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸಲಾಯಿತು.ನೀರು ಅಮೂಲ್ಯ ಪ್ರಾಕೃತಿಕ ಸಂಪತ್ತು. ಇದು ಪ್ರತಿಯೊಂದು ಜೀವಿಯು ಬದುಕುಳಿಯಲು ವಿಕಾಸ ಹೊಂದಲು ಜೀವಾಮೃತವಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಕೆ.ಸಿ.ದೇವರಾಜೇಗೌಡ ತಿಳಿಸಿದರು. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರ ವಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಿಂದ ನಡೆದ ವಿಶ್ವಜಲ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಗರಿಕತೆ ಬೆಳೆದಂತೆಲ್ಲಾ…
ಲೋಕಸಭಾ ಚುನಾವಣೆ 2019: ಜಿಲ್ಲಾದ್ಯಂತ ಮತದಾನ ಜಾಗೃತಿ
March 22, 2019ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಕರಪತ್ರ ಹಂಚಿಕೆ, ಮತದಾನದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಹಾಸನ: ಏಪ್ರಿಲ್ 18ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತ ಚುನಾವಣಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾ ಗಿದ್ದು, ಗುರುವಾರ ಜಿಲ್ಲಾದ್ಯಂತ ಜಾಗೃತಿ ಜಾಥಾ, ಕರಪತ್ರ ಹಂಚಿಕೆ, ಬೀದಿ ನಾಟಕ ಮೂಲಕ ಮತದಾನದ ಬಗ್ಗೆ ಸಾರ್ವ ಜನಿಕರಲ್ಲಿ ಅರಿವು ಮೂಡಿಸಲಾಯಿತು. ಮತದಾನ ಜಾಗೃತಿಗೆ ಚುನಾವಣಾ ವೀಕ್ಷಕರಿಂದ ಚಾಲನೆ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹಾಸನ ನಗರಸಭೆ…