ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ಬೇಲೂರು: ಜೆಡಿಎಸ್ನಲ್ಲಿ ಕಾರ್ಯಕರ್ತರ ಅಭಿ ವೃದ್ಧಿಗಿಂತ ಅಪ್ಪ-ಮಕ್ಕಳು ಹಾಗೂ ಮೊಮ್ಮಕ್ಕಳ ಸಾಧನೆ ಜೋರಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತದಾ ರರು ಗೌಡರ ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತವನ್ನು ನೆಪ ಮಾತ್ರಕ್ಕೆ ಹೇಳುತ್ತಾರೆ. ಆದರೆ ಜೆಡಿಎಸ್ನಲ್ಲಿ ಸ್ವಜನಪಕ್ಷಪಾತ ಹಾಗೂ ಸ್ವಾರ್ಥ ದಿಂದ…
ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
March 20, 2019ಹಾಸನ: ಜಿಲ್ಲೆಯ 91 ಪರೀಕ್ಷಾ ಕೇಂದ್ರಗಳಲ್ಲಿ ಮಾ.21ರಿಂದ ಏ.4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯ ಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇ ಶಕ ಹೆಚ್.ಮಂಜುನಾಥ್ ತಿಳಿಸಿದ್ದಾರೆ. 2019ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ 10,840 ಹೆಣ್ಣು ಮಕ್ಕಳು, 11,164 ಗಂಡು ಮಕ್ಕಳು ಸೇರಿದಂತೆ ಒಟ್ಟು 22, 004 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲಾಧಿಕಾರಿ ಅಕ್ರಂ ಪಾಷ ಅಧ್ಯಕ್ಷತೆ ಯಲ್ಲಿ ಮತ್ತು ಜಿಪಂ ಸಿಇಓ ಡಾ.ಕೆ.ಎನ್. ವಿಜಯಪ್ರಕಾಶ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ…
ಹಾಸನ ಲೋಕಸಭಾ ಕ್ಷೇತ್ರಕ್ಕೆ ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭ
March 19, 2019ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾ ಚುನಾವಣಾ ಧಿಕಾರಿ ಅಕ್ರಂ ಪಾಷ ಮಾ.19ರಂದು ಅಧಿ ಸೂಚನೆ ಹೊರಡಿಸಲಿದ್ದಾರೆ. ಇದರೊಂ ದಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭ ವಾಗಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮ ಪತ್ರಗಳನ್ನು ಸ್ವೀಕರಿಸಲಾಗುವುದು. ಮಾ.19ರಿಂದ ಮಾ.26ರವರೆಗೆ ನಾಮ ಪತ್ರ ಸಲ್ಲಿಕೆಗೆ ಅವಕಾಶ ಇದ್ದು, 4ನೇ ಶನಿವಾರವಾದ ಮಾ.23 ರಂದು ನೆಗೋ ಷೆಬಲ್ ಇನ್ಸ್ಟ್ರುಮೆಂಟ್ ಕಾಯ್ದೆಯ ನ್ವಯ ಹಾಗೂ ಮಾ.24ರಂದು ಭಾನು ವಾರ ರಜೆ ಕಾರಣ ಆ ದಿನಗಳಲ್ಲಿ ನಾಮ ಪತ್ರ ಸ್ವೀಕಾರಕ್ಕೆ ಅವಕಾಶ ಇರುವುದಿಲ್ಲ….
ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್
March 19, 2019ಬೇಲೂರು: ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲವಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹರಡ ದಂತೆ ಜಾಗ್ರತೆ ವಹಿಸ ಬೇಕು ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ.ವಿಜಯ್ ತಿಳಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಂಗ ಸತ್ತಿರುವ ಮಾಹಿತಿ ಬಂದಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಮಂಗದ ಶವವನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿತ್ತು. ಶವ ಪರೀಕ್ಷಾ ವರದಿಯಲ್ಲಿ ಮಂಗನ ಕಿಡ್ನಿಯಲ್ಲಿ ಕಾಯಿಲೆಯ ಸೋಂಕು ಇರುವುದು ಪತ್ತೆಯಾಗಿದೆ ಎಂಬ ಮಾಹಿತಿ ತಿಳಿದ…
ಮಾ.21ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
March 19, 2019ಹೊಳೆನರಸೀಪುರ: ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ 2018-19ನೇ ಸಾಲಿನ ಎಸ್ಎಸ್ ಎಲ್ಸಿ ಪರೀಕ್ಷೆಗಳು ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರೀಕ್ಷೆಗೆ ಕೈಗೊಂಡಿರುವ ಪೂರ್ವಸಿದ್ಧತೆ ಮತ್ತು ಕ್ರಮಗಳ ಬಗ್ಗೆ ವಿವರಿಸಿದ ಅವರು, ತಾಲೂಕಿನ 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ವರ್ಷ ಒಟ್ಟು 2,416 ವಿದ್ಯಾರ್ಥಿಗಳು ಪರೀಕ್ಷೆ ತೆಗದು ಕೊಂಡಿದ್ದು, ಇದರಲ್ಲಿ 1,229 ಗಂಡು ಮಕ್ಕಳು ಮತ್ತು 1,187 ಹೆಣ್ಣು ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆಂದು ಹೇಳಿದರು. ಈ…
184.96 ಕೋಟಿ ರೂ. ತಂಬಾಕು ವಹಿವಾಟು
March 19, 2019ರಾಮನಾಥಪುರ: ಕಳೆದ 132 ದಿನಗಳಲ್ಲಿ ನಡೆದ ತಂಬಾಕು ವಹಿವಾಟು 2 ಹರಾಜು ಮಾರುಕಟ್ಟೆಗಳಿಂದ 184 ಕೋಟಿ 96 ಲಕ್ಷ 59 ಸಾವಿರ 680 ರೂ. ವಹಿವಾಟು ನಡೆದಿದ್ದು, 131 ಲಕ್ಷ 86 ಸಾವಿರ, 853 ಕೆ.ಜಿ ತಂಬಾಕು ಬಂದಿದ್ದು, ಪ್ರತಿ ಕೆ.ಜಿ ತಂಬಾಕಿಗೆ ಸರಾಸರಿ 141.30 ರೂ. ಬೆಲೆ ಸಿಕ್ಕಿದೆ ಎಂದು ಹರಾಜು ಅಧೀಕ್ಷಕ ಎಸ್.ಎಸ್.ಪಾಟೀಲ್ ತಿಳಿಸಿದರು. ಇಲ್ಲಿಯ ಸುಬ್ರಹ್ಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆ ನಂತರ ಮಾತನಾಡಿದ ಅವರು, ಪ್ಲಾಟ್ ಫಾರಂ…
ಬೇರೆಯವರ ಸಾಹಿತ್ಯ ಕಾಪಿ ಹೊಡೆಯುವ ಢೋಂಗಿ ಸಾಹಿತಿಗಳ ಬಗ್ಗೆ ಎಚ್ಚರ ಅಗತ್ಯ ಸಾಹಿತಿ ಹೆತ್ತೂರು ನಾಗರಾಜು
March 19, 2019ಆಲೂರು: ಕೆಲವು ವ್ಯಕ್ತಿಗಳು ಬೇರೆಯವರ ಸಾಹಿತ್ಯವನ್ನು ಕಾಪಿ ಹೊಡೆದು ಸಾಹಿತ್ಯವನ್ನು ರಾಜಕೀಯಕರಣಗೊಳಿ ಸುತ್ತಿದ್ದಾರೆ. ಇಂತಹ ಢೋಂಗಿ ಸಾಹಿತಿಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಸಾಹಿತಿ ಹೆತ್ತೂರು ನಾಗರಾಜು ಹೇಳಿದರು. ಪಟ್ಟಣದ ಬಿಲಿವರ್ಸ್ ಚರ್ಚ್ನಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ವತಿ ಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪದಗ್ರಹಣ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲೆಮರೆ ಕಾಯಿಯಂತಿರುವ ಯುವ ಕವಿಗಳನ್ನು ಹೊರ ತೆಗೆಯುವ ಕೆಲಸ ವನ್ನು ಕೊಟ್ರೇಶ್ ಎಸ್.ಉಪ್ಪಾರ್ ಹಾಗೂ ವಾಸು ಸಮುದ್ರವಳ್ಳಿಯವರ ನಾಯಕತ್ವ…
ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಪಾತ್ರ ಅಮೂಲ್ಯ
March 18, 2019ಜಿಲ್ಲಾ ಪಂಚಾಯಿತಿ ಸಿಇಓ ಡಾ.ಕೆ.ಎನ್.ವಿಜಯಪ್ರಕಾಶ್ ಅಭಿಪ್ರಾಯ ಹಾಸನ: ಯುವ ಸಮು ದಾಯ ದೇಶದ ಆಸ್ತಿ ಹಾಗೂ ಅತ್ಯಂತ ಬಲಾಢ್ಯ ಶಕ್ತಿಯಾಗಿದ್ದು, ಇದು ಪ್ರಜಾ ಪ್ರಭುತ್ವ ವ್ಯವಸ್ಥ್ತೆಯಲ್ಲಿ ಸಕ್ರಿಯವಾಗಿ ತೊಡಗಬೇಕಿದೆ ಎಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಹೇಳಿದರು. ನಗರದ ಕಲಾಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವೇಕಾ ಬ್ಯೂರೋಯಿಂದ ಆಯೋಜಿಸಲಾದ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾ ಪ್ರಭುತ್ವ ಯಶಸ್ವಿಯಾಗಬೇಕಾದರೆ ಯುವ ಪೀಳಿಗೆಯ…
ಮಹಿಳೆಯರನ್ನು ಒಂದು ಚೌಕಟ್ಟಿಗೆ ಸೀಮಿತಗೊಳಿಸಬೇಡಿ: ಭಾರತೀದೇವಿ
March 18, 2019ಹಾಸನ: ಮಹಿಳೆಯರನ್ನು ಒಂದು ಚೌಕಟ್ಟಿಗೆ ಒಳಪಡಿಸುವ ಮೂಲಕ ಅವರನ್ನು ಸೀಮಿತಗೊಳಿಸಲಾಗುತ್ತಿದ್ದು ಹೊಸ ತಲೆಮಾರು ಕೂಡ ಇದನ್ನು ಮುಂದು ವರೆಸುತ್ತಿರುವುದು ದುರಂತ ಎಂದು ಸರ್ಕಾರಿ ಗೃಹ ಕಾಲೇಜಿನ ಉಪನ್ಯಾಸಕಿ ಡಾ.ಭಾರತೀದೇವಿ ವಿಷಾದಿಸಿದರು. ನಗರದ ಸಂಸ್ಕೃತ ಭವನದಲ್ಲಿ ಪ್ರಕೃತಿ ಮಹಿಳಾ ಸಂಘ, ಸಾವಿತ್ರಿ ಬಾಯಿ ಸಾಂಸ್ಕೃತಿಕ ಮಹಿಳಾ ಸಂಘ ಹಾಗೂ ಹಾಸನಾಂಬ ಮಹಿಳಾ ಸಂಘದಿಂದ ನಡೆದ ಅಂತಾರಾ ಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳಿಂದಲೂ ಮಹಿಳೆ ಯರನ್ನು ಎರಡನೇ ದರ್ಜೆಯ ಮನುಷ್ಯ ರಂತೆ ನೋಡಲಾಗುತ್ತಿದೆ….
ದಲಿತರ ಮತ ಕೇಳುವ ನೈತಿಕತೆ ಗೌಡರಿಗಿಲ್ಲ: ಎ.ಮಂಜು
March 18, 2019ಬೇಲೂರು: ದಲಿತರ ಬಗ್ಗೆ ಮಾತನಾಡುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ಅವರಿಗೆ ದಲಿತರ ಮತ ಕೇಳುವ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಎ.ಮಂಜು ಕಿಡಿಕಾರಿದರು. ಬೇಲೂರು ಪಟ್ಟಣದ ಸಂಬಂಧಿಕರೊಬ್ಬರ ಮನೆಗೆ ಆಗಮಿಸಿದ ಅವರು ಮುಂಬ ರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಿ ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾಷಣದ ಉದ್ದಕ್ಕೂ…