ರಾಮನಾಥಪುರ: ಇಂದು ಲಿಂಗೈಕ್ಯರಾದ ತ್ರೀವಿಧ ದಾಸೋಹಿ, ಕಲಿಯುಗ ಬಸವಣ್ಣ, ನಡೆದಾಡುವ ದೇವರೇ ಎಂದು ನಮ್ಮ ನಾಡಿನ ಜನರೇ ಕರೆಯುತ್ತಿರುವ ಸಿದ್ಧಗಂಗಾ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಈ ದೇಶದ ಹೆಮ್ಮೆಯವ ರಾಗಿದ್ದು, ಅವರಿಗೆ ಭಾರತ ರತ್ನ ನೀಡಬೇಕು ಎಂದು ಶರಣ ಸಾಹಿತ್ಯ ಪರಿಷತ್ತು ದತ್ತಿ ದಾನಿ ಸೋಮಶೇಖರ್ ಮನವಿ ಮಾಡಿದರು. ರಾಮನಾಥಪುರದ ಬಸವೇಶ್ವರ ವೃತ್ತದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಆಟೋ ಮಾಲೀಕರ ಸಂಘ, ವೀರಶೈವ ಸಮಾಜ ಬಾಂಧವರು ಹಾಗೂ ವಿವಿಧ ಸಂಘಗಳು ಸೇರಿ ಇಂದು ಶಿವಕ್ಯರಾದ ಸಿದ್ಧಗಂಗಾ…
ಅಂಬಿಗರ ಚೌಡಯ್ಯ, ಮಹಾಯೋಗಿ ವೇಮನ ಜಯಂತಿ ಆಚರಣೆ
January 22, 2019ಹಾಸನ: ಅಂಬಿಗರ ಚೌಡಯ್ಯ ಮತ್ತು ಮಹಾಯೋಗಿ ವೇಮನ ಮಹರ್ಷಿಗಳು ಸಮಾಜದಲ್ಲಿನ ಪಿಡುಗು ಗಳ ವಿರುದ್ಧ ಧ್ವನಿಯಾಗಿ ಎಲ್ಲರಿಗೂ ದಾರಿದೀಪವಾಗಿ ಬದುಕಿದರು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜು ತಿಳಿಸಿದರು. ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಾಸನಾಂಬ ಕಲಾಭವನದಲ್ಲಿ ಆಯೋಜಿಸಲಾಗಿದ್ದ ಅಂಬಿಗರ ಚೌಡಯ್ಯ ಮತ್ತು ಮಹಾ ಯೋಗಿ ವೇಮನ ಜಯಂತಿ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿ ದರು. ಇಬ್ಬರು ಮಹನೀಯರು ಹಿಂದಿನ ಕಾಲದಿಂದಲೂ ಸಮಾನತೆಯ ಪರವಾಗಿ ಅನೇಕ ಕಾರ್ಯಗಳನ್ನು ಮಾಡಿದವರು ಸರ್ವರೂ ಸಮಾನರು…
ಸಿದ್ಧಗಂಗಾ ಶ್ರೀಗಳಿಗೆ ವೀರಶೈವ ಸಮಾಜದಿಂದ ಅಂತಿಮ ಗೌರವ
January 22, 2019ಹಾಸನ: ನಡೆದಾಡುವ ದೇವರು, ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಯವರು ಸೋಮವಾರ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯರಾದ ಹಿನ್ನೆಲೆ ಯಲ್ಲಿ ಸಂಜೆ ಶ್ರಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ವೀರಶೈವ ಸಮಾಜ ದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರೀ ಶಿವಕುಮಾರ ಸ್ವಾಮೀಜಿಯವರು ನಮ್ಮ ಮುಂದೆ ಇಲ್ಲದಿರುವುದು ಇಡಿ ಸಮಾಜಕ್ಕೆ ಹಾಗೂ ವೀರಶೈವ-ಲಿಂಗಾ ಯಿತ ಸಮಾಜಕ್ಕೆ ತುಂಬಲಾರದ ನಷ್ಟ ವಾಗಿದೆ. ದೇಶ-ವಿದೇಶಗಳಲ್ಲಿ ಶ್ರೀಗಳಿಗೆ ಅನೇಕ ಭಕ್ತರುಗಳಿದ್ದು ಹಾಗೂ ಮಠದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಎಲ್ಲಾ ವರ್ಗದ ಜಾತಿ, ಮತವಿಲ್ಲದೆ ಶಿಕ್ಷಣವನ್ನು ನೀಡುತ್ತಿದ್ದ…
ನಗರಸಭೆ ಅನುಮತಿಯಿಲ್ಲದೆ ಹೆದ್ದಾರಿ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ಗೆ ಡಿಸಿ ನೋಟೀಸ್
January 22, 2019ಹಾಸನ: ಹಾಸನ ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಸಹಮತಿ ಇಲ್ಲದೆ ಬಿ.ಎಂ.ರಸ್ತೆಯ ಅಭಿವೃದ್ಧಿ ಸಂಬಂಧ ರಸ್ತೆಯನ್ನು ಅಗೆದು ತುರ್ತಾಗಿ ಪೂರ್ಣಗೊಳಿಸದೆ ಸಾರ್ವಜನಿಕರಿಗೆ ನೀಡುತ್ತಿರುವ ಮೂಲಭೂತ ಸೌಕರ್ಯಗಳಲ್ಲಿ ತೊಂದರೆ ಆಗು ತ್ತಿರುವ ಬಗ್ಗೆ ಕಾರಣ ಕೇಳಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾದ ಅಭಿಯಂತರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹಾಸನ ನಗರದ ಮಧ್ಯಬಾಗದಲ್ಲಿ ಹಾದು ಹೋಗಿ ರುವ ರಾಷ್ಟ್ರೀಯ ಹೆದ್ದಾರಿಯನ್ನು (ಎನ್.ಆರ್. ವೃತ್ತದಿಂದ ತಣ್ಣೀರುಹಳ್ಳ ವೃತ್ತದವರೆಗಿನ ಬಿ.ಎಂ.ರಸ್ತೆ) ಅಭಿವೃದ್ಧಿಪಡಿಸುವ ಸಂಬಂಧ ರಸ್ತೆಯ ಒಂದು ಭಾಗವನ್ನು ಅಗೆಯಲಾಗಿರುತ್ತದೆ. ಹಲವಾರು…
ಬೇಲೂರಿನ ಬರ ನಿವಾರಣೆಗೆ ‘ಜಲಧಾರೆ’ ಯೋಜನೆ 450 ಕೋಟಿ ವೆಚ್ಚ ಮೀಸಲು, ಹಲವು ನೀರಾವರಿ ಯೋಜನೆ ಅನುಷ್ಠಾನ
January 21, 2019ಬೇಲೂರು: ಬೇಲೂರು ತಾಲೂಕಿನ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಬರ ಪರಿಸ್ಥಿತಿ ಯನ್ನು ನಿಭಾಯಿಸುವ ಹಿನ್ನೆಲೆಯಲ್ಲಿ ‘ಜಲಧಾರೆ’ ಮಹತ್ವಾಕಾಂಕ್ಷೆಯ ಯೋಜನೆ ಯನ್ನು ಜಾರಿಗೊಳಿಸಲಾಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಪಟ್ಟಣಕ್ಕೆ ಸಮೀಪದ ಕಟ್ಟೆ ಸೋಮನಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಡಿ ರಸ್ತೆಗೆ ಡಾಂಬರ್ ಹಾಕುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ 450 ಕೋಟಿ ರೂ ವೆಚ್ಚದಡಿ ಜಲಧಾರೆ ಯೋಜನೆ ಜಾರಿಗೊಳಿಸಲಾಗು ತ್ತಿದೆ. ಇದರಿಂದ ಹಲವು ನೀರಾವರಿ ಯೋಜನೆ ಕೈಗೆತ್ತಿಕೊಂಡು ತಾಲೂಕಿನ ಬರದ ಬವಣೆ ನೀಗಿಸಲಾಗುವುದು…
ಸಾಹಿತಿ ಶಿವವಿಶ್ವನಾಥ್ ವಿರುದ್ಧ ಎಬಿವಿಪಿ ಪ್ರತಿಭಟನೆ
January 21, 2019ಹಾಸನ: ಸೈನಿಕರ ವಿರುದ್ಧ ಸಾಹಿತಿ ಡಾ.ಶಿವ ವಿಶ್ವನಾಥ್ ಅವಹೇಳನಕಾರಿ ಹೇಳಿಕೆ ನೀಡಿ ಅಪಮಾನ ಮಾಡಿ ದ್ದಾರೆ ಎಂದು ಆರೋಪಿಸಿ ನಗರದಲ್ಲಿ ಭಾನುವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಕಾರ್ಯಕರ್ತರು ಸಾಹಿತಿ ಶಿವವಿಶ್ವನಾಥ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸೈನಿಕರು ನಿಸ್ವಾರ್ಥ ಮನೋಭಾವದೊಂದಿಗೆ ಗಡಿಯಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಯೋತ್ಪಾದಕರನ್ನು ಮಟ್ಟ ಹಾಕುತ್ತಿದ್ದಾರೆ. ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುತ್ತಿದ್ದಾರೆ. ಆದರೆ, ಸಾಹಿತಿ ಶಿವವಿಶ್ವನಾಥ್ ಅವರು ದೇಶ…
ರಸ್ತೆ ಡಾಂಬರೀಕರಣಕ್ಕೆ ಬೆಟ್ಟಸೋಗೆ ಗ್ರಾಮಸ್ಥರ ಒತ್ತಾಯ
January 21, 2019ರಾಮನಾಥಪುರ: ಸಮೀಪದ ಬಸವನಹಳ್ಳಿಕೊಪ್ಪಲು ಗ್ರಾಮದಿಂದ ಬೆಟ್ಟಸೋಗೆ ಗ್ರಾಮದವರೆಗೆ ರಸ್ತೆಗೆ ಡಾಂಬರೀಕರಣ ಮಾಡಿಸುವಂತೆ ಶಾಸಕ ಡಾ.ರಾಮಸ್ವಾಮಿಯವರಲ್ಲಿ ಬೆಟ್ಟಸೋಗೆ ಗ್ರಾಮಸ್ಥರು ಒತ್ತಾಯಿಸಿದರು. ರಾಮನಾಥಪುರ ಪ್ರವಾಸಿ ಮಂದಿರ ದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಬೆಟ್ಟಸೋಗೆ ಗ್ರಾಮಸ್ಥರು ಶುದ್ಧ ಕುಡಿಯವ ನೀರು, ಬಸವನಹಳ್ಳಿಕೊಪ್ಪಲು ಗ್ರಾಮ ದಿಂದ ಬೆಟ್ಟಸೋಗೆ ಗ್ರಾಮದವರೆಗೆÀ ಕಟ್ಟೆ ಪುರ ಎಡದಂಡೆ ನಾಲೆಯ ರಸ್ತೆಗೆ ಡಾಂಬರೀಕರಣ ಮಾಡಿಸಿಕೊಡುವಂತೆ ಗ್ರಾಮಸ್ಥರ ಪರವಾಗಿ ಬಿ.ಪಿ. ವೀರೇಶ್ ಮನವಿ ಸಲ್ಲಿಸಿ ಮಾತನಾಡಿದರು. ರಾಮನಾಥಪುರ ಹೋಬಳಿ ಬಸವನ ಹಳ್ಳಿಕೊಪ್ಪಲು ಗ್ರಾಮದಿಂದ ಬೆಟ್ಟಸೋಗೆ ಗ್ರಾಮದವರೆಗೆ ಕಟ್ಟೆಪುರ ಎಡದಂಡೆ ನಾಲೆಯ…
ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ನೀಡಲು ಸಲಹೆ
January 21, 2019ಅರಸೀಕೆರೆ: ವಿದ್ಯಾರ್ಥಿಗಳು ಮಾತೃ ಭಾಷೆ ಕನ್ನಡಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ವ್ಯವಹಾರಿಕವಾಗಿ ಇಂಗ್ಲಿಷ್ ಭಾಷೆ ಅನಿ ವಾರ್ಯತೆ ಅರಿತಾಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯಲು ಸಾಧ್ಯ ಎಂದು ಉಪನ್ಯಾಸಕ ನಯಾಜ್ ಆಹ್ಮದ್ ತಿಳಿಸಿದರು. ನಗರದ ಮಾರುತಿ ನಗರ ಬಡಾವಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಡಾ.ವಿಷ್ಣು ಸೇನಾ ಸಮಿತಿ ಮತ್ತು ಭುವಿ ಸೇವಾ ಸಂಘದ ಸಂಯು ಕ್ತಾಶ್ರಯದಲ್ಲಿ 3 ಹಂತಗಳಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉಚಿತ ಇಂಗ್ಲಿಷ್ ಗ್ರಾಮರ್ ತರಗತಿಯೊಂದಿಗೆ ವ್ಯಕ್ತಿ ವಿಕಸನ ಮತ್ತು ಸಾಮಾಜಿಕ ಜವಾಬ್ದಾರಿ…
ಸರ್ಕಾರದ ಸೌಲಭ್ಯ ಸದ್ಬಳಕೆಗೆ ಬಿಇಓ ಸಲಹೆ
January 21, 2019ಅರಸೀಕೆರೆ: ಸರ್ಕಾರ ಹಿಂದು ಳಿದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಗಳ ಮೂಲಕ ನೀಡುತ್ತಿರುವ ಸವಲತ್ತು ಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತ ನಾಡಿದ ಅವರು, ಅನುಭವಿ ಶಿಕ್ಷಕರ ಬೋಧನೆ ಜೊತೆಗೆ ಯಾವ ಖಾಸಗಿ ಶಾಲಾ-ಕಾಲೇಜುಗಳಿಗೂ ಕಡಿಮೆ ಇಲ್ಲದ ರೀತಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ…
ಅರಸೀಕೆರೆಯಲ್ಲಿ ಬಾಲಗಂಗಾಧರನಾಥ ಶ್ರೀಗಳ ಜಯಂತ್ಯೋತ್ಸವ
January 19, 2019ಅರಸೀಕೆರೆ: ಡಾ.ಬಾಲಗಂಗಾಧರ ನಾಥ ಸ್ವಾಮೀಜಿಯವರ 74ನೇ ವರ್ಷದ ಜಯಂತ್ಯೋತ್ಸವವನ್ನು ತಾಲೂಕು ಭಕ್ತವೃಂದ, ಒಕ್ಕಲಿಗರ ಸಂಘ, ಆದಿಚುಂಚನಗಿರಿ ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿ ಹಾಗೂ ಭೈರವ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಶ್ರದ್ಧಾ ಭಕ್ತಿಯಿಂದ ನಗರದಲ್ಲಿ ಶುಕ್ರವಾರ ಆಚರಿಸಲಾಯಿತು. ನಗರದ ಪ್ರವಾಸಿ ಮಂದಿರದ ಆವರಣದಿಂದ ಆಯೋಜಿಸಿದ್ದ ಬಾಲಗಂಗಾಧರನಾಥ ಶ್ರೀಗಳ ಅಲಂಕಾರಿತ ಪ್ರತಿಮೆಯ ಉತ್ಸವಕ್ಕೆ ಹಾಸನ ಆದಿ ಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಆದಿಹಳ್ಳಿ ಆದಿ ಚುಂಚನಗಿರಿ ಶಾಖಾ ಮಠದ ಶಿವಪುತ್ರನಾಥ…