ಹಾಸನ

ಡೆಂಗ್ಯೂ, ಚಿಕೂನ್ ಗುನ್ಯಾ ಭೀತಿಯಲ್ಲಿ ಬೇಲೂರು
ಹಾಸನ

ಡೆಂಗ್ಯೂ, ಚಿಕೂನ್ ಗುನ್ಯಾ ಭೀತಿಯಲ್ಲಿ ಬೇಲೂರು

July 10, 2019

* ತಾಲೂಕು ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಸಿಬ್ಬಂದಿ ಕೊರತೆ * ಗ್ರಾಮೀಣ ಭಾಗದಿಂದ ಬರುವ ರೋಗಿಗಳಿಗೆ ಪರದಾಟ * ಸಮಸ್ಯೆ ಪರಿಹಾರಕ್ಕಾಗಿ ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಮನವಿ ಬೇಲೂರು:  ತಾಲೂಕಿನಲ್ಲಿ ದಿನ ದಿಂದ ದಿನಕ್ಕೆ ಚಿಕನ್ ಗುನ್ಯಾ, ಡೆಂಗ್ಯೂ ಶಂಕೆಯ ಜ್ವರದಿಂದ ನರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ರೋಗ ಪತ್ತೆಗಾಗಿ ರಕ್ತ ಪರೀಕ್ಷೆ ಅತ್ಯಗತ್ಯವಾಗಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯ ರಕ್ತ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ನಿತ್ಯವೂ ನೂರಾರು ರೋಗಿಗಳು ಪರದಾಡುವಂತಾಗಿದೆ. ತಾಲೂಕಿನ ಎಲ್ಲೆಡೆಯೂ ಚಿಕೂನ್ ಗುನ್ಯಾ ಹಾಗೂ ಡೆಂಗ್ಯೂ…

ಸಿಎಂ ಹೆಚ್‍ಡಿಕೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಹಾಸನ

ಸಿಎಂ ಹೆಚ್‍ಡಿಕೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

July 10, 2019

ಹಾಸನ, ಜು.9- ಬಹುಮತ ಕಳೆದುಕೊಂಡಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮೊದಲಿಗೆ ನಗರದಲ್ಲಿನ ಹೇಮಾವತಿ ಪ್ರತಿಮೆ ಎದುರು ಜಮಾವಣೆಗೊಂಡ ಬಿಜೆಪಿ ಜಿಲ್ಲಾ ಘಟಕದ ಸದಸ್ಯರು, ರಾಜ್ಯದಲ್ಲಿನ ಮೈತ್ರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಗತ್ಯ ಸಂಖ್ಯೆಯ ಶಾಸಕರ ಬೆಂಬಲ ಇಲ್ಲದಿದ್ದರೂ ಭಂಡತನದಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಕುಮಾರಸ್ವಾಮಿ ಕುಳಿತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ಅಲ್ಪಮತಕ್ಕೆ…

ಅರಸೀಕೆರೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಹಾಸನ

ಅರಸೀಕೆರೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

July 10, 2019

ಅರಸೀಕೆರೆ,ಜು.9- ಬಿಜೆಪಿಯ ಅರಸೀಕೆರೆ ಗ್ರಾಮಾಂತರ ಹಾಗೂ ನಗರ ಮಂಡಲ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ನಗರದ ಪಿ.ಪಿ.ವೃತ್ತದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ಸದಸ್ಯತ್ವ ಅಭಿಯಾನದ ತಾಲೂಕು ಉಸ್ತುವಾರಿ ಲಕ್ಷ್ಮಣ್, ಬಿಜೆಪಿ ಬೇರು ಮಟ್ಟದಿಂದಲೂ ಸದೃಢÀವಾಗಿದೆ. ಹೊಸ ದಾಗಿ ಸದಸ್ಯತ್ವ ಅಭಿಯಾನ ನಡೆದಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಸಂಘಟ ನೆಗೆ ಒತ್ತು ನೀಡಬೇಕು. ಎಲ್ಲಿ ಪಕ್ಷದ ವರ್ಚಸ್ಸು ಕಡಿಮೆ ಇದೆಯೋ ಅಲ್ಲೆಲ್ಲಾ ಹೆಚ್ಚು ಸದಸ್ಯತ್ವ ನೋಂದಾಯಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದರು. ಗ್ರಾಮಾಂತರ…

‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸುವಂತೆ ಆಗ್ರಹ
ಹಾಸನ

‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸುವಂತೆ ಆಗ್ರಹ

July 10, 2019

ಸಮರ್ಪಕ ವೇತನ ನಿಗದಿಪಡಿಸಿ: ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ ಹಾಸನ,ಜು.9- ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರ ನ್ಯಾಯಯುತವಾದ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ಮಂಗಳವಾರ ಪಾಠ ಪ್ರವಚನ ಸ್ಥಗಿತಗೊಳಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಶಿಕ್ಷಕ-ಶಿಕ್ಷಕಿಯರು ಭಾಗವಹಿಸಿದ್ದರು. ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವ ಹಿಸುತ್ತಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಸಹ…

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ; ಬೇಲೂರು ಪ್ರತಿಭೆಗಳ ಸಾಧನೆ
ಹಾಸನ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ; ಬೇಲೂರು ಪ್ರತಿಭೆಗಳ ಸಾಧನೆ

July 10, 2019

ಬೇಲೂರು, ಜು.9- ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಮತ್ತು ಬೇಲೂರಿನ ಎನ್‍ಎಸ್ ಕೆಎಂಎಫ್ ಶಾಲೆ ಯಿಂದ ಸೋಮವಾರ ಆಯೋ ಜಿಸಿದ್ದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೇಲೂರಿನ ವಿವಿಧ ಶಾಲೆಗಳ ಕರಾಟೆ ಪಟುಗಳು ಭಾಗವಹಿಸಿ ಹಲವು ಬಹು ಮಾನಗಳನ್ನು ಗೆದ್ದು ಕೊಂಡರು. 25 ಕೆಜಿ ವಿಭಾಗದಲ್ಲಿ ಬೇಲೂರು ಸರ್ಕಾರಿ ಪ್ರೌಢಶಾಲೆಯ ಬಿ.ಆರ್.ಪೂರ್ಣೇಶ್ ಪ್ರಥಮ, ಧ್ರುವ ಮೌಂಟ್ ಕಾರ್ಮೆಲ್ ಶಾಲೆಯ ಚಿರಂಜೀವಿ ದ್ವಿತೀಯ ಸ್ಥಾನ, 30 ಕೆಜಿ ವಿಭಾಗದಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ಚಿರಂತ್ ಡಿ.ರಾವ್ ಪ್ರಥಮ, 45ಕೆಜಿ…

ಕೃಪೆ ತೋರಿದ ವರುಣ: ಕೃಷಿ ಚಟುವಟಿಕೆ ಆರಂಭ
ಹಾಸನ

ಕೃಪೆ ತೋರಿದ ವರುಣ: ಕೃಷಿ ಚಟುವಟಿಕೆ ಆರಂಭ

July 9, 2019

* ಸಕಲೇಶಪುರದಲ್ಲಿ ಜೂನ್‍ನಲ್ಲಿ ಶೇ.30 ಕಡಿಮೆ ಮಳೆ; ಜುಲೈನಲ್ಲಿ ಚುರುಕು * ಹೇಮಾವತಿ ನದಿಯಲ್ಲಿ ಹೆಚ್ಚಿದ ಒಳ ಹರಿವು-ಅಣೆಕಟ್ಟೆ ನೀರಿನ ಮಟ್ಟ ಏರಿಕೆ ಹಾಸನ, ಜು.8- ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ, ಈಗ 2-3 ದಿನಗಳಿಂದ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ ಸುರಿಸುತ್ತಿದೆ. ಮುಖ್ಯವಾಗಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ 3 ದಿನಗಳಿಂದ ಸಕಲೇಶಪುರ ತಾಲೂಕಿನಲ್ಲಿ ಉತ್ತಮವಾಗಿ ಮಳೆಯಾ ಗುತ್ತಿದೆ. ಕೊನೆಗೂ ಮುನಿಸು ಕೈಬಿಟ್ಟು ಅವತರಿಸಿದ ವರುಣನನ್ನು ಹರ್ಷದಿಂದ ಬರಮಾಡಿಕೊಂಡಿರುವ ತಾಲೂಕಿನ…

ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಹಾಸನ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

July 9, 2019

ಹಾಸನ: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ (ಎಐಯು ಟಿಯುಸಿ) ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ಸೋಮವಾರ ಬೆಳಿಗ್ಗೆ ನಗರದ ಕಲಾಭವನದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಆಶಾ ಕಾರ್ಯಕರ್ತೆಯರು ಎನ್.ಆರ್.ವೃತ್ತ ಮೂಲಕ ಡಿಸಿ ಕಚೇರಿ ಆವರಣಕ್ಕೆ ಬಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರೋತ್ಸಾಹಧನ ಒಟ್ಟು ಸೇರಿಸಿ ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸಬೇಕು. ಆಶಾ ಸಾಫ್ಟ್ ಇಲ್ಲವೇ ಆರ್.ಸಿ.ಹೆಚ್ ಪೋರ್ಟಲ್‍ಗೆ ಆಶಾ ಪ್ರೋತ್ಸಾಹಧನ…

ಕೃಷಿ ಕ್ಷೇತ್ರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರ್ಯಾಲಿ
Uncategorized, ಹಾಸನ

ಕೃಷಿ ಕ್ಷೇತ್ರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರ್ಯಾಲಿ

July 9, 2019

ಹಾಸನ,ಜು.8- ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಹಾಗೂ ಕೃಷಿ ಕ್ಷೇತ್ರದ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾ ಯಿತು. ಬಳಿಕ ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಲಾಯಿತು. ಸೋಮವಾರ ಬೆಳಿಗ್ಗೆ ನಗರದ ಹೇಮಾ ವತಿ ಪ್ರತಿಮೆ ಬಳಿಯಿಂದ ಹೊರಟ ರೈತರ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿ ಆವರಣ ತಲುಪಿತು. ಅಲ್ಲಿ ಮಾತನಾಡಿದ ರೈತ ಮುಖಂಡರು, ಕೃಷಿ, ಹೈನುಗಾರಿಕೆ ಅಭಿವೃದ್ಧಿ…

ಜಲಸಂರಕ್ಷಣೆಗೆ ಆಂದೋಲನದ ರೂಪ ನೀಡಿ: ಜಿಲ್ಲಾಡಳಿತಕ್ಕೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ನಿರ್ದೇಶನ
ಹಾಸನ

ಜಲಸಂರಕ್ಷಣೆಗೆ ಆಂದೋಲನದ ರೂಪ ನೀಡಿ: ಜಿಲ್ಲಾಡಳಿತಕ್ಕೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ನಿರ್ದೇಶನ

July 9, 2019

ಹಾಸನ,ಜು.8- ಜಿಲ್ಲೆಯಾದ್ಯಂತ, ಮುಖ್ಯವಾಗಿ ಅಂತ ರ್ಜಲ ಮಟ್ಟ ಕುಸಿದಿರುವ ತಾಲೂಕುಗಳಲ್ಲಿ ಮುಂದಿನ 3 ತಿಂಗಳಲ್ಲಿ ಜಲಸಂರಕ್ಷಣೆ ಜನ ಜಾಗೃತಿ ಚಟುವಟಿಕೆ ಗಳನ್ನು ಆಂದೋಲನ ರೂಪದಲ್ಲಿ ಹಮ್ಮಿಕೊಳ್ಳಿ ಎಂದು ಕೇಂದ್ರ ಸರ್ಕಾರದ ಕೃಷಿ ಸಂಶೋಧನೆ ಮತ್ತು ಶೈಕ್ಷಣಿಕ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುಶೀಲ್ ಕುಮಾರ್ ಸೂಚನೆ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಅರಸೀಕರೆ ಮತ್ತು ಚನ್ನರಾಯಪಟ್ಟಣ ತಾಲೂಕುಗಳಲ್ಲಿ ಜಲಶಕ್ತಿ ಅಭಿ ಯಾನ ಅನುಷ್ಠಾನ ಕುರಿತು ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿದ ಅವರು, ಜಲ ಸಂವರ್ಧನೆ…

ಮಹಾ ರಥೋತ್ಸವ: ಖಜಾನೆಯಿಂದ ದೇಗುಲಕ್ಕೆ ಆಭರಣ
ಹಾಸನ

ಮಹಾ ರಥೋತ್ಸವ: ಖಜಾನೆಯಿಂದ ದೇಗುಲಕ್ಕೆ ಆಭರಣ

July 9, 2019

ಅಲಂಕೃತ ಎತ್ತಿನ ಗಾಡಿಯಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅರಸೀಕೆರೆ, ಜು.8- ನಗರದ ಖಜಾನೆಯಲ್ಲಿದ್ದ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವರ ಆಭರಣಗಳನ್ನು ಮಹಾರಥೋತ್ಸವ ಪ್ರಯುಕ್ತ ಸೋಮವಾರ ಹೊರತೆಗೆದಿದ್ದು, ಅಲಂಕೃತ ಎತ್ತಿನ ಗಾಡಿಯಲ್ಲಿ ಸಾಂಪ್ರದಾಯಿಕವಾಗಿ ಶ್ರೀಕ್ಷೇತ್ರಕ್ಕೆ ಕೊಂಡೊಯ್ಯಲಾಯಿತು. ಪ್ರತಿ ವರ್ಷದ ಆಷಾಢ ಮಾಸದಲ್ಲಿ ನಡೆಯುವ ಜಾತ್ರಾ ಮಹೋತ್ಸವ ವೇಳೆ ದೇವರಿಗೆ ಅಮೂಲ್ಯ ಆಭರಣಗಳಿಂದ ಅಲಂಕರಿಸಲಾಗುತ್ತದೆ. ತಹಸಿಲ್ದಾರ್ ಸಂತೋಷ್ ಕುಮಾರ್ ಅವರು ದೇವರ ಆಭರಣಗಳನ್ನು ಜಾತ್ರಾ ಸಮಿತಿ ಪದಾಧಿಕಾರಿ ಗಳಿಗೆ ಸೋಮವಾರ ಹಸ್ತಾಂತರಿಸುವ ಮೂಲಕ ವಿಜೃಂಭಣೆಯ ಜಾತ್ರಾ…

1 7 8 9 10 11 133
Translate »