ವಿರಾಜಪೇಟೆ, ಸೆ.12- ಪಟ್ಟಣದ ಅರಸು ನಗರದ ವಿಘ್ನೇಶ್ವರ ಸೇವಾ ಸಮಿತಿ ಯಿಂದ ಪ್ರತಿಷ್ಠಾಪಿಸಲಾಗಿದ್ದ 41ನೇ ವರ್ಷದ ಗಣೇಶ ಮೂರ್ತಿಯನ್ನು ಭಾನುವಾರ ಪವಿತ್ರ ಗೌರಿ ಕೆರೆಯಲ್ಲಿ ವಿಸರ್ಜಿಸಲಾಯಿತು. ಗಣೇಶ ಮೂರ್ತಿಯನ್ನು ಶೃಂಗರಿಸಿ ತಳ್ಳು ಗಾಡಿಯ ಮಂಟಪದಲ್ಲಿರಿಸಿ ಪಟ್ಟ ಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ವಿಸರ್ಜಿಸಲಾಯಿತು. ಸರ್ಕಾರದ ಆದೇಶದಂತೆ ಕೋವಿಡ್-19 ನಿಯಮವನ್ನು ಪಾಲನೆಯೊಂದಿಗೆ ಮೂಲಕ ಶ್ರದ್ಧಾ- ಭಕ್ತಿಯ ಗಣೇಶೋತ್ಸವ ಆಚರಣೆಯು ಪಟ್ಟಣ ವ್ಯಾಪ್ತಿಯಲ್ಲಿ ಉತ್ಸವ ಸಮಿತಿಗಳಿಂದ 26 ಗಣೇಶ ಮೂರ್ತಿ ಯನ್ನು ಪ್ರತಿಷ್ಠಾಪಿಸಲಾಗಿತ್ತು. ಮೊದಲ ಹಂತದ 15 ಮೂರ್ತಿಗಳನ್ನು…
ಕೊಡವ ಭಾಷೆ, ಸಂಸ್ಕøತಿ, ಕಲೆ ಎಲ್ಲೆಡೆ ಪಸರಿಸಲಿ: ಅಪ್ಪಚ್ಚು ರಂಜನ್ಕೊಡವ ಭಾಷೆ, ಸಂಸ್ಕøತಿ, ಕಲೆ ಎಲ್ಲೆಡೆ ಪಸರಿಸಲಿ: ಅಪ್ಪಚ್ಚು ರಂಜನ್
September 13, 2021ಮಡಿಕೇರಿ, ಸೆ.12- ಕೊಡವ ಭಾಷೆ ಮಾತನಾಡು ವವರು ವಿಶ್ವದ ಎಲ್ಲೆಡೆ ಇದ್ದು, ಕೊಡವ ಭಾಷೆ, ಸಾಹಿತ್ಯ, ಸಂಸ್ಕøತಿ ಹಾಗೂ ಕಲೆಯನ್ನು ಎಲ್ಲೆಡೆಯೂ ಪಸರಿಸುವಂತಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ನಗರದಲ್ಲಿ ಭಾನುವಾರ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ 2019-20, 2020-21ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಪ್ರಶಸ್ತಿ, ಕೊಡವ ಶಬ್ದಕೋಶ ಮತ್ತು ಪುಸ್ತಕ ಬಿಡುಗಡೆ ಸಮಾ ರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡವ ಭಾಷೆ ಮಾತನಾಡುವ ಜನರು ದೇಶ,…
ಕೊಡಗಿನಲ್ಲಿ ವೀಕೆಂಡ್ ಕಫ್ರ್ಯೂ ರದ್ದು
September 12, 2021ಪ್ರವಾಸೋದ್ಯಮದಲ್ಲಿ ತುಸು ಚೇತರಿಕೆ ಮಡಿಕೇರಿ, ಸೆ.11- ರಾಜ್ಯ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿದ್ದ ವೀಕೆಂಡ್ ಕಫ್ರ್ಯೂ ಅನ್ನು ರದ್ದುಗೊಳಿಸಲಾಗಿದ್ದು, ಕೊಡಗು ಜಿಲ್ಲೆಯ ಕಡೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ವಾರಾಂತ್ಯದಲ್ಲಿ ಬಾಗಿಲು ಹಾಕಿ ಕೊಳ್ಳುತ್ತಿದ್ದ ಪ್ರವಾಸಿತಾಣಗಳಲ್ಲಿ ಇದೀಗ ಪ್ರವಾಸಿಗರೇ ತುಂಬಿದ್ದು, ಪ್ರವಾಸೋದ್ಯಮದಲ್ಲಿ ತುಸು ಚೇತರಿಕೆ ಕಂಡು ಬರುತ್ತಿದೆ. ದುಬಾರೆ, ಕಾವೇರಿ ನಿಸರ್ಗ ಧಾಮ, ಮಡಿಕೇರಿ ರಾಜಾಸೀಟು, ಅಬ್ಬಿಫಾಲ್ಸ್, ಮಾಂದಲ್ ಪಟ್ಟಿ, ಕೋಟೆ ಬೆಟ್ಟ, ಮಲ್ಲಳ್ಳಿ ಜಲಪಾತಗಳ ಕಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಿದ್ದಾರೆ. ಇದೀಗ ಮಳೆ ಕೂಡ…
ಕೊಡಗಿನಲ್ಲಿ ಶ್ರದ್ಧಾಭಕ್ತಿಯ ಸರಳ ಗಣೇಶ ಚತುರ್ಥಿ ಆಚರಣೆ
September 12, 2021ಮಡಿಕೇರಿ, ಸೆ.11- ಕೊಡಗಿನ ವಿವಿಧೆಡೆ ಗಣೇಶೋ ತ್ಸವ ಸಮಿತಿಗಳು ಗಣೇಶ ಚತುರ್ಥಿಯನ್ನು ಸಂಭ್ರಮ ದಿಂದ ಆಚರಿಸಿದವು. ಕೋವಿಡ್ ಮಾರ್ಗಸೂಚಿ ಬಿಗಿಯಾಗಿರುವ ಹಿನ್ನೆಲೆ ಕೆಲವು ಬಡಾವಣೆಗಳಲ್ಲಷ್ಟೇ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನ ಮೂರ್ತಿ ಆಕರ್ಷಕವಾಗಿದ್ದು, 5 ದಿನಗಳ ಕಾಲ ಪೂಜೆ ನಡೆಯ ಲಿದೆ. ಕೆಎಸ್ಆರ್ಟಿಸಿ ಡಿಪೋದಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇತಿಹಾಸ ಪ್ರಸಿದ್ಧ ಕೋಟೆ ಮಹಾಗಣಪತಿ ದೇವಾ ಲಯ, ವಿಜಯ ವಿನಾಯಕ, ದೇಚೂರು ಗಣಪತಿ, ಅಶ್ವಿನಿ ಗಣಪತಿ,…
ಕೊಡವ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸೇರಿ ೧೨ ಸಾಧಕರ ಆಯ್ಕೆ
September 11, 2021ಮಡಿಕೇರಿ, ಸೆ.೯- ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡ ಮಾಡುವ ವಾರ್ಷಿಕ ಗೌರವ ಹಾಗೂ ಪುಸ್ತಕ ಪ್ರಶಸ್ತಿಗೆ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸೇರಿ ೧೨ ಮಂದಿ ಸಾಧಕರು ಆಯ್ಕೆಯಾಗಿದ್ದಾರೆ. ಕೊರೊನಾ ಪರಿಸ್ಥಿತಿ ಇದ್ದ ಹಿನ್ನೆಲೆ ಕಳೆದ ವರ್ಷ ಪ್ರಶಸ್ತಿ ನೀಡಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ೨ ವರ್ಷದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸೆ.೧೨ರಂದು ಮಕ್ಕಂದೂರು ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ. ಕೊಡವ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೊಣ್ಣಂಡ ಶೋಭಾ ಸುಬ್ಬಯ್ಯ, ಬಡಕಡಮ್ಮಂಡ ಕಸ್ತೂರಿ ಗೋವಿಂದಮಯ್ಯ, ಜಾನಪದ,…
ಶ್ರೀಮಂಗಲದಲ್ಲಿ ರೈತ ಸಂಘ ಸದಸ್ಯತ್ವ ಅಭಿಯಾನ ರೈತರ ಬೆಳೆಗೆ ಬೆಂಬಲ ಬೆಲೆ ನೀಡಲು ಸರ್ಕಾರ ವಿಫಲ
August 29, 2021ವಿರಾಜಪೇಟೆ, ಆ.28- ದೇಶದ ಬೆನ್ನೆಲುಬು ರೈತಾಪಿ ವರ್ಗವು ತನ್ನ ಹೊಲದಲ್ಲಿ ಶ್ರಮವನ್ನು ಭೂತಾಯಿಗೆ ಅರ್ಪಿಸಿ ಬೆಳೆಯನ್ನು ಪಡೆಯುತ್ತಾರೆ. ಆದರೆ ರೈತರಿಗೆ ಬೆಂಬಲ ಬೆಲೆ ನೀಡಲು ಸರ್ಕಾರ ವಿಫಲವಾಗಿರುವುದರಿಂದ ಹೋರಾಟದ ಹಾದಿ ಹಿಡಿಯಬೇಕಾ ಗಿದೆ ಎಂದು ರಾಜ್ಯ ರೈತ ಸಂಘದ ಮೈಸೂರು ಘಟಕದ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಶ್ರೀಮಂಗಲ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ರೈತ ಸಂಘಕ್ಕೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ…
ಕೊಡಗಿನ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 427.8 ಲಕ್ಷ ರೂ. ಬಿಡುಗಡೆ
August 29, 2021ಕುಶಾಲನಗರ, ಆ.28- ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ರೂ. 427.8 ಲಕ್ಷ ಅನುದಾನ ಬಿಡುಗಡೆ ಮಾಡ ಲಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು, ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಸಮೀಪದ ಹಾರಂಗಿಯಲ್ಲಿರುವ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾರಂಗಿಯಲ್ಲಿರುವ ಉತ್ಪಾದನಾ ಘಟಕ ದಲ್ಲಿ ಮೀನುಮರಿಗಳ ಉತ್ಪಾದನೆ ಮತ್ತು ಪಾಲನೆ ಕಾರ್ಯ ವೀಕ್ಷಿಸಿದರು. ಸ್ಥಳೀಯ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ಸಚಿವರಿಗೆ ಅಗತ್ಯ ಮಾಹಿತಿ ಒದಗಿಸಿದರು. ಮೀನು ತೊಟ್ಟಿಗಳು, ಆಹಾರ…
ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಕನ್ನಡ ಜಾಗೃತಿ ಅಭಿಯಾನ
August 28, 2021ಮಡಿಕೇರಿ, ಆ.27- ನಗರದ ಕೆಎಸ್ಆರ್ಟಿಸಿ ಬಸ್ ಡಿಪೆÇೀದಲ್ಲಿ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ವತಿಯಿಂದ ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿ ಸಾರಿಗೆ ವಲಯದಲ್ಲಿ ಕನ್ನಡ ಅನುಷ್ಠಾ£ Àಗೊಳಿಸುವ ನಿಟ್ಟಿನಲ್ಲಿ ಹಕ್ಕೊತ್ತಾಯ ಪತ್ರವನ್ನು ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ರವರಿಗೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಎಸ್.ಮಹೇಶ್, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎನ್ನುವುದು ಸರಳ…
ಮನಮುಟ್ಟುವ ಭಾವನೆಗಳಿರುವ ಹಳ್ಳಿ ಭಾಷೆ ಉಳಿಯಬೇಕು
August 28, 2021ಮಡಿಕೇರಿ, ಆ.27- ಹಳ್ಳಿ ಭಾಷೆಗಳಲ್ಲಿ ಭಾವನೆಗಳಿವೆ. ಅತ್ಯಂತ ಸುಲಭವಾದ ರೀತಿಯಲ್ಲಿ ಭಾವನೆಗಳು ಜನರ ಮನ ಮುಟ್ಟು ವಂತಾಗಲು ಆ ಭಾಷೆಗಳು ಉಳಿಯ ಬೇಕು ಎಂದು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಎಸ್. ಅಂಗಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ‘ದಶ ವರ್ಷ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅರೆಭಾಷಾ ಸಂಸ್ಕøತಿಯ ಸಂರಕ್ಷಣೆಗೆ ನಾವೇನು ಮಾಡಬೇಕೆನ್ನುವ ಕುರಿತು ಚಿಂತಿಸಿ, ಆ…
ಮಂದಲಪಟ್ಟಿಯಲ್ಲಿ ಹೆಲಿಕಾಪ್ಟರ್ನಲ್ಲಿ ಜಾಲಿ ರೈಡ್ ಖಾಸಗಿ ಸಂಸ್ಥೆ ವಿರುದ್ಧ ಕ್ರಮಕ್ಕೆ ಕೊಡಗು ರಕ್ಷಣಾ ವೇದಿಕೆ ಆಗ್ರಹ
August 27, 2021ಮಡಿಕೇರಿ, ಆ.೨೬- ಅಭಯಾರಣ್ಯವಾಗಿ ರುವ ಮಂದಲಪಟ್ಟಿಯಲ್ಲಿ ಜಾಲಿ ರೈಡ್ ಹೆಸರಿನಲ್ಲಿ ಕಾನೂನುಬಾಹಿರವಾಗಿ ಹೆಲಿ ಕಾಪ್ಟರ್ ಹಾರಾಟವಾಗುತ್ತಿದ್ದು, ಇದರಿಂದ ಪರಿಸರ ಮತ್ತು ವನ್ಯಜೀವಿಗಳ ಮೇಲೆ ದುಷ್ಪರಿ ಣಾಮ ಬೀರಲಿದೆ ಎಂದು ಕೊಡಗು ರಕ್ಷಣಾ ವೇದಿಕೆ(ಕೊರವೇ) ಆರೋಪಿಸಿದೆ. ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿರುವ ಸಂಘಟನೆಯ ಪ್ರಮುಖರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ನಗರದ ಅರಣ್ಯ ಭವನಕ್ಕೆ ತೆರಳಿದ ಕೊರವೇ ಅಧ್ಯಕ್ಷ ಪವನ್ ಪೆಮ್ಮಯ್ಯ ನೇತೃ ತ್ವದ ನಿಯೋಗ ಅಧಿಕಾರಿಗಳಿಗೆ ದೂರು ನೀಡಿ ಹೆಲಿಕಾಪ್ಟರ್ ಹಾರಾಟದಿಂದ ಆಗಬಹು…