ಮಡಿಕೇರಿ: ಮಡಿಕೇರಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ 15ರವರೆಗೆ ಕ್ಯಾಲಿಗ್ರಫಿ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.ಜ್ಯೋತಿ ಕ್ಯಾಲಿಗ್ರಫಿ ತರಗತಿ ವತಿಯಿಂದ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯ ಬಳಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಆಯೋಜಿತವಾಗಿರುವ ಕ್ಯಾಲಿಗ್ರಫಿ ಪ್ರದರ್ಶನದಲ್ಲಿ ಹಲವಾರು ವಿದ್ಯಾರ್ಥಿಗಳು ಸುಂದರ ಅಕ್ಷರ ನಮೂನೆಗಳನ್ನು ಪ್ರದರ್ಶಿಸಿದ್ದಾರೆ. ಪ್ರದರ್ಶನವನ್ನು ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖಾ ಧಿಕಾರಿ ಮಮ್ತಾಜ್ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಎಚ್.ಎಂ. ಮಮ್ತಾಜ್, ಮಕ್ಕಳ ಏಕಾಗ್ರತೆಗೆ ಕ್ಯಾಲಿಗ್ರಫಿ ನೆರವಾಗುತ್ತದೆ. ಕೊಡಗಿನಲ್ಲಿ ಇಂಥ…
ಸಂತ್ರಸ್ತರ ನಿಧಿಗೆ ಆರ್ಥಿಕ ನೆರವು
November 14, 2018ಕುಶಾಲನಗರ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಕುಶಾಲನಗರ ಹೋಬಳಿ ಘಟಕದ ವತಿಯಿಂದ 40 ಸಾವಿರ ರೂಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಆಗಿರುವ ನಷ್ಟದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳು ಮಂಗಳವಾರ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಈ ವೇಳೆ ಸಂಘದ ಅಧ್ಯಕ್ಷ ಡಿ.ಕೆ. ಬೊಮ್ಮಯ್ಯ, ಉಪಾಧ್ಯಕ್ಷ ಕೆ.ಇ. ಉತ್ತಪ್ಪ, ಖಜಾಂಚಿ ಸಿ.ಸಿ. ರಾಘವಯ್ಯ ಹಾಗೂ ನಿರ್ದೇಶಕ ಕೆ.ಎಂ. ಗಿರೀಶ್…
ಕೊಡಗು ಜಿಲ್ಲೆಯಲ್ಲಿ ಕೇಂದ್ರ ಸಚಿವ ಅನಂತ್ಕುಮಾರ್ಗೆ ಭಾವನಮನ
November 13, 2018ಮಡಿಕೇರಿ: ಕೇಂದ್ರ ರಸ ಗೊಬ್ಬರ ಖಾತೆ ಸಚಿವ ಅನಂತ್ಕುಮಾರ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂತಾಪ ಸೂಚನಾ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸಚಿವ ಅನಂತ್ಕುಮಾರ್ ಅವರ ಭಾವಚಿತ್ರಕ್ಕೆ ಪ್ಪುಷ್ಪಾರ್ಚನೆ ಸಲ್ಲಿಸಿದ ಬಿಜೆಪಿ ಮುಖಂಡರು 1 ನಿಮಿಷ ಮೌನಾಚರಣೆಯ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ…
ಸಂತ್ರಸ್ತರಿಗೆ ಬಾಂಬೆ ಕೂರ್ಗ್ ನೆರವು
November 13, 2018ಮಡಿಕೇರಿ: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣ ದಲ್ಲಿ ‘ಬಾಂಬೆ ಕೂರ್ಗ್’ ಅಸೋಸಿಯೇಷನ್ ವತಿಯಿಂದ ಸಹಾಯ ಹಸ್ತ ನೀಡಲಾಯಿತು. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಂಬೈನಿಂದ ಆಗಮಿಸಿದ ತಂಡ ತೀವ್ರ ಹಾನಿಗೊಳಗಾದ 39 ಸಂತ್ರಸ್ತ ಕುಟುಂಬಗಳಿಗೆ ತಲಾ 25 ಸಾವಿರದಂತೆ 12 ಲಕ್ಷ ರೂ.ಗಳ ನೆರವು ಹಸ್ತ ನೀಡಿದರು. ಈ ಸಂದರ್ಭ ಬಾಂಬೆ ಕೂರ್ಗ್ ಅಸೋಸಿಯೇಷನ್ ಟ್ರಸ್ಟಿ ಬಿದ್ದಂಡ ಜಗ ದೀಶ್ ನಂಜಪ್ಪ ಮಾತನಾಡಿ, ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಲ ವಾರು…
ಕುಶಾಲನಗರದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಪುತ್ತರಿ ವೆಳ್ಳಾಟಂ
November 13, 2018ಕುಶಾಲನಗರ: ಪಟ್ಟಣದ ಬೈಚನಹಳ್ಳಿ ಯೋಗಾನಂದ ಬಡಾವಣೆಯ ಶ್ರೀಮುತ್ತಪ್ಪನ್ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಪುತ್ತರಿ ವೆಳ್ಳಾಟಂ ವಿಜೃಂಭಣೆಯೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಕೇರಳದ ಸನಲ್ ಮಡಯನ್ ಅವರಿಂದ ಮಲೈಇರಕ್ಕಲ್ ನಿಂದ ಆರಂಭಗೊಂಡ ಪೂಜಾ ಕಾರ್ಯಕ್ರಮ ಶ್ರೀಮುತ್ತಪ್ಪನ್ ದೇವರ ಆಗಮನದವರೆಗೂ ನಡೆಯಿತು. ಪಟ್ಟಣ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಭಕ್ತರು ಮುತ್ತಪ್ಪನ ದರ್ಶನ, ಆಶೀರ್ವಾದ ಹಾಗೂ ಪ್ರಸಾದ ಪಡೆದು ಪುನೀತರಾದರು. ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ವರದ ಹಾಗೂ ಕಾರ್ಯದರ್ಶಿ ಕೆ.ಕೆ.ದಿನೇಶ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಇದೇ ಸಂದರ್ಭ ನೂತನವಾಗಿ ಪಪಂಗೆ…
ಕಕ್ಕಟ್ಟುಕಾಡು ರಸ್ತೆ ವಿವಾದ: ತಹಶೀಲ್ದಾರ್ ಗೋವಿಂದರಾಜ್ ಪರಿಶೀಲನೆ
November 13, 2018ಸಿದ್ದಾಪುರ: ಗುಹ್ಯ ಗ್ರಾಮದ ಕಕ್ಕಟ್ಟುಕಾಡು ರಸ್ತೆ ವಿವಾದ ಸ್ಥಳಕ್ಕೆ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆ ಸಮಸ್ಯೆಯ ಬಗ್ಗೆ ತಹಶೀಲ್ದಾರ್ರವರ ಗಮನ ಸೆಳೆದರು. ಹಲವಾರು ವರ್ಷಗಳಿಂದ ವಾಹನ ಸಂಚಾರದ ರಸ್ತೆಗಾಗಿ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದು, ರಸ್ತೆ ಇಲ್ಲದೆ ಹಲವು ಜೀವಗಳು ಬಲಿಯಾಗಿದೆ. ಕೂಡಲೇ ಗ್ರಾಮಕ್ಕೆ ವಾಹನ ಸಂಚಾರಕ್ಕೆ ಯೋಗ್ಯವಾದ ರಸ್ತೆಯನ್ನು ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಅಲ್ಲದೇ ಕೂಡಲೇ ರಸ್ತೆ ಅಗಲೀಕರಣ ಆಗದಿದ್ದಲ್ಲಿ ಸಿದ್ದಾಪುರದಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳುವದಾಗಿ…
ಮುಂದಿನ ವರ್ಷದಿಂದ ಟಿಪ್ಪು ಜಯಂತಿ ನಡೆಯಲ್ಲ
November 13, 2018ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭವಿಷ್ಯ ಗೋಣಿಕೊಪ್ಪಲು: ಯಾರಿಗೂ ಬೇಡವಾದ ಟಿಪ್ಪು ಜಯಂತಿ ಮುಂದಿನ ವರ್ಷ ನಡೆಯುವುದಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಗೋಣಿಕೊಪ್ಪ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯ ಸರ್ಕಾರದ ನಿರಾಸಕ್ತಿ ನೋಡಿದಾಗ ಮುಂದಿನ ವರ್ಷ ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ ಎಂದೇ ನಿಸುತ್ತದೆ ಎಂದು ಹೇಳಿದರು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಸಿಎಂ ಹಾಗೂ ಡಿಸಿಎಂ ಆಚರಣೆಯಿಂದ ದೂರ ಉಳಿದಿದ್ದಾರೆ. ಎಲ್ಲ್ಲರಿಗೂ…
ಸಂತ್ರಸ್ತರಿಗೆ ಮನೆ ಕಟ್ಟುವ ಮೊದಲು ಮನಸ್ಸು ಕಟ್ಟಬೇಕು
November 12, 2018ಮಡಿಕೇರಿ: ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ಮನೆ, ಕಟ್ಟಡ ನಿರ್ಮಿಸುವ ಮೊದಲು ಸಂತ್ರಸ್ತರ ಮನಸ್ಸು ಮತ್ತು ಬದುಕು ಕಟ್ಟುವುದಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ, ಹೆಸರಾಂತ ಮಹಿಳಾ ಸಾಹಿತಿ ಡಾ. ವೈದೇಹಿ ಸಲಹೆ ನೀಡಿದ್ದಾರೆ. ಕಾಲೂರು ಗ್ರಾಮದಲ್ಲಿ ಪ್ರಾಜೆಕ್ಟ್ ಕೂರ್ಗ್ ಮತ್ತು ಭಾರತೀಯ ವಿದ್ಯಾಭವನ ಸಹ ಯೋಗದಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತ ಮಹಿಳೆಯರು ಯಶಸ್ವಿ ಕೌಶಲಾಭಿವೃದ್ದಿ ಯೋಜನೆಯಡಿ ತಯಾರಿಸಿದ ವಿವಿಧ ಮಸಾಲೆ ಪದಾರ್ಥಗಳ ಕೂರ್ಗ್ ಫ್ಲೇ ವರ್ಸ್ ಉತ್ಪನ್ನಗಳನ್ನು ಲೋಕಾರ್ಪ ಣೆಗೊಳಿಸಿ ಮಾತನಾಡಿದ…
ಪ್ರಕೃತಿ ವಿಕೋಪ ನಿಧಿಗೆ ಸಂಗ್ರಹಿಸಿದ ಹಣ ಸಂತ್ರಸ್ತರಿಗೆ ವಿನಿಯೋಗಕ್ಕೆ ಆಗ್ರಹ
November 12, 2018ಮುಖ್ಯಮಂತ್ರಿ ಪರಿಹಾರ ನಿಧಿ, ಮಾಧ್ಯಮಗಳು ಸಂಗ್ರಹಿಸಿದ ಹಣ ಪಾರದರ್ಶಕವಾಗಿ ಬಳಕೆಯಾಗಲಿ ಕೊಡಗು ಮಾರಕ ಯೋಜನೆ ವಿರೋಧಿ ವೇದಿಕೆ ಒತ್ತಾಯ ಪೊನ್ನಂಪೇಟೆ: ಪ್ರಕೃತಿ ವಿಕೋ ಪಕ್ಕೆ ತುತ್ತಾದ ಕೊಡಗಿನ ನೆರವಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಸಂದಾ ಯವಾಗಿರುವ ಹಣ ಹಾಗೂ ಹಲವು ದೃಶ್ಯ ಮಾಧ್ಯಮಗಳು, ಮುದ್ರಣ ಮಾಧ್ಯ ಮಗಳು ಕೊಡಗಿನ ದುರಂತಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಜನರಿಂದ ಹಣ ಸಂಗ್ರಹಿಸಿದ್ದು, ಇದನ್ನು ಸಂಪೂರ್ಣವಾಗಿ ಮತ್ತು ಪಾರ ದರ್ಶಕವಾಗಿ ದುರಂತದ ಫಲಾನುಭವಿ ಗಳಿಗೆ ನೀಡುವಂತಾಗಬೇಕೇಂದು ಕೊಡಗು ಮಾರಕ ಯೋಜನೆಗಳ ವಿರೋಧಿ…
ಕುಶಾಲನಗರದಲ್ಲಿ ಶ್ರೀಕೋಣ ಮಾರಿಯಮ್ಮ ದೇವಿ ಪೂಜಾ ಮಹೋತ್ಸವ
November 12, 2018ಕುಶಾಲನಗರ: ಪಟ್ಟಣದ ರಾಧಾಕೃಷ್ಣ ಬಡಾವಣೆಯಲ್ಲಿರುವ ಮುಳ್ಳುಸೋಗೆ ಗ್ರಾಮ ದೇವತೆ ಶ್ರೀ ಕೋಣ ಮಾರಿಯಮ್ಮ ದೇವಿಯ 14ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ಇತ್ತೀಚೆಗೆ ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ಜರುಗಿತು. ಶ್ರೀ ಕೋಣ ಮಾರಿಯಮ್ಮ ದೇವತಾ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷ ದಂತೆ ಸಾರ್ವಜನಿಕರ ಹಾಗೂ ದಾನಿಗಳ ಸಹಕಾರದೊಂದಿಗೆ ಶಕ್ತಿ ದೇವಿಯ ಹಬ್ಬ ವನ್ನು ವೈಶಿಷ್ಟಪೂರ್ಣವಾಗಿ ಆಚರಿಸಲಾಯಿತು. ಮುಳ್ಳುಸೋಗೆ ಗ್ರಾಮದ ಪಟೇಲ್ ಎಂ.ಎನ್. ಬಸಪ್ಪ ಅವರ ಮನೆಯಲ್ಲಿರುವ ದೇವಿಯ ವಿಗ್ರ ಹಗಳನ್ನು ತಂದು ಅಂದು ಬೆಳಿಗ್ಗೆ 5 ಗಂಟೆಗೆ…









