ಸೋಮವಾರಪೇಟೆ: ಅಕ್ರಮವಾಗಿ ಶ್ರೀಗಂಧವನ್ನು ಶೇಖರಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ್ದಾರೆ. ಬಜೆಗುಂಡಿ ಗ್ರಾಮದ ನಿವಾಸಿ ಸುದೀಪ್(ಸುಧೀರ್), ಪಿ.ಕೆ. ಸುರೇಶ್ (ಸೂರಿ), ಯಡವ ನಾಡು ಗ್ರಾಮದ ಎನ್.ಡಿ. ಹೇಮಕುಮಾರ್ ಬಂಧಿತ ಆರೋಪಿಗಳಾಗಿದ್ದು, ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸುರೇಶ್ ಅವರ ಮನೆಯ ಸುತ್ತಮುತ್ತ ಶೇಖರಿಸಿ ಟ್ಟಿದ್ದ ಶ್ರೀಗಂಧವನ್ನು ಗರಗಂದೂರು ಗ್ರಾಮದ ಬಾಪುಟ್ಟಿ ಎಂಬವರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ನೇತೃತ್ವದ ತಂಡ ದಾಳಿ ನಡೆಸಿದೆ. ಬಂಧಿತರು ನೀಡಿದ ಹೇಳಿಕೆಯನ್ನಾಧರಿಸಿ…
ನವೆಂಬರ್ 1ರಂದು ಅಪ್ಪಚ್ಚಕವಿ 150ನೇ ಜನ್ಮೋತ್ಸವ
October 28, 2018ಮಡಿಕೇರಿ: ಕೊಡಗಿನ ಆದಿಕವಿ, ವರಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 150ನೇ ಜನ್ಮೋತ್ಸವವನ್ನು ಕಕ್ಕಬ್ಬೆಯಲ್ಲಿ ನ.1 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸುವ ಮೂಲಕ, ಕವಿಯ ಸಾಹಿತ್ಯ ಶ್ರೀಮಂತಿಕೆಯ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ‘ಹರದಾಸ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಸಮಿತಿ’ಯ ಪ್ರಮುಖರಾದ ಯು.ಎಂ.ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಡಿಕೇರಿಯ ತಿರಿಬೊಳ್ಚ ಕೊಡವ ಸಂಘ, ಬಲ್ಲಮಾವಟಿಯ ಜನಮನ ಕಲಾಸಂಘ, ಕೊಡವ ಮಕ್ಕಡ ಕೂಟ, ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆ ಮತ್ತು ಕಕ್ಕ…
ನಾಳೆ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು
October 28, 2018ಮಡಿಕೇರಿ: ನಕ್ಸಲ್ ಮುಖಂಡ ರೂಪೇಶ್ನನ್ನು ಕೇರಳಾ ಪೊಲೀಸರು ಅ.29ರಂದು ಮಡಿಕೇರಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಅ.28) ಕೇರಳ ಕಾರಾಗೃಹ ದಿಂದ ಮಡಿಕೇರಿಗೆ ರೂಪೇಶ್ನನ್ನು ಅಲ್ಲಿನ ಪೊಲೀಸರು ಕರೆ ತರಲಿದ್ದು, ಮಡಿಕೇರಿ ಜೈಲಿನಲ್ಲಿ ಇರಿಸಲಿದ್ದಾರೆ. ಮಡಿಕೇರಿ ನ್ಯಾಯಾಲಯಕ್ಕೆ ಅ.29ರಂದು ಹಾಜರುಪಡಿ ಸಿದ ನಂತರ ಮತ್ತೇ ಆತನನ್ನು ಕೇರಳಾಗೆ ಕರೆದೊಯ್ಯಲಿದ್ದಾರೆ. 2010ರಲ್ಲಿ ಭಾಗಮಂಡಲ ಸಮೀಪದ ತೇರಂಗಾಲ ಗ್ರಾಮಕ್ಕೆ ಭೇಟಿ ನೀಡಿದ್ದ ನಕ್ಸಲ್ ಮುಖಂಡ ವಿಕ್ರಂ ಗೌಡ ನೇತೃತದ ತಂಡದಲ್ಲಿ ರೂಪೇಶ್ ಇದ್ದನೆಂದು ಹೇಳಲಾಗಿದ್ದು, ಆ ಸಂಬಂಧ…
ಮಡಿಕೇರಿಯಲ್ಲಿ ಬ್ರಿಟೀಷರು ನಿರ್ಮಿಸಿದ್ದ ಕಟ್ಟಡ ನೆಲಸಮ; ಪ್ರಕೃತಿ ವಿಕೋಪದಲ್ಲಿ ಕುಸಿದಿದ್ದ ಕಟ್ಟಡವಿದು
October 27, 2018ಮಡಿಕೇರಿ: ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿ ಈ ಹಿಂದೆ ಖಾಸಗಿ ಬಸ್ ನಿಲಾಣವಾಗಿದ್ದ ನಗರಸಭೆಯ ಬಹುರೂಪಿ ಕಟ್ಟಡವನ್ನು ಕೆಡವಲಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಈ ಕಟ್ಟಡಕ್ಕೆ ತೀವ್ರ ಹಾನಿಯಾಗಿತ್ತು. 1936ರಲ್ಲಿ ಬ್ರಿಟಿಷರಿಂದ ನಿರ್ಮಿಸಲ್ಪಟ್ಟು, ಆ ಬಳಿಕ ಕೆಲ ವರ್ಷಗಳ ಕಾಲ ಮಡಿಕೇರಿ ಪುರಸಭೆಯ ಕಚೇರಿಯಾಗಿ, ತದನಂತರ ವಾಣಿಜ್ಯ ಮಳಿಗೆ ಮತ್ತು ಖಾಸಗಿ ಬಸ್ ನಿಲ್ದಾಣವಾಗಿಯೂ ಈ ಕಟ್ಟಡ ರೂಪಾಂತರವನ್ನೂ ಹೊಂದಿತ್ತು. ಮಾತ್ರವಲ್ಲದೆ ಕಳೆದ 15 ವರ್ಷಗಳ ಹಿಂದೆ ಮಡಿಕೇರಿ ದಸರಾ ಜನೋತ್ಸವದ ವೇದಿ ಕೆಯಾಗಿಯೂ ಮಾರ್ಪಡುವ…
ಸಂತ್ರಸ್ತರ ಮಕ್ಕಳಿಗಾಗಿ ‘ಅಕ್ಕ’ ಸಂಘಟನೆಯಿಂದ ನಿರ್ಮಾಣವಾಗಲಿರುವ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ
October 27, 2018ಮಡಿಕೇರಿ : ಅಮೇರಿಕಾದಲ್ಲಿನ ಕನ್ನಡ ಕೂಟಗಳ ಅಗರ ಸಂಸ್ಥೆಯಾದ ಅಕ್ಕ ವತಿಯಿಂದ ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಸಂತ್ರಸ್ತ ವಿದ್ಯಾರ್ಥಿಗಳಿಗಾಗಿ 40 ಲಕ್ಷ ರೂ. ವೆಚ್ಚದಲ್ಲಿ ಉದ್ದೇ ಶಿತ ಶಾಲಾ ಕಟ್ಟಡ ನಿರ್ಮಾಣ ಕಾಮ ಗಾರಿಗೆ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಶಂಕುಸ್ಥಾಪನೆ ನೆರವೇರಿಸಿದರು. ಮಡಿಕೇರಿ ಬಳಿಯ ಮಕ್ಕಂದೂರು ಗ್ರಾಮ ದಲ್ಲಿ ಅಕ್ಕ ವತಿಯಿಂದ ನಿರ್ಮಿಸಲಾಗುವ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೊಡಗಿನ ಸಂಕಷ್ಟಕ್ಕೆ ಮನಮಿಡಿದು ಜಗತ್ತಿನಾದ್ಯಂತಲ್ಲಿನ ಜನತೆ ವಿವಿಧ ರೀತಿಯಲ್ಲಿ ನೆರವಾಗಿದ್ದಾರೆ….
ಕಾಂಗ್ರೆಸ್ ಅಭ್ಯರ್ಥಿ ಪರ ಅರುಣ್ ಮಾಚಯ್ಯ ಪ್ರಚಾರ
October 27, 2018ವಿರಾಜಪೇಟೆ: ಕಳೆದ 15 ವರ್ಷಗಳಿಂದಲೂ ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯವರೇ ಶಾಸಕರಾಗಿದ್ದು. ತಾಲೂಕು ಕೇಂದ್ರವಾದ ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆಗಳು ಹೊಂಡ ಗುಂಡಿಗಳಾಗಿದ್ದರೂ ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದನ್ನು ಜನರೇ ಗಮನಿಸಬೇಕಾಗಿದೆ ಎಂದು ಮಾಜಿ ಎಂಎಲ್ಸಿ ಸಿ.ಎಸ್.ಅರುಣ್ ಮಾಚಯ್ಯ ಹೇಳಿದರು. ವಿರಾಜಪೇಟೆ ಪಪಂನ ಐದನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಡಿ.ಐ.ಎಜಾಸ್ ಅವರ ಪರ ಚುನಾವಣಾ ಪ್ರಚಾರದ ಸಂದರ್ಭ ಮಾತನಾಡಿದ ಅವರು, ವಿರಾಜಪೇಟೆ ಪಪಂಗೆ 2005-06ನೇ ಸಾಲಿನಲ್ಲಿ ರೂ.11 ಕೋಟಿ ಬಿಡುಗಡೆಯಾಗಿತ್ತು. ಈಗ ಪ್ರತಿ ವರ್ಷ ಹೆಚ್ಚು ಅನುದಾನ…
22 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
October 27, 2018ಮಡಿಕೇರಿ: ಬೀಟೆ ಮರ ಕಳವು ಪ್ರಕರಣವೊಂದರಲ್ಲಿ ಜೈಲು ಸೇರಿ ಜಾಮೀ ನಿನ ಮೇಲೆ ಹೊರ ಬಂದು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 22 ವರ್ಷ ಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1996ರಲ್ಲಿ ಮೂರ್ನಾಡುವಿನ ಹೊದ್ದೂರು ಸಮೀಪ ಬೀಟೆ ಮರ ಕಳವು ಪ್ರಕರಣ ನಡೆದಿತ್ತು. ಅಕ್ರಮ ಮರ ಸಾಗಾಟ ಪ್ರಕರಣದಲ್ಲಿ ಮೂರ್ನಾಡು ನಿವಾಸಿ ಇ.ಪಿ.ಇಬ್ರಾಹಿಂ ಅಲಿಯಾಸ್ ಉಂಬಾಯಿ ಎಂಬಾತ ಪ್ರಮುಖ ಆರೋಪಿಯಾಗಿ ಬಂಧಿಸಲ್ಪಟ್ಟಿದ್ದ. ಆ ಬಳಿಕ ನ್ಯಾಯಾಲಯದಿಂದ ಜಾಮೀನಿನ ಮೇಲೆ ಹೊರ…
ಟೆಂಪೋ ಚಾಲಕ ಆತ್ಮಹತ್ಯೆ
October 27, 2018ಮಡಿಕೇರಿ: ವಿವಾಹಿತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತೈ ಮಾಡಿಕೊಂಡ ಘಟನೆ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ನಗರದಲ್ಲಿ ಟೆಂಪೋ ಚಾಲಕನ ವೃತ್ತಿಯಲ್ಲಿದ್ದ ಮಹೇಶ(25) ಆತ್ಮಹತೈಗೆ ಶರಣಾದ ವ್ಯಕ್ತಿ. ಚಾಮುಂಡೇಶ್ವರಿನಗರದ ತನ್ನ ಮನೆಯಲ್ಲೇ ಶುಕ್ರವಾರ ಬೆಳಗ್ಗೆ 5 ಗಂಟೆ ಸಮಯದಲ್ಲಿ ಮಹೇಶ ಇಹಲೋಕ ತ್ಯಜಿಸಿದ್ದು, ಘಟನೆ ಕುರಿತು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಹೇಶ ತಾಯಿ, ಪತ್ನಿ ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾನೆ. ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆÉಸಿ, ಬಳಿಕ ಮೃತದೇಹವನ್ನು…
ನಾಳೆ ಜಿಲ್ಲಾಮಟ್ಟದ ಕ್ರೀಡಾಕೂಟ
October 27, 2018ಮಡಿಕೇರಿ: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿ ಗಳಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವು ಅಕ್ಟೋಬರ್ 28 ರಂದು ಬೆಳಗ್ಗೆ 9.30ಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂ ಗಣದಲ್ಲಿ ನಡೆಯಲಿದೆ. 16 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 100 ಮೀ. ಓಟ, 14 ವರ್ಷ ವಯಸ್ಸಿನ ಒಳಗಿನ ಬಾಲಕ ಮತ್ತು ಬಾಲಕಿಯರಿಗೆ 400 ಮೀ. ಓಟ, 16 ವರ್ಷಕ್ಕಿಂತ…
ಲಯನ್ಸ್ ಸಂಸ್ಥೆಗೆ ಉತ್ತಮ ಸೇವಾ ಸಂಸ್ಥೆ ಅವಾರ್ಡ್
October 27, 2018ಕೊಳ್ಳೇಗಾಲ: ಕೊಳ್ಳೇಗಾಲ ಲಯನ್ಸ್ ಸಂಸ್ಥೆ ಉತ್ತಮ ರೀತಿಯಲ್ಲಿ ಸೇವೆ ನಿರ್ವಹಿಸಿದ್ದಕ್ಕಾಗಿ ಉತ್ತಮ ಸೇವಾ ಸಂಸ್ಥೆ ಎಂದು ಪರಿಗಣಿಸಿ ಲಯನ್ಸ್ 317ಎ ಜಿಲ್ಲೆ ಗುರು ತಿಸಿ ಅವಾರ್ಡ್ ನೀಡಿ ಗೌರವಿಸಿದೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಅವಾರ್ಡ್ ಲಭಿಸಿದೆ ಎಂದು ಕಾರ್ಯದರ್ಶಿ ವೆಂಕಟೇಶ್ ತಿಳಿಸಿದ್ದಾರೆ. ಲಯನ್ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಒಗ್ಗೂಡಿ ಅಕ್ಟೋಬರ್ ತಿಂಗ ಳಲ್ಲಿ ಹಲವು ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಪ್ರಶಂಸೆಗೆ ಭಾಜನರಾಗಿದ್ದರು. ಅ.1ರಂದು ರಕ್ತದಾನ ಶಿಬಿರ ನಡೆಸಿ 53 ಬಾಟಲ್ಗೂ ಅಧಿಕ ರಕ್ತ ಸಂಗ್ರಹಿಸಿ ಗಮನ…