ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಅವರು ಪರಿಷ್ಕøತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.17 ರಂದು ನಾಮಪತ್ರ ಪರಿಶೀಲಿಸುವ ಕಾರ್ಯ ನಡೆಯಲಿದೆ. ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಅ.28 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ…
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
October 5, 2018ಮಡಿಕೇರಿ: ಕಾಫಿ ಮಂಡಳಿಯಿಂದ ಕಾಫಿ ತೋಟದ ಕ್ಯೂರಿಂಗ್ ಕಾರ್ಮಿಕರ ಮಕ್ಕಳಿಗೆ 2017-18ರಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾಗಿ ಪ್ರಸಕ್ತ 2018-19ನೇ ಸಾಲಿ ನಲ್ಲಿ ಪ್ರಥಮ ಪಿಯುಸಿ, ಪಾಲಿಟಿಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ. 2017-18ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಎಂಬಿಬಿಎಸ್, ಬಿಇ, ಫಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ…
ಬಿಜೆಪಿ ಕಾರ್ಯಕರ್ತನ ಹತ್ಯೆ ಆರೋಪಿ ಬಂಧನ
October 3, 2018ಮಡಿಕೇರಿ: ಮರಗೋಡು ನಿವಾಸಿ, ಸ್ಥಳೀಯ ಬಿಜೆಪಿ ಮುಖಂಡ ಕಾನಡ್ಕ ತಿಲಕ್ರಾಜ್ ಅವರನ್ನು ಗುಂಡು ಹಾರಿಸಿ ಹತ್ಯೆಗೈದ ಆರೋಪದ ಅಡಿಯಲ್ಲಿ ಮರಗೋಡು ಗ್ರಾಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ರಿವಾಲ್ವರ್, ಜೀವಂತ ಗುಂಡುಗಳು, ಡಸ್ಟರ್ ಕಾರು ಮತ್ತು ಬೈಕ್ನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಪ್ರಕರಣದ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಅವರು, 2 ಪ್ರತ್ಯೇಕ ತಂಡಗಳನ್ನು ರಚಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಜಿಲ್ಲಾ ಅಪರಾಧ…
ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
October 3, 2018ಮಡಿಕೇರಿ: ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕ್ರಾಜ್ ಹತ್ಯೆ ಖಂಡಿಸಿ, ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ನೇತೃತ್ವ ದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಮಾಡಿದ ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ, ಶಾಸಕ ಕೆ.ಜಿ.ಬೋಪಯ್ಯ…
ಪರಿಸರದೊಂದಿಗೆ ಆತ್ಮ ವಿಶ್ವಾಸದಿಂದ ಬದುಕು ಸಾಗಲಿ…..
October 3, 2018ಗೋಣಿಕೊಪ್ಪಲು: ಕಳೆದುಕೊಂಡಿ ರುವುದನ್ನು ನೆನೆಸಿಕೊಂಡು ಭವಿಷ್ಯ ಕಳೆದು ಕೊಳ್ಳುವುದಕಿಂತ ಆತ್ಮವಿಶ್ವಾಸದಿಂದ ಕೊಡ ಗಿನ ಪರಿಸರ ಉಳಿಸಿಕೊಂಡು ಬದುಕು ಸಾಗಿಸುವಂತಾಗಬೇಕು ಎಂಬ ಸಂದೇಶ ವನ್ನು ಮ್ಯಾಜಿಕ್ ಮಾಂತ್ರಿಕ ಮೈಸೂರಿನ ರಾಜ್ಭಟ್ ಮ್ಯಾಜಿಕ್ ಮೂಲಕ ಅನಾ ವರಣಗೊಳಿಸಿ ಸಂತ್ರಸ್ತ ಮಕ್ಕಳಿಗೆ ಆತ್ಮ ವಿಶ್ವಾಸ ತುಂಬಿದರು. ಭೂಕುಸಿತಕ್ಕೆ ಒಳಗಾಗಿ ಬದುಕು ಕಳೆದು ಕೊಂಡು ಪೊನ್ನಂಪೇಟೆ ಸಾಯಿಶಂಕರ್ ವಿದ್ಯಾಸಂಸ್ಥೆಯಲ್ಲಿ ಉಚಿತ ಶಿಕ್ಷಣ ಪಡೆ ಯುತ್ತಿರುವ ಮಕ್ಕಳಿಗೆ ಆತ್ಮ ವಿಶ್ವಾಸ ಮೂಡಿ ಸಲು ಕಕೂನ್ ರೆಸ್ಟೊರೆಂಟ್ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ ಮ್ಯಾಜಿಕ್ ಮೂಲಕ ಅತ್ಮವಿಶ್ವಾಸ…
ವಿವಿಧೋದ್ದೇಶ ಸಹಕಾರ ಸಂಘಕ್ಕೆ 9 ಲಕ್ಷ ಲಾಭ
October 3, 2018ಸೋಮವಾರಪೇಟೆ: ವಿವಿದೋದ್ದೇಶ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಸಹಕಾರದಿಂದ ರೂ.9 ಲಕ್ಷ ಲಾಭಗಳಿಸಲು ಸಹಕಾರಿಯಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಪಿ.ಶಿವಕುಮಾರ್ ಹೇಳಿದರು. ಇಲ್ಲಿನ ಮಹಿಳಾ ಸಮಾಜದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ ದರು. ಉತ್ತಮ ವ್ಯವಹಾರ ನಡೆಸುವ ಮೂಲಕ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಂಘ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗುರುತಿಸಿದ್ದು, 2017-18ನೇ ಸಾಲಿನ ಆಡಿಟ್ ವರದಿಯಲ್ಲಿ ‘ಎ’ ದರ್ಜೆಯನ್ನು ಪಡೆದಿದೆ. ಸದಸ್ಯರಿಗೆ ಇನ್ನೂ ಹೆಚ್ಚಿನ ಸವಲತ್ತು ನೀಡುವ…
ಅಕ್ರಮ ಮರಳು ದಂಧೆ; 3 ವಾಹನ ವಶ
October 3, 2018ವಿರಾಜಪೇಟೆ: ಯಾವುದೇ ಪರವಾನಗಿ ಇಲ್ಲದೆ ಸರಕಾರದ ನಿಯಮ ವನ್ನು ಗಾಳಿಗೆ ತೂರಿ ಮರಳು ದಂಧೆಯಲ್ಲಿ ತೊಡಗಿದ್ದ ಮೂರು ಪಿಕಪ್ ಜೀಪ್ಗಳನ್ನು ಮರಳು ಸಮೇತ ವಿರಾಜಪೇಟೆ ತಹಶಿಲ್ದಾರ್ ಆರ್.ಗೋವಿಂದ ರಾಜು ಮತ್ತು ಇತರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ರಿಶ್ಚನ್ ಕಾಲೋನಿ ಬಳಿಯಿರುವ ತೋಡುವಿನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ತಹಶಿಲ್ದಾರ್ ಮತ್ತು ಪೊಲೀಸರು ಮರಳು ತುಂಬಿದ ಕೆ.ಎ-12, ಎ.9069 ಹಾಗೂ ಕೆ.ಎ-12, ಎ.4006 ಮತ್ತು…
ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯನಿಂದ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ
October 2, 2018ಮಡಿಕೇರಿ: ರಾಜಕೀಯ ದ್ವೇಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ನೋರ್ವ ಪಿಸ್ತೂಲ್ನಿಂದ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮರಗೋಡುವಿನಲ್ಲಿ ನಡೆದಿದೆ. ಮರಗೋಡು ನಿವಾಸಿ, ಸ್ಥಳೀಯ ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯ ದರ್ಶಿ ಕಾನಡ್ಕ ತಿಲಕರಾಜ್ (40) ಗುಂಡಿಗೆ ಬಲಿಯಾದ ವ್ಯಕ್ತಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ. ಸೋಮವಾರ ಸಂಜೆ 6.30 ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ ನಂದಾ ನಾಣಯ್ಯ ಮತ್ತು ಚಿದಂಬರ…
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಕರೆ
October 2, 2018ಗೋಣಿಕೊಪ್ಪಲು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಬಹುಮತದಿಂದ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಕ್ಷೇತ್ರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರಮೋದಿ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಸಾಧನೆಯನ್ನು ಪ್ರತಿ ಮನೆಗಳಿಗೆ ಮುಟ್ಟಿಸುವ ಕೆಲಸ ಕಾರ್ಯಕರ್ತರುಗಳಿಂದ ಆಗಬೇಕಿದೆ. ಮೋದಿ ಅವರ ಯೋಜನೆಗಳು ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕಾದರೆ ಬಿಜೆಪಿ ಪರ ಮತಗಳ ರೂಪದಲ್ಲಿ ಪರಿವರ್ತನೆಗೊಳ್ಳುವಂತೆ ಕೇಂದ್ರ ಸರ್ಕಾರದ…
ಕಣಿವೆ ತೂಗು ಸೇತುವೆ ದುರಸ್ತಿಗೆ ಕ್ರಮ ಶಾಸಕ ಅಪ್ಪಚ್ಚು ರಂಜನ್ ಭರವಸೆ
October 2, 2018ಕುಶಾಲನಗರ: ಸೋಮವಾರಪೇಟೆ ತಾಲೂಕಿನ ಕಣಿವೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಬಳಿ ನಿರ್ಮಿಸಿರುವ ತೂಗುಸೇತುವೆ ನದಿ ಪ್ರವಾಹಕ್ಕೆ ಸಿಲುಕಿ ಸಂಪೂರ್ಣ ಹಾನಿಯಾಗಿದ್ದು, ಸದ್ಯದಲ್ಲಿಯೇ ಸೇತುವೆ ದುರಸ್ತಿ ಪಡಿಸಿ ಜನರ ಅನುಕೂಲಕ್ಕೆ ಒದಗಿಸ ಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಂಜನ್, ಕಾವೇರಿ ಹಾಗೂ ಹಾರಂಗಿ ನದಿ ಪ್ರವಾಹದಿಂದ ಸಂಪೂರ್ಣ ಹಾನಿಯಾಗಿರುವ ಕಣಿವೆ ತೂಗು ಸೇತುವೆಯನ್ನು ಪರಿಶೀಲಿಸಿದರು. ಕಳೆದ ಎರಡು ತಿಂಗಳಿಂದ ಸೇತುವೆ ದುರಸ್ತಿಯಾಗದೆ ಈ ಭಾಗದ…









