ಮಡಿಕೇರಿ: ಅ.17 ರಂದು ಜರುಗುವ ತುಲಾ ಸಂಕ್ರಮಣ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅ.17 ರಂದು ಸಂಜೆ 6.43 ಗಂಟೆಗೆ ತೀರ್ಥೋದ್ಭವ ಪುಣ್ಯಕಾಲ ಜರುಗುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿ…
ಲಾರಿ-ಪಿಕಪ್ ವಾಹನ ಡಿಕ್ಕಿ
October 2, 2018ಸೋಮವಾರಪೇಟೆ: ಮರ ತುಂಬಿದ ಲಾರಿ ಮತ್ತು ಪಿಕಪ್ ವಾಹನದ ನಡುವೆ ಮಧ್ಯರಾತ್ರಿ ಮುಖಾಮುಖಿ ಸಂಭವಿಸಿದ್ದು, ಅದೃಷ್ಟವಶಾತ್ ಪಿಕಪ್ ವಾಹನದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿಯಿಂದ ಹಾಸನದ ಕಡೆಗೆ ಟಿಂಬರ್ ಲಾರಿ ಹೋಗುತ್ತಿದ್ದು, ಶನಿವಾರಸಂತೆಯಿಂದ ದೊಡ್ಡಮಳ್ತೆ ಗ್ರಾಮಕ್ಕೆ ಬರುತ್ತಿದ್ದ ಪಿಕಪ್ ವಾಹನದ ನಡುವೆ ಕಾಗಡಿಕಟ್ಟೆ ಇಳಿಜಾರು ರಸ್ತೆಯಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪಿಕಪ್ ವಾಹನದ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮಣಿ ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ
September 29, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಠಿಯಿಂದಾಗಿ ಉಂಟಾದ ನೆರೆಹಾವಳಿ ಮತ್ತು ಭೂ ಕುಸಿತಕ್ಕೆ ಸಿಲುಕಿ ಸಂತ್ರಸ್ತರಾದ ಗ್ರಾಮಗಳು ಮತ್ತು ಅಲ್ಲಿ ನೆಲೆಸಿರುವ ಗ್ರಾಮಸ್ಥರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಕೊಡಗು ಪ್ರಾಕೃತಿ ವಿಕೋಪ ಮತ್ತು ನೆರೆ ಸಂತ್ರಸ್ತರ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಮಡಿಕೇರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದವು. ನಗರದ ಗಾಂಧಿ ಮಂಟಪದಿಂದ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಪ್ರತಿಭಟನಾ ಜಾಥಾ ತೆರಳಿದ ಸಂತ್ರಸ್ತರು ಮತ್ತು ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದರು….
ಆಟೋ ಚಾಲಕರು ಉತ್ತಮ ಸಮಾಜ ಸೇವಕರಾಗಬೇಕು
September 29, 2018ನ್ಯಾಯಾಧೀಶ ಶಿವಾನಂದ ಲಕ್ಷ್ಮಣ್ ಅಂಚಿ ವಿರಾಜಪೇಟೆ: ಆಟೋ ಚಾಲಕರ ಕೆಲಸ ಪವಿತ್ರವಾದ ಸೇವೆ ಎಂದು ತಿಳಿದು ಕೊಂಡು ಸಾರ್ವಜನಿಕರೊಂದಿಗೆ ವಿಶ್ವಾಸದಿಂದ ತಮ್ಮ ಕರ್ತವ್ಯ ಮಾಡುವುದರೊಂದಿಗೆ ಉತ್ತಮ ಸಮಾಜ ಸೇವಕರಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ ಅಂಚಿ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ ಹಾಗೂ ನಗರ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಆಟೋ ಚಾಲಕರಿಗಾಗಿ ಸ್ಥಳೀಯ ಪುರಭವನ ದಲ್ಲಿ ಆಯೋಜಿಸಲಾಗಿದ್ದ ”ಪೊಲೀಸ್ ದೂರು ಪ್ರಾಧಿಕಾರ- ಸಂತ್ರಸ್ತರ ಪರಿಹಾರ ಯೋಜನೆಯ ಬಗ್ಗೆ…
ಮನೆ ಹಾನಿ ವಿವರದ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ
September 29, 2018ಮಡಿಕೇರಿ: ಜಿಲ್ಲೆಯಲ್ಲಿ ಈ ವರ್ಷ ಬಿದ್ದ ಭಾರೀ ಮಳೆ ಯಿಂದ ಅತಿವೃಷ್ಟಿ ಹಾಗೂ ಭೂಕುಸಿತ ಉಂಟಾಗಿದ್ದು, ಆದ ಕಾರಣ ತೀವ್ರ ಪ್ರಮಾಣದಲ್ಲಿ ಮನೆಗಳು ಹಾನಿಯಾಗಿರುತ್ತದೆ. ಅದರಂತೆ ಹಾನಿಯಾಗಿರುವ ಪ್ರದೇಶಗಳ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಜಂಟಿ ತಪಾಸಣೆ ನಡೆಸಿ ವಾಸಕ್ಕೆ ಯೋಗ್ಯವಿಲ್ಲದ ಹಾನಿಯಾದ ಮನೆಗಳನ್ನು ಗುರುತಿಸಿದ್ದು, ಈ ಮನೆ ಹಾನಿ ವಿವರದ ಪಟ್ಟಿಯನ್ನು ಸೆ.29 ರಂದು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ, ನಗರಸಭೆ, ಮಡಿಕೇರಿ ಹಾಗೂ ಪಟ್ಟಣ ಪಂಚಾಯಿತಿ, ಕುಶಾಲನಗರ…
ಅ.1, ವಿಶ್ವ ಹಿರಿಯ ನಾಗರಿಕರ ದಿನಾಚರಣೆ
September 29, 2018ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ ವತಿಯಿಂದ ಶಿಶು ಕಲ್ಯಾಣ ಸಂಸ್ಥೆ(ಬಾಲ ಭವನ) ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ ಇಲ್ಲಿ ಅಕ್ಟೋಬರ್ 1 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2018” ನಡೆಯಲಿದೆ. ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕ ಬಂಧುಗಳು ಹಾಗೂ ಹಿರಿಯ ನಾಗರಿಕರ ಸಂಘ ಸಂಸ್ಥೆಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಜೋಡುಪಾಲದ ಬಳಿ ಅಸ್ಥಿಪಂಜರ ಪತ್ತೆ
September 28, 2018ಭೂಕುಸಿತ ವೇಳೆ ನಾಪತ್ತೆಯಾಗಿರುವ ಬಾಲಕಿ ಮಂಜುಳಾ ಅವರದ್ದು ಎಂಬ ಶಂಕೆ ಮಡಿಕೇರಿ: ಭೂ ಕುಸಿತ ಮತ್ತು ಜಲ ಪ್ರಳಯಕ್ಕೆ ತುತ್ತಾಗಿ ಧ್ವಂಸಗೊಂಡ ಜೋಡುಪಾಲದ ಬಳಿ ಮೃತದೇಹವೊಂ ದರ ಅಸ್ತಿಪಂಜರ ಪತ್ತೆಯಾಗಿದೆ. ಆಗಸ್ಟ್ 16ರಂದು ಭೂ ಕುಸಿತ ಮತ್ತು ನದಿ ಪ್ರವಾ ಹಕ್ಕೆ ಸಿಲುಕಿ ಕಣ್ಮರೆಯಾಗಿದ್ದ ಮಂಜುಳಾ (15) ಎಂಬಾಕೆಯ ಮೃತದೇಹದ ಅಸ್ತಿಪಂಜರ ಇಬರಬಹುದೆಂಬ ಬಲ ವಾದ ಶಂಕೆ ವ್ಯಕ್ತವಾಗಿದ್ದು, ವೈದ್ಯಕೀಯ ಮೂಲಗಳು ಮತ್ತು ಪೊಲೀಸರು ಇದನ್ನು ದೃಢಪಡಿಸಿಲ್ಲ. ಮೃತದೇಹದ ಅಸ್ತಿಪಂಜರ ಮಾತ್ರವೇ ಪತ್ತೆಯಾಗಿರುವುದರಿಂದ ಮಂಜುಳಾ ಅವರ ಪೋಷಕರು…
ಇಂದಿರಾನಗರ ಭೂ ಕುಸಿತ ಪ್ರದೇಶಕ್ಕೆ ಡಿಸಿ ಭೇಟಿ
September 28, 2018ಮಡಿಕೇರಿ: ಅತಿವೃಷ್ಟಿಯಿಂದ ಭೂಕುಸಿತದಿಂದಾಗಿ ಮನೆಗಳು ಹಾನಿ ಗೀಡಾದ ಮಡಿಕೇರಿಯ ಇಂದಿರಾನಗರಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಭೇಟಿ ನೀಡಿ ಮನೆಮಠಗಳನ್ನು ಕಳೆದುಕೊಂಡ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದರು. ಮನೆಗಳನ್ನು ಕಳೆದುಕೊಂಡು ನಿರಾ ಶ್ರಿತರಾದವರಿಗೆ ಮತ್ತು ಮನೆಗಳು ಹಾನಿ ಗೀಡಾದವರಿಗೆ ಪರಿಹಾರದ ಹಣ ತಲು ಪಿರುವ ಬಗ್ಗೆ ಸಂತ್ರಸ್ಥರಿಂದ ಮಾಹಿತಿ ಯನ್ನು ಜಿಲ್ಲಾಧಿಕಾರಿಗಳು ಪಡೆದು ಕೊಂಡರು. ಇಂದಿರಾನಗರದಲ್ಲಿ ಹಾನಿ ಗೀಡಾಗಿರುವ ರಸ್ತೆಗಳ ದುರಸ್ಥಿ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿ ಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದರು. ಮತ್ತು ಅಪಾಯ ಕಾರಿ ಸ್ಥಿತಿಯಲ್ಲಿರುವ…
ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯ
September 28, 2018ಕುಶಾಲನಗರ: ಉತ್ತಮ ಶಿಕ್ಷಣ ನೀಡುವ ಮೂಲಕ ಯುವ ಜನಾಂಗವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸಾಧ್ಯ ಎಂದು ವಿರಾಜಪೇಟೆಯ ಅರಮೇರಿ ಕಳಂ ಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾ ರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ರಾಮ್ ಫೌಂಡೇಶನ್ ಪ್ರಯೋಜಕ ತ್ವದಲ್ಲಿ ಶ್ರೀ ರಾಮ್ ಟ್ರಾನ್ಸ್ಪೋರ್ಟ್ ಫೈನಾನ್ಸ್ ಕಂಪನಿ ಆಶ್ರಯದಲ್ಲಿ ಸ್ಥಳೀಯ ರೈತ ಸಹ ಕಾರ ಭವನದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಆಶೀರ್ವಚನ ನೀಡಿದ ಅವರು, ವಿದ್ಯಾರ್ಥಿಗಳಿಗೆ ಸಮಾಜ ಮುಖಿ ಶಿಕ್ಷಣ…
ಗಾಂಧಿನಗರದ ಗಣಪತಿ ಸೇವಾ ಸಮಿತಿಯಿಂದ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ
September 28, 2018ವಿರಾಜಪೇಟೆ: ವಿರಾಜಪೇಟೆ ಗಾಂಧಿನಗರದ ಗಣಪತಿ ಸೇವಾ ಸಮಿತಿ ಗೌರಿ-ಗಣೇಶೋತ್ಸವದ ಅದ್ದೂರಿ ಕಾರ್ಯ ಕ್ರಮಗಳನ್ನು ಬದಿಗೊತ್ತಿ ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಆಸ್ತಿ ಮನೆ ಕಳೆದು ಕೊಂಡು ಸಂಕಷ್ಟದಲ್ಲಿರುವ ಮೂರು ಕುಟುಂ ಬಗಳ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸುವುದು ಶ್ಲಾಘನಿಯ ಎಂದು ಜಿಲ್ಲಾ ವಾಣಿಜೋ ದ್ಯಮಿಗಳ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್ ಹೇಳಿದರು. ಪಟ್ಟಣದ ಗಾಂಧಿನಗರದ ಗಣಪತಿ ಸೇವಾ ಸಮಿತಿಯಿಂದ ಗೌರಿ ಗಣೇಶ ವಿಸರ್ಜ ನೋತ್ಸವದ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ‘ಸಂತ್ರಸ್ತರಿಗೆ ಸಹಾಯ ಹಸ್ತ’ದ ಸಮಾ ರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವ ಹಿಸಿದ್ದ…










