ಸಂತ್ರಸ್ತರಿಗೆ ಅಗತ್ಯ ಸಾಮಗ್ರಿ ವಿತರಣೆ ಗೋಣಿಕೊಪ್ಪಲು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ವರಾಜ್ ಇಂಡಿಯಾ ಪಕ್ಷದ ತಂಡವು ಕೊಡಗು ಜಿಲ್ಲೆಯ ರೈತ ಸಂಘದ ಅಧ್ಯಕ್ಷ ಕಾಡ್ಯ ಮಾಡ ಮನು ಸೋಮಯ್ಯ ಮುಂದಾಳತ್ವ ದಲ್ಲಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ತೊಂದರೆ ಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿಯ ನೈಜ್ಯ ಪರಿಸ್ಥಿತಿಯನ್ನು ವೀಕ್ಷಿಸಿತು. ಈ ತಂಡದಲ್ಲಿ ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಮುಖಂಡರು ಆದ ಹಿರಿಯ ಸಾಹಿತಿ ದೇವನೂರು ಮಹದೇವ, ಸ್ವರಾಜ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯ ದರ್ಶಿ ದರ್ಶನ್…
ಕೊಡಗಿನ ಭೂ ಕುಸಿತಕ್ಕೆ ಹಾರಂಗಿ ಡ್ಯಾಂ ಕಾರಣ
August 24, 2018ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅಭಿಮತ ಹಾರಂಗಿ ಜಲಾಶಯ ನೆಲಸಮಕ್ಕೆ ಆಗ್ರಹ 30 ಸಾವಿರ ಕೋಟಿ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ಕೊಡಗಿನ ಉತ್ತರ ಮತ್ತು ವಾಯುವ್ಯ ಭಾಗದಲ್ಲಿ ಸಂಭವಿಸಿ ರುವ ಭೂ ಕುಸಿತಕ್ಕೆ ಹಾರಂಗಿ ಜಲಾ ಶಯವೇ ಮೂಲ ಕಾರಣ ಎಂದು ಆರೋ ಪಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ, ನಿರಾಶ್ರಿತರಿಗೆ ಶಾಶ್ವತ ಪುನರ್ವಸತಿ ಮತ್ತು ಕೃಷಿ ಭೂಮಿಯನ್ನು ಕಲ್ಪಿಸಲು 30 ಸಾವಿರ ಕೋಟಿ ರೂ. ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
ಡ್ರೋಣ್ ಕ್ಯಾಮರಾ ಕಾರ್ಯ ನಿರ್ವಹಣೆ: ಜಿಲ್ಲಾಧಿಕಾರಿಗಳಿಂದ ವೈಮಾನಿಕ ಸಮೀಕ್ಷೆ
August 24, 2018ಮಡಿಕೇರಿ: ಮಹಾಮಳೆ ಮತ್ತು ಭೂ ಕುಸಿತದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ವೈಮಾನಿಕ ಸಮೀಕ್ಷೆ ನಡೆಸಿದರು. ಹಾರಂಗಿ, ಮಕ್ಕಂದೂರು, ಜೋಡು ಪಾಲ, ಮುಕ್ಕೋಡ್ಲು, ಕಾಲೂರು ಹಾಗೂ ಮಡಿಕೇರಿ ಭಾಗದಲ್ಲಿ ಸಮೀಕ್ಷೆ ನಡೆಸಿದ ಜಿಲ್ಲಾಡಳಿತ, ಪ್ರಕೃತಿ ವಿಕೋಪದ ತೀವ್ರತೆಯ ಬಗ್ಗೆ ಮಾಹಿತಿ ಪಡೆದರು. ಶುಕ್ರವಾರ ದಿಂದ ಬೆಳೆ ಹಾನಿ ಸಮೀಕ್ಷೆಯನ್ನು ನೂತನ ತಂತ್ರಜ್ಞಾನದ ಮೂಲಕ ನಡೆಸಿ ನಂತರ ಪರಿಹಾರವನ್ನು ವಿತರಣೆ ಮಾಡಲಾಗುವು ದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಮಡಿಕೇರಿ-ಮಂಗಳೂರು ರಸ್ತೆ ಗುಡ್ಡ ಕುಸಿತದಿಂದ ಸಂಪರ್ಕವನ್ನು ಕಳೆದು…
ಹೆಬ್ಬಟ್ಟಗೇರಿಯಲ್ಲಿ ಮತ್ತೊಂದು ಮೃತದೇಹ ಪತ್ತೆ
August 24, 2018ಮಡಿಕೇರಿ: ಭಾರೀ ಮಳೆಗೆ ಮನೆಯ ಮೇಲೆ ಬೆಟ್ಟ ಕುಸಿದು ಮೃತಪಟ್ಟಿದ್ದ ವೃದ್ದ ಮಹಿಳೆಯೋರ್ವರ ಮೃತದೇಹವನ್ನು ಎನ್ಡಿಆರ್ಎಫ್ ಸಿಬ್ಬಂದಿ ಹೊರತೆಗೆ ಯುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 17ರ ಬೆಳಿಗ್ಗೆ 7.30 ಗಂಟೆಗೆ ಹೆಬ್ಬೆಟ್ಟಗೇರಿಯ ಉಮ್ಮವ್ವ (80) ಎಂಬುವರ ಮನೆ ಮೇಲೆ ಭೂಮಿ ಕುಸಿದಿತ್ತು. ಬರೆಯ ಮಣ್ಣು ಸಂಪೂರ್ಣ ಮನೆಯನ್ನೇ ಆಪೋಷನ ಪಡೆದಿತ್ತಲ್ಲದೆ, ಮನೆಯೊಳ ಗಿದ್ದವರು ಏನಾದರು ಎಂಬ ಮಾಹಿತಿಯೇ ತಿಳಿಯದಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಆಗಸ್ಟ್ 17ರಿಂದ ಉಮ್ಮವ್ವ ನಾಪತ್ತೆಯಾಗಿದ್ದಾರೆ ಎಂದು ಘೋಷಿಸ ಲಾಗಿತ್ತು. ಗುರುವಾರ ಬೆಳಿಗ್ಗೆ ಹೆಬ್ಬೆಟ್ಟಗೇರಿಯ ಕಡೆಗೆ…
ಕ್ಷಣಕ್ಷಣಕ್ಕೂ ಜೀವ ಭಯ…. ಬದುಕುಳಿಯುವ ನಂಬಿಕೆಯೂ ಇರಲಿಲ್ಲ… ಮಗು ಉಳಿಸಿಕೊಳ್ಳಲಾಗಿಲ್ಲ…
August 23, 2018ನೂರು ನಿರಾಶ್ರಿತರೊಂದಿಗೆ ಪಾರಾಗಿ ಬಂದ ಜಿಪಂ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪರ ಕಹಿ ಅನುಭವ ಮಡಿಕೇರಿ: ಕೊಡಗಿನಲ್ಲಿ ಜಲ ಪ್ರಳಯವನ್ನು ಸೃಷ್ಟಿಸಿದ ಮಹಾಮಳೆ ಯಿಂದ ಮುಕ್ಕೋಡ್ಲು, ಮಕ್ಕಂದೂರು, ಕಾಲೂರು ಗ್ರಾಮಗಳು ಅಪಾರ ಹಾನಿಗೆ ಒಳಗಾ ಗಿದ್ದು, ಈ ಗ್ರಾಮಗಳಲ್ಲಿ ಕಳೆದ ಮೂರು ದಿನಗಳಿಂದ ಸಿಲುಕಿಕೊಂಡಿದ್ದ ಗ್ರಾಮಸ್ಥರು ಜಲ ದಿಗ್ಬಂಧನದಿಂದ ಬಿಡಿಸಿಕೊಂಡು ಬಂದ ಸಾಹಸವೇ ರೋಚಕ. ಜೀವ ಉಳಿಸಿಕೊಳ್ಳುವುದಕ್ಕಾಗಿ ಗ್ರಾಮದ ಬೆಟ್ಟ, ಗುಡ್ಡಗಳಲ್ಲಿ ಪರಿಚಯದವರ ಸುರಕ್ಷಿತ ಮನೆಗಳಲ್ಲಿ ಆಶ್ರಯ ಪಡೆದರೂ ಕ್ಷಣ ಕ್ಷಣಕ್ಕೂ ಜೀವ ಭಯ ಕಾಡುತ್ತಿತ್ತು…. ಬದುಕಿ…
ಮೈಸೂರು ನಾಗರಿಕರ ವೇದಿಕೆಯಿಂದ ಕೊಡಗಿನ ನೆರೆ ಸಂತ್ರಸ್ತರ ನೈಜ ಸ್ಥಿತಿ ಅವಲೋಕನ
August 23, 2018ಮೈಸೂರು: ಪ್ರಕೃತಿ ವಿಕೋಪ ದಿಂದ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿ ರುವ `ಮೈಸೂರು ನಾಗರಿಕ ವೇದಿಕೆ’ ತಂಡ ಇಂದು ಕೊಡಗಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೈಜ ಪರಿಸ್ಥಿತಿಯ ಅವಲೋಕನ ನಡೆಸಿತು. ಸುತ್ತೂರು ಶ್ರೀಗಳಾದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, `ಮೈಸೂರು ಮಿತ್ರ’ ಪ್ರಧಾನ ಸಂಪಾದಕ ಕೆ.ಬಿ.ಗಣಪತಿ, ವೇದಿಕೆಯ ಕಾರ್ಯದರ್ಶಿ ಮಂಜುನಾಥ್, ಜೆಎಸ್ಎಸ್ ಸಂಸ್ಥೆಗಳ ಕಾರ್ಯ ನಿರ್ವಾ ಹಕ ನಿರ್ದೇಶಕ ಸಿ.ಜೆ.ಬೆಟಸೂರ ಮಠ್, ಉದ್ಯಮಿಗಳಾದ ಗಿರಿ, ಜಗದೀಶ್ ಬಾಬು, ನರೇಂದ್ರ ಹಾಗೂ ಸುಮಾರು…
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ
August 23, 2018ಕುಶಾಲನಗರ : ಕಳೆದ ಏಳು ದಿನಗಳ ಕಾಲ ಮುಳುಗಡೆ ಯಾಗಿದ್ದ ಜನವಸತಿ ಪ್ರದೇಶಗಳಲ್ಲಿ ಈಗ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಯಾಗಿದ್ದು, ಕುಶಾಲನಗರ ಪಟ್ಟಣ ಸಹಜ ಸ್ಥಿತಿಗೆ ಮರಳಿದೆ. ಆದರೆ ಕಾವೇರಿ ನದಿ ಹಾಗೂ ಮಳೆಯ ನೀರಿನಿಂದ ಜಲಾವೃತ್ತವಾಗಿದ್ದ ಪ್ರದೇಶಗಳಲ್ಲಿ ಗಿಡ-ಗಂಟೆಗಳು, ಕಸ-ಕಡ್ಡಿಗಳು ಕರಗಿ ನೀರು ಸಂಪೂರ್ಣ ಕಲುಷಿತ ಗೊಂಡಿದೆ. ಅಲ್ಲದೆ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದೆ. ಕೆಸರುಮಿಶ್ರಿತ ನೀರಿ ನಿಂದ ಬಡಾವಣೆಗಳ ಮನೆ ಹಾಗೂ ರಸ್ತೆಗಳು ಕೆಸರಿ ನಿಂದ…
ಪರಿಹಾರ ಕೇಂದ್ರದಲ್ಲಿ ವೃದ್ಧೆ ಸಾವು
August 23, 2018ಸೋಮವಾರಪೇಟೆ: ಸಂಬಂಧಿಕರನ್ನು ಮಾತನಾಡಿಸಲು ಹೋದ ವೃದ್ಧೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಿಳಿಗೇರಿ ಗ್ರಾಮದ ಪೊರೇರ ದಿ.ಸುಬ್ಬಯ್ಯನವರ ಪತ್ನಿ ಭೋಜಮ್ಮ(80) ತಮ್ಮ ಸಂಬಂಧಿಕರನ್ನು ನೋಡಲು ಇಲ್ಲಿನ ಕೊಡವ ಸಮಾಜದಲ್ಲಿ ಸ್ಥಾಪಿಸಿ ರುವ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಮಂಗಳವಾರ ದಂದು ತೆರಳಿ ಅಲ್ಲಿಯೇ ತಂಗಿದ್ದರು. ರಾತ್ರಿ 11ಗಂಟೆ ವೇಳೆಗೆ ಹೃದಯಾಘಾತಕ್ಕೊಳಗಾಗಿದ್ದು, ಕೂಡಲೇ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖ ಲಿಸಲಾಯಿತು. ಬೆಳಗ್ಗೆ 3.30ಕ್ಕೆ ಚಿಕಿತ್ಸೆ ಫಲಕಾರಿ ಯಾಗದೆ ಅವರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ಶವವನ್ನು ಸ್ವಗ್ರಾಮಕ್ಕೆ ಕೊಂಡೊಯ್ದರು. ಮೃತೆ ಭೋಜಮ್ಮನವರು ವಯೋಸಹಜ…
ಕಾಡಾನೆ ದಾಳಿ; ಬೈಕ್ ಸವಾರನಿಗೆ ಗಾಯ
August 23, 2018ಮಡಿಕೇರಿ: ಕಾಡಾನೆ ದಾಳಿಗೆ ತುತ್ತಾಗಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಬೆಳಗ್ಗೆ ಆಲೂರು ಸಿದ್ದಾಪುರ ವ್ಯಾಪ್ತಿಯ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ. ಆಲೂರು ಸಿದ್ದಾಪುರ ಸಮೀಪದ ಪಟ್ಟಡ ಕಾರ್ಯಪ್ಪ ಎಂಬವರೇ ಕಾಡಾನೆ ದಾಳಿಗೆ ತುತ್ತಾದ ವ್ಯಕ್ತಿ. ಬುಧವಾರ ಬೆಳಗ್ಗೆ 6-30 ರ ಸುಮಾರಿಗೆ ಕಾರ್ಯಪ್ಪ ಅವರು ತನ್ನ ಮನೆಯಿಂದ ಎಂದಿನಂತೆ ತನ್ನ ಬೈಕಿನಲ್ಲಿ ಆಲೂರು ಸಿದ್ದಾಪುರದ ಡೈರಿಗೆ ಹಾಲು ನೀಡಲು ಹೋಗುತ್ತಿದ್ದ ಸಂದರ್ಭದಲ್ಲಿ ದೊಡ್ಡಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಸಮೀಪ ಎದುರುಗೊಂಡ ಒಂಟಿ ಸಲಗ…
ಸಂತ್ರಸ್ತರಿಗೆ ನೆರವಾಗುವುದರಲ್ಲೂ `ರಾಜಕೀಯ’
August 22, 2018ಮಾದಾಪುರ: ಕೊಡಗು ಜಿಲ್ಲೆ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಸತ್ಕಾರ್ಯದಲ್ಲೂ ಇದೀಗ ರಾಜಕೀಯ ಮೇಲಾಟ ಆರಂಭವಾಗಿದ್ದು, ಈವರೆಗೆ ಪಕ್ಷಾತೀತ, ಜಾತ್ಯಾತೀತ ವಾಗಿ ಸಂತ್ರಸ್ತರ ನೆರವಿಗೆ ನಿಂತಿದ್ದವರು ಹಿಂದೆ ಸರಿಯುವ ದುಸ್ಥಿತಿ ನಿರ್ಮಾಣವಾಗುತ್ತಿದೆ. ಮಳೆಯಿಂದ ಎಲ್ಲವನ್ನೂ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರ ನೆರವಿಗೆ ಇಡೀ ರಾಜ್ಯವೇ ಮುಂದಾಗಿದೆ. ಮೈಸೂರು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ ಹೀಗೆ ಎಲ್ಲಾ ಜಿಲ್ಲೆಗಳಿಂದ ಸಂತ್ರಸ್ತರಿಗೆ ಬೇಕಾದ ಅಗತ್ಯ ವಸ್ತುಗಳ ಮಹಾಪೂರವೇ ಹರಿದು ಬರುತ್ತಿದೆ. ಈವರೆಗೆ ದಾನಿಗಳು ನೀಡಿದ ವಸ್ತುಗಳನ್ನು ದುರುಪಯೋಗವಾಗದಂತೆ ಸ್ಥಳೀಯ ಸ್ವಯಂ ಸೇವಕರು…










