ಮಡಿಕೇರಿ: ನಗರದ ಜಿಲ್ಲಾಸ್ಪತ್ರೆಗೆ ಆಧುನಿಕ ತಂತ್ರಜ್ಞಾನದ ವೈದ್ಯಕೀಯ ಸ್ಪರ್ಶ ದೊರಕಿದ್ದು, ಜಿಲ್ಲೆಯ ಜನತೆಯ ಹಲವು ದಶಕಗಳ ಕನಸು ನನಸಾಗಿದೆ. ಜಿಲ್ಲಾಸ್ಪತ್ರೆಗೆ ರಾಜ್ಯ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆರೋಗ್ಯ ಸೇವೆಗೆ ಲಭ್ಯವಾಗಲಿದೆ. ಅಂದಾಜು 2 ಕೋಟಿ ರೂ.ಗಳ ವೆಚ್ಚದ ಸಿಟಿ ಸ್ಕ್ಯಾನಿಂಗ್ ಮಿಷಿನ್ ಅಳವಡಿಸಿದ್ದು, ಈಗಾಗಲೇ ನೂರಕ್ಕೂ ಹೆಚ್ಚು ರೋಗಿಗಳಿಗೆ ತುರ್ತು ಸೇವೆಯ ಆಧಾರದ ಮೇಲೆ ಸ್ಕ್ಯಾನಿಂಗ್ ಸೇವೆ ನೀಡಲಾಗಿದೆ. ಜಿಲ್ಲೆಯ ಕೆಲ ಬೆರಳೆಣಿಕೆಯ ಖಾಸಗಿ ಆಸ್ಪತ್ರೆಯಲ್ಲಿ…
ವಕೀಲರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆ ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು
August 7, 2018ಕುಶಾಲನಗರ: ಸೋಮವಾರಪೇಟೆ ತಾಲೂಕು ಪಂಚಾಯತಿ ಉಪಾಧ್ಯಕ್ಷರೂ ಆದ ವಕೀಲ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್ ಮೇಲೆ ಭಾನುವಾರ ರಾತ್ರಿ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ತಾಜ್ ಹೊಟೇಲ್ ಬಳಿ ಈ ಘಟನೆ ನಡೆದಿದೆ. ಹೋಟೆಲ್ ಬಳಿ ನಿಲ್ಲಿಸಿದ್ದ ಕಾರನ್ನು ತೆಗೆಯುವ ಸಂದರ್ಭ ಹಿಂಬದಿಯಲ್ಲಿ ಬೈಕ್ ಡಿಕ್ಕಿಯಾಗಿದೆ. ಇದರಿಂದ ಆಕ್ರೋಶಗೊಂಡ ಬೈಕ್ ಮಾಲೀಕ ಕಾರು ಚಾಲಕನ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲಿಯೇ ಇದ್ದ ಅಭಿಮನ್ಯುಕುಮಾರ್ ಜಗಳ ಬಿಡಿಸಿ ಸಮಾಧಾನ ಪಡಿಸಲು ಮುಂದಾದಾಗ ತಾಜುದ್ದೀನ್ ಮತ್ತು ಮಹಮ್ಮದ್…
ರಸ್ತೆ ಕಾಮಗಾರಿ ಕಳಪೆ ಆರೋಪ: ಅಧಿಕಾರಿಗಳಿಂದ ಪರಿಶೀಲನೆ
August 7, 2018ಸೋಮವಾರಪೇಟೆ: ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಭಾಗದಲ್ಲಿ ವಿಶೇಷ ಪ್ಯಾಕೇಜ್ನಡಿ ಕೈಗೊಳ್ಳಲಾಗಿರುವ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೋಮವಾರಪೇಟೆ ಲೋಕೋಪಯೋಗಿ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ವಹಿಸಿರುವ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಬಗ್ಗನ ಅನಿಲ್ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ಸೋಮವಾರಪೇಟೆಗೆ ಆಗಮಿಸಿದ ಸುಳ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಣ್ಣೇಗೌಡ, ಗುಣಮಟ್ಟ ಅಧಿಕಾರಿ ನಾಗೇಂದ್ರ ಬಾಬು, ಮಂಗಳೂರು ಅಧೀಕ್ಷಕ…
ಅಕ್ರಮ ಬೀಟೆ ಮರ ಸಂಗ್ರಹ: ಓರ್ವನ ಬಂಧನ
August 7, 2018ಸೋಮವಾರಪೇಟೆ: ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಪ್ರಕರಣವನ್ನು ಪತ್ತೆ ಹಚ್ಚಿದ ಸೋಮವಾರಪೇಟೆ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಪಟ್ಟಣ ಸಮೀಪದ ಕರ್ಕಳ್ಳಿ ಬಾಣೆಯ ನಿವಾಸಿ ರವಿ ಬಂಧಿತ ಆರೋಪಿ. ತನ್ನ ಸಾಮಿಲ್ನಲ್ಲಿ ಬೆಲೆಬಾಳುವ 7 ಮರದ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ಕೊಂಡಿದ್ದು, ಖಚಿತ ಸುಳಿವಿನ ಮೇರೆಗೆ ಆರ್ಎಫ್ಒ ಲಕ್ಷ್ಮೀಕಾಂತ್ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ, ಮಾಲು ಸಮೇತ ಅರೋಪಿಯನ್ನು ಬಂಧಿಸಿ ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿ ಯನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಿಲ್ಲಿನ ಯಂತ್ರಗಳನ್ನು…
ತಮಿಳುನಾಡಲ್ಲಿ ಅಪಘಾತ: ಕೊಡಗಿನ ಯುವಕ ಸಾವು
August 7, 2018ಮಡಿಕೇರಿ: ತಮಿಳುನಾಡು ಕೊಯಮತ್ತೂರಿನಲ್ಲಿ ನಡೆದ ರಸ್ತೆ ಅಪ ಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಗಿನ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಡಿಕೇರಿಯ ಸ್ಟುಡಿಯೋ ಒಂದರಲ್ಲಿ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಜ ಎಂಬುವರ ಪುತ್ರ ಕಿಶೋರ್ (25) ಮೃತಪಟ್ಟ ಯುವಕನಾಗಿದ್ದಾನೆ. ಕೊಯಮತ್ತೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಕಿಶೋರ್ ಆ.03 ರಂದು ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುವ ಸಂದರ್ಭ ರಸ್ತೆ ಅಪಘಾತ ಸಂಭವಿಸಿ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಗಾಯಾಳುವನ್ನು ಕೊಯಮ ತ್ತೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖ…
ಪ್ರತಿಭೆ ಸಮರ್ಥ ಬಳಕೆಗೆ ವಿದ್ಯಾರ್ಥಿಗಳಿಗೆ ಕರೆ
August 6, 2018ಮಡಿಕೇರಿ: ಮಕ್ಕಳು ತಮ್ಮಲ್ಲಿನ ಪ್ರತಿಭೆಯನ್ನು ಸಮರ್ಥವಾಗಿ ಬಳಸಿಕೊಳ್ಳ ಬೇಕೆಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ನಗರದಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಸಾಹಿತ್ಯ, ಸಾಂಸ್ಕೃತಿಕ ಅಭಿನಂದನಾ ಕಾರ್ಯಕ್ರಮವಾದ ಹಿಮವನ ಪ್ರತಿಭಾ ಸಂಗಮ ಉದ್ಘಾಟಿಸಿ ಮಾತನಾಡಿದ ಅನಂತಶಯನ, ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆಯಿರುತ್ತದೆ. ಆದರೆ ಅದನ್ನು ಹೊರ ಹೊಮ್ಮಿಸುವ ವಿಧಾನ ತಿಳಿದಿರುವುದಿಲ್ಲ. ಹೀಗಾಗಿ ಮನದಲ್ಲಿ ಧೂಳು ಹಿಡಿದಂತಿರುವ ಪ್ರತಿಭೆಯನ್ನು ಹೊರತರಲು ಬುದ್ಧಿವಂತಿಕೆಯನ್ನು ಬಳಸಿಕೊಳ್ಳಬೇಕು. ಪೋಷಕರು, ಶಿಕ್ಷಕರು, ಹಿರಿಯರಿಗೆ ಗೌರವ ನೀಡುವ ಮನೋಭಾವನೆ ಚಿಕ್ಕಂದಿನಲ್ಲಿಯೇ ವ್ಯಕ್ತವಾಗಬೇಕೆಂದು ಅವರು…
ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ
August 6, 2018ಮಡಿಕೇರಿ: ಮಡಿಕೇರಿ ನಗರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಸದ್ಯದಲ್ಲಿಯೇ ಸಂಘದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಸಂಘದ ನೂತನ ಅಧ್ಯಕ್ಷೆ ಕುಶಾಲಿನಿ ತಿಳಿಸಿದ್ದಾರೆ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 1839ರಲ್ಲಿ ಸ್ಥಾಪನೆಯಾಗಿ ಅನೇಕ ವಿದ್ಯಾ ರ್ಥಿಗಳ ಸಾಧನೆಯ ಮೆಟ್ಟಿಲಾಗಿದೆ. ಶಾಲೆಯಿಂದ ಹೊರಬಂದ ಎಲ್ಲ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಲು ಹಳೆಯ ವಿದ್ಯಾರ್ಥಿ ಸಂಘ ನಿರ್ಧರಿಸಿದೆ. ಈಗಾಗಲೇ ಸಂಘದ ಸದಸ್ಯತ್ವ ಕಾರ್ಯವೂ ಪ್ರಗತಿಯಲ್ಲಿದೆ….
ಆ.16, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
August 6, 2018ಸೋಮವಾರಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗ ನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಹಾ ಮಂಡಳದಿಂದ ಆ.16ರಂದು ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮಹಾ ಮಂಡಳದ ತಾಲೂಕು ಅಧ್ಯಕ್ಷೆ ಕೆ.ಕೆ. ಶಾರದ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ 18ಸಾವಿರ ವೇತನ ಜಾರಿಗೊಳಿಸಬೇಕು. ಹೆಚ್ಚಿನ ಸೇವೆ ಸಲ್ಲಿಸಿರುವವರನ್ನು ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ನೇಮಕ ಗೊಳಿಸಬೇಕು. ದಿನಭತ್ಯೆಯನ್ನು 150ಕ್ಕೆ ಹೆಚ್ಚಿಸಬೇಕು. ತುಟ್ಟಿ ಭತ್ಯೆ ಜಾರಿಗೆ ತರಬೇಕು.ಮಾತೃಪೂರ್ಣ ಯೋಜನೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಈ ಹಿಂದೆ ಇದ್ದಂತಹ ಗರ್ಭಿಣಿ ಬಾಣಂತಿಯರಿಗೆ…
ಸೋಲಾರ್ ಲೈಟ್ ಸಮರ್ಪಕ ಬಳಕೆಗೆ ಸಲಹೆ
August 6, 2018ವಿರಾಜಪೇಟೆ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಅಗಾಗ ಕಡಿತಗೊಳ್ಳುವುದರಿಂದ ಜನರಿಗೆ ಸೋಲಾರ್ ಲೈಟ್ನ ಅವಶ್ಯಕತೆ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಸಮೀ ಪದ ಹೆಗ್ಗಳ ಗ್ರಾಮದ ರಾಮನಗರದ ಶ್ರೀ ಅಯ್ಯಪ್ಪ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಜನೆಯ ಸದಸ್ಯರಿಗೆ ಸೋಲಾರ್ ಲೈಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಮಹೇಶ್ ಗಣಪತಿ ಗ್ರಾಮಾಂತರ ಪ್ರದೇಶದಲ್ಲಿ ಮಳೆಗಾಲ, ಬೇಸಿಗೆ ಎನ್ನದೆ ವಿದ್ಯುತ್…
ಜೂನಿಯರ್ ಕಾಲೇಜಿನಲ್ಲಿ ಕಳ್ಳತನಕ್ಕೆ ಯತ್ನ
August 6, 2018ಮಡಿಕೇರಿ: ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂರು ಕೊಠಡಿಗಳ ಬೀಗ ತುಂಡರಿಸಿ ಒಳನುಗ್ಗಿರುವ ಕಳ್ಳರು ಹಣಕ್ಕಾಗಿ ಶೋಧ ನಡೆಸಿರುವುದು ಕಂಡು ಬಂದಿದೆ. ಪ್ರಾಚಾರ್ಯರ ಕೊಠಡಿ, ಅಧ್ಯಾಪಕರ ಕೊಠಡಿ ಮತ್ತು ಕಾರ್ಯಾಗಾರ ಕೊಠಡಿಯ ಬೀಗವನ್ನು ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಭಾನುವಾರ ಬೆಳಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೊಠಡಿಗಳಲ್ಲಿ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯುವ ಸಂದರ್ಭ ಈ ಘಟನೆ ಬೆಳಕಿಗೆ…










