ಮಡಿಕೇರಿ: ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಿಂದ ಗಂಭೀರ ಗಾಯ ಗೊಂಡಿದ್ದ ಜಿಂಕೆಗೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಅಧಿಕಾರಿಗಳ ಸಭೆ ನಡೆಸಲು ಸಚಿವ ಸಾ.ರಾ. ಮಹೇಶ್ ಮಡಿಕೇರಿಗೆ ಆಗಮಿಸುತ್ತಿದ್ದರು. ಕುಶಾಲನಗರ ಮಾರ್ಗವಾಗಿ ಮಡಿಕೇರಿ ಬರುವ ಸಂದರ್ಭ ಆನೆಕಾಡು ರಕ್ಷಿತಾರಣ್ಯ ಬಳಿ ತಮಿಳುನಾಡು ಮೂಲದ ಪ್ರವಾಸಿ ವಾಹನವೊಂದು ರಸ್ತೆ ದಾಟುತ್ತಿದ್ದ…
ಪ್ರಥಮ ದರ್ಜೆ ಎಎಜಿಯಾಗಿ ಕೊಡಗಿನ ಎ.ಎಸ್.ಪೊನ್ನಣ್ಣಗೆ ಬಡ್ತಿ
August 4, 2018ಪೊನ್ನಂಪೇಟೆ: ಇದುವರೆಗೂ ರಾಜ್ಯ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ (ಎ.ಎ.ಜಿ.) ಆಗಿದ್ದ ಕೊಡಗಿನ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಇದೀಗ ರಾಜ್ಯ ಸರ ಕಾರ ಪ್ರಥಮ ದರ್ಜೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಕಳೆದ ಸರಕಾರದ ಅವಧಿಯಲ್ಲಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ ಎ.ಎಸ್. ಪೊನ್ನಣ್ಣ ಅವರನ್ನು ನೂತನ ಸಮ್ಮಿಶ್ರ ಸರಕಾರ ಜಾರಿಗೆ ಬಂದ ಬಳಿಕ ಅದೇ ಹುದ್ದೆಯಲ್ಲಿ ಮುಂದುವರಿಸಿ ಆದೇಶ ಹೊರಡಿಸಿತ್ತು. ಇದೀಗ ಸರಕಾರ ಪೊನ್ನಣ್ನ ಅವರ ಕಾರ್ಯದಕ್ಷತೆಯನ್ನು…
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ನ್ಯಾಯಾಧೀಶ ಶಿವಾನಂದ ಲಕ್ಷಣ್ ಅಂಚಿ
August 4, 2018ವಿರಾಜಪೇಟೆ: ವಿದ್ಯಾರ್ಥಿಗಳು ಕಲಿತಿರುವ ವಿದ್ಯೆಯನ್ನು ಸಾರ್ಥಕಪಡಿಸಿಕೊಂಡು ಮಾದಕ ವಸ್ತುಗಳನ್ನು ದೂರಮಾಡಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವಂತಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ವಕೀಲರ ಸಂಘ, ವಿರಾಜಪೇಟೆ ಪ್ರಥಮದರ್ಜೆ ಕಾಲೇಜು, ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದುಷ್ಚಟವನ್ನು…
ನೌಕಾಪಡೆಯ ರಿಯರ್ ಎಡ್ಮಿರಲ್ ಆಗಿ ಕೊಡಗಿನ ಐಚೆಟ್ಟಿರ ಬಿ.ಉತ್ತಯ್ಯ ನೇಮಕ
August 3, 2018ಮಡಿಕೇರಿ: ಕೊಡಗು ಜಿಲ್ಲೆ ಯಿಂದ ಇದೇ ಮೊದಲ ಬಾರಿಗೆ ದೇಶದ ನೌಕಾಪಡೆಯ 3ನೇ ಅತ್ಯುನ್ನತ ಸ್ಥಾನಕ್ಕೆ ಐಚೆಟ್ಟಿರ ಬಿ.ಉತ್ತಯ್ಯ ನೇಮಕವಾಗುವ ಮೂಲಕ ಹೊಸ ಸೇನಾ ಇತಿಹಾಸವೊಂದು ದಾಖಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತೀಯ ರಕ್ಷಣಾ ಪಡೆಗೆ ಸಂಬಂಧಿಸಿದಂತೆ ಸೇನೆಯ ಮೂರೂ ವಿಭಾಗಗಳಾದ ಭೂ ಸೇನೆ, ವಾಯುಸೇನೆ ಹಾಗೂ ನೌಕಾ ಪಡೆಯ ಏಕೈಕ ಮಹಾದಂಡ ನಾಯಕರಾಗಿ ಸೇವೆ ಸಲ್ಲಿಸಿದವರು (ಕಮಾಂಡರ್ ಇನ್ ಚೀಫ್) ಕೊಡಗಿನ ಧೀಮಂತ ಸೇನ ಧಿಕಾರಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ. ಭೂಸೇನೆ, ವಾಯು ಪಡೆ…
ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಅಂತಿಮ ಮೀಸಲಾತಿ ಪ್ರಕಟ
August 3, 2018ಮಡಿಕೇರಿ: ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 29ರಂದು ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಪಂಗಳಿಗೆ ಚುನಾವಣೆ ನಡೆಯಲಿದೆ. ಆಗಸ್ಟ್ 10ರಂದು ಅಧಿಸೂಚನೆ ಹೊರಡಿಲಿದ್ದು, ಆಗಸ್ಟ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ.18ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಆ.20 ನಾಮಪತ್ರ ಹಿಂಪಡೆ ಯಲು ಕೊನೆಯ ದಿನವಾಗಿದೆ. ಸೆ.1ರಂದು ಮತ ಎಣಿಕೆ ನಡೆಯಲಿದೆ. ರಾಜ್ಯ ಸರ್ಕಾರ ಮಡಿಕೇರಿ ನಗರಸಭೆ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗಳ ವಾರ್ಡ್ವಾರು ಮೀಸಲಾತಿ ಪ್ರಕಟಿಸಿದ್ದು,…
ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಯುವತಿ ಸಾವು
August 3, 2018ಮಡಿಕೇರಿ: ಅತೀ ವೇಗದಲ್ಲಿ ಚಲಿಸು ತ್ತಿದ್ದ ಬೈಕ್ನಿಂದ ಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ನಗರದ ಹೊರವಲಯದ ಅಬ್ಭಿಫಾಲ್ಸ್ ರಸ್ತೆಯಲ್ಲಿ ಸಂಭವಿಸಿದೆ. ಕುಶಾಲನಗರದ ಹಾರಂಗಿ ಹೇರೂರು ಗ್ರಾಮದ ನಿವಾಸಿ ಭವ್ಯ(26) ಎಂಬಾಕೆಯೇ ಮೃತಪಟ್ಟ ದುರ್ದೈವಿ. ಘಟನೆ ವಿವರ: ಸೋ.ಪೇಟೆ ತಾಲೂಕು ಬಜೆಗುಂಡಿ ನಿವಾಸಿ ನವೀನ್ ಕುಮಾರ್ ತನ್ನ ಸ್ನೇಹಿತ ಮೋಹನ್ ಅವರೊಂದಿಗೆ ಆರ್ಟಿಓ ಕಚೇರಿಗೆ ಆಗಮಿಸಿ ತನ್ನ ವಾಹನ ಚಾಲನಾ ಪರವಾನಗಿ ನವೀಕರಣ ಮಾಡಿಸಿಕೊಂಡು ಮಡಿಕೇರಿಗೆ ಬಂದಿದ್ದರು. ಈ ಸಂದರ್ಭ ಭವ್ಯ ತನ್ನ ಪರಿಚಿತನಾದ ನವೀನ್ ಕುಮಾರ್ ನೊಂದಿಗೆ…
ಮಾರ್ಬಲ್ ಅಂಗಡಿಗೆ ಬೆಂಕಿ; ಲಕ್ಷಾಂತರ ರೂ. ನಷ್ಟ
August 3, 2018ಕುಶಾಲನಗರ: ಪಟ್ಟಣದ ಟಾಟಾ ಪೆಟ್ರೋಲ್ ಬಂಕ್ ಎದುರಿನಲ್ಲಿರುವ ಕಾವೇರಿ ಮಾರ್ಬಲ್ಸ್ ಬೃಹತ್ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಬೆಂಕಿಗೆ ಅಹುತಿಯಾಗಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ರಾಜಾಸ್ಥಾನ ಮೂಲದ ಪುರುಷೋತ್ತಮ ಎಂಬುವವರಿಗೆ ಸೇರಿದ ಅಂಗಡಿಯಾಗಿದ್ದು ಬೆಂಕಿ ಅನಾಹುತದಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಬುಧವಾರ ಮಧ್ಯರಾತ್ರಿ ಅಂಗಡಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಕ್ಕಪಕ್ಕದ ಅಂಗಡಿಯವರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬರುವಷ್ಟರಲ್ಲಿ ಬೆಂಕಿ ವ್ಯಾಪಕವಾಗಿ ಹರಡಿತು….
ಹಾಸಿಗೆ ಹಿಡಿದ ಅವಳಿ ಮಕ್ಕಳೊಂದಿಗೆ ವಿಧವೆ ಪರದಾಟ
August 2, 2018ಅಪಘಾತದಲ್ಲಿ ಅಸುನೀಗಿದ ಪತಿ ಜೀವನ ನಿರ್ವಹಣೆಗೆ ದಾರಿ ಕಾಣದೆ ಕಂಗಾಲು ಮೈಸೂರು ರೋಟರಿ ಮಿಡ್ಟೌನ್ನಿಂದ ನೆರವು ಮೈಸೂರು: ಇದು ವಿಧವೆ ತಾಯಿಯೊಬ್ಬಳ ಕರುಣಾಜನಕ ಹಾಗೂ ಕಲ್ಲು ಹೃದಯವನ್ನು ಕರಗಿಸುವಂತಹ ಚಿಂತಾಜನಕ ಕಥೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ವಿಧವೆಯೊಬ್ಬರು ತನ್ನ ಇಬ್ಬರು ಹಾಸಿಗೆ ಹಿಡಿದ ಅವಳಿ ಜವಳಿ ಹೆಣ್ಣು ಮಕ್ಕಳೊಂದಿಗೆ ಯಾವುದೇ ರೀತಿಯ ಆದಾಯವಿ ಲ್ಲದೆ ಜೀವನ ನಿರ್ವಹಣೆಗೆ ಪರಿಪಾಟಲು ಪಡುತ್ತಿರುವ ಮನಕರಗುವಂತಹ ಸ್ಥಿತಿ ಯಲ್ಲಿರುವುದು ವರದಿಯಾಗಿದೆ. ಈಕೆಯ ಪತಿ, ಆಟೋ ಚಾಲಕನಾ ಗಿದ್ದು, ಕಳೆದ ಎರಡು…
ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
August 2, 2018ಗೋಣಿಕೊಪ್ಪಲು: ಮನೆ ಕೆಲಸ ಮಾಡುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಕಬ್ಬಿಣದ ಕಂಬಿ ತಗುಲಿ ಕಾರ್ಮಿಕ ಸಾವನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ರಾಯಚೂರುವಿನ ವರುಣಕೋಡು ಗ್ರಾಮದ ಯಮನೂರು (25) ಮೃತ ಕಾರ್ಮಿಕ. ಮನೆ ನಿರ್ಮಾಣ ಸಂಧರ್ಭ ಕಬ್ಬಿಣದ ಕಂಬಿ ಮೇಲೆತ್ತುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಸೆಸ್ಕ್ ಜೆಇ ಕೃಷ್ಣಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್ ಬೇಟಿ ನೀಡಿ ಪರಿ ಶೀಲನೆ ನಡೆಸಿದರು. ಪಟ್ಟಣದ ಉಮಾಮಹೇಶ್ವರಿ ದೇವಸ್ತಾನದ ಎದುರಿನಲ್ಲಿ ರಾಧ ಕೃಷ್ಣ ಎಂಬುವವರಿಗೆ ಸೇರಿದ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗ…
ನಾಳೆ ಕೊಡಗಿನಲ್ಲಿ ಕಕ್ಕಡ ಪದಿನೆಟ್ ಆಚರಣೆ
August 2, 2018ಮಡಿಕೇರಿ: ಆಟಿ ಅಥವಾ ಕಕ್ಕಡ ಆಚರಣೆಯ 18ನೇ ದಿನ ಆಗಸ್ಟ್ 3 ಕಕ್ಕಡ ಆರಂಭವಾಗಿ 18 ದಿನ ತುಂಬುತ್ತಿದ್ದಂತೆ 18 ಔಷಧಿಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ ಅಥವಾ ರುಚಿ ರುಚಿಯಾದ ವಿವಿಧ ಖಾದ್ಯಗಳನ್ನು ಮಾಡಿ ಸೇವಿಸುವುದು ವಿಶೇಷ. ಕೊಡಗಿನ ಮನೆ ಮನೆಗಳಲ್ಲಿ ಮದ್ದು ಸೊಪ್ಪಿನ ಪಾಯಸ ಘಮಘಮಿಸುತ್ತದೆ. ತುಳುನಾಡಿನಲ್ಲಿ ಆಟಿ 18 ಹೇಗೋ, ಹಾಗೇ ಕೊಡಗಿನಲ್ಲಿ ಕಕ್ಕಡ 18 ಕೂಡ ಒಂದು ವಿಶಿಷ್ಠ ಆಚರಣೆಯಾಗಿದೆ. ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ…