ಸಿದ್ದಾಪುರ, ಜು.7- ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮುಂದೆ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಂಚಾಯಿತಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಪ್ರಮುಖ ಪಿ.ಆರ್.ಭರತ್ ಮಾತ ನಾಡಿ, ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸ ಬೇಕಾದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸದೆ ಅಸಹಾಯಕತೆ ತೋರು ತ್ತಿರುವುದು ಸರಿಯಾದ ನಡೆಯಲ್ಲ. ಹತ್ತು ವರ್ಷಗಳಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯವಿ ಲ್ಲದೆ, ವಾಹನ ಸವಾರರು,…
ರೈತರಿಗೆ 20,810 ಕೋಟಿ ರೂ. ಸಾಲ ನೀಡಲು ಗುರಿ
July 8, 2021ಮಡಿಕೇರಿ, ಜು.7- ಕಳೆದ ಸಾಲಿನಲ್ಲಿ ರೈತರಿಗೆ 15,300 ಕೋಟಿ ರೂ. ಗುರಿ ನಿಗದಿಪಡಿಸಲಾಗಿತ್ತು, ರಾಜ್ಯದ 21 ಡಿಸಿಸಿ ಬ್ಯಾಂಕುಗಳು ರೈತರಿಗೆ 16,795 ಕೋಟಿ ರೂ. ಎಲ್ಲಾ ಸಾಲ ನೀಡಿವೆ ಹಾಗೂ ಶೇ.95 ರಷ್ಟು ಸಾಲ ವಸೂಲಾತಿ ಮಾಡಿದೆ. ಈ ಸಾಲಿನಲ್ಲಿ 20,810 ಕೋಟಿ ರೂ. ರೈತರಿಗೆ ಸಾಲ ನೀಡಲು ಗುರಿ ಹೊಂದಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಡಿಸಿಸಿ ಬ್ಯಾಂಕ್ ಮತ್ತು ಕೃಷಿ ಪತ್ತಿನ ಸಹ ಕಾರ ಸಂಘಗಳ ಮೂಲಕ ಸಾಲದ ಪ್ರಯೋ ಜನ ಪಡೆಯುತ್ತಿರುವ ಜಿಲ್ಲೆಯ…
ಜೂ.23ರಿಂದ ಆಗಸ್ಟ್ 16ರವರೆಗೆ ಭಾರೀ ವಾಹನ ಸಂಚಾರ ನಿಷೇಧ
June 17, 2021ಮಡಿಕೇರಿ, ಜೂ.16-ಕೊಡಗಿನಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ ಮುಂಗಾರಿನಲ್ಲಿ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿ ಕರ ಸುರಕ್ಷಾ ಹಾಗೂ ಆಸ್ತಿ-ಪಾಸ್ತಿ ರಕ್ಷಣೆ ಹಿತ ದೃಷ್ಟಿಯಿಂದ ಜೂ.23ರಿಂದ ಆಗಸ್ಟ್ 16ರವ ರೆಗೆ ಮರಳು, ಮರದ ದಿಮ್ಮಿ ಸಾಗಾಣಿಕೆ ಸೇರಿ ದಂತೆ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ಬಂಧ ವಿಧಿಸಿ, ಆದೇಶ ಹೊರಡಿಸಿದ್ದಾರೆ. ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಸರಬರಾಜು ವಾಹನಗಳು, ಸರ್ಕಾರದ ಕೆಲಸ ನಿಮಿತ್ತ ಬಳಸುವ…
ಕೊಡಗಿನಲ್ಲಿ ಭಾರೀ ಮಳೆ
June 15, 2021ಮಡಿಕೇರಿ,ಜೂ.14-ಕೊಡಗು ಜಿಲ್ಲೆಯಾದ್ಯಂತ ಸತತ 3ನೇ ದಿನವೂ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಸೋಮವಾರ ಬೆಳಗ್ಗಿನಿಂದಲೇ ಜಿಲ್ಲೆ ಯಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣದ ನಡುವೆಯೇ ಮಳೆ ಸುರಿಯುತ್ತಿದ್ದು, ಮಂಗಳವಾರ ಕೂಡ ಜಿಲ್ಲೆಯಲ್ಲಿ `ಆರೆಂಜ್ ಅಲರ್ಟ್’ ಘೋಷಣೆ ಮುಂದುವರೆದಿದೆ. ಜೂ.17ರವರೆಗೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು ಜಿಲ್ಲಾಡಳಿತ ಈಗಾಗಲೇ ಅಪಾಯಕಾರಿ ಪ್ರದೇಶದಲ್ಲಿ ನೆಲೆಸಿರುವ ಕುಟುಂಬಗಳಿಗೆ ಮಾನ್ಸೂನ್ ಎಚ್ಚರಿಕೆಯಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗುವಂತೆ ನೋಟಿಸ್ ನೀಡಿದೆ….
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಿಂದ ಕೋವಿಡ್ ಆಸ್ಪತ್ರೆ ಪರಿಶೀಲನೆ
May 6, 2021ಮಡಿಕೇರಿ, ಮೇ 5- ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅವರು ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್ ಅವರಿಂದ ಕೊಡಗು ವೈದ್ಯ ಕೀಯ ವಿಜ್ಞಾನ ಕಾಲೇಜಿನಲ್ಲಿ ತಜ್ಞ ವೈದ್ಯರ ಸಂಖ್ಯೆ, ಖಾಲಿ ಹುದ್ದೆಗಳು, ಕೋವಿಡ್ 19 ತಡೆಯುವಲ್ಲಿ ಅನುಸರಿಸುತ್ತಿರುವ ಕ್ರಮಗಳು, ಪಾಸಿಟಿವ್ ಬಂದವರಿಗೆ ಉತ್ತಮ ಚಿಕಿತ್ಸೆ, ಔಷಧಿ ಸೌಲಭ್ಯ, ಆಮ್ಲಜನಕ ಪೂರೈಕೆ…
ಅಕ್ರಮ ಗೋ ಸಾಗಾಣಿಕೆ ತಡೆದ ಗ್ರಾಮಸ್ಥರು
May 6, 2021ಮಡಿಕೇರಿ, ಮೇ 5- ಗೋವುಗಳ ಅಕ್ರಮ ಸಾಗಾಟವನ್ನು ತಡೆಯುವಲ್ಲಿ ದಕ್ಷಿಣ ಕೊಡಗಿನ ಕಿರುಗೂರು ನಿವಾಸಿಗಳು ಯಶಸ್ವಿಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ದಕ್ಷಿಣ ಕೊಡಗಿನ ಕಿರುಗೂರು ಸಮೀಪ ಮಂಗಳವಾರ ತಡರಾತ್ರಿ ಆಲ್ಟೋ ಕಾರ್ನ ರಕ್ಷಣೆಯೊಂದಿಗೆ ಪಿಕ್ಅಪ್ ಜೀಪ್ನಲ್ಲಿ ಅಕ್ರಮವಾಗಿ 3 ಗೋವುಗಳನ್ನು ಸಾಗಿಸ ಲಾಗುತ್ತಿತ್ತು. ಈ ಸಂದರ್ಭ ಸ್ಥಳೀಯರ ತಂಡÀ ಜಾಗೃತರಾಗಿ ವಾಹನವನ್ನು ಅಡ್ಡ ಗಟ್ಟಲು ಪ್ರಯತ್ನಿಸಿದಾಗ ಆಲ್ಟೋ ಕಾರ್ ನಲ್ಲಿ ಬಂದಿದ್ದ ಗೋ ಸಾಗಾಣಿಕೆದಾರರು ವಾಹನವನ್ನು ವೇಗವಾಗಿ ಚಲಾಯಿಸಿ ತಪ್ಪಿಸಿಕೊಂಡಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕ್ಅಪ್ ಜೀಪನ್ನು ಅಡ್ಡಗಟ್ಟಿ…
ಕೊಡಗಿನಲ್ಲಿ ಕೊರೊನಾ ಸೋಂಕಿನಿಂದ 12 ಮಂದಿ ಸಾವು
May 6, 2021ಮಡಿಕೇರಿ, ಮೇ 5- ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 12 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು 145 ಮಂದಿ ಮೃತಪಟ್ಟಿರುವುದು ಆತಂಕ ಮೂಡಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 13,813 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 396 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 9017 ಮಂದಿ ಗುಣಮುಖರಾಗಿದ್ದಾರೆ. 4651 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ಮೆಂಟ್ ವಲಯಗಳ ಸಂಖ್ಯೆ…
ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
May 6, 2021ಸಿದ್ದಾಪುರ, ಮೇ 5- ಕಾಫಿ ತೋಟ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಪರಿ ಣಾಮ ಓರ್ವ ಗಂಭೀರವಾಗಿ ಗಾಯ ಗೊಂಡು ಮತ್ತೋರ್ವ ಪ್ರಾಣಾಪಾಯದಿಂದ ಪಾರಾದ ಘಟನೆ ಬರಡಿ ಗ್ರಾಮದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಸುರೇಂದ್ರ(50) ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತೋರ್ವ ಕಾರ್ಮಿಕ ಜನಾರ್ದನ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯ ದಿಂದ ಪಾರಾಗಿದ್ದು, ಕಾಡಾನೆ ದಾಳಿ ಯಿಂದ ಗಾಯಗೊಂಡ ಸುರೇಂದ್ರ ಅವರನ್ನು ನೆಲ್ಯಹುದಿಕೇರಿ ಗ್ರಾಮ…
ಕೋವಿಡ್ ಕೇರ್ ಸೆಂಟರ್ಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ ಸೋಂಕಿತರ ಆರೋಗ್ಯ ವಿಚಾರಣೆ
May 6, 2021ಕುಶಾಲನಗರ, ಮೇ 5- ಸಮೀಪದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ಗೆ ಬುಧವಾರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೇಟಿ ಕೊರೊನಾ ಸೋಂಕಿತರ ಯೋಗಕ್ಷೇಮ ವಿಚಾರಿಸಿದರು. ಕೋವಿಡ್ ಸೆಂಟರ್ಗೆ ಪಿ.ಪಿ ಕಿಟ್ ಧರಿಸಿ ಆಗಮಿಸಿದ ಶಾಸಕರು, ರೋಗಿಗಳ ವಾರ್ಡ್ಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ಹಾಗೂ ಸಮಸ್ಯೆ ಕುರಿತು ವಿಚಾರಿ ಸಿದರು. ಸೋಂಕಿತರು ಯಾವುದೇ ಭಯ ಪಡುವ ಅಗತ್ಯ ಇಲ್ಲ. ನಿಮ್ಮ ಆರೋಗ್ಯ ರಕ್ಷಣೆಗೆ ವೈದ್ಯರು ಹಾಗೂ ಸಿಬ್ಬಂದಿ ಇದ್ದಾರೆ ಎಂದು ಮಾನಸಿಕವಾಗಿ…
ಗುಡ್ಡೆಹೊಸೂರಿನಲ್ಲಿ ವಾಹನ ತಪಾಸಣೆ
May 5, 2021ಗುಡ್ಡೆಹೊಸೂರು, ಮೇ 4- ಕೊರೊನಾ ಮಹಾಮಾರಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಇಲ್ಲಿನ ಹೆದ್ದಾರಿ ಬಳಿ ಬ್ಯಾರಿಕೇಡ್ ಅಳವಡಿಸಿ ಹೊರ ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಬರುತ್ತಿರುವ ವಾಹನಗಳ ತಪಾಸಣೆ ನಡೆಸಲಾಯಿತು. ಈ ಸಂಧರ್ಭ ಕುಶಾಲನಗರ ಡಿವೈಎಸ್ಪಿ ಶೈಲೇಂದ್ರ, ವೃತ್ತನಿರೀಕ್ಷಕ ಮಹೇಶ್, ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್ ಮತ್ತು ಸಿಬ್ಬಂದಿಗಳು ಹಾಜರಿದ್ದರು. ಹೊಟೇಲ್ ಮತ್ತು ಕ್ಯಾಂಟೀನ್ಗಳಿಂದ ಪಾರ್ಸಲ್ ನೀಡದೆ ಗುಂಪಾಗಿ ಸೇರಿಸಿ ವ್ಯಾಪಾರ ನಡೆಸುವ ಕ್ಯಾಂಟಿನ್ ಮಾಲೀಕರಿಗೆ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್ ದಾಳಿ ನಡೆಸಿ ದಂಡ ಹಾಕಿದರು. ದಿನದಿಂದ ದಿನಕ್ಕೆ ಕೊರೊನಾ…