ಮಕ್ಕಳನ್ನು ಸೈನ್ಯಕ್ಕೆ ಸೇರಿಸಲು ಪೋಷಕರಿಗೆ ಸಲಹೆ ಮಡಿಕೇರಿ: ದೇಶ ಕಾಯುವುದು ಒಂದು ಪುಣ್ಯದ ಕೆಲಸವಾಗಿದ್ದು, ಪೋಷಕರು ತಮ್ಮ ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕೆನ್ನುವ ಕನಸು ಕಾಣುವ ಬದಲು ಯೋಧನಾಗಬೇಕೆನ್ನುವ ಅಭಿಲಾಷೆ ಯನ್ನು ಹೊಂದಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ನಿವೃತ್ತ ಕರ್ನಲ್ ಕಂಡ್ರ ತಂಡ ಸಿ. ಸುಬ್ಬಯ್ಯ ತಿಳಿಸಿದ್ದಾರೆ. ಕೊಡಗು ಯೋಧಾಭಿಮಾನಿ ಬಳಗದ ವತಿಯಿಂದ ನಗರದ ಕೊಡವ ಸಮಾಜದಲ್ಲಿ ನಡೆದ `ಯಾರಿಗಾಗಿ ನಮ್ಮವರ ಬಲಿ ದಾನ’ ಯೋಧ ನಮನ ಕಾರ್ಯಕ್ರಮ ವನ್ನು…
ಮರಂದೋಡು ಗ್ರಾಮದ ಬೇಡಿಕೆ ಈಡೇರಿಸಲು ಕ್ರಮ
July 9, 2018ವಿರಾಜಪೇಟೆ: ಅನೇಕ ದಶಕ ಗಳಿಂದ ಮರಂದೊಡು ಗ್ರಾಮದಲ್ಲಿ ಯಾವುದೇ ಜನಪರ ಅಭಿವೃದ್ಧಿ ಕಾರ್ಯಗಳು ನಡೆ ದಿಲ್ಲ. ಗ್ರಾಮಸ್ಥರಿಗೆ ಮೂಲಭೂತ ಸೌಲಭ್ಯ ಗಳು ದೊರೆತಿಲ್ಲ. ಗ್ರಾಮದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಗ್ರಾಮಸ್ಥರ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತ ವಾಗಿ ಈಡೇರಿಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಮರಂದೋಡು ಗ್ರಾಮಸ್ಥರಿಂದ ಅಲ್ಲಿನ ಧವಸ ಭಂಡಾರದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಸಂಕೇತ್ ಪೂವಯ್ಯ, ಮೂಲ ಸೌಲಭ್ಯ ಗಳ ಕೊರತೆಯಿಂದ ಮರಂದೋಡು ಕುಗ್ರಾಮ ವೆಂದು…
ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ
July 8, 2018ಕುಶಾಲನಗರ: ಕೊಡಗಿನಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನಲೆ ಯಲ್ಲಿ ಹಾರಂಗಿ ಜಲಾಶಯ ಭರ್ತಿಯಾ ಗಿದ್ದು, ಶನಿವಾರ ಸಂಜೆ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್ಗಳಿಂದ ನದಿಗೆ 1200 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಕಾವೇರಿ ಕಣಿವೆಯ ಪ್ರಮುಖ ಜಲಾ ಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ ಇದ್ದು, ಜಲಾ ಶಯದ ಇಂದಿನ ನೀರಿನ ಮಟ್ಟ 2856 ಅಡಿ (ಸಂಜೆ 5 ಗಂಟೆಗೆ) ಇತ್ತು. ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ನೀರಿನ ಮಟ್ಟ ಕಾಯ್ದುಕೊಳ್ಳಲಾಗುತ್ತಿದೆ. ಜಲಾಶಯಕ್ಕೆ 24450 ಕ್ಯೂಸೆಕ್…
ಸಾಲ ಮನ್ನಾ ಕಾಫಿ ಬೆಳೆಗಾರರಿಗೆ ಕಹಿ!
July 8, 2018ಕೊಡಗಿನ ಡಿಸಿಸಿ ಬ್ಯಾಂಕ್ ವ್ಯಾಪ್ತಿಯ ಕೇವಲ 168 ಬೆಳೆಗಾರರಿಗೆ ಮಾತ್ರ ಸಾಲ ಮನ್ನಾ ಸೌಲಭ್ಯ ಸಹಕಾರ ಬ್ಯಾಂಕ್ಗಳಲ್ಲಿ ಸಾಲ ಪಡೆದಿರುವ 35 ಸಾವಿರ ಬೆಳೆಗಾರರು ಸೌಲಭ್ಯ ವಂಚಿತರು ಅವಿಭಕ್ತ ಕುಟುಂಬದ ರೈತರಿಗೆ ಸೌಲಭ್ಯ ಗಗನ ಕುಸುಮ ಮಡಿಕೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈತರಿಗೆ 34 ಸಾವಿರ ಕೋಟಿ ರೂ. ಸುಸ್ತಿ ಸಾಲ ಮನ್ನಾ ಮಾಡು ವುದಾಗಿ ಘೋಷಿಸಿದ್ದಾರೆ. ಈ ಸಾಲ ಮನ್ನಾ ಕಾಫಿ ಬೆಳೆಗಾರರಿಗೂ ಅನ್ವಯಿಸು ತ್ತದೆಯಾದರೂ, ಸಹಕಾರಿ ಬ್ಯಾಂಕ್ಗಳಲ್ಲಿ ಸಾಲ…
ಡಿಸಿಸಿ ಬ್ಯಾಂಕ್ ಎಟಿಎಂ ಉದ್ಘಾಟನೆ
July 8, 2018ವಿರಾಜಪೇಟೆ: ಸಾರ್ವಜನಿಕರಿಗೆ ಸುಲಭವಾಗಿ ಹಣ ದೊರಕಿಸಿಕೊಡುವ ಸಲುವಾಗಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಎಟಿಎಂ ಸೇವೆಯನ್ನು ಲೋಕಾರ್ಪಣೆ ಗೊಳಿಸಿದೆ ಎಂದು ದೇವಣಗೇರಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಹೇಳಿದರು. ವಿರಾಜ ಪೇಟೆ ಪಟ್ಟಣದಲ್ಲಿರುವ ಸಹಕಾರ ಬ್ಯಾಂಕ್ನ ಎಟಿಎಂನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳ ಒಟ್ಟು 10 ಎಟಿಎಂಗಳಿದ್ದು ಅದರೊಂದಿಗೆ ಕೆಡಿಸಿಸಿ ಬ್ಯಾಂಕ್ನ ಎಟಿಎಂ ಕೂಡ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ ಎಂದರು….
ತಿತಿಮತಿ ಬಳಿ 2 ಪ್ರತ್ಯೇಕ ಬೈಕ್ ಅಪಘಾತ ಬೈಕ್ ಸವಾರ ಸಾವು, ಚೆನ್ನೈನ ಇಬ್ಬರು ಪ್ರವಾಸಿಗರ ಕಾಲು ಮುರಿತ
July 8, 2018ಗೋಣಿಕೊಪ್ಪಲು: ಕೆಎಸ್ ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ವಾರದ ರಜೆ ಕಳೆಯಲು ಚೆನ್ನೈನಿಂದ ಕೊಡಗಿಗೆ ಬೈಕ್ನಲ್ಲಿ ಆಗ ಮಿಸುತ್ತಿದ್ದ ಇಬ್ಬರು ಯುವಕರು ತೀವ ್ರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ತಿತಿಮತಿ ಬಳಿ ನಡೆದಿದೆ. ರಾತ್ರಿ 8 ಗಂಟೆ ವೇಳೆಯಲ್ಲಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. ಚೆನ್ನೈ ಮೂಲದ ಲೋಕೇಶ್ (25) ಹಾಗೂ ಅಶ್ವಿನ್(24) ಬೆಳಿಗ್ಗೆ ನಡೆದ ಅಪ ಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವಕರ ಕಾಲು ಮುರಿದಿದೆ. ಚೆನ್ನೈನಿಂದ…
ಚಿರತೆ ಹೋಲುವ ಪ್ರಾಣಿ ಪತ್ತೆ
July 8, 2018ಮಡಿಕೇರಿ: ನಾಪೋಕ್ಲುವಿನ ಚೆರಿಯಪರಂಬುವಿನ ಕಾಫಿತೋಟವೊಂದರಲ್ಲಿ ಚಿರತೆ ಮರಿಯನ್ನು ಹೋಲುವ ಪ್ರಾಣಿ ಪತ್ತೆಯಾಗಿದೆ. ಚೆರಿಯಪರಂಬುವಿನ ನಿವಾಸಿ ಹ್ಯಾರಿಸ್ ಎಂಬುವರ ತೋಟ ದಲ್ಲಿ ಪತ್ತೆಯಾದ ಎರಡು ಮರಿಗಳನ್ನು ಕಂಡು ಸ್ಥಳೀಯರು ಇವು ಚಿರತೆಯ ಮರಿ ಗಳೆಂದು ಭಾವಿಸಿದ್ದರಲ್ಲದೇ, ತೋಟದೊಳಗೆ ತಾಯಿ ಚಿರತೆ ಅವಿತುಕೊಂಡಿರುವ ಬಗ್ಗೆ ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಅರಣ್ಯಾಧಿ ಕಾರಿಗಳು ತೋಟದಲ್ಲಿ ಪತ್ತೆ ಯಾದ ಮರಿಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಚಿರತೆಯನ್ನು ಹೋಲುವ ಎರಡು ಮರಿಗಳು ಪೆರ್ಪಣದ…
ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೆ ಎರಡು ವರ್ಷ ತಿಂಗಳಾಂತ್ಯದಲ್ಲಿ ಸುಪ್ರೀಂ ಕೋರ್ಟ್ಗೆ ಸಿಬಿಐ ವರದಿ ಸಾಧ್ಯತೆ
July 7, 2018ಮಡಿಕೇರಿ: ನಗರದ ವಿನಾ ಯಕ ಲಾಡ್ಜ್ನ 315ನೇ ನಂಬರ್ ಕೋಣೆ ಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಹ ಲೋಕ ತ್ಯಜಿಸಿದ್ದ, ಕೊಡಗು ಮೂಲದ ಡಿವೈಎಸ್ಪಿ ಮಾದಪಂಡ ಗಣಪತಿ ಸಾವಿಗೆ ಜುಲೈ 7ಕ್ಕೆ ಬರೋಬ್ಬರಿ ಎರಡು ವರ್ಷ ತುಂಬುತ್ತಿದೆ. ರಾಜ್ಯ ಸರಕಾರವನ್ನು ತಲ್ಲಣಗೊಳಿಸಿದ್ದ ಡಿವೈಎಸ್ಪಿ ಸಂಶಯಾ ಸ್ಪದ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚೆನೈನ ಸಿಬಿಐ ತಂಡ ತನಿಖೆ ನಡೆಸುತ್ತಿದ್ದು, ಪ್ರಸ್ತುತ ತನಿಖೆ ಮುಂದುವರಿದಿದೆ. ಚೆನೈ ಸಿ.ಬಿ.ಐ ತಂಡ ಹಲವು ಬಾರಿ ಕೊಡಗಿಗೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪೆರುಂಬಾಡಿ-ಮಾಕುಟ ರಸ್ತೆ: ಲಘು ವಾಹನ ಸಂಚಾರಕ್ಕೆ ಅವಕಾಶ
July 7, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜೂನ್ ಎರಡನೇ ವಾರ ಸುರಿದ ಧಾರಾಕಾರ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಕೊಣನೂರು-ಮಾಕುಟ ರಾಜ್ಯ ಹೆದ್ದಾರಿಯ ಲ್ಲಿರುವ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆ ಹಾಗೂ ಸೇತುವೆಗಳು ಮಣ್ಣು ಕುಸಿದು, ಮರಗಳು ಬಿದ್ದು ತುಂಬಾ ಹದಗೆಟ್ಟಿರುತ್ತದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಲಘು ಹಾಗೂ ಭಾರೀ ವಾಹನಗಳು ಸಂಚರಿಸುವುದರಿಂದ ಸಾರ್ವಜನಿಕ ಜೀವಕ್ಕೆ ತೊಂದರೆ ಉಂಟಾ ಗುವ ಸಾಧ್ಯತೆ ಇರುವುದರಿಂದ ರಸ್ತೆ ದುರಸ್ತಿ ಮಾಡುವ ಕಾರ್ಯ ಪೂರ್ಣಗೊಳ್ಳುವವರೆಗೆ ಈ ರಸ್ತೆ ಮಾರ್ಗ ಎಲ್ಲಾ ರೀತಿಯ ವಾಹನ ಗಳ ಸಂಚಾರವನ್ನು ತಾತ್ಕಾಲಿಕವಾಗಿ…
ಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದ ಅಡ್ಡಂಡ ಕಾರ್ಯಪ್ಪ
July 7, 2018ಮಡಿಕೇರಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾ ರಸ್ವಾಮಿ ತಮ್ಮ ಚೊಚ್ಚಲ ಬಜೆಟ್ನಲ್ಲಿ ಕೊಡಗು ಜಿಲ್ಲೆಗೆ ಯಾವುದೇ ಯೋಜನೆ ಮತ್ತು ಅನುದಾನ ಘೋಷಿಸದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತಗೊಂಡಿದೆ. ಹಿರಿಯ ಸಾಹಿತಿ, ರಂಗಕರ್ಮಿ, ಅಡ್ಡಂಡ ಕಾರ್ಯಪ್ಪ, ರಾಜ್ಯ ಸರಕಾರದ ಬಜೆಟ್ ವಿರುದ್ಧ ಹರಿ ಹಾಯ್ದಿರುವ ವೀಡಿಯೋ ವೈರಲ್ ಆಗಿದ್ದು, ಸರಕಾರವನ್ನು ತೀವ್ರ ತರಾಟೆಗೆ ತೆಗೆದು ಕೊಂಡಿದ್ದಾರೆ. ಕೊಡಗು ಜಿಲ್ಲೆಯನ್ನು ಕರ್ನಾ ಟಕದಿಂದಲೇ ಹೊರಗಿಡಲಾಗಿದ್ದು, ಜಿಲ್ಲೆಯ ಜನತೆಯ ಪ್ರತ್ಯೇಕ ರಾಜ್ಯದ ಕೂಗಿಗೆ ಮುಖ್ಯ…