ಕೊಡಗು

ಅಂತಾರಾಷ್ಟ್ರೀಯ ಕಾಫಿ ದಿನ ಆಚರಣೆ
ಕೊಡಗು

ಅಂತಾರಾಷ್ಟ್ರೀಯ ಕಾಫಿ ದಿನ ಆಚರಣೆ

October 2, 2022

ಮಡಿಕೇರಿ,ಅ.1- ಕೊಡಗು ಮಹಿಳಾ ಕಾಫಿ ಜಾಗೃತಿ ವೇದಿಕೆ ವತಿಯಿಂದ ಅಂತಾ ರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಯಿತು. ಕಾರಗುಂದ ಗ್ರಾಮದ ಕುಮಾರೀಸ್ ಕಿಚನ್ ಸಭಾಂಗಣದಲ್ಲಿ ನಡೆದ ಅಂತರ್‍ರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮವನ್ನು ಕಾಫಿ ಬೆಳೆಗಾರ, ಉದ್ಯಮಿ ತೇಲಪಂಡ ಪ್ರದೀಪ್ ಪೂವಯ್ಯ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ತೇಲಪಂಡ ಪ್ರದೀಪ್ ಪೂವಯ್ಯ, ಮಾನವನ ದೈಹಿಕ ಆರೋಗ್ಯ ಕಾಪಾಡಲು ನಿಗದಿತ ಪ್ರಮಾಣದ ಕಾಫಿ ಸೇವನೆ ಅತ್ಯಗತ್ಯವಾಗಿದೆ. ಯುರೋಪಿಯನ್ ದೇಶಗಳಲ್ಲಿ ಕಾಫಿ ಸೇವಿಸುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಅವರು…

ಮಡಿಕೇರಿಯಲ್ಲಿ ಭಾರೀ ಮಳೆ
ಕೊಡಗು

ಮಡಿಕೇರಿಯಲ್ಲಿ ಭಾರೀ ಮಳೆ

September 2, 2022

ಮಡಿಕೇರಿ,ಸೆ.1- ಗುರುವಾರ ಸಂಜೆ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಏಕಾಏಕಿ ಭಾರೀ ಮಳೆ ಸುರಿದಿದ್ದು, ಅವಾಂತರಗಳನ್ನು ಸೃಷ್ಟಿಸಿದೆ. ವರುಣನ ರೌದ್ರಾವತಾರಕ್ಕೆ ಮಡಿಕೇರಿ ನಗರ ಬೆಚ್ಚಿ ಬಿದ್ದಿದ್ದು, ಹಲವು ಕಡೆಗಳಲ್ಲಿ ಚರಂಡಿ ಹಾಗೂ ರಾಜಕಾಲುವೆಗಳ ನೀರು ಉಕ್ಕಿ ಹರಿದ ಪರಿಣಾಮ ಜನ ವಸತಿ ಪ್ರದೇಶಗಳನ್ನು ಜಲಾವೃತಗೊಳಿಸಿದೆ. ನಗರದ ಕೈಗಾರಿಕಾ ಬಡಾವಣೆ, ಓಂಕಾ ರೇಶ್ವರ ದೇವಾಲಯ ರಸ್ತೆ, ಪ್ರಕೃತಿ ಬಡಾವಣೆ, ನಿಸರ್ಗ ಬಡಾವಣೆ, ಎಲ್.ಐ.ಸಿ. ಸಮೀಪ, ಜ್ಯೂನಿಯರ್ ಕಾಲೇಜು ರಸ್ತೆ, ಪತ್ರಿಕಾ ಭವನ ರಸ್ತೆಗಳ ಚರಂಡಿಗಳಲ್ಲಿ ಏಕಾಏಕಿ ನೀರು ಉಕ್ಕಿ ಹರಿದು…

ಮಡಿಕೇರಿ ಚಲೋ, ಬಿಜೆಪಿ ಸಮಾವೇಶ  ಮುಂದೂಡಲ್ಪಟ್ಟರೂ ಕೊಡಗಲ್ಲಿ ಕಟ್ಟೆಚ್ಚರ
ಕೊಡಗು

ಮಡಿಕೇರಿ ಚಲೋ, ಬಿಜೆಪಿ ಸಮಾವೇಶ ಮುಂದೂಡಲ್ಪಟ್ಟರೂ ಕೊಡಗಲ್ಲಿ ಕಟ್ಟೆಚ್ಚರ

August 25, 2022

ಮಡಿಕೇರಿ,ಆ.24- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಮತ್ತು ಪೂರ್ವ ನಿಗದಿತ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಮುಂದೂಡಿದ್ದರೂ ಜಿಲ್ಲೆಯಲ್ಲಿ ಒಂದು ರೀತಿಯ ಬಿಗುವಿನ ವಾತಾವರಣವಿದ್ದು, ಬುಧವಾರ ಮುಂಜಾನೆಯಿಂದ 144 ಸೆಕ್ಷನ್‍ನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕೊಡಗಿನಲ್ಲಿ ಬೀಡುಬಿಟ್ಟಿದ್ದು, ವಿಪಕ್ಷ ನಾಯಕ ಸಿದ್ದ ರಾಮಯ್ಯರು ಜಿಲ್ಲೆಗೆ ಭೇಟಿ ನೀಡಿದ ವೇಳೆ ನಡೆದ ಘಟನಾವಳಿ ಗಳ ಹಿನ್ನೆಲೆಯಲ್ಲಿ ಉಂಟಾಗಿದ್ದ ಅಹಿತಕರ…

ಥೈಲ್ಯಾಂಡ್ ಮುಕ್ತ ವಿಶ್ವ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ಕರಾಟೆ ಪಟುವಿಗೆ ಕಂಚಿನ ಪದಕ
ಕೊಡಗು

ಥೈಲ್ಯಾಂಡ್ ಮುಕ್ತ ವಿಶ್ವ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ಕರಾಟೆ ಪಟುವಿಗೆ ಕಂಚಿನ ಪದಕ

August 24, 2022

ಮಡಿಕೇರಿ, ಆ.23- ಥೈಲ್ಯಾಂಡ್ ದೇಶದ ಫುಕೆಟ್‍ನಲ್ಲಿ ನಡೆದ ಥೈಲ್ಯಾಂಡ್ ಮುಕ್ತ ವಿಶ್ವ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೊಡಗು ಮೂಲದ ಬಬ್ಬೀರ ಅಂಕಿತಾ ತಿಮ್ಮಯ್ಯ ಕಂಚಿನ ಪದಕ ಜಯಿಸಿದ್ದಾರೆ. ಆ.19ರಿಂದ 23ರವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವದ ವಿವಿಧ ದೇಶಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮಹಿಳೆಯರ ಕುಮಿಟೆ 68 ಕೆಜಿ ವಿಭಾಗ ದಲ್ಲಿ ಭಾರತವನ್ನು ಪ್ರತಿನಿಧಿಸಿದ ಅಂಕಿತಾ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಎದುರಾಳಿ ಗಳ ವಿರುದ್ಧ ಸುಲಭ ಜಯ ಸಾಧಿಸಿದರು. ಬಳಿಕ ಪದಕ ಸುತ್ತಿನ ಪಂದ್ಯದಲ್ಲಿ ಮಲೇಷ್ಯಾ ಎದುರು 1-3…

ಡಿಸಿ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ
ಕೊಡಗು

ಡಿಸಿ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ

August 23, 2022

ಮಡಿಕೇರಿ, ಆ.22- ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಾರ್ಯ ಚಟುವಟಿಕೆ ಸಂಬಂಧ `ಸ್ಮಾರಕ ಭವನ ನಿರ್ವಹಣಾ ಸಮಿತಿ’ ಸಭೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನ ಸ್ವಾಮಿ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಸರ್ಕಾ ರದಿಂದ 25 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು. ನಿರ್ಮಿತಿ ಕೇಂದ್ರದ…

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್ ಸಹೋದರನ ಮದುವೆಯಲ್ಲಿ ಜೀವಿಜಯ ಫೋಟೊ ವೈರಲ್
ಕೊಡಗು

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್ ಸಹೋದರನ ಮದುವೆಯಲ್ಲಿ ಜೀವಿಜಯ ಫೋಟೊ ವೈರಲ್

August 23, 2022

ಮಡಿಕೇರಿ,ಆ.22- ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದು ವಿವಾದ ಸೃಷ್ಟಿಸಿರುವ ಸಂಪತ್ ಸಹೋದರನ ಮದುವೆ ಸಮಾರಂಭದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ ಪಾಲ್ಗೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆ ದಿನ ಸಂಪತ್ ನನಗೆ ಗೊತ್ತಿಲ್ಲ. ಆತ ಕಾಂಗ್ರೆಸ್ ಕಾರ್ಯಕರ್ತನೂ ಅಲ್ಲ ಎಂದು ಜೀವಿಜಯ ಹೇಳಿದ್ದರು. ಈ ಫೋಟೋ ವೈರಲ್ ಕುರಿತು ಸೋಮವಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾ ಡಿದ ಶಾಸಕ ಅಪ್ಪಚ್ಚು ರಂಜನ್, ಜೀವಿಜಯ ಅವರು ಸಂಪತ್ ಸಹೋದರನ ಮದುವೆಗೆ ಹೋಗಿ ರುವ ಫೋಟೋ…

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸಲು ಸೂಚನೆ
ಕೊಡಗು

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿಗೆ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸಲು ಸೂಚನೆ

August 13, 2022

ಮಡಿಕೇರಿ,ಆ.12- ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕೂಡಲೇ ವಿಸ್ತøತ ಅಂದಾಜು ಪಟ್ಟಿ ಸಲ್ಲಿಸ ಬೇಕು ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರಿಗೆ ಸೂಚಿಸಿದ್ದಾರೆ. ವಿಡಿಯೋ ಸಂವಾದದ ಮೂಲಕ ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಕಾಮಗಾರಿ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಡಾ.ಎನ್.ವಿ.ಪ್ರಸಾದ್, ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಯನ್ನು ಶೀಘ್ರ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಅಂದಾಜು ಪಟ್ಟಿ ಸಲ್ಲಿಸಬೇಕು. ಜಿಲ್ಲೆಯ ಶಾಸಕರು…

ಕೊಡಗಲ್ಲಿ ಮಳೆ ಕಡಿಮೆಯಾದರೂ ತಪ್ಪದ ಭೂ ಕುಸಿತ
ಕೊಡಗು

ಕೊಡಗಲ್ಲಿ ಮಳೆ ಕಡಿಮೆಯಾದರೂ ತಪ್ಪದ ಭೂ ಕುಸಿತ

August 12, 2022

ಮಡಿಕೇರಿ,ಆ.11- ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಳೆದ 2 ದಿನಗಳಿಂದ ಇಳಿಕೆ ಕಂಡಿದೆ. ಆದರೆ ಮತ್ತೆ ಮಳೆ ಬಿರುಸು ಪಡೆಯುವ ಎಲ್ಲಾ ಸಾಧ್ಯತೆ ಇರುವ ಹಿನ್ನೆಲೆ ಯಲ್ಲಿ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಗಿನ 8.30ರವರೆಗೆ `ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಮಳೆ ಕಡಿಮೆಯಾದ ಕಾರಣ ನದಿಗಳಲ್ಲಿ ಕೂಡ ನೀರಿನ ಮಟ್ಟ ಪ್ರವಾಹ ಸ್ಥಿತಿಯಿಂದ ಇಳಿಕೆ ಕಂಡಿದೆ. ಆದರೆ ತಗ್ಗು…

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಬೆಟ್ಟ ಕುಸಿತದ ಆತಂಕ
ಕೊಡಗು

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಬೆಟ್ಟ ಕುಸಿತದ ಆತಂಕ

August 11, 2022

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಾತ್ರಿ ವೇಳೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕರ್ತೋಜೆ ಬಳಿ ಭಾರೀ ಬೆಟ್ಟ ಕುಸಿಯುವ ಆತಂಕ ಇರುವ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನಿಗಳು ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾಡಳಿತಕ್ಕೆ ವರದಿ ನೀಡಿದ್ದಾರೆ. ಮದೆನಾಡು ಭಾಗದಲ್ಲಿ ಮಳೆ ಮುಂದುವರೆದಿರುವ ಕಾರಣ ಯಾವ ಕ್ಷಣದಲ್ಲಾದರೂ ಬೆಟ್ಟ ಬಿರುಕು ಬಿಟ್ಟ ಪ್ರದೇಶ ಕುಸಿಯುವ ಸಾಧ್ಯತೆ ಇದೆ. ಈ ಕಾರಣ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಆ.10ರಿಂದ ಜಾರಿಗೆ ಬರುವಂತೆ ರಾತ್ರಿ…

ದಂಪತಿ ಕಲಹ: ಪತ್ನಿ ಕೊಲೆಯಲ್ಲಿ ಅಂತ್ಯ ಒಂಟಿ ನಳಿಗೆ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ
ಕೊಡಗು

ದಂಪತಿ ಕಲಹ: ಪತ್ನಿ ಕೊಲೆಯಲ್ಲಿ ಅಂತ್ಯ ಒಂಟಿ ನಳಿಗೆ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ

August 11, 2022

ಮಡಿಕೇರಿ,ಆ.10- ಗಂಡ-ಹೆಂಡತಿಯ ಜಗಳವು ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ತಾಲೂಕಿನ ಚೆಟ್ಟಳ್ಳಿ ಗ್ರಾಮ ದಲ್ಲಿ ನಡೆದಿದೆ. ಚೇರಳ ಶ್ರೀಮಂಗಲ ಗ್ರಾಮ ನಿವಾಸಿ ಬಟ್ಟೀರ ಶುಷ್ಮ(43) ಕೊಲೆಯಾದ ಮಹಿಳೆ. ಆರೋಪಿ ಬಟ್ಟೀರ ಗೋಪಾಲನನ್ನು ಮಡಿ ಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಪತ್ನಿಯ ಮೇಲೆ ಸಂಶಯ ಗೊಂಡ ಪತಿ ಬಟ್ಟೀರ ಗೋಪಾಲ ಮಂಗಳ ವಾರ ರಾತ್ರಿ ಪತ್ನಿ ಶುಷ್ಮ ಅವರೊಂದಿಗೆ ಜಗಳ ಆರಂಭಿಸಿದ್ದಾನೆ. ಬಳಿಕ ಕೋಣೆಯೊ ಳಗೆ ಇದ್ದ ತನ್ನ ಒಂಟಿನಳಿಗೆ ಕೋವಿಯಿಂದ ಎದೆಯ ಭಾಗಕ್ಕೆ…

1 2 3 4 5 6 187
Translate »