ಸಿದ್ದಾಪುರ: ಹೆಚ್ಚು ಆದಾಯ ಇರುವ ಸಿದ್ದಾಪುರ ಗ್ರಾಪಂ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪಂಚಾಯಿತಿ ಸಮೀಪದಲ್ಲಿಯೇ ಪ್ರತಿ ವಾರ ನಡೆಯುವ ಸಂತೆಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ವ್ಯಾಪಾರಿಗಳು, ಗ್ರಾಹಕರು ಆಗ ಮಿಸುತ್ತಿದ್ದಾರೆ. ಆದರೆ, ಶೌಚಾಲಯದ ವ್ಯವಸ್ಥೆ ಇಲ್ಲದೆ ಮಹಿಳೆಯರು-ಪುರು ಷರು ಪರದಾಡುವಂತಾಗಿದೆ. ಪ್ರತಿ ವರ್ಷ ಸಂತೆ ಮಾರುಕಟ್ಟೆ ಶುಲ್ಕದ ಹರಾಜು ಪ್ರಕ್ರಿಯೆ ನಡೆಸಿ ಅಂದಾಜು ಐದು ಲಕ್ಷ ಆದಾಯ ಗಳಿಸುತ್ತಿರುವ ಗ್ರಾಪಂ ಕನಿಷ್ಠ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲ ವಾಗಿದೆ ಎಂದು…
ನಾನು ರಾಜಕೀಯಕ್ಕೆ ಬರಲ್ಲ: ಯದುವೀರ್
January 29, 2019ಮಡಿಕೇರಿ: ರಾಜಕೀಯ ರಂಗಕ್ಕೆ ಕಾಲಿಡುವುದಿಲ್ಲ ಎಂಬ ತನ್ನ ನಿರ್ಧಾರ ಅಚಲವಾಗಿದ್ದು, ಜನಸೇವೆಗೆ ಸಾಮಾಜಿಕ ಚಟುವಟಿಕೆಗಳ ಮೂಲಕ ಮುಂದಾಗುವುದಾಗಿ ಮೈಸೂರು ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಡಿಕೇರಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಯದುವೀರ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ಶಾ ಚುನಾವಣೆಗೆ ಮುನ್ನ ಮೈಸೂರು ರಾಜಮನೆತನದ ಮುಖಂಡರನ್ನು ಭೇಟಿಯಾಗುವೆ ಎಂಬ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಯದುವೀರ್, ತಾನು ಖಂಡಿತಾ ರಾಜಕೀಯಕ್ಕೆ ಬರಲಾರೆ ಎಂದರು. ಪ್ರಕೃತಿ ವಿಕೋಪ ಪೀಡಿತ ಕೊಡಗಿನ…
ಫೀ.ಮಾ. ಕಾರಿಯಪ್ಪರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ
January 29, 2019ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಬಣ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಆವರಣದಲ್ಲಿ ಸೋಮವಾರ ನಡೆದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ 120ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು…
ಗೋಣಿಕೊಪ್ಪದಲ್ಲೂ ಕೊಡಗಿನ ವೀರನ ಸ್ಮರಣೆ
January 29, 2019ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ.ಕಾರಿಯಪ್ಪ ಅವರ ಜನ್ಮ ದಿನ ಆಚರಿಸಲಾಯಿತು. ಈ ಸಂದರ್ಭ ಕಾರಿಯಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಕಾಲೇಜು ಆವರಣದಲ್ಲಿರುವ ಫೀಲ್ಢ್ ಮಾರ್ಷಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರುಗಳ ಜೋಡಿ ಪ್ರತಿಮೆಗಳಿಗೆ ಪುಷ್ಪ ಗುಚ್ಚ ಅರ್ಪಿಸಿ ನಮನ ಸಲ್ಲಿಸಲಾಯಿತು. ಈ ಸಂದರ್ಭ ಎನ್ಎಸ್ಎಸ್ ಸ್ವಯಂ ಸೇವಕಿ ಅಂಜುಷ, ಕಾರಿಯಪ್ಪ ಅವರ ಬಗ್ಗೆ ಮಾಹಿತಿ ನೀಡಿ, ಭಾರತೀಯ ಸೈನ್ಯದಲ್ಲಿ ಶಿಸ್ತು ಹಾಗೂ ಸಮಯಪಾಲನೆ ಮೂಡಿ ಸಿದ, ಕರ್ನಾಟಕ ಹಾಗೂ…
ಜಿಲ್ಲಾದ್ಯಂತ ಗಣರಾಜ್ಯೋತ್ಸವ ಆಚರಣೆ ಕೊಡಗಿನ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
January 28, 2019ಮಡಿಕೇರಿ: ಕಳೆದ ಆಗಸ್ಟ್ ತಿಂಗ ಳಿನಲ್ಲಿ ಸಂಭವಿಸಿದ ಅತಿವೃಷ್ಟಿ ಅನಾಹುತ ದಿಂದ ಸಂತ್ರಸ್ತರಾಗಿರುವ ಕೊಡಗಿನ ಜನ ತೆಗೆ ಹೊಸ ಬದುಕನ್ನು ಕಟ್ಟಿಕೊಡುವ ಕಾರ್ಯ ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕಟಿ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವರೂ ಆಗಿರುವ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಭರವಸೆ ನೀಡಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಗಣರಾಜ್ಯೋ ತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಸಶಸ್ತ್ರ ಪಡೆಗಳ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ…
ಸಂವಿಧಾನದ ತಳಹದಿಯಲ್ಲಿ ಭಾರತದ ಅಭಿವೃದ್ಧಿ
January 28, 2019ವಿರಾಜಪೇಟೆ: ಸಂವಿಧಾನದ ತಳ ಹದಿಯ ಮೇಲೆ ಅಭಿವೃದ್ಧಿಯ ಭಾರತ ಕಟ್ಟುವ ಮೂಲಕ ಪ್ರಜೆಗಳಿಂದ ಪ್ರಜೆಗಳಿ ಗಾಗಿ ಪ್ರಜೆಗಳಿಗೋಸ್ಕರ ಇರುವ ಸರಕಾರ ಸಂವಿಧಾನದ ಹೃದಯವಾಗಿದೆ ಎಂದು ತಹ ಶೀಲ್ದಾರ್ ಡಿ.ಎಂ.ಗೋವಿಂದರಾಜು ಹೇಳಿದರು. ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗ ವಾಗಿ ಪಟ್ಟಣದ ತಾಲೂಕು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಧ್ವಜಾ ರೋಹಣ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಗೋವಿಂದ ರಾಜು, ಭಾರತವನ್ನು ರಚನಾತ್ಮಕವಾಗಿ ಕಟ್ಟುವು ದರೊಂದಿಗೆ ವೈವಿಧ್ಯತೆಯಲ್ಲಿ ಏಕತೆಯನ್ನು…
ಅನ್ನದಾತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು
January 28, 2019ಸೋಮವಾರಪೇಟೆ: ಇಲ್ಲಿನ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 70ನೇ ಗಣರಾಜೋತ್ಸವ ಕಾರ್ಯಕ್ರಮ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲಾ ಮೈದಾನದಲ್ಲಿ ಆರ್ಥ ಪೂರ್ಣವಾಗಿ ಆಚರಿಸಲಾಯಿತು. ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಹೊಂಗಾಡ್ರ್ಸ್, ಜೈ ಜವಾನ್ ಮಾಜಿ ಸೈನಿಕರ ಸಂಘ, ಸಾಂದೀಪನಿ, ಕುವೆಂಪು, ಓಎಲ್ವಿ, ಜ್ಞಾನವಿಕಾಸ ಶಾಲೆಗಳು ಹಾಗೂ ವಿದ್ಯಾರ್ಥಿ ಪೊಲೀಸ್ ಘಟಕದಿಂದ ಆಕ ರ್ಷಕ ಪಥಸಂಚಲನ ನಡೆಯಿತು. ತಹಶೀ ಲ್ದಾರ್ ಪಿ.ಎಸ್.ಮಹೇಶ್ ಧ್ವಜಾರೋ ಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು. ಬಡತನ, ನಿರುದ್ಯೋಗ ನಿವಾರಣೆಗಾಗಿ…
ಹಿಂದೂ ಹೆಣ್ಣು ಮಕ್ಕಳ ಮುಟ್ಟಿದ ಇತರ ಧರ್ಮದವರ ಕೈ ಇರಬಾರದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ
January 28, 2019ಸೋಮವಾರಪೇಟೆ: ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಇತರೆ ಧರ್ಮದ ಯುವಕರು ಮುಟ್ಟಿದರೆ ಅವರ ಕೈಇರಬಾರದು. ಅಂಥ ವರ ಕೈ ತೆಗೆದು ಹಿಂದೂ ಸಂಘಟನೆಯ ಕಾರ್ಯಕರ್ತರು ಇತಿಹಾಸ ನಿರ್ಮಿಸಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭಾನುವಾರ ಹೇಳಿ ರುವುದು ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸೋಮವಾರಪೇಟೆ ತಾಲೂಕು ಮಾದಾಪುರ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನವೀಕೃತ ಕಲ್ಲುಕೋರೆ ಚೌಡಿಯಮ್ಮ ಮತ್ತು ಗುಳಿಗಪ್ಪ ದೇವಸ್ಥಾನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅನಂತಕುಮಾರ್ ಹೆಗಡೆ ಎಂದಿನಂತೆ ತಮ್ಮ ಅಕ್ರೋಶ ಭರಿತ ಮಾತುಗಳಿಂದ ವಿವಾದದ…
ಇಂದು ಫೀ.ಮಾ.ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆ
January 28, 2019ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 120ನೇ ಜನ್ಮ ದಿನಾಚರಣೆಯು ಜ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮುಖ್ಯ ರಸ್ತೆ ಮೂಲಕ ಮೆರ ವಣಿಗೆ ನಡೆಯಲಿದೆ.
ಅಪರಿಚಿತ ಮಹಿಳೆ ಶವ ಪತ್ತೆ
January 28, 2019ವಿರಾಜಪೇಟೆ: ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ಭತ್ತದ ಗದ್ದೆಯ ಬಳಿಯಲ್ಲಿ ಕೊಳೆತ ಸ್ಥಿತಿಯಲ್ಲಿ ರುವ ಮಹಿಳೆಯ ಶವ ಪತ್ತೆಯಾಗಿದ್ದು, ಸುಮಾರು 15 ದಿನಗಳ ಹಿಂದೆ ಯಾರೊ ಕೊಲೆ ಮಾಡಿ ಶವವನ್ನು ಎಸೆದು ಹೋಗಿರಬ ಹುದೆಂದು ಪೊಲೀಸರು ಶಂಕಿಸಿದ್ದಾರೆ. ಗ್ರಾಮದ ಸುತ್ತಮುತ್ತ ಕೆಟ್ಟ ವಾಸನೆ ಬರು ತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ತೆರಳಿದಾಗ ಶವ ಪತ್ತೆಯಾಗಿದೆ. ಕೂಡಲೇ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳ ಪರಿಶೀ ಲನೆ ನಡೆಸಿದ್ದಾರೆ. ನಾಯಿ ನರಿಗಳು ಕಚ್ಚಿ ತಿಂದಿರುವುದರಿಂದ…