ವಿರಾಜಪೇಟೆ: ಕಾಂಗ್ರೆಸ್ ಪಕ್ಷ ಅನೇಕ ಜನಪರ ಯೋಜನೆಗಳನ್ನು ರೂಪಿಸಿ ಬಡ ಜನರ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿರುವುದರೊಂದಿಗೆ ಗ್ರಾಮೀಣ ಮಟ್ಟದ ಸದಸ್ಯರನ್ನು ಗುರುತಿಸುವಂತ ಕಾರ್ಯ ಮಾಡುತ್ತಿರುವುದಾಗಿ ಮಾಜಿ ಎಂಎಲ್ಸಿ ಪಕ್ಷದ ಶಕ್ತಿ ಕಾರ್ಯಕ್ರಮದ ಸಂಯೋಜಕ ಅರುಣ್ ಮಾಚಯ್ಯ ಹೇಳದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿ ಯಿಂದ ಸ್ಥಳಿಯ ಪುರಭವನದಲ್ಲಿ ಆಯೋ ಜಿಸಲಾಗಿದ್ದ ಪಕ್ಷಕ್ಕೆ ನೂತನ ಸದಸ್ಯರ ನೋಂದಣಿ ಶಕ್ತಿ ಚಾಲನ ಕಾರ್ಯಕ್ರಮ ದಲ್ಲಿ ಮಾತನಾಡಿದ ಅರುಣ್ ಮಾಚಯ್ಯ, ಪಕ್ಷದ ಶಕ್ತಿ ಕಾರ್ಯಕ್ರಮದ ಮೂಲಕ ದೆಹಲಿ ಯಲ್ಲಿ ಇಂದು…
ನೆರವು ಸದುಪಯೋಗಕ್ಕೆ ನೆರೆ ಸಂತ್ರಸ್ತರಿಗೆ ಸಲಹೆ
December 18, 2018ಮಡಿಕೇರಿ: ಪ್ರಕೃತಿ ವಿಕೋಪದ ಸಂತ್ರಸ್ತ ಕುಟುಂಬ ಗಳು ದಾನಿಗಳು ನೀಡುವ ಆರ್ಥಿಕ ನೇರವನ್ನು ಸದ್ಬಳಕೆ ಮಾಡಿಕೊಂಡು ಹೊಸ ಬದುಕು ಕಟ್ಟಿ ಕೊಳ್ಳಬೇಕೆಂದು ಮೈಸೂರಿನ ಶ್ರೀ ಕಾವೇರಿ ಕೊಡವ ಅಸೋಷಿಯೇಷನ್ ಈಸ್ಟ್ ಅಧ್ಯಕ್ಷ ಬೊವ್ವಡಿರ ಎಂ. ದೇವಯ್ಯ ಸಲಹೆ ನೀಡಿದ್ದಾರೆ. ನಗರದ ಕೊಡವ ಸಮಾಜದ ವಾಣಿಜ್ಯ ಸಂಕೀರ್ಣದಲ್ಲಿರುವ ಕೊಡಗು ಸೇವಾ ಕೇಂದ್ರದಲ್ಲಿ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಶ್ರೀ ಕಾವೇರಿ ಕೊಡವ ಅಸೋಷಿಯೇಷನ್ ಈಸ್ಟ್ ವತಿಯಿಂದ 2.5 ಲಕ್ಷ ರೂ. ಹಾಗೂ ಟಿ.ನರಸೀಪುರದ ಗ್ರಾಮ ವಿದ್ಯೋದಯ ಸಂಘ ಮತ್ತು…
ನೆರೆ ಹಾನಿ ಸಂತ್ರಸ್ತರ ಅಳಲು ಆಲಿಸಿದ ಡಿಸಿ
December 17, 2018ಮಡಿಕೇರಿ: ಮಳೆಹಾನಿ ಸಂತ್ರಸ್ತ ಪ್ರದೇಶಗಳಲ್ಲಿ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ ಮತ್ತು ಸಂಕಷ್ಟದಲ್ಲಿರುವ ಸಂತ್ರಸ್ತರ ಗೋಳು ಕೇಳುವವರಿಲ್ಲ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ ನೊಂದ ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ಅಭಯ ನೀಡಿದರು. ಪರಿಹಾರದ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ನೈಜ ಸಂತ್ರಸ್ತರ ಹೆಸರುಗ ಳನ್ನು ಮತ್ತೆ ಸೇರ್ಪಡೆಗೊಳಿಸುವ ಕುರಿತು ಉಪವಿಭಾಗಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಿ…
ಕುಟುಂಬಗಳಲ್ಲಿ ಅನ್ಯೂನ್ಯತೆ ಇರಬೇಕು
December 17, 2018ವಿರಾಜಪೇಟೆ: ಮಾಳೇಟಿರ ಕುಟುಂಬದ ಫಂಡಿನ 2017-18ನೇ ವಾರ್ಷಿಕ ಮಹಾ ಸಭೆಯು ಕೆದಮುಳ್ಳೂರು ಗ್ರಾಮದ ಮಾಳೇಟಿರ ಕುಟುಂಬದ ಕೈಮಡದ ಸಭಾಂಗಣದಲ್ಲಿ ಹಿರಿಯರಾದ ಮಾಳೇಟಿರ ಎಂ.ಗಣಪತಿ ಅಧ್ಯಕ್ಷತೆಯಲ್ಲಿ ನಡೆದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಳೇಟಿರ ಎಂ.ಗಣಪತಿ, ಎಲ್ಲಾ ಕುಟುಂಬಗಳು ಅನ್ಯೂ ನ್ಯತೆಯಿಂದ ಒಂದಾಗಿ ಜೀವನ ನಡೆಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗತಬೇಕು. ಮಕ್ಕಳು ಸಿಗು ವಂತ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಂಡು ದೇಶದ ಉತ್ತಮ ಪ್ರಜೆ ಗಳಾಗುವಂತೆ ಹೇಳಿದರು….
ಯುವ ಜನಾಂಗದಲ್ಲಿ ಶಿಸ್ತು, ಸಮಯ ಪ್ರಜ್ಞೆ ಅಗತ್ಯ
December 17, 2018ಸುಂಟಿಕೊಪ್ಪ: ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶೇಷ ವಾರ್ಷಿಕ ಶಿಬಿರವು ಸಮೀಪದ ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಎನ್ಎಸ್ಎಸ್ ಶಿಬಿರದ ಉದ್ಘಾಟನಾ ಸಮಾರಂಭದ ದ್ವಜಾರೋಹಣವನ್ನು ಐಗೂರು ಗ್ರಾಪಂ ಪ್ರಭಾರ ಅಧ್ಯಕ್ಷೆ ಕೆ.ಪಿ.ಶೋಭಾ ನೆರವೇರಿಸಿ ಮಾತನಾಡಿದ ಅವರು, ಯುವ ಜನಾಂ ಗದವರಲ್ಲಿ ಶಿಸ್ತು, ಸಮಯಪಾಲನೆ, ಸೇವಾ ಮನೋಭಾವನೆಯನ್ನು ರೂಢಿಸಿಕೊಳ್ಳುವುದರ ಜೊತೆಯಲ್ಲಿ ರಾಷ್ಟ್ರೀಯ ಭಾವೈಕ್ಯತೆಯನ್ನುಗಳಿಸಬೇಕು ಎಂದರು. ಐಗೂರು ಗ್ರಾಪಂ ಮಾಜಿ ಅಧ್ಯಕ್ಷ ಡಿ.ಎಸ್.ಚಂಗಪ್ಪ ಮಾತನಾಡಿ, ಇಂತಹ ಶಿಬಿರಗಳು ಆಯಾ ಗ್ರಾಮದ ಗ್ರಾಮಸ್ಥರಿಗೆ…
ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
December 17, 2018ಗೋಣಿಕೊಪ್ಪಲು: ಮಾಯಮುಡಿ ಗ್ರಾಪಂ ವ್ಯಾಪ್ತಿಯಲ್ಲಿ ಜಿಪಂ ಮೂಲಕ ಅನು ಷ್ಠಾನಗೊಳಿಸಲು ಉದ್ದೇಶಿಸಿರುವ ರೂ. 11.60 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮ ಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಗ್ರಾಮಸ್ಥರೊಂದಿಗೆ ಜಿಪಂ ಸದಸ್ಯೆ ಪಿ.ಆರ್. ಪಂಕಜ, ಮಾಯಮುಡಿ ಗ್ರಾಪಂ ಉಪಾಧ್ಯಕ್ಷೆ ಗೌರಿ, ಸದಸ್ಯರುಗಳಾದ ಆಪಟೀರ ಪ್ರದೀಪ್, ಚಿಣ್ಣಪ್ಪ, ಆಪಟೀರ ವಿಠಲ ನಾಚಯ್ಯ, ಮಣಿ ಕುಂಞ, ಬಸ್ರಾ ಇವರುಗಳು ಪೂಜೆ ನೆರ ವೇರಿಸಿದರು. ಈ ಸಂದರ್ಭ ಮಾತನಾಡಿದ ಜಿಪಂ ಸದಸ್ಯೆ ಪಂಕಜ, ಮಾಯಮುಡಿ ಗ್ರಾಪಂ ವ್ಯಾಪ್ತಿಯ 7 ಅಭಿವೃದ್ಧಿ ಕಾಮ…
ಸಿದ್ದಗಂಗಾ ಶ್ರೀಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಕ್ರಮಕ್ಕೆ ಆಗ್ರಹ
December 17, 2018ಸೋಮವಾರಪೇಟೆ: ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಮನೀಶ್ ಮಣಿಕಂಠನ ವಿರುದ್ಧ ಕ್ರಮಕೈಗೊಳ್ಳದಿದ್ದಲ್ಲಿ, ಜಿಲ್ಲಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಅಖಿಲ ಭಾರತ ವೀರ ಶೈವ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜಿ.ಎಂ.ಕಾಂತರಾಜು ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ಹಾಗೂ ಚಿಕಿ ತ್ಸೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಕುರಿತು ಈಗಾಗಲೇ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ನೀಡಿದ್ದು, ಮುಂದಿನ 10 ದಿನಗಳ ಒಳಗೆ…
ನೆರೆ ಸಂತ್ರಸ್ತರಿಗೆ ಪರಿಹಾರ ವಿಳಂಬ ಖಂಡಿಸಿ ಪ್ರತಿಭಟನೆ
December 15, 2018ಮಡಿಕೇರಿ: ಜಿಲ್ಲೆಯ ಅತಿವೃಷ್ಟಿ ಹಾನಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ವಿಳಂಬ ಧೋರಣೆಯನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ವಿವಿಧ ಗ್ರಾಮಗಳ ಸಂತ್ರಸ್ತರೊಂದಿಗೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಗ್ರಾಮಸ್ಥರು ಹಾಗೂ ಹೋರಾಟ ಸಮಿತಿಯ ಪ್ರಮುಖರು ಪರಿಹಾರ ಕಾರ್ಯ ಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಅಮರಣಾಂತ ಉಪ ವಾಸ ಸತ್ಯಾಗ್ರಹವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ…
ಯಲಕನೂರಿನಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ
December 15, 2018ಸೋಮವಾರಪೇಟೆ: ತಾಲೂ ಕಿನ ಯಲಕನೂರು ಗ್ರಾಮದಲ್ಲಿ ಶ್ರೀ ಮಹಾ ಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋ ದ್ಧಾರ ಸಮಿತಿ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ದೇವಾಲ ಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶ್ರೀ ಮಹಾಲಿಂಗೇಶ್ವರ, ಶ್ರೀ ಗಣಪತಿ, ಶ್ರೀ ನವದುರ್ಗಾ, ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವೇಶ್ವರ, ಶ್ರೀ ನಾಗ ದೇವತೆ, ಶ್ರೀ ಅವಲಕ್ಕಿ ಬಸವಣ್ಣ, ಶ್ರೀ ಭಂಟಿಗ ದೇವರುಗಳ ನೂತನ ದೇವಾ ಲಯ ನಿರ್ಮಾಣಕ್ಕೆ ಬೀರೇದೇವರ ಸಮಿತಿ ಅಧ್ಯಕ್ಷ ಬಿ.ಎಸ್. ದಿಲೀಪ್ ಶಿಲಾನ್ಯಾಸ ನೆರವೇರಿಸಿದರು. ನಂತರ ನಡೆದ ಧಾರ್ಮಿಕ…
ನೆರೆ ಸಂತ್ರಸ್ತರ ನೆರವಿನಲ್ಲೂ ರಾಜಕೀಯ? ನೈಜ ಸಂತ್ರಸ್ತರಿಗೆ ನೆರವು ನೀಡಲು ಮನವಿ
December 15, 2018ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ಮಹಾಮಳೆಯಿಂದ ಹಾನಿ ಸಂಭ ವಿಸಿ ನಾಲ್ಕು ತಿಂಗಳುಗಳೇ ಕಳೆದಿದ್ದರೂ ಸಂತ್ರಸ್ತರಿಗೆ ಸರಿಯಾದ ರೀತಿಯಲ್ಲಿ ಪರಿ ಹಾರ ಕಾರ್ಯಗಳು ನಡೆಯುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದೆ. ಸರ್ಕಾರದ ಸೌಲಭ್ಯದಿಂದ ವಂಚಿತರಾಗಿ ರುವ ಅನೇಕ ಮಂದಿ ಸಂತ್ರಸ್ತರು ಕಚೇರಿ ಯಿಂದ ಕಚೇರಿಗೆ ಇಂದಿಗೂ ಅಲೆದಾಡು ತ್ತಲೇ ಇದ್ದಾರೆ. ಮಕ್ಕಂದೂರು ಗ್ರಾಪಂ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಹಾನಿಯಾಗಿದ್ದರೂ ಈ ಭಾಗದ ಗ್ರಾಮ ಸ್ಥರ ಸಂಕಷ್ಟಕ್ಕೆ ಸೂಕ್ತ ಸ್ಪಂದನೆ ದೊರೆಯು ತ್ತಿಲ್ಲ ಎನ್ನುವ ಅಸಮಾಧಾನವಿದೆ. ಮೊದಲ ಹಂತದಲ್ಲಿ…










