ಗೋಣಿಕೊಪ್ಪಲು: ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿರುವ ಗೋಣಿಕೊಪ್ಪ ಪೊಲೀಸರು, 2 ಟಿಪ್ಪರ್ ಲಾರಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಹಾತೂರು ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಸಾಗಣೆ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಲಾಗಿದೆ. ಎರಡು ಟಿಪ್ಪರ್ಗಳಲ್ಲಿ ಮರಳನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕರುಗಳಾದ ವಿರಾಜಪೇಟೆಯ ಫಾರುಕ್ (37), ಸಜನ್ (36), ಮರಳು ಸಂಗ್ರಹಿಸಿದ್ದ ಆರೋಪದಡೀ ಕೊಳ್ತೋಡು ಗ್ರಾಮದ ಮುತ್ತಪ್ಪ (52) ಅವರನ್ನು ಬಂಧಿಸಿ…
ಹೊಟ್ಟೆ ನೋವು ತಾಳದೆ ಆತ್ಮಹತ್ಯೆ
December 13, 2018ವಿರಾಜಪೇಟೆ: ವಿರಾಜಪೇಟೆ ಸಮೀಪದ ಕಡಂಗ ಅರಪಟ್ಟುವಿನಲ್ಲಿ ಮಹಿಳೆ ಯೊಬ್ಬಳು ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ರುವುದಾಗಿ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ತಮಿಳರ ಈಶ್ವರಿ(37) ಕಳೆದ 5 ವರ್ಷಗಳ ಹಿಂದೆ ರಮರ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಕೆಲವು ದಿನಗಳಿಂದ ಈಶ್ವರಿ ಹೊಟ್ಟೆ ನೋವು ನಿಂದ ಬಳಲುತ್ತಿದ್ದರೆನ್ನಲಾಗಿದೆ. ಇದರಿಂದ ಮನನೊಂದು ಡಿ.11 ರಂದು ರಾತ್ರಿ 8 ಗಂಟೆ ಸಮಯದಲ್ಲಿ ಪತಿ ರಮರ್ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತೆ…
ದಸಂಸ ಬೇಡಿಕೆಗೆ ಸಿಎಂ ಸ್ಪಂದನೆ: ದಾಖಲೆ ಪರಿಶೀಲಿಸಿ ನಿವೇಶನ ಹಂಚುವ ಭರವಸೆ
December 13, 2018ವೀರಾಜಪೇಟೆ: ದಲಿತ ಸಂಘರ್ಷ ಸಮಿತಿಯ ಬೇಡಿಕೆಯಂತೆ ದಲಿತರು, ಕಾರ್ಮಿಕರು, ಬಡ ವರ್ಗದವರು ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಅಧಿಕಾರಿಗಳು ಗುರುತಿಸಿರುವ ಸರಕಾರಿ ಜಾಗದಲ್ಲಿ ನಿವೇಶನಗಳ ದಾಖಲೆಗಳನ್ನು ಪರಿಶೀಲಿಸಿ ಹದಿ ನೈದು ದಿನಗಳ ಅವಧಿಯಲ್ಲಿ ಹಕ್ಕು ಪತ್ರವನ್ನು ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಸಂಸ ಮುಖಂಡರುಗಳಿಗೆ ಭರವಸೆ ನೀಡಿರುವುದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಆರ್.ಪರಶುರಾಮ್ ತಿಳಿಸಿದರು. ವಿರಾಜಪೇಟೆ ಮಿನಿ ವಿಧಾನಸೌಧ ಎದುರು ಕೆಲವು ದಿನಗಳ ಹಿಂದೆ ಮನೆ ನಿವೇಶನ ಹಾಗೂ ವಿವಿದ ಬೇಡಿಕೆಗಳನ್ನು ಮುಂದಿಟ್ಟು…
ಕೊಡಗಿನ 1.91 ಲಕ್ಷ ಎಕರೆ ಬಾಣೆ ಜಾಗಗಳಿಗೆ ಕಂದಾಯ ನಿಗದಿ
December 13, 2018ಶಾಸಕ ಕೆ.ಜಿ.ಬೋಪಯ್ಯರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಉತ್ತರ ಮಡಿಕೇರಿ: ಕೊಡಗಿನಲ್ಲಿ ಜಮ್ಮಾ ಬಾಣೆ ಮತ್ತಿತರ ಬಾಣೆ ಜಾಗಗಳಿಗೆ ಕಂದಾಯ ವಿಧಿಸುವಂತೆ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಲಾಗಿದ್ದು, ಬಾಣೆ ಜಾಗಗಳಿಗೆ ಕಂದಾಯ ನಿಗದಿಗೊಳಿಸಲಾ ಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿ ವೇಶನದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ಭೂಕಂದಾಯ ಕಾಯ್ದೆಯ ತಿದ್ದುಪಡಿಯಂತೆ ಬಾಣೆ ಜಾಗ ಗಳಿಗೆ ಕಂದಾಯ ವಿಧಿಸಲು ಉಪ ವಿಭಾ ಗಾಧಿಕಾರಿಗಳಿಗೆ ಅಧಿಕಾರ…
ಹಾಕಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
December 13, 2018ಸೋಮವಾರಪೇಟೆ: ಮೊಗೇರ ಸೇವಾ ಸಮಾಜದ ಕುಸುಬೂರು ಗ್ರಾಮ ಶಾಖೆಯ ವತಿಯಿಂದ ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಬಳಗುಂದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಮೊಗೇರ ಸೇವಾ ಸಮಾಜದ ಅಧ್ಯಕ್ಷ ದಾಮೋದರ್ ಮಾತನಾಡಿ, ಗ್ರಾಮೀಣ ಭಾಗದ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ನಾಡಿಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ. ಚಂದ್ರು ಮಾತನಾಡಿ,…
ಪಯಸ್ವಿನಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
December 13, 2018ನಾಪೋಕ್ಲು: ಕೊಡಗಿನ ವಿದ್ಯಾರ್ಥಿಯೊಬ್ಬ ಸುಳ್ಯದ ಪಯಸ್ವಿನಿ ನದಿಯಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸುಳ್ಯದ ಖಾಸಗಿ ತರಬೇತಿ ಕೇಂದ್ರವೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕಕ್ಕಬ್ಬೆ- ಮರಂದೋಡ ಗ್ರಾಮದ ಸುದೀಪ್ (18) ಮೃತಪಟ್ಟ ವಿದ್ಯಾರ್ಥಿ. ಡಿ.10 ರಂದು ಸೋಮವಾರ ಮೊಬೈಲ್ ರಿಪೇರಿಗೆಂದು ತೆರಳಿದ ಸುದೀಪ್ ಸಂಜೆಯಾದರೂ ಹಾಸ್ಟೆಲ್ಗೆ ಬಾರದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ಹುಡುಕಾಟ ನಡೆಸಿದ ಪೊಲೀಸರಿಗೆ ಸುಳ್ಯ ಸಮೀಪದ ಪಯಸ್ವಿನಿ ನದಿಯಲ್ಲಿ ಮೃತ ದೇಹ…
ಅರಸೀಕೆರೆ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
December 13, 2018ಅರಸೀಕೆರೆ: ನಗರದ ಸರ್ಕಾರಿ ಜಯಚಾಮರಾಜೇಂದ್ರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡು ತ್ತಿದ್ದು, ಸ್ಥಳಿಯ ರಕ್ಷಾ ಸಮಿತಿ ನಿರ್ಲಕ್ಷ ದಿಂದ ಸಾಮಾನ್ಯ ಜನತೆ ಪರದಾಡು ವಂತೆ ಆಗಿದೆ ಎಂದು ಆರೋಪಿಸಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಭಾಜಪದಿಂದ ಬೃಹತ್ ಧರಣಿ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಜಿವಿಟಿ ಬಸವರಾಜು ಮಾತನಾಡಿ, ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ ಇವರು ಈ ಆಸ್ಪತ್ರೆ ರಕ್ಷಾ ಸಮಿತಿ ಅಧ್ಯಕ್ಷರೂ ಆಗಿ ದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳೇ ಇಲ್ಲದೇ ಇಲ್ಲಿಯ ವೈದ್ಯಾ…
ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಸೂಚನೆ
December 12, 2018ಮಡಿಕೇರಿ: ರೈತರು ಮುಂಗಾರು ವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿಪಂ ಅಧ್ಯಕ್ಷ ಬಿ.ಎ. ಹರೀಶ್ ನಿರ್ದೇಶನ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಮಂಗಳವಾರ ನಡೆದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಈಗಾಗಲೇ ಭತ್ತ ಖರೀದಿ ಸುವ ಸಂಬಂಧ ನೋಂದಣಿಗೆ ಅವಕಾಶ ಮಾಡಿದೆ. ಆದ್ದರಿಂದ ಕೂಡಲೇ ಭತ್ತ ಖರೀದಿಗೆ ಅಗತ್ಯ…
ನಗರಸಭೆ ಚುನಾವಣೆ: ವಿವಿಧ ಪಕ್ಷಗಳ ಪ್ರಮುಖರೊಂದಿಗೆ ಸಭೆ
December 12, 2018ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಮುಖಂ ಡರೊಂದಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆ ಗಳ ಸಾರ್ವತ್ರಿಕ ಚುನಾವಣೆ-2019 ಮಡಿಕೇರಿ ನಗರಸಭೆಯ ಕರಡು ಮತ ದಾರರ ಪಟ್ಟಿಯನ್ನು ಪ್ರಕಟಣೆ ಮಾಡಿ ಮಾತನಾಡಿದ ಜಿಲ್ಲಾ ಚುನಾವಣಾ ಅಧಿ ಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಪ್ರಕಟಣೆ ಮಾಡಿರುವ ಕರಡು ಮತ ದಾರರ ಪಟ್ಟಿಯಿಂದ ಬಾಧಿತರಾಗುವ ವ್ಯಕ್ತಿ ಗಳು ಆಕ್ಷೇಪಣೆಗಳನ್ನು ಸಂಬಂಧಪಟ್ಟ…
ಜಿಲ್ಲೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ
December 12, 2018ಮಡಿಕೇರಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿ ದ್ದಂತೆ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದ ಹಿನ್ನೆಲೆ ಮಡಿ ಕೇರಿ ನಗರ ಕಾಂಗ್ರೆಸ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಗ ರದ ಇಂದಿರಾಗಾಂಧಿ ವೃತ್ತ ಚೌಕಿಯಲ್ಲಿ ಕಾಂಗ್ರೆಸ್ ಪರ ಘೋಷಣೆ ಕೂಗಿದ ಮುಖಂಡರು ಹಾಗೂ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜಯಕಾರ ಹಾಕಿದರು. ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್ ಮಾತನಾಡಿ, ರಾಜಸ್ಥಾನ, ಛತ್ತೀಸ್ ಗಢ…










