ಕೆ.ಆರ್.ಪೇಟೆ, ಡಿ.25- ಪೌರತ್ವ ತಿದ್ದು ಪಡಿ ಕಾಯ್ದೆಯಿಂದ ದೇಶದ ಮುಸ್ಲಿಂ ಬಾಂಧವರಿಗೆ ತೊಂದರೆಯಾಗಲಿದೆ. ಹಾಗಾಗಿ ಎನ್ಆರ್ಸಿ ಮತ್ತು ಸಿಎಎ ಕಾಯ್ದೆ ಯನ್ನು ಕೈಬಿಟ್ಟು ಬಹುಜನರ ಭಾವನೆ ಗಳಿಗೆ ಗೌರವ ನೀಡಬೇಕು ಎಂದು ಒತ್ತಾ ಯಿಸಿ ಪಟ್ಟಣದಲ್ಲಿ ಬುಧವಾರ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದಲ್ಲಿ 144 ನಿಷೇಧಾಜ್ಞೆಯ ನಡುವೆಯೂ ಪೌರತ್ವ ತಿದ್ದುಪಡಿ ಕಾಯ್ದೆ- 2019 ಮತ್ತು ಎನ್ಆರ್ಸಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ರೈತ ಸಂಘ, ಬಿಎಸ್ಪಿ ಸೇರಿ ದಂತೆ ಮತ್ತಿತರ ಪಕ್ಷಗಳು ಪಟ್ಟಣದ…
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗಿಲ್ಲ ತೊಂದರೆ ತಪ್ಪು ಸಂದೇಶಗಳಿಗೆ ಕಿವಿಗೊಡಬೇಡಿ: ಮಾಜಿ ಸಚಿವ ವಿಜಯಶಂಕರ್
December 25, 2019ಮಂಡ್ಯ, ಡಿ.24(ನಾಗಯ್ಯ)- ಪ್ರಸ್ತುತ ಜಾರಿಗೊಳಿಸುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಪ್ಪು ತಿಳುವಳಿಕೆಯಿಂದಾಗಿ ವದಂತಿ ಹಬ್ಬಿಸಲಾಗುತ್ತಿದೆ. ಇದಕ್ಕೆ ಭಾರತೀ ಯರು ಆತಂಕ ಪಡುವ ಅವಶ್ಯಕತೆ ಇಲ್ಲ. ಅಲ್ಲದೇ ಮುಸ್ಲಿಂ ಸಮುದಾಯಕ್ಕೆ ಈ ಕಾಯಿದೆ ತಿದ್ದುಪಡಿಯಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಸಚಿವ ವಿಜಯಶಂಕರ್ ತಿಳಿಸಿದರು. ನಗರದ ಕರ್ನಾಟಕ ಸಂಘದಲ್ಲಿ ಮಂಗಳ ವಾರ ಜನಜಾಗೃತಿ ವೇದಿಕೆ ಆಯೋಜಿ ಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ-2019 ಕುರಿತ ಸಂವಾದ ಕಾರ್ಯಕ್ರಮ ಉದ್ಘಾ ಟಿಸಿ ಅವರು ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆ…
ಸರಣಿ ಅಪಘಾತ: ನಾಲ್ವರಿಗೆ ಗಾಯ
December 25, 2019ಮಂಡ್ಯ/ಶ್ರೀರಂಗಪಟ್ಟಣ, ಡಿ.24- ಬೆಂಗಳೂರು-ಮೈಸೂರು ಹೆದ್ದಾರಿಯ ಶ್ರೀರಂಗ ಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಸರಣಿ ಅಪಘಾತ ನಡೆದು ಸುಮಾರು 8 ವಾಹನಗಳು ಜಖಂಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು, ಐಚರ್ ಗೂಡ್ಸ್ ವಾಹನ, ಸಿಮೆಂಟ್ ಲಾರಿ ಸೇರಿದಂತೆ ಐದು ಐಷಾರಾಮಿ ಕಾರುಗಳ ನಡುವೆ ಸರಣಿ ಅಪಘಾತ ನಡೆದು ಸವಾರರು ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಟಿ.ಎಂ.ಹೊಸೂರು ಗೇಟ್ ಬಳಿ ಅಳವಡಿಸಿದ್ದ ಬ್ಯಾರಿಕೇಡ್ ದಾಟುತ್ತಿದ್ದ ಸಿಮೆಂಟ್ ಲಾರಿ ಹಿಂದಿಕ್ಕಲು ವೇಗವಾಗಿ…
ಸಾರ್ವಜನಿಕರೊಂದಿಗೆ ಸ್ನೇಹದಿಂದ ವರ್ತಿಸಿ: ಸಲಹೆ
December 25, 2019ನಾಗಮಂಗಲ, ಡಿ.24- ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಪೊಲೀಸ್ ಸಿಬ್ಬಂದಿ ಸ್ನೇಹದಿಂದ ವರ್ತಿಸಬೇಕು ಎಂದು ಡಿವೈಎಸ್ಪಿ ವಿಶ್ವನಾಥ್ ಸಲಹೆ ನೀಡಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲ ಪೊಲೀಸ್ ಉಪವಿಭಾಗದ ಕೆ.ಆರ್.ಪೇಟೆ ಹಾಗೂ ನಾಗಮಂಗಲ ವಲಯದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ ಒಂದು ದಿನದ ಜನಸ್ನೇಹಿ ಪೊಲೀಸ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಸಮಸ್ಯೆಗಳನ್ನು ಹೊತ್ತು ಬರುವÀ ಸಾರ್ವಜನಿಕರ ಮನವಿ ಸ್ವೀಕರಿಸಿ, ಕಾನೂನಿನ ಚೌಕಟ್ಟಿನಲ್ಲಿ ಅವರ ಕೆಲಸ ಮಾಡಿಕೊಡಿ ಎಂದರು. ಸಿಪಿಐ ರಾಜೇಂದ್ರ ಮಾತನಾಡಿ, ಅಪರಾಧ ನಡೆದಾಗ ಠಾಣೆಗೆ…
ಎಲ್ಲಾ ಕಾಯಕಕ್ಕಿಂತ ರೈತರ ಕಾಯಕ ಸರ್ವಶ್ರೇಷ್ಠ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ
December 25, 2019ಕೆ.ಆರ್.ಪೇಟೆ, ಡಿ.24- ಪರಿಶ್ರಮದ ಮೂಲಕ ಅನ್ನ ನೀಡುವ ರೈತರ ಕಾಯಕ ಎಲ್ಲಾ ಕಾಯಕಕ್ಕಿಂತ ಸರ್ವಶ್ರೇಷ್ಠ ಕಾಯಕ ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಜಾನಕೀರಾಂ ತಿಳಿಸಿದರು. ಪಟ್ಟಣದ ತಾಲೂಕು ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಆವರಣದಲ್ಲಿ ರಾಷ್ಟ್ರೀಯ ರೈತರ, ವಿಶ್ವ ಮಣ್ಣು ದಿನಾಚರಣೆ ಹಾಗೂ ಆತ್ಮ ಯೋಜನೆಯಡಿ ಪ್ರಗತಿಪರ ರೈತರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂ ಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆವರು ಹರಿಸಿ ಭೂ ತಾಯಿ ಸೇವೆ ಮಾಡುವ ರೈತರ ಕಾಯಕ ಸರ್ವಶ್ರೇಷ್ಠ ಕಾಯಕ. ಪಟ್ಟಣ ನಿವಾಸಿಗಳಂತೆ…
ಮೈಷುಗರ್, ಪಿಎಸ್ಎಸ್ಕೆ ಖಾಸಗಿಗೆ ವಹಿಸಲು ನಿರ್ಧಾರ: ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳ ಒಕ್ಕೊರಲ ನಿರ್ಣಯ
December 24, 2019ಮಂಡ್ಯ, ಡಿ.23(ನಾಗಯ್ಯ)- ಜಿಲ್ಲೆಯ ಮೈಷುಗರ್ ಹಾಗೂ ಪಿಎಸ್ಎಸ್ಕೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ವಹಿಸುವ ಮೂಲಕ ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಪಂ ಸಭಾಂಗಣದಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಒಪ್ಪಿಗೆ ಮೇರೆಗೆ ಖಾಸಗಿ ಯವರಿಗೆ ಟೆಂಡರ್ ನೀಡುವ ಮೂಲಕ ಪ್ರಾರಂಭಕ್ಕೆ ನಿರ್ಧರಿಸಲಾಯಿತು. ಸಭೆಯಲ್ಲಿದ್ದ ಶಾಸಕರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಕೆ.ಅನ್ನದಾನಿ, ಕೆ.ಸುರೇಶ್ಗೌಡ, ಕೆ.ಸಿ.ನಾರಾಯಣಗೌಡ, ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ ಸೇರಿದಂತೆ ಎಲ್ಲರೂ ಖಾಸಗಿಯವರಿಗೆ…
ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಅರಿವು ಮೂಡಿಸಿ ಸಾಹಿತಿ ದೇವನೂರ ಮಹದೇವ ಸಲಹೆ
December 24, 2019ಭಾರತೀನಗರ, ಡಿ.23(ಅ.ಸತೀಶ್)- ಮಿತ ನೀರಿನ ಬಳಕೆ, ವೈಜ್ಞಾನಿಕ ಕೃಷಿ ಪದ್ಧತಿ ಕುರಿತಂತೆ ರೈತರಿಗೆ ಅರಿವು ಮೂಡಿಸ ಬೇಕಾದ ಗುರುತರ ಜವಾಬ್ದಾರಿ ರೈತ ಸಂಘದ ಮೇಲಿದೆ ಎಂದು ಸಾಹಿತಿ ದೇವನೂರ ಮಹದೇವ ಹೇಳಿದರು. ಭಾರತೀನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯಿಂದ ವಿಶ್ವ ರೈತ ದಿನಾಚರಣೆ, ಕೆ.ಎಸ್.ಪುಟ್ಟಣ್ಣಯ್ಯ, ಎನ್.ಡಿ.ಸುಂದರೇಶ್ ನೆನಪಿನಾರ್ಥ ನಡೆದ ರೈತರ ಬಹಿರಂಗ ಸಭೆ ಹಾಗೂ ‘ಕಾಯಕ ಪ್ರಶಸ್ತಿ’ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಯುವ ರೈತರು ಕೃಷಿಯಿಂದ ವಿಮುಖರಾಗುತ್ತಿರುವ ಈ ಸಂದರ್ಭದಲ್ಲಿ ಕೃಷಿಯನ್ನು…
ಮಂಡ್ಯ ಸಂಜಯ ಸರ್ಕಲ್ ಒತ್ತುವರಿ
December 23, 2019ಸ್ವರ್ಣಸಂದ್ರದಿಂದ ಕಲ್ಲಹಳ್ಳಿವರೆಗಿನ ಹೆದ್ದಾರಿಯೂ ಒತ್ತುವರಿ ಸುಗಮ ಸಂಚಾರಕ್ಕೆ ಅಡ್ಡಿ ಮಂಡ್ಯ, ಡಿ.22- ನಾಡನ್ನಾಳುತ್ತಿದ್ದ ಮಹಾ ರಾಜರು ಪ್ರಜೆಗಳ ಸುರಕ್ಷತೆ ದೃಷ್ಟಿಯನ್ನಿಟ್ಟು ಕೊಂಡು ರಸ್ತೆಗಳು, ವೃತ್ತಗಳು, ನಿಲ್ದಾಣ ಗಳು, ಕೆರೆ-ಕಟ್ಟೆಗಳು ಇತ್ಯಾದಿ ಸಾರ್ವಜನಿಕ ಉಪಯೋಗಿ ತಾಣಗಳನ್ನು ನಿರ್ಮಿಸುತ್ತಿ ದ್ದರು. ಅದಕ್ಕೊಂದು ವೈಜ್ಞಾನಿಕ ಮಾನ ದಂಡವೂ ಇರುತ್ತಿತ್ತು. ಸರ್ಕಾರಿ ದಾಖಲೆ ಗಳಲ್ಲಿ ಅದನ್ನು ನಾವು ಇಂದಿಗೂ ನೋಡ ಬಹುದು. ಆದರೆ ಪ್ರಸ್ತುತ ಭ್ರಷ್ಟ ಆಡಳಿತ ವ್ಯವಸ್ಥೆಯಿಂದಾಗಿ ಅದೆಷ್ಟೋ ರಸ್ತೆಗಳು, ವೃತ್ತಗಳು, ಕೆರೆ-ಕಟ್ಟೆಗಳು ಸಾರ್ವಜನಿಕ ಉಪ ಯೋಗಿ ತಾಣಗಳು ನಾಪತ್ತೆಯಾಗಿ ಪಟ್ಟ…
ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸಲು ಎಸ್ಟಿಜಿ ಸ್ಥಾಪನೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅಭಿಪ್ರಾಯ
December 23, 2019ಚಿನಕುರಳಿ, ಡಿ.22(ಸಿ.ಎ.ಲೋಕೇಶ್)- ಗ್ರಾಮೀಣ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಶಾಸಕ ಸಿ.ಎಸ್.ಪುಟ್ಟರಾಜು ಚಿನಕುರಳಿಯಲ್ಲಿ ಎಸ್ಟಿಜಿ ಶಾಲೆ ತೆರೆದಿದ್ದಾರೆ ಎಂದು ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅಭಿಪ್ರಾಯಪಟ್ಟರು. ಇಲ್ಲಿನ ಎಸ್ಟಿಜಿ ವಿದ್ಯಾಸಂಸ್ಥೆಯಲ್ಲಿ 3 ದಿನಗಳ ಕಾಲ ಹಮ್ಮಿಕೊಂಡಿರುವ ಕಲಾವಿಸ್ಮಯ- 2019 ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಿಂದ ಹೊರ ದೇಶಗಳಿಗೆ ವಿದ್ಯಾಭ್ಯಾಸಕ್ಕೆ ಹೋದ ಬಹಳಷ್ಟು ಮಂದಿ ಅಲ್ಲೇ ಉಳಿದು ಬಿಡುತ್ತಾರೆ. ಆದರೆ, ಶಾಸಕ ಸಿ.ಎಸ್.ಪುಟ್ಟರಾಜು ಅವರ ಪುತ್ರ ಸಿ.ಪಿ.ಶಿವರಾಜು ಅಮೆರಿಕದಲ್ಲಿ ವಿದ್ಯಾಭ್ಯಾಸ ಮುಗಿಸಿದರೂ ಮತ್ತೆ ತಾಯ್ನಾಡಿಗೆ…
ಸಮಾಜಕ್ಕೆ ಪ್ರವಾದಿ ಮಹಮ್ಮದ್ರ ಸಂದೇಶ ಅನಿವಾರ್ಯ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
December 23, 2019ಮಂಡ್ಯ, ಡಿ.22(ನಾಗಯ್ಯ)- ಪ್ರಸ್ತುತ ಪ್ರವಾದಿ ಮಹಮ್ಮದ್ ಅವರ ಸಂದೇಶ ಗಳನ್ನು ಸಮಾಜಕ್ಕೆ ತಲುಪಿಸುವÀ ಅನಿವಾರ್ಯ ಇದೆ ಎಂದು ಸುತ್ತೂರು ಮಠದ ಶ್ರೀ ಶಿವ ರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮುಸ್ಲಿಂ ಒಕ್ಕೂಟದ ವತಿ ಯಿಂದ ಆಯೋಜಿಸಿದ್ದ ಪ್ರವಾದಿ ಮಹ ಮ್ಮದ್ ಕುರಿತಾದ ಸೀರತ್ ಪ್ರವಚನ ಮತ್ತು ಸೌಹಾರ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ದೇಶದಲ್ಲಿ ಎಲ್ಲಾ ಧರ್ಮಗಳನ್ನು ಗೌರವಿಸಲಾಗುವುದು. ಹೀಗಾಗಿ ಧರ್ಮ ದಲ್ಲಿ…