ವಕೀಲರ ಕೊಲೆ: ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 2ನೇ ಘಟನೆ ಕೆ.ಆರ್.ಪೇಟೆ: ಮನೆಯಲ್ಲಿ ಮಲಗಿದ್ದ ವಕೀಲ ರೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪು ಮಾರ ಣಾಂತಿಕ ಹಲ್ಲೆ ನಡೆಸಿ, ನಂತರ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಸಂತೇಬಾಚಹಳ್ಳಿ ಹೋಬಳಿಯ ನಾಗರಘಟ್ಟ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.ನಾಗರಘಟ್ಟದ ದೇವರಾಜೇಗೌಡ ಅವರ ಪುತ್ರ ಸತೀಶ್(40) ಕೊಲೆಯಾದವರು. ಘಟನೆ ವಿವರ: ಸತೀಶ್ ಚನ್ನರಾಯ ಪಟ್ಟಣದ ಶ್ರೀಕಂಠಯ್ಯ ಪೆಟ್ರೋಲ್ ಬಂಕ್ ಹಿಂಭಾಗದ ಬಡಾವಣೆಯಲ್ಲಿ ಕುಟುಂಬ ಸಮೇತ ವಾಸವಿದ್ದು, ಚನ್ನರಾಯಪಟ್ಟಣ, ಬೆಂಗಳೂರು, ಕೆ.ಆರ್.ಪೇಟೆ ತಾಲೂಕುಗಳಲ್ಲಿ ವಕೀಲ ವೃತ್ತಿ…
ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ
March 26, 2019ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಜನಸಾಗರದ ನಡುವೆ ಭಾರೀ ಮೆರವಣಿಗೆಯಲ್ಲಿ ತೆರಳಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕುಟುಂಬ ಸಮೇತ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಮಂಡ್ಯಕ್ಕೆ ಆಗಮಿಸಿದ ಅವರು, ಕಾಳಿ ಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿ ದರು….
ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
March 23, 2019ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ತಾತ ಎಚ್.ಡಿ.ದೇವೇ ಗೌಡರು ಮತ್ತು ನಮ್ಮ ತಂದೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕಷ್ಟದ ಕಾಲದಲ್ಲಿ ಕೈಹಿಡಿದು ಅವರಿಗೆ ಶಕ್ತಿ ತುಂಬಿದ್ದಾರೆ. ಹಾಗಾಗಿ ಜಿಲ್ಲೆಯ ಜನತೆಯ ಋಣ ನಮ್ಮ ಕುಟುಂಬದ ಮೇಲಿದೆ. ಇದನ್ನು ತೀರಿಸುವ ಸಲುವಾಗಿ ನನಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಅವರು…
ಚಂದ್ರವನ ಆಶ್ರಮದಲ್ಲಿ ದೀಪಾರತಿ
March 23, 2019ಶ್ರೀರಂಗಪಟ್ಟಣ: ಪಶ್ಚಿಮವಾಹಿನಿ ಹೊರವಲಯ ದಲ್ಲಿರುವ ಡಿ.ಎಂ.ಎಸ್. ಚಂದ್ರವನ ಆಶ್ರಮದಲ್ಲಿ 75ನೇ ಬೆಳದಿಂಗಳ ದೀಪಾರತಿ, ಧಾರ್ಮಿಕ ಕಾರ್ಯಕ್ರಮ ಮತ್ತು ದಾಸೋಹವು ಪೀಠಾಧ್ಯಕ್ಷರಾದ ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳವರ ಸಾನಿಧ್ಯದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಶ್ರೀಗಳು, ಇಂದಿನ ಯುಗಮಾನ ದಲ್ಲಿ ಜನರಿಗೆ ದುಃಖ ಕಡಿಮೆ ಮಾಡಲು ಆಗುತ್ತಿಲ್ಲ. ಯಾರಿಗೂ ನೆಮ್ಮದಿ-ಶಾಂತಿ ಸಿಗುತ್ತಿಲ್ಲ. ಹಿಂದೆ ಶರಣರು ಎಷ್ಟೇ ಕಷ್ಟ ಬಂದರೂ ಹೆದರದೆ ದೇವರಲ್ಲಿ ಆ ಕಷ್ಟ ಎದುರಿಸುವ ಶಕ್ತಿ ಬೇಡುತ್ತಿದ್ದರು. ಇಂದು ಕೆಲವರು ಮಾನಸಿಕ…
ನೇಣು ಹಾಕಿದ ಸ್ಥಿತಿಯಲ್ಲಿ ಜೆ.ಕೆ.ಟೈರ್ಸ್ ಕಾರ್ಮಿಕನ ಶವ ಪತ್ತೆ: ಕೊಲೆ ಶಂಕೆ
March 23, 2019ಶ್ರೀರಂಗಪಟ್ಟಣ: ಮೈಸೂರಿನ ಜೆ.ಕೆ.ಟೈರ್ಸ್ ಕಾರ್ಮಿಕನ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ ಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಎಂ.ಶೆಟ್ಟಿಹಳ್ಳಿ ಗ್ರಾಮದ ಕೆಂಪೇಗೌಡ ಎಂಬುವರ ಪುತ್ರ ಜೆ.ಕೆ.ಟೈರ್ಸ್ ಕಾರ್ಮಿಕ ಸುರೇಶ್(38) ಮೃತಪಟ್ಟವನಾಗಿದ್ದು, ಈತ ಗುರುವಾರ ಬೆಳಿಗ್ಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ್ದ. ಆದರೆ ಇಂದು ಬೆಳಿಗ್ಗೆ ಗ್ರಾಮದಲ್ಲಿರುವ ಅವರ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಮೃತನ ಕಾಲುಗಳು ನೆಲಕ್ಕೆ ತಾಗುತ್ತಿದ್ದು, ಆತನನ್ನು ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ನೇಣು ಹಾಕಿರಬಹು…
ಮಂಡ್ಯದಿಂದಲೇ ಬಿಜೆಪಿ ಮುಕ್ತ ಭಾರತ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವ್ಯಂಗ್ಯ
March 23, 2019ಭಾರತೀನಗರ: ಮಂಡ್ಯದಿಂದಲೇ ಬಿಜೆಪಿ ಮುಕ್ತ ಭಾರತ ವಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ. ಭಾರತೀನಗರದ ತಮ್ಮ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇ ಶಿಸಿ ಅವರು ಮಾತನಾಡಿದರು. ಬಿಜೆಪಿ ನಾಯಕರ ಕುತಂತ್ರದಿಂದ ಇಂದು ಬಿಜೆಪಿ ಪಕ್ಷ ನಾಶವಾಗುತ್ತಿದೆ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸ್ಪರ್ಧೆಗಳಿಸದಂತಹ ದುರ್ದೈವ ಬಂದೊದಗಿದೆ. ಒಂದು ರಾಷ್ಟ್ರೀಯ ಪಕ್ಷ ಈ ಮಟ್ಟಕ್ಕೆ ಹೋಗುತ್ತಿದೆ ಎಂದರೆ ಅವರ ಕುತಂತ್ರಗಳೇ ಕಾರಣ ಎಂದು ಹೇಳಿದರು. ಮೈತ್ರಿ ಸರ್ಕಾರ ಇಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಆದ್ದರಿಂದ ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಯಾವುದೇ…
ಜನಾಭಿಪ್ರಾಯದಂತೆ ಸ್ಪರ್ಧಿಸಿದ್ದೇನೆ ನನ್ನ ಗೆಲ್ಲಿಸಿ: ಸುಮಲತಾ
March 23, 2019ಕೆ.ಆರ್.ನಗರ: ಜನಾಭಿಪ್ರಾಯವನ್ನು ಕಲೆ ಹಾಕಿ ಅವರ ಒತ್ತಾಸೆಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದೇನೆ. ನಿಮ್ಮ ಅಶೀರ್ವಾದ ನನ್ನ ಮೇಲಿರಲಿ ಈ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕೋರಿದರು. ಶುಕ್ರವಾರ ಕೆ.ಆರ್.ನಗರ ಪಟ್ಟಣದ ಆಂಜನೇಯ ಬಡಾವಣೆಯ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವಂತೆ ಅಭಿಮಾನಿಗಳು ಸಲಹೆ ನೀಡಿದ್ದರಿಂದ ಸ್ವತಂತ್ರವಾಗಿ ನಿಂತಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಮೊಟ್ಟ ಮೊದಲ ಬಾರಿಗೆ ಕೆ.ಆರ್.ನಗರ…
ಜೆಡಿಎಸ್ ಶಾಸಕರಿಗೆ ದರ್ಶನ್, ಯಶ್ ಸವಾಲ್
March 21, 2019ಮಂಡ್ಯ: ಸುಮಲತಾ ಪರ ನಿಂತಿರುವುದಕ್ಕೆ ಜೆಡಿಎಸ್ ಶಾಸಕ ನಾರಾಯಣಗೌಡ ನೀಡಿದ್ದ “ಸರ್ಕಾರ ನಮ್ದಿದೆ ಏನ್ ಬೇಕಾದರೂ ಮಾಡ್ತೀವಿ, ಹಳೆ ಕೇಸ್ನೆಲ್ಲಾ ಓಪನ್ ಮಾಡ್ತೀವಿ’’ ಎನ್ನುವ ಮೂಲಕ ನೀಡಿದ ಎಚ್ಚರಿಕೆಗೆ ಸಿನಿಮಾ ನಟರು ಟಾಂಗ್ ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮಾತನಾಡಿ ಇವತ್ತು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆನೇ. ಯಾಕೆಂದರೆ ಈ ಉರಿ ಬಿಸಿಲಲ್ಲಿ ಅಲ್ಲಿಂದ ನಮ್ಮ ಜೊತೆ ನಡೆದು ಕೊಂಡು ಬಂದಿದ್ದೀರಿ. ನಾನು ತಲಾ ಇಷ್ಟಿಷ್ಟು…
ಸುಮಲತಾ ಪರ ಅಭಿಮಾನಿಗಳ ಬೈಕ್ ರ್ಯಾಲಿ
March 21, 2019ಮದ್ದೂರು: ಮಂಡ್ಯದಲ್ಲಿ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಅವರು ನಾಮಪತ್ರ ಸಲ್ಲಿಸುತ್ತಿ ರುವ ಹಿನ್ನೆಲೆಯಲ್ಲಿ ಪಟ್ಟಣದಿಂದ ನೂರಾರು ಬೈಕ್ಗಳಲ್ಲಿ ಅಂಬರೀಶ್ ಅಭಿಮಾನಿಗಳು ಹಾಗೂ ಸ್ವಾಭಿಮಾನಿ ಪಡೆಯ ಯುಕವರು ಮಂಡ್ಯಕ್ಕೆ ತೆರಳಿದರು. ಇದಕ್ಕೂ ಮುನ್ನ ಪಟ್ಟಣದ ಶ್ರೀ ಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಟ್ಟಣದ ಪ್ರಮುಖ ಬೀದಿ ಗಳಲ್ಲಿ ಬೈಕ್ ಜಾಥಾ ನಡೆಸಿ, ಮಂಡ್ಯಕ್ಕೆ ಬೈಕ್ಗಳಲ್ಲಿ ಹೊರಟರು. ಸುಮಲತಾ ಅವರನ್ನು ಬೆಂಬಲಿಸಲು ಸ್ವಾಭಿಮಾನ ಪಡೆಯ ಯುವಕರು ಅಂಬರೀಶ್ ಪರವಾಗಿ ಘೋಷಣೆಗಳನ್ನು ಕೂಗಿದರು. ತಾಪಂ ಸದಸ್ಯ ಚಲುವರಾಜ್…
ಸುಮಲತಾ ರ್ಯಾಲಿಯಲ್ಲಿ ಕಾಂಗ್ರೆಸ್ಸಿಗರು; ಸಿಎಂ ಅಸಮಾಧಾನ ಡಿಕೆಶಿಯಿಂದ ಕಾಂಗ್ರೆಸ್ ಮುಖಂಡರ ಸಭೆ
March 21, 2019ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ ನಂತರ ನಡೆದ ರ್ಯಾಲಿ ಮತ್ತು ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಕಾಣಿಸಿಕೊಂಡಿರುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ ಕುಮಾರಸ್ವಾಮಿ, ತಾವು ಈಗಾಗಲೇ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆ ಕರೆದು ಸುಮಲತಾ ಅವರಿಗೆ ಬೆಂಬಲ ನೀಡಬಾರದೆಂದು ತಿಳಿಸಿದ್ದರೂ ಕೂಡ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಸುಮಲತಾ ರ್ಯಾಲಿಯಲ್ಲಿ ಭಾಗವಹಿಸಿದ್ದಾರೆ…