ಮಂಡ್ಯ: ‘ದೇಶದ ವಿಜ್ಞಾನಿ ಗಳ ಸಾಧನೆ, ಇಡೀ ಪ್ರಪಂಚಕ್ಕೇ ಮಾದರಿಯಾಗಿದೆ. ಒಂದೇ ಬಾರಿಗೆ 105 ಸ್ಯಾಟ್ಲೆಟ್ಗಳನ್ನು ಉಡಾ ವಣೆ ಮಾಡುವ ಮೂಲಕ ಇತರೆ ದೇಶಗಳು ಮಾಡಲಾಗದ ಸಾಧನೆಯನ್ನು ನಮ್ಮ ವಿಜ್ಞಾನಿ ಗಳು ಮಾಡಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಶ್ರೀಗುರುಪೂರ್ಣಿಮ ಮಹೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯ ಮಟ್ಟದ 22ನೇ ಚುಂಚಾದ್ರಿ ಕಲೋತ್ಸವ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 71 ವರ್ಷದಲ್ಲಿ 200 ವರ್ಷಗಳ…
`ಡಿಸ್ನಿಲ್ಯಾಂಡ್’ ಮಾದರಿ ಮನರಂಜನಾ ಪಾರ್ಕ್ ನಿರ್ಮಾಣ
July 26, 2018ಮಂಡ್ಯ: ವಿಶ್ವವಿಖ್ಯಾತ ಕೆಆರ್ಎಸ್ನಲ್ಲಿ ‘ಡಿಸ್ನಿ ಲ್ಯಾಂಡ್’ ಮಾದರಿ ಮನರಂಜನಾ ಪಾರ್ಕ್ ನಿರ್ಮಿಸಲು ಸರ್ಕಾರ ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಕೆಆರ್ಎಸ್ಗೆ ಭೇಟಿ ಪರಿಶೀಲನೆ ನಡೆಸಿದರು. ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿ ಯಲ್ಲೇ ಕೆಆರ್ಎಸ್ ಬೃಂದಾವನವನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ ಘೋಷಣೆ ಯಾಗಿದೆ, ಇದಕ್ಕಾಗಿ 5 ಕೋಟಿ ರೂ. ಗಳನ್ನೂ ಸಹ ಘೋಷಣೆ ಮಾಡಲಾಗಿದೆ, ಈ ಹಿನ್ನೆಲೆಯಲ್ಲಿ ಯೋಜನೆ ಜಾರಿಗೊಳಿಸಲು ಸಿದ್ದತೆ ನಡೆದಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಚಿವರು ಸುದ್ದಿಗಾರರಿಗೆ ತಿಳಿಸಿದರು. ನೀಲನಕ್ಷೆ ತಯಾರಿಗೆ…
ಸಮನ್ವಯ ಸಮಿತಿ ಸಭೆಗೆ ಹೈಕಮಾಂಡ್ ಸೂಚನೆ ಅಗತ್ಯವಿಲ್ಲ
July 26, 2018ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗೋದು ಅನುಮಾನ!: ಡಾ.ಜಿ.ಪರಮೇಶ್ವರ್ ಮಂಡ್ಯ: ‘ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಮನ್ವಯ ಆಡಳಿತಕ್ಕಾಗಿ ರಚಿಸಲಾಗಿರುವ ಸಮನ್ವಯ ಸಮಿತಿ ಸಭೆಗೆ ಹೈಕಮಾಂಡ್ ಸೂಚನೆ ಅಗತ್ಯವಿಲ್ಲ. ಯಾವಾಗ ಬೇಕೋ ಆವಾಗ ಸಮಿತಿಯ ಅಧ್ಯಕ್ಷರು ಸಭೆ ಕರೆಯುತ್ತಾರೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ಸೇರಬೇಕು ಎಂದು ಕೊಂಡಿದ್ದೇವೆ. ಅದೇ ರೀತಿ ಈ ತಿಂಗಳಲ್ಲಿ ಸಭೆ ಕರೆಯಬಹುದು ಎಂದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿ…
ಮೇಲುಕೋಟೆ ಹೋಬಳಿ ಮಟ್ಟದ ಕ್ರೀಡಾಕೂಟ: ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ
July 26, 2018ಮೇಲುಕೋಟೆ: ಮಳೆಯ ಸಂದರ್ಭದಲ್ಲಿ ಜಮೀನಿನಲ್ಲಿ ರೈತರು ಬಿತ್ತನೆ ಮಾಡುವುದು ಅಥವಾ ವ್ಯವಸಾಯ ಕ್ಕಾಗಿ ಭೂಮಿ ಹದಗೊಳಿಸುವುದು ಸಾಮಾನ್ಯ. ಆದರೆ, ಮೇಲುಕೋಟೆ ಹೋಬಳಿ ಸಮೀಪದ ಕದಲಗೆರೆ ಗ್ರಾಮದ ಜಮೀನಿನೊಂದರಲ್ಲಿ ವಿವಿಧ ಕ್ರೀಡಾಕೂಟ ಆಯೋಜಿಸಿರುವುದು ನೋಡಗರಲ್ಲಿ ಆಶ್ಚರ್ಯ ಉಂಟು ಮಾಡಿತು. ಹೌದು ಗ್ರಾಮದ ರೈತರಾದ ಕೃಷ್ಣೇಗೌಡ ಹಾಗೂ ಪುಟ್ಟಸ್ವಾಮಿಗೌಡ ಅವರು ಬುಧವಾರ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯನ್ನು ಬದಿಗಿಟ್ಟು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2018ನೇ ಸಾಲಿನ ಮೇಲುಕೋಟೆ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಆಯೋಜಿಸಲು ಸಹಕರಿಸಿದರು. ವಾಲಿಬಾಲ್, ಕಬಡ್ಡಿ, ಕೋಕೋ…
ಹಿಂದಿನ ಮಾದರಿಯಲ್ಲಿ ಇ-ಸ್ವತ್ತು ವಿತರಣೆಗೆ ಅಸ್ತು
July 26, 2018ಮದ್ದೂರು: ಪಟ್ಟಣದ ಪುರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಬುಧವಾರ ಪುರಸಭಾಧ್ಯಕ್ಷೆ ಡಿ.ಕೆ.ಉಮಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಪುರಸಭಾ ಸದಸ್ಯ ಮನ್ಸೂರು ಆಲಿ ಖಾನ್ ಮಾತನಾಡಿ, ಪಟ್ಟಣದಲ್ಲಿ ಕಸ ವಿಲೇವಾರಿ ಮಾಡಲು ವಾಹನಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಜಗದೀಶ್ ಮಾತನಾಡಿ, ಇ-ಸ್ವತ್ತು ಪಡೆಯಲು ಪುರಸಭೆಗೆ ಅರ್ಜಿ ಸಲ್ಲಿಸಿ 7 ತಿಂಗಳು ಕಳೆದರೂ ಅಧಿಕಾರಿ ಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಜನರಿಗೆ…
ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ
July 25, 2018ಬರುವ 15 ರೊಳಗೆ ರೈತರು, ಕಾರ್ಮಿಕರ ಎಲ್ಲಾ ಬಾಕಿ ಪಾವತಿ ಡಿಸ್ಟಿಲರಿ ಘಟಕ ಖಾಸಗಿಗೆ ವಹಿಸಲು ಸರ್ಕಾರ ನಿರ್ಧಾರ ಎಫ್ಆರ್ಪಿ ದರ ನಿಗದಿ ನಿಯಮ ತಕ್ಷಣದಿಂದಲೇ ಜಾರಿಗೆ ರೈತರ ಆಗ್ರಹ ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಆಗಸ್ಟ್ 15 ರಿಂದ ಆರಂಭಿಸಲಾಗುವುದು ಎಂದು ಸಕ್ಕರೆ ಹಾಗೂ ಭಾರೀ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಮಂಗಳವಾರ ಮೈಷುಗರ್ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿದ ಅವರು, ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…
ಮೇಕೆದಾಟು ಅಣೆಕಟ್ಟು ನಿರ್ಮಾಣ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ
July 25, 2018ಮಂಡ್ಯ: ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾರ್ಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದಲ್ಲಿಂದು ದಿವಂಗತ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎನ್.ನಾಗರಾಜು ಅವರ 11ನೇ ದಿನದ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನೀರಿನ ಅಭಾವದ ಸಂದರ್ಭದಲ್ಲಿ ಅನುಕೂಲವಾಗುತ್ತದೆ. ಕಳೆದ ಸರ್ಕಾರದ ಅವಧಿ ಯಲ್ಲಿ ಅಣೆಕಟ್ಟು ಕಟ್ಟುವ ಬಗ್ಗೆ ನಿರ್ಧಾರವಾಗಿತ್ತು. ನಮಗೆ ಅಣೆಕಟ್ಟು ನಿರ್ಮಾಣದಿಂದ ಕುಡಿಯುವ ನೀರಿಗಷ್ಟೆ…
ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು, ನಾಲ್ವರಿಗೆ ಗಾಯ
July 25, 2018ನಾಗಮಂಗಲ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಾಗಮಂಗಲದ ಮಂಡ್ಯ ರಸ್ತೆಯ ಅಮ್ಮನಕಟ್ಟೆ ಸಮೀಪದ ತಿರುವಿ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜಡೆಮಾಯಸಂದ್ರ ನಿವಾಸಿ ಅಸ್ಕರ್ ಅಹಮದ್ (60) ಸ್ಥಳದಲ್ಲೇ ಮೃತ ಪಟ್ಟಿದ್ದು, ಮುನಿರಾಭಾನು, ಚಾಲಕ ತಾಯರ್ ಪಾಷ, ತಾಲೀಬ್ ಪಾಷ ಹಾಗೂ ಲಾರಿ ಚಾಲಕ ರೆಹಮಾನ್ ಷರೀಫ್ ಗಾಯಗೊಂಡಿದ್ದಾರೆ. ಇಂದು ಸಂಜೆ ತುಮಕೂರು ಜಿಲ್ಲೆ ಜಡೆಮಾಯಸಂದ್ರದ ಅಸ್ಕರ್ ಅಹಮ್ಮದ್, ಮುನಿರಾಭಾನು,…
ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಗುರಿ ಸಾಧಿಸಿ
July 25, 2018ಭಾರತೀನಗರ: ಶಿಕ್ಷಣ ವಿದ್ಯಾರ್ಥಿಗಳ ಬದುಕನ್ನು ಬೆಳಗುವುದ ರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಗುರಿ ತಲುಪಬೇಕೆಂದು ಎಸ್ಬಿಐ ಮದ್ದೂರು ಹಿರಿಯ ಶಾಖಾ ಪ್ರಬಂಧಕ ಅನಂತಪ್ರಸಾದ್ ಸಲಹೆ ನೀಡಿದರು. ಚಿಕ್ಕರಸಿನಕೆರೆ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರಿಸರ ಜಾಗೃತಿ ವೇದಿಕೆ ಹಾಗೂ ಡಾ.ಜೈಭೀಮ್ ದಲಿತ ಜಾಗೃತಿ ಸಮಿತಿ ವತಿಯಿಂದ ಉಚಿತ ಲೇಖನ ಸಾಮಗ್ರಿ ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರದ ಜೊತೆಗೆ ಸ್ವಯಂಸೇವಾ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಮಾತ್ರ ದೇಶ…
ಬಡವರಿಗೆ ನಿವೇಶನ ಕಲ್ಪಿಸಲು ಸರ್ಕಾರ ಬದ್ಧ
July 25, 2018ಮಂಡ್ಯ: ನಿವೇಶನ ವಂಚಿತರಿಗೆ ನಿವೇಶನ ಕಲ್ಪಿಸಲು ಸರ್ಕಾರ ಬದ್ಧ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು. ಕೊತತ್ತಿ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿಂದು ಪ್ರವಾಸ ಕೈಗೊಂಡು ಇಂಡುವಾಳು ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅವರು ಮಾತ ನಾಡಿದರು. ಗ್ರಾಮದಲ್ಲಿರುವ ನಿವೇಶನ ವಂಚಿತರಿಗೆ ನಿವೇಶನ ಕಲ್ಪಿಸಲು ಸರ್ಕಾರ ಉದ್ದೇಶಿಸಿದೆ. ಗ್ರಾಪಂನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತಾಲೂಕು ಆಡಳಿತ ಸರ್ಕಾರಿ ಜಮೀನು ಗುರುತಿಸಿ, ಇಲ್ಲವಾದರೆ ಖಾಸಗಿಯವರಿಂದ ಖರೀ ದಿಸಿ ನಿವೇಶನ ಹಂಚಿಕೆಗೆ ಮುಂದಾಗು ವಂತೆ…