ಕೆ.ಆರ್.ಪೇಟೆ: ಸಿಗರೇಟ್ ಕೊಳ್ಳುವ ನೆಪದಲ್ಲಿ ಅಂಗಡಿಗೆ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಪಟ್ಟಣದ ಮುತ್ತುರಾಯಸ್ವಾಮಿ ಬಡಾವಣೆ ಯಲ್ಲಿ ಬುಧವಾರ ರಾತ್ರಿ ಸುಮಾರು 8.45ರ ಸಮಯದಲ್ಲಿ ನಡೆದಿದೆ. ಬಡಾವಣೆಯ ಹೇಮಗಿರಿ ರಸ್ತೆ ಯಲ್ಲಿ ಅಂಗಡಿ ನಡೆಸುತ್ತಿದ್ದ ಶಿಕ್ಷಕ ಎಂ.ಎಸ್. ಮಹದೇವಪ್ಪ ಅವರ ಪತ್ನಿ ಜಗದಾಂಬ ಎಂಬುವರು ಚಿನ್ನದ ಸರ ಕಳೆದುಕೊಂಡ ವರಾಗಿದ್ದಾರೆ. ಘಟನೆ ವಿವರ: ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬ ಸಿಗರೇಟ್ ಕೊಂಡು ಅಲ್ಲಿಯೇ ಸೇದುತ್ತಾ ಬೈಕ್ ಪಕ್ಕದಲ್ಲಿ ಮಾತಾಡುತ್ತಾ ನಿಂತಿದ್ದರು….
ಅನುದಾನ ಕಡಿತ, ಖಾಸಗೀಕರಣಕ್ಕೆ ವಿರೋಧ ಅಂಗನವಾಡಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ
July 11, 2018ಮಂಡ್ಯ: ಅನುದಾನ ಕಡಿತ, ಖಾಸಗೀಕರಣಕ್ಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ಮತ್ತು ಸಿಐಟಿಯು ನೇತೃತ್ವದಲ್ಲಿಂದು ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಸಮಾವೇಶಗೊಂಡ ಬೃಹತ್ ಸಂಖ್ಯೆ ಯಲ್ಲಿದ್ದ ಪ್ರತಿಭಟನಾಕಾರರು ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಮೆರವಣಿಗೆ ನಡೆಸಿದರು. ಬಳಿಕ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸಿದರು. ಅಂಗನವಾಡಿ ನೌಕರರ ಬೇಡಿಕೆ ಈಡೇ ರಿಸದೆ ದಿಕ್ಕು…
ಆಟೋ ಪಲ್ಟಿ: ಶಿಕ್ಷಕಿ ಸಾವು, 8 ಮಂದಿಗೆ ಗಾಯ
July 11, 2018ಮಂಡ್ಯ: ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಪ್ಯಾಸೆಂಜರ್ ಆಟೋ ಪಲ್ಟಿಯಾಗಿ ಶಿಕ್ಷಕಿಯೊಬ್ಬರು ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಜಲಸೂರ್ -ಹುಲಿಯೂರು ದುರ್ಗ ರಾಜ್ಯ ಹೆದ್ದಾರಿಯ ಧರ್ಮಸ್ಥಳ ಗೇಟ್ ಬಳಿ ಇಂದು ಸಂಜೆ ನಡೆದಿದೆ. ಕೆ.ವಿ.ಇಂದ್ರಮ್ಮ (42) ಸಾವಿಗೀಡಾದ ಶಿಕ್ಷಕಿ. ಘಟನೆ ವಿವರ: ಇಂದ್ರಮ್ಮ ಅವರು ಮಂಗಳವಾರ ಸಂಜೆ ತಾನು ಕೆಲಸ ಮಾಡು ತ್ತಿದ್ದ ತಟ್ಟೇಕೆರೆಯ ಸರ್ಕಾರಿ ಶಾಲೆಯಿಂದ ಸ್ವಗ್ರಾಮ ಕೆ.ಮಲ್ಲೇನಹಳ್ಳಿ ಗ್ರಾಮಕ್ಕೆ ತೆರಳಲು ಪ್ಯಾಸೆಂಜರ್ ಆಪೆ ಆಟೋ(ಕೆ.ಎ.54, 2095)ದಲ್ಲಿ ಬರುತ್ತಿದ್ದರು. ಮಾರ್ಗ…
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಾರದರ್ಶಕ ಕೆಲಸ
July 11, 2018ಮದ್ದೂರು: ಕನ್ನಡ ಸಾಹಿತ್ಯ ಪರಿಷತ್ತು ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ತಿಳಿಸಿದರು. ಸೋಮನಹಳ್ಳಿಯ ಎಸ್.ಸಿ.ಮಲ್ಲಯ್ಯ ಪದವಿಪೂರ್ವ ಕಾಲೇಜು ಆವರಣದಲ್ಲಿ ಶ್ರೀಮತಿ ತಾಯಮ್ಮ ಮತ್ತು ಶ್ರೀ ಎಸ್.ಸಿ. ಮಲ್ಲಯ್ಯ ರಾಜ್ಯ ಮಟ್ಟದ ಜಾನಪದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭಾವಂತ ಕನ್ನಡಿಗರನ್ನು ಗುರ್ತಿಸಿ ಅವರ ಕಲೆ ಅನಾವರಣಗೊಳ್ಳಲು ಪ್ರೋತ್ಸಾಹ ನೀಡುವುದು ಮತ್ತು ಪುರಸ್ಕಾರ ನೀಡುವ ಕೆಲಸವನ್ನು ನಿರಂತರವಾಗಿ ಮಾಡಿ ಕೊಂಡು…
ಅಸಹಾಯಕ ಮಹಿಳೆಗೆ ದೊರೆತ ಅಡುಗೆ ಕೆಲಸ
July 11, 2018ಮೇಲುಕೋಟೆ: ಸಚಿವರ ಮಾನವೀಯ ಸ್ಪಂದನೆಯಿಂದಾಗಿ ಸಂತ್ರಸ್ತ ಮಹಿಳೆಗೆ ಮತ್ತೆ ಅಡುಗೆ ಸಹಾಯಕಿ ಕೆಲಸ ದೊರೆತು ಆಕೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಮಹಿಳೆಯ ನೋವಿಗೆ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಸ್ಪಂದಿಸಿದ ಕಾರಣ ಅಡುಗೆ ಸಹಾಯಕಿ ಹುದ್ದೆಯಿಂದ ಬಿಡುಗಡೆಯಾಗಿದ್ದ ಮೇಲುಕೋಟೆ ಜಯಲಕ್ಷ್ಮಿ ಮತ್ತೆ ಕೆಲಸ ಪಡೆದಿದ್ದಾಳೆ. ಗಂಡನನ್ನು ಕಳೆದುಕೊಂಡು ಪೋಲೀಯೋ ಪೀಡಿತನಾಗಿ ಹಾಸಿಗೆ ಹಿಡಿದಿರುವ ಮಗನನ್ನು ಸಾಕುವ ಜವಾಬ್ದಾರಿ ಹೊತ್ತಿರುವ ಜಯಲಕ್ಷ್ಮಿ ಮೇಲುಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ವಿದ್ಯಾರ್ಥಿಗಳ…
ಬ್ಯಾಂಕ್ ಖಾತೆ ತೆರೆದು ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ
July 11, 2018ಕೆ.ಆರ್.ಪೇಟೆ: ಗ್ರಾಮೀಣ ಜನತೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ತೆರೆ ಯುವ ಮೂಲಕ ಬ್ಯಾಂಕ್ನಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕ ವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೊಸಹೊಳಲು ವಿಜಯಾಬ್ಯಾಂಕ್ ಶಾಖೆ ವ್ಯವಸ್ಥಾಪಕ ಗೌರವ್ ಅಗರ್ವಾಲ್ ಸಲಹೆ ನೀಡಿದರು. ತಾಲೂಕಿನ ನಾರ್ಗೋನಹಳ್ಳಿಯಲ್ಲಿ ವಿಜಯಾಬ್ಯಾಂಕ್ ಹೊಸಹೊಳಲು ಶಾಖೆ ಹಾಗೂ ಆರ್ಥಿಕ ಸಾಕ್ಷರತಾ ಯೋಜನೆ ಯಡಿ ಹಮ್ಮಿಕೊಂಡಿದ್ದ ಬ್ಯಾಂಕ್ ಸೌಲಭ್ಯ ಗಳ ಕುರಿತಾದ ಜನಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಶೂನ್ಯ ಬ್ಯಾಲೆನ್ಸ್ನಲ್ಲಿ ಜನಧನ್ ಖಾತೆ ತೆರೆಯುವ ಅವಕಾಶವನ್ನು ಗ್ರಾಮೀಣ ಜನರಿಗೆ…
ಚಿನಕುರಳಿಯಲ್ಲಿ ಮೊದಲ ಸುತ್ತಿನ ಗ್ರಾಮಸಭೆ
July 11, 2018ಚಿನಕುರಳಿ: ಇಲ್ಲಿನ ಗ್ರಾಪಂ ಆವರಣದಲ್ಲಿ ಅಧ್ಯಕ್ಷೆ ಪ್ರೇಮಮ್ಮ ಅವರ ಅಧ್ಯಕ್ಷತೆಯಲ್ಲಿ 2018-19ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ನಡೆಯಿತು. ಸಭೆ ಆರಂಭವಾಗುತ್ತಿದ್ದಂತೆ ಕೃಷಿ ಇಲಾಖೆ ಅಧಿಕಾರಿ ಜಯರಾಮು ತಮ್ಮ ಇಲಾಖೆಯಲ್ಲಿ ದೊರೆಯುವ ಯೋಜನೆ, ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ವೇಳೆ ರೈತರೊಬ್ಬರು ಅಧಿ ಕಾರಿಯನ್ನು ಕಳೆದ ಬಾರಿ ಕೃಷಿ ಇಲಾಖೆ ಯಿಂದ ನೀಡಿದ ಜಿಪಿ-28 ರಾಗಿ ತಳಿ ಕಳಪೆ ಗುಣಮಟ್ಟದಿಂದ ಕೂಡಿತ್ತು. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಉಂಟಾಯಿತು. ಹೀಗಾಗಿ ಯಾವುದೇ ತಳಿ ನೀಡಿದರೂ,…
ಕೆಆರ್ಎಸ್ನಲ್ಲಿ ಕಾವೇರಿ ಕಲರವ…
July 10, 2018ಮಂಡ್ಯ: ಕೊಡಗಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ನೀರಿನ ಮಟ್ಟ ಸೋಮವಾರ 111.50 ಅಡಿ ತಲುಪಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ 78.05 ಅಡಿ ನೀರು ಸಂಗ್ರಹವಾಗಿತ್ತು. ಈಗಾಗಲೇ ಹಾರಂಗಿ ಜಲಾಶಯ ತುಂಬಿರುವುದರಿಂದ ಅಲ್ಲಿಂದ ಹೊರ ಬಿಡಲಾದ ನೀರು ಸಹ ಕೆಆರ್ಎಸ್ಗೆ ಹರಿದು ಬರುತ್ತಿದೆ.
ಸಂಪೂರ್ಣ ಸಾಲ ಮನ್ನಾಕ್ಕಾಗಿ ರೈತರಿಂದ ವಿವಿಧೆಡೆ ಪ್ರತಿಭಟನೆ
July 10, 2018ಮಂಡ್ಯ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ಹಲವೆಡೆ ಸೋಮವಾರ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮಂಡ್ಯ, ಪಾಂಡವಪುರ, ಕೆ.ಆರ್.ಪೇಟೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಡ್ಯ: ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಮಂಡ್ಯ ನಗರದ ಸರ್. ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಮಾ ವೇಶಗೊಂಡ ಪ್ರತಿಭಟನಾಕಾರರು, ಧರಣಿ ನಡೆಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡದಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…
ಉತ್ಪಾದಕರಿಗೆ ಮೋಸ: ಹೆದ್ದಾರಿಯಲ್ಲಿ ಹಾಲು ಸುರಿದು ಪ್ರತಿಭಟನೆ
July 10, 2018ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಉತ್ಪಾದಕರಿಂದ ಖರೀದಿಸಿದ ಹಾಲಿಗೆ ಕಡಿಮೆ ದರ ನೀಡಿ ವಂಚಿಸುತ್ತಿರುವ ಕ್ರಮ ಖಂಡಿಸಿ ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಜಿಲ್ಲಾ ಹಾಲು ಉತ್ಪಾದಕರ ಹೋರಾಟ ಸಮಿತಿ ನೇತೃತ್ವದಲ್ಲಿಂದು ಬೆಳಿಗ್ಗೆ ನಗರದ ಜಯಚಾಮರಾಜೇಂದ್ರ ಸರ್ಕಲ್ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ರಸ್ತೆಗೆ 150 ಲೀ. ಹಾಲು ಸುರಿದು ಮನ್ಮುಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈತ ಸಭಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ನಂತರ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು…










