ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉನ್ನತ ಹುದ್ದೆಯ ಲ್ಲಿದ್ದ ಶೀಳನೆರೆ ಎಸ್.ಎಸ್.ಗುಂಡಯ್ಯ ನವರು ತಾಲೂಕಿನ 300ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಕೆಲಸ ಕೊಡಿಸುವ ಮೂಲಕ ಸಾವಿರಾರು ಕುಟುಂಬಕ್ಕೆ ಆಸರೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿಕುಮಾರ್ ತಿಳಿಸಿದರು. ತಾಲೂಕು ಕಸಾಪ ವತಿಯಿಂದ ಪಟ್ಟಣದ ಗ್ರಾಮಭಾರತಿ ಶಿಕ್ಷಣ ಸಂಸ್ಥೆ ಸಭಾಂಗಣ ದಲ್ಲಿ ದಿ.ಎಸ್.ಎಸ್.ಗುಂಡಯ್ಯನವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಭಾವಗೀತೆ ಸ್ಪರ್ಧೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಎಸ್.ಎಸ್.ಗುಂಡಯ್ಯ ದತ್ತಿ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ…
ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ
July 8, 2018ಮಂಡ್ಯ: 2018ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನ ಗೊಳಿಸಲು ಮಂಜೂರಾತಿ ನೀಡಲಾಗಿದೆ. ಗ್ರಾಪಂ: ಭತ್ತ ನೀರಾವರಿ ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ, ರಾಗಿ (ಮಳೆ ಆಶ್ರಿತ) ಬೆಳೆಗೆ ನಾಗಮಂಗಲ ಮತ್ತು ಪಾಂಡವಪುರ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ,…
ಸಂಬಳಕ್ಕಾಗಿ `ಡಿ’ ಗ್ರೂಪ್ ನೌಕರರ ಪ್ರತಿಭಟನೆ
July 8, 2018ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ `ಡಿ’ ಗ್ರೂಪ್ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ನಮಗೆ 11 ತಿಂಗಳಿಂದ ಸಂಬಳ ನೀಡುತ್ತಿಲ್ಲ ಎಂದು ಆರೋಪಿಸಿ ಡಿ ಗ್ರೂಪ್ ನೌಕರರು ಪ್ರತಿಭಟನೆ ಮಾಡಿದರು. ಆಸ್ಪತ್ರೆ ಎದುರು ಜಮಾಯಿಸಿದ ನೌಕರರು ಸಂಬಳ ನೀಡದ ಏಜೆನ್ಸಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಚೇತನ್ಕುಮಾರ್ ಮಾತನಾಡಿ, 11 ತಿಂಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ 23 ನೌಕಕರಿಗೆ ಸಂಬಳ ನೀಡುತ್ತಿಲ್ಲ. ಇದರಿಂದ ನಮ್ಮ ಜೀವನ…
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
July 8, 2018ಮದ್ದೂರು/ ಶ್ರೀರಂಗಪಟ್ಟಣ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯ ಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಶನಿವಾರ ಮದ್ದೂರು ಮತ್ತು ಶ್ರೀರಂಗಪಟ್ಟಣದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು. ಮದ್ದೂರು: ಪಟ್ಟಣದ ಪ್ರವಾಸಿ ಮಂದಿರ ದಿಂದ ಮೆರವಣಿಗೆಯಲ್ಲಿ ಆಗಮಿಸಿದ ಅಂಗನವಾಡಿ ನೌಕರರು, ದಾರಿಯುದ್ದಕ್ಕೂ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ತಾಲೂಕು ಕಚೇರಿಗೆ ಆಗಮಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷೆ ಎಚ್.ವಿಜಯಲಕ್ಷ್ಮಿ ಮಾತನಾಡಿ, ಕೇಂದ್ರ ಸರ್ಕಾರವು…
ಪ್ರೀತಿಗೆ ಪೋಷಕರ ವಿರೋಧ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
July 7, 2018ಮಂಡ್ಯ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿ ದ್ದರಿಂದ ಪ್ರೇಮಿಗಳಿಬ್ಬರ ಜೀವನ ದುರಂತ ಅಂತ್ಯ ಕಂಡಿರುವ ಘಟನೆ ಶ್ರೀರಂಗ ಪಟ್ಟಣ ತಾಲೂಕಿನ ಚಿಕ್ಕಾಯರಳ್ಳಿಯಲ್ಲಿ ನಡೆದಿದೆ. ಮೂಲತಃ ಹೆಚ್.ಡಿ.ಕೋಟೆ ತಾಲೂಕು ಯಡಿಯಾಲ ಗ್ರಾಮದ ನಿವಾಸಿಗಳಾದ ಶಿವು @ ಚಿನ್ನು ಬಿನ್ ವೆಂಕಟೇಶ್(19) ಮತ್ತು ಅನ್ನಪೂರ್ಣ ಬಿನ್ ಭಾಗ್ಯಮ್ಮ (18) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಘಟನೆ ಹಿನ್ನೆಲೆ: ಶಿವು ಮತ್ತು ಅನ್ನಪೂರ್ಣ ಇಬ್ಬರೂ ಬಸ್ನಲ್ಲಿ ಹೆಚ್.ಡಿ.ಕೋಟೆಯಿಂದ ಗುರುವಾರವೇ ಶ್ರೀರಂಗಪಟ್ಟಣಕ್ಕೆ ಬಂದಿದ್ದು, ಕೆಆರ್ಎಸ್ಗೆ ತೆರಳಿ ಅಲ್ಲಿ ಸುತ್ತಮುತ್ತ ಸುತ್ತಾಡಿದ್ದಾರೆ. ಸಂಜೆಯಾದ…
ಪೂರ್ಣ ಸಾಲ ಮನ್ನಾ ಭರವಸೆ ಭಗ್ನ: ಇಬ್ಬರು ರೈತರ ಆತ್ಮಹತ್ಯೆ
July 7, 2018ಮಂಡ್ಯ, ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ನಲ್ಲಿ ಪೂರ್ಣ ಸಾಲ ಮನ್ನಾ ಆಗಲಿಲ್ಲ ಎಂದು ಮನ ನೊಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ದೇಮಹಳ್ಳಿ ಹಾಗೂ ಮಂಡ್ಯ ಜಿಲ್ಲೆ ಕಚ್ಚಿಗೆರೆ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ವರದಿ: ಚಾಮರಾಜ ನಗರ ತಾಲೂಕಿನ ದೇಮಹಳ್ಳಿ ಗ್ರಾಮದ ನಂಜುಂಡಪ್ಪನವರ ಮಗ ಚಿಕ್ಕಸ್ವಾಮಿ ಉ. ಬೆಳ್ಳಪ್ಪ (42) ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಸ್ವಾಮಿ ತಮಗಿದ್ದ ಎರಡೂ ವರೆ ಎಕರೆ ಜಮೀನಿನಲ್ಲಿ ಬಾಳೆ ಮತ್ತು ಉದ್ದು…
ಏತ ನೀರಾವರಿ ಯೋಜನೆಗೆ ಚಾಲನೆ
July 7, 2018ಪಾಂಡವಪುರ: ತಾಲೂಕಿನ ಡಿಂಕಾ ಮಲ್ಲಿಗೆರೆ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ಏತ ನೀರಾವರಿ ಯೋಜನೆಗೆ ಜಿಪಂ ಸದಸ್ಯ ಸಿ.ಅಶೋಕ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲ್ಲಿಗೆರೆ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಸುಮಾರು 700 ಎಕರೆ ಅಚ್ಚುಕಟ್ಟು ಪ್ರದೇಶ ಬರಲಿದ್ದು, ಈ ವ್ಯಾಪ್ತಿಯ ರೈತರು ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಏತ ನೀರಾವರಿ ಯೋಜನೆ ಜೊತೆಗೆ ಚಿನಕುರಳಿ ಹೋಬಳಿಯ ಸುಮಾರು 22 ಕೋಟಿ ವೆಚ್ಚದಲ್ಲಿ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೂ…
ಡಾ.ಬಾಬುಜೀ ಭವನ ಕಾಮಗಾರಿ ಶೀಘ್ರ ಆರಂಭ
July 7, 2018ಮಂಡ್ಯ: ಮಂಡ್ಯ ಜನತೆಯ ಬಹುದಿನಗಳ ಬೇಡಿಕೆಯಾದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ ಸಮುದಾಯ ಭವನದ ಕಾಮಗಾರಿ ಯನ್ನು ಶೀಘ್ರವಾಗಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್. ಮಂಜುಶ್ರೀ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 32ನೇ ಪುಣ್ಯತಿಥಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗವಿರುವ ಕಾವೇರಿ ಉದ್ಯಾನವನದಲ್ಲಿ ಡಾ. ಬಾಬು ಜಗಜೀವನರಾಂ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಅವರು ಮಾತ ನಾಡಿದರು. ಬಹು ದಿನಗಳಿಂದ ಮಂಡ್ಯದಲ್ಲಿ ಡಾ….
ಮುಂದುವರೆದ ಗಣಿಗಾರಿಕೆ ಮೇಲಿನ ದಾಳಿ
July 7, 2018ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆ, ಕ್ರಷರ್ ಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರವೂ ದಾಳಿ ನಡೆಸಿ 19 ಅಕ್ರಮ ಜಲ್ಲಿ ಕ್ರಷರ್ಗಳಿಗೆ ಬೀಗ ಜಡಿದಿದ್ದಾರೆ. ನಿನ್ನೆ ಅರಕೆರೆ ವ್ಯಾಪ್ತಿಯ ಹಲವು ಅಕ್ರಮ ಕ್ರಷರ್ಗಳಿಗೆ ಬೀಗ ಜಡಿದಿದ್ದರು. ಇಂದು ಕೆ.ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯ ಗಣಂಗೂರು, ಗೌಡಹಳ್ಳಿ, ಟಿ.ಎಂ.ಹೂಸೂರು, ಕಾಳೇನಹಳ್ಳಿ ಮತ್ತು ಜಕ್ಕನಹಳ್ಳಿ ವ್ಯಾಪ್ತಿ ಗಳಲ್ಲಿ ಯಾವುದೇ ಪರವಾನಗಿ ಪಡೆಯದೇ ಅಕ್ರಮವಾಗಿ ನಡೆಸುತ್ತಿದ್ದ…
ಐಸಿಎಲ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
July 7, 2018ಕೆ.ಆರ್.ಪೇಟೆ: ತಾಲೂಕಿನ ರೈತರ ಜೀವನಾಡಿ ಮಾಕವಳ್ಳಿ ಕೋರಮಂಡಲ್ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಕಾರ್ಖಾನೆ ನೂತನ ಉಪಾಧ್ಯಕ್ಷ ಜಿ.ವಿ.ರವಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸುಮಾರು 7ರಿಂದ 8ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಕಳೆದ ಸಾಲಿನಲ್ಲಿ 6ಲಕ್ಷ ಟನ್ ಕಬ್ಬು ಅರೆಯಲಾಗಿತ್ತು. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ಎಲ್ಲಾ ರೈತರಿಗೂ ಪ್ರತಿ ಟನ್ ಕಬ್ಬಿಗೆ 2550 ರೂ. ನಂತೆ ಹಣ ಪಾವತಿಸಲಾಗಿದೆ….