ಮಂಡ್ಯ: ಹೈಟೆಕ್ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಮೂವರು ಬಾಂಗ್ಲಾ ಯುವತಿ ಯರನ್ನು ರಕ್ಷಣೆ ಮಾಡಿರುವ ಘಟನೆ ಮದ್ದೂರು ಪಟ್ಟಣ ಸಮೀಪದ ಲಾಡ್ಜ್ ವೊಂದರಲ್ಲಿಂದು ನಡೆದಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಬದಿಯ ಪ್ರಕೃತಿ ಲಾಡ್ಜ್ನಲ್ಲಿಯೇ ಹೈಟೆಕ್ ವೇಶ್ಯವಾಟಿಕೆ ನಡೆಸುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹಿನ್ನೆಲೆ: ಪ್ರಕೃತಿ ಲಾಡ್ಜ್ ನಲ್ಲಿ ಗುಹೆ ರೀತಿ ಕೊಠಡಿ ನಿರ್ಮಿಸಿ ಹುಡುಗಿಯರನ್ನು ಅಡಗಿಸಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಸಂಬಂಧ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೀಡಿದ ಖಚಿತ ಮಾಹಿತಿ ಮೇರೆಗೆ…
ಹಿಂದೂ-ಮುಸ್ಲಿಮರು ಪರಸ್ಪರ ಸೌಹಾರ್ದಯುತ ಜೀವನ ನಡೆಸಿ
June 15, 2018ಕೆ.ಆರ್.ಪೇಟೆ: ಹಿಂದೂ-ಮುಸ್ಲಿಮರು ಪರಸ್ಪರ ಸೌಹಾರ್ದಯುತ ಜೀವನ ನಡೆಸಬೇಕು. ಯಾವುದೇ ಕಾರಣಕ್ಕೂ ದ್ವೇಷ-ಅಸೂಯೆ ಇಟ್ಟುಕೊಳ್ಳಬಾರದು ಎಂದು ತಹಶೀಲ್ದಾರ್ ಗುರುಸಿದ್ದಯ್ಯ ಹಿರೇಮಠ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣ ದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಕರೆಯ ಲಾಗಿದ್ದ ಮುಸಲ್ಮಾನ್ ಬಾಂಧವರು ಮತ್ತು ವಿವಿಧ ಸಂಘ ಸಂಸ್ಥೆಗಳ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿ ತಮ್ಮ ಧರ್ಮ ಪ್ರೀತಿ ಸುವ ರೀತಿ ಅನ್ಯ ಧರ್ಮ ಮತ್ತು ಇತರೆ ಧರ್ಮದ ಬಂಧುಗಳನ್ನು ಗೌರವಿಸುವ ಉದಾರ ಗುಣ ಬೆಳೆಸಿಕೊಳ್ಳಬೇಕು. ಮುಸ್ಲಿಂ ಬಂಧುಗಳು…
ಬಜೆಟ್ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ
June 14, 2018ರಾಜ್ಯದಲ್ಲಿ ಪ್ಲಾನಿಂಗ್ ಕಮೀಷನ್ ಉತ್ತಮಗೊಳಿಸಲು ಯೋಜನೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿಗೆ ಚಿಂತನೆ: ಹೆಚ್ಡಿಕೆ ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ) : ‘ರೈತರ ಸಾಲಮನ್ನಾ ವಿಚಾರದಲ್ಲಿ ಗೊಂದಲ ಬೇಡ. ಈಗಾಗಲೇ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸ ಲಾಗಿದ್ದು, ಬಜೆಟ್ನಲ್ಲಿ ಯಾವ ಪ್ರಮಾಣದ ಸಾಲಮನ್ನಾ ಮಾಡಲಾಗುವುದು ಎಂಬು ದರ ಬಗ್ಗೆ ತಿಳಿಸುತ್ತೇನೆ’ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು.ಸಾಲಮನ್ನಾ…
ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್ಡಿಕೆ ದಂಪತಿ
June 14, 2018ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ): ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಯೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನಾಗಲಿಂಗೇಶ್ವರಸ್ವಾಮಿ ಸನ್ನಿಧಿ ಯಲ್ಲಿ ಆಯೋಜಿಸಲಾಗಿದ್ದ ಮೃತ್ಯುಂ ಜಯ ಹೋಮದ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಶ್ರೀ ಕಾಲಭೈರವೇಶ್ವರ ಸ್ವಾಮಿಯ ಗರ್ಭ ಗುಡಿಯ ಮುಂಭಾಗದಲ್ಲಿ ಹೆಚ್.ಡಿ. ಕುಮಾರಸ್ವಾಮಿ ದಂಪತಿ ಸಮ್ಮುಖದಲ್ಲಿ ನಡೆದ ವಿಶೇಷ ಪೂಜೆಯನ್ನು ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ…
51 ಅಡಿ ಎತ್ತರದ ಆಂಜನೇಯಸ್ವಾಮಿ ವಿಗ್ರಹ ಲೋಕಾರ್ಪಣೆಗೆ ಸಜ್ಜು
June 14, 2018ಕೆ.ಆರ್.ಪೇಟೆ: ಪಟ್ಟಣದ ಕೆರೆ ಬೀದಿಯ ಮುಕ್ಕಟ್ಟೆ ಚೌಕದ ಬಳಿ ಶ್ರೀಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವ ಸ್ಥಾನ ಟ್ರಸ್ಟ್ ವತಿಯಿಂದ ನೂತನವಾಗಿ 30ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ 51 ಅಡಿ ಎತ್ತರದ ಆಂಜನೇಯಸ್ವಾಮಿ ವಿಗ್ರಹ ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಜೂ. 15, 16, 17ರಂದು ಧಾರ್ಮಿಕ ವಿಶೇಷ ಪೂಜಾ ಕೈಂಕರ್ಯಗಳು ಜರುಗ ಲಿದೆ. ಕೊನೆಯ ದಿನದಂದು ಮಹಾ ಮಂಗಳಾ ರತಿ ಆದ ನಂತರ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲರಿಗೂ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಅಭಿಷೇಕ ಮಾಡಲು ವಿಶೇಷ ಮೆಟ್ಟಿಲು…
ಬಿಇಓ ಕಚೇರಿ ಮುಂಭಾಗ ಕರವೇ ಪ್ರತಿಭಟನೆ
June 14, 2018ಕೆ.ಆರ್.ಪೇಟೆ: ತಾಲೂಕಿನ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಕಾನೂನು ಮೀರಿ ಹೆಚ್ಚಿನ ಡೊನೇಷನ್ ಪಡೆಯಲಾಗುತ್ತಿದ್ದು, ಈ ಬಗ್ಗೆ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧ ವಾರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಶೆಟ್ಟಿ ಬಣ)ದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಆರ್. ಅಂಜನ್ ಮತ್ತು ಗೌರವಾ ಧ್ಯಕ್ಷ ಟಿ.ವೈ. ಆನಂದ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಕಾರ್ಯಕರ್ತರು ಖಾಸಗಿ ಶಾಲೆ…
ಲೋಕಲ್ ಕದನಕ್ಕೆ ಅಖಾಡ ಸಜ್ಜು
June 13, 2018ಮಹಿಳೆಯರಿಗೆ ಶೇಖಡ 50ರಷ್ಟು ಮೀಸಲು, ಹಲವು ಘಟಾನುಘಟಿಗಳ ಕನಸು ಖಲಾಸ್ ! ಮಂಡ್ಯ: ವಿಧಾನಸಭಾ ಚುನಾವಣಾ ಕದನ ಮುಗಿದ ಬೆನ್ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣಾ ಕದನಕ್ಕೆ ಅಖಾಡ ಸಜ್ಜಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಜಿಲ್ಲೆಯ ನಾಗ ಮಂಗಲ ಪುರಸಭೆ ಹೊರತುಪಡಿಸಿ 6 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಗರಾ ಭಿವೃದ್ಧಿ ಇಲಾಖೆ ವಾರ್ಡ್ವಾರು ಮೀಸ ಲಾತಿ ಪ್ರಕಟಿಸಿದ್ದು, ಚುನಾವಣಾ ದಿನಾಂಕ ವಷ್ಟೇ ಬಾಕಿ ಉಳಿದಿದೆ. ಇದರೊಂದಿಗೆ ಮತ್ತೊಂದು ಚುನಾವಣಾ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳು ಸಿದ್ಧವಾಗುವಂತೆ…
ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ
June 13, 2018ಮಂಡ್ಯ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲೆಯ ಮಂಡ್ಯ, ಪಾಂಡವಪುರ, ಮದ್ದೂರು ಸೇರಿದಂತೆ ವಿವಿಧೆಡೆ ಆಚರಿಸಲಾಯಿತು.ಬಾಲ ಕಾರ್ಮಿಕ ಪದ್ಧತಿ ನಿಷೇಧವಾಗ ಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಬಾಲ್ಯದ ಜೀವನವನ್ನು ಮಕ್ಕಳು ಅನುಭವಿಸು ವಂತಹ ವಾತಾವರಣವನ್ನು ಕಲ್ಪಿಸಬೇಕು ಎಂಬೆಲ್ಲ ಆಶಯದಿಂದ ಕಾರ್ಯಕ್ರಮ ಗಳು ನಡೆಯಿತು. ಮಂಡ್ಯ ವರದಿ: ಮಂಡ್ಯದ ಗಾಂಧಿ ಭವನ ದಲ್ಲಿ ಕಾರ್ಮಿಕ ಇಲಾಖೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸ ಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ವಿಜಯ ಕುಮಾರಿ ಉದ್ಘಾಟಿಸಿದರು. ಪಾಂಡವಪುರ…
ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
June 13, 2018ಮದ್ದೂರು: ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಇತರೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಎಚ್.ಕೆ.ವಿ.ನಗರದ 1ನೇ ಕ್ರಾಸ್ ಬಡಾವಣೆಯ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.ಬಡಾವಣೆಯ ಮುಂಭಾಗ ಸಮಾವೇಶ ಗೊಂಡ ನಿವಾಸಿಗಳು ಪುರಸಭೆಯ ವಿರುದ್ಧ ಘೋಷಣೆ ಕೂಗಿದರು. ಬಡಾವಣೆಯಲ್ಲಿ 10 ವರ್ಷದದಿಂದ ಸಮರ್ಪಕವಾಗಿ ಸ್ವಚ್ಛತೆ ಮಾಡಿಲ್ಲ. ಚರಂಡಿ ಯಲ್ಲಿ ಹೂಳು ತುಂಬಿಕೊಂಡು ಗಬ್ಬು ನಾರು ತ್ತಿದೆ. ಜತೆಗೆ ಬಡಾವಣೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ದೂರಿದರು. ಅನೈರ್ಮಲ್ಯ ಹೆಚ್ಚಳದಿಂದ ಬಡಾವಣೆ ಯಲ್ಲಿ ಸೊಳ್ಳೆಗಳ ಹಾವಳಿ…
ಎಂ.ಎನ್.ಆರ್.ಇ.ಜಿ.ಎ ಯೋಜನೆಯಡಿ ಕೂಲಿ ನೀಡಲು ಆಗ್ರಹ
June 13, 2018ಮಳವಳ್ಳಿ: ಎಂ.ಎನ್.ಆರ್.ಇ.ಜಿ.ಎ ಯೋಜನೆಯಡಿ ಕೂಲಿ ಹಣ ನೀಡುತ್ತಿಲ್ಲ ಹಾಗೂ ಕಾರ್ಮಿಕರ ಕೆಲಸ ನಿರಾಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲೂಕಿನ ದುಗ್ಗನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು. ಸಂಘದ ಕಾರ್ಯಕರ್ತರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣ ಗೆ ನಡೆಸಿ, ಬಳಿಕ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಮಾವೇಶಗೊಂಡು ಪಿಡಿಓ, ಹಾಗೂ ಎಂಜಿನಿ ಯರ್ ವಿರುದ್ಧ ಘೋಷಣೆ ಕೂಗಿದರು. 2016-17ನೇ ಸಾಲಿನಲ್ಲಿ ಗ್ರಾಮದ 36 ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದರು….