ಮೈಸೂರು

CFTRIನಿಂದ ಒಡಿಶಾ ಸಂತ್ರಸ್ತರಿಗೆ ಆಹಾರ
ಮೈಸೂರು

CFTRIನಿಂದ ಒಡಿಶಾ ಸಂತ್ರಸ್ತರಿಗೆ ಆಹಾರ

May 6, 2019

ಮೈಸೂರು: ಫೊನಿ ಚಂಡಮಾರುತದಿಂದ ತತ್ತರಿಸಿರುವ ಸಂತ್ರಸ್ತರಿಗೆ 25 ಟನ್ ಆಹಾರ ಪೂರೈಕೆ ಮಾಡಲು ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ (ಸಿಎಫ್‍ಟಿಆರ್‍ಐ) ಮುಂದಾಗಿದ್ದು, ಮೊದಲ ಹಂತದಲ್ಲಿ ನಾಳೆ(ಮೇ 6) 5 ಟನ್ ಆಹಾರವನ್ನು ಒಡಿಶಾಗೆ ಸರಬರಾಜು ಮಾಡಲು ಕ್ರಮ ಕೈಗೊಂಡಿದೆ. ಕಳೆದ ಮೂರ್ನಾಲ್ಕು ದಿನ ಗಳಿಂದ ಫೊನಿ ಚಂಡಮಾರುತ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶದಲ್ಲಿ ಭಾರಿ ಅವಾಂತರ ಸೃಷ್ಟಿಸಿದ್ದು, ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ. ಮಾನವೀ ಯತೆ ನೆಲೆಗಟ್ಟಿನಲ್ಲಿ ಮೈಸೂರಿನ ಸಿಎಫ್ ಟಿಆರ್‍ಐ ಶನಿವಾರ ಸಂಜೆಯಿಂದಲೇ ಸಂತ್ರಸ್ಥರಿಗೆ ಆಹಾರ ತಯಾರಿಕೆಗೆ…

ನಾಳೆಯಿಂದ ರಂಜಾನ್ ಆಚರಣೆ ಆರಂಭ
ಮೈಸೂರು

ನಾಳೆಯಿಂದ ರಂಜಾನ್ ಆಚರಣೆ ಆರಂಭ

May 6, 2019

ಮೈಸೂರು: ಇಂದು ಚಂದ್ರ ಗೋಚರಿಸದ ಹಿನ್ನೆಲೆಯಲ್ಲಿ ಮಂಗಳ ವಾರದಿಂದ ರಂಜಾನ್ ಆಚರಣೆ ಆರಂಭಿಸಲಾಗುವುದು ಎಂದು ಮೈಸೂರು ಜಿಲ್ಲಾ ಮೂನ್ ಕಮಿಟಿ ತಿಳಿಸಿದೆ. ಭಾನುವಾರ ಸಂಜೆ ಪ್ರಾರ್ಥನೆ ಬಳಿಕ ಕಮಿಟಿ ಆವರಣ ದಲ್ಲಿ ಮೈಸೂರು ಸರ್ ಖಾಝಿ ಹಜರತ್ ಮೌಲಾನಾ ಮೊಹಮದ್ ಉಸ್ಮಾನ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾ ಮೂನ್ ಕಮಿಟಿ ಸಂಚಾಲಕ ಆರಿಫ್ ಎ.ಮೆಹ್ಕ್ರಿ ಇನ್ನಿತರ ಸದಸ್ಯರು ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಿಂದ ಮಾಹಿತಿ…

ಫೊನಿ ಚಂಡಮಾರುತ; ಭಾರತದ ಕ್ರಮಕ್ಕೆ ವಿಶ್ವಸಂಸ್ಥೆ ಶ್ಲಾಘನೆ
ಮೈಸೂರು

ಫೊನಿ ಚಂಡಮಾರುತ; ಭಾರತದ ಕ್ರಮಕ್ಕೆ ವಿಶ್ವಸಂಸ್ಥೆ ಶ್ಲಾಘನೆ

May 6, 2019

ವಾಷಿಂಗ್ಟನ್: ಫೊನಿ  ಚಂಡ ಮಾರುತ ಅಬ್ಬರಿಸುತ್ತಿರುವಂತೆಯೇ ಚಂಡಮಾರುತ ಸಂಬಂಧ ಭಾರತ ಕೈಗೊಂಡ ಸೂಕ್ತ ಮುಂಜಾಗ್ರತಾ ಕ್ರಮಗಳು ವಿಶ್ವಸಂಸ್ಥೆಯ ಗಮನ ಸೆಳೆದಿದ್ದು, ಭಾರತ ಕಾರ್ಯಕ್ಕೆ ವಿಶ್ವಸಂಸ್ಥೆ ಪ್ರಶಂಸೆ ವ್ಯಕ್ತಪಡಿಸಿದೆ. ಪ್ರಸ್ತುತ ಬಾಂಗ್ಲಾದೇಶದಲ್ಲಿ ಅಬ್ಬರಿಸುತ್ತಿರುವ ಫೆÇನಿ ಚಂಡಮಾರುತ ಕಳೆದ 3 ದಿನಗಳಿಂದ ಭಾರತದ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶ ದಲ್ಲಿ ಅಬ್ಬರಿಸಿತ್ತು. ಆದರೆ ಕೇಂದ್ರ ಸರ್ಕಾರ ಮತ್ತು ಚಂಡಮಾರುತ ಪೀಡಿತ ರಾಜ್ಯಗಳು ಕೈಗೊಂಡ ಸೂಕ್ತ ಮುಂಜಾಗ್ರತಾ ಕ್ರಮಗಳಿಂದಾಗಿ ಭಾರತದಲ್ಲಿ ಪ್ರಾಣಹಾನಿ ಕಡಿಮೆಯಾಗಿತ್ತು. ಇದೇ ಕಾರಣಕ್ಕಾಗಿ ಇದೀಗ ವಿಶ್ವಸಂಸ್ಥೆ…

ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮಾಡಿದ ಕರೆ ಸ್ವೀಕರಿಸದ ಮಮತಾ!
ಮೈಸೂರು

ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಮಾಡಿದ ಕರೆ ಸ್ವೀಕರಿಸದ ಮಮತಾ!

May 6, 2019

ನವದೆಹಲಿ: ಫೊನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳ ದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದರೂ ಮಮತಾ ಕರೆಯನ್ನು ಸ್ವೀಕರಿಸಿಲ್ಲ. ಅಲ್ಲದೆ ಮರು ಕರೆಯನ್ನೂ ಮಾಡಿಲ್ಲವಂತೆ. ನಂತರ ಮೋದಿ ಅವರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು ಎಂದು ಉನ್ನತ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ ಮೋದಿ…

ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ
ಮೈಸೂರು

ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ

May 6, 2019

ನವದೆಹಲಿ: ಚುನಾವಣಾ ರ್ಯಾಲಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದು ಬಿಜೆಪಿ ಕಾರ್ಯಕರ್ತನಲ್ಲ, ಬದಲಿಗೆ ಆತ ಆಪ್ ಕಾರ್ಯಕರ್ತ ಎಂದು ದೆಹಲಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಭಾರತೀಯ ಸೇನೆಯ ಬಗ್ಗೆ ಆಪ್ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ್ದ ರಿಂದ ಆಕ್ರೋಶಿತನಾಗಿದ್ದ ಆತ, ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಲಾಗಿದೆ. ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಯುವಕ ನೋರ್ವ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದ. ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು….

ಬೆಂಕಿಗಾಹುತಿಯಾಗಿದ್ದ ಬಂಡೀಪುರ ಅರಣ್ಯದಲ್ಲಿ ಬಿತ್ತನೆ ಕಾರ್ಯ ಆರಂಭ
ಮೈಸೂರು

ಬೆಂಕಿಗಾಹುತಿಯಾಗಿದ್ದ ಬಂಡೀಪುರ ಅರಣ್ಯದಲ್ಲಿ ಬಿತ್ತನೆ ಕಾರ್ಯ ಆರಂಭ

May 6, 2019

ಮೈಸೂರು: ಕಿಡಿಗೇಡಿಗಳಿಟ್ಟ ಕಿಚ್ಚಿಗೆ ಬಂಡೀಪುರ ಅಭಯಾರಣ್ಯದ ಸುಟ್ಟು ಹೋಗಿ ರುವ ಕೆಲ ಪ್ರದೇಶಕ್ಕೆ ಪುನಶ್ಚೇತನ ನೀಡಲು ಕ್ರಮ ಕೈಗೊಂಡಿರುವ ಅರಣ್ಯ ಇಲಾಖೆ ಬಿದಿರು ಸೇರಿ ದಂತೆ ಸ್ಥಳೀಯವಾಗಿ ಬೆಳೆಯುವ ಮರಗಳ ಬೀಜ ಬಿತ್ತನೆ ಆರಂಭಿಸಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಹಾನಿಯಾಗಿದ್ದ ಕಾಡಿಗೆ ಕಳೆದ ಐದಾರು ದಿನದಿಂದ ಬೀಜ ಬಿತ್ತನೆ ಕಾರ್ಯ ನಡೆಸ ಲಾಗುತ್ತಿದೆ. ಕಳೆದ 15 ದಿನಗಳಿಂದ ಬಂಡೀಪುರ ಅಭಯಾರಣ್ಯದ ಎಲ್ಲಾ ವಲಯಗಳಲ್ಲಿಯೂ ಉತ್ತಮ ಮಳೆಯಾಗಿದ್ದು, ಈಗಾಗಲೇ ಬಹು ತೇಕ ಎಲ್ಲಾ ವಲಯಗಳು ಹಸಿರಿನಿಂದ ಕಂಗೊ ಳಿಸುತ್ತಿದೆ….

ಉದ್ಬೂರಿನಲ್ಲಿ ಜೆಡಿಎಸ್‍ನವರು ಬಿಜೆಪಿಗೆ ಮತ ಹಾಕಿರುವುದು ನಿಜ
ಮೈಸೂರು

ಉದ್ಬೂರಿನಲ್ಲಿ ಜೆಡಿಎಸ್‍ನವರು ಬಿಜೆಪಿಗೆ ಮತ ಹಾಕಿರುವುದು ನಿಜ

May 6, 2019

ಮೈಸೂರು: ಮೈಸೂರು ತಾಲೂಕಿನ ಉದ್ಬೂರಿನಲ್ಲಿ ಜೆಡಿಎಸ್ ನವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆಂಬ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿಗೆ ಭಾನುವಾರ ದಿಡೀರ್ ಭೇಟಿ ನೀಡಿರುವ ಅವರು, ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಜಿ.ಟಿ.ದೇವೇಗೌಡ ಸತ್ಯ ಹೇಳಿದ್ದಾರೆ. ಉದ್ಬೂರಿನಲ್ಲಿ ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿರುವುದು ನಿಜ. ಆ ಗ್ರಾಮದಲ್ಲಿ ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ಮತದಾರರು ಇದ್ದಾರೆ. ಅವ ರೆಲ್ಲಾ…

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿಗಾಗಿ ವೀರಶೈವ-ಲಿಂಗಾಯತ ಸಮುದಾಯ ಹೋರಾಟ ರೂಪಿಸಬೇಕು
ಮೈಸೂರು

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿಗಾಗಿ ವೀರಶೈವ-ಲಿಂಗಾಯತ ಸಮುದಾಯ ಹೋರಾಟ ರೂಪಿಸಬೇಕು

May 6, 2019

ಮೈಸೂರು: ರಾಜಕೀಯವಾಗಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಪಡೆಯಲು ವೀರಶೈವ-ಲಿಂಗಾಯತ ಸಮದಾಯ ಒಗ್ಗಟ್ಟಾಗಿ ಹೋರಾಟ ರೂಪಿಸಬೇಕು ಎಂದು ಹಿರಿಯ ಅಂಕಣಕಾರ ಮಹದೇವ ಪ್ರಕಾಶ್ ಅಭಿಪ್ರಾಯಪಟ್ಟರು. ಮೈಸೂರಿನ ನ್ಯೂ ಕಾಂತರಾಜ ಅರಸ್ ರಸ್ತೆ ಆನಂದನಗರದಲ್ಲಿರುವ ವೀರವನಿತೆ ರಾಣಿ ಚೆನ್ನಮ್ಮ ಸ್ವಯಂಸೇವಾ ಸಂಘದ ಕಚೇರಿ ಆವರಣದಲ್ಲಿ ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರ 112ನೇ ಜಯಂತಿ ಅಂಗವಾಗಿ ಏರ್ಪಡಿ ಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ವೀರಶೈವ-ಲಿಂಗಾಯತ ಸಮುದಾಯ ನಡುವೆ ಸಂಘರ್ಷ ನಡೆಯುತ್ತಿದ್ದು, ಇದು ಕೊನೆ ಗಾಣಬೇಕು….

ಫೊನಿ ಚಂಡಮಾರುತಕ್ಕೆ ಸಿಲುಕಿರುವ ಹಾಸನದ ಪ್ರವಾಸಿಗರುಕೋಲ್ಕತ್ತಾದಲ್ಲಿಯೇ ಎರಡು ದಿನ: ರಕ್ಷಣೆಗಾಗಿ ಮೊರೆ
ಮೈಸೂರು

ಫೊನಿ ಚಂಡಮಾರುತಕ್ಕೆ ಸಿಲುಕಿರುವ ಹಾಸನದ ಪ್ರವಾಸಿಗರುಕೋಲ್ಕತ್ತಾದಲ್ಲಿಯೇ ಎರಡು ದಿನ: ರಕ್ಷಣೆಗಾಗಿ ಮೊರೆ

May 6, 2019

ಹಾಸನ: ಊರಿಗೆ ಬರಲು ವಿಮಾನ ವ್ಯವಸ್ಥೆ ಇಲ್ಲದೇ ಇರುವುದರಿಂದ ಅಂಡಮಾನ್ ಪ್ರವಾಸಕ್ಕೆ ತೆರಳಿದ ಹಾಸನ ಜಿಲ್ಲೆಯ 8 ಮಂದಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿಯೇ ಎರಡು ದಿನಗಳಿಂದ ಉಳಿದುಕೊಂಡಿದ್ದಾರೆ. ಫೆÇನಿ ಚಂಡಮಾರುತ ಭೀತಿಗೆ ರಕ್ಷಣೆಗೆ ಕೋರುತ್ತಿದ್ದಾರೆ. ಚಂಡ ಮಾರುತ ಅಪಾಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕೋಲ್ಕತ್ತದಲ್ಲಿ ಏರ್ ಇಂಡಿಯಾ, ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟ ಸ್ಥಗಿತಗೊಳಿಸಿದ್ದರಿಂದ ಕೋಲ್ಕತ್ತದಲ್ಲಿಯೇ ಎರಡು ದಿನಗಳಿಂದ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ 8 ಜನರು ಸೇರಿ ರಾಜ್ಯದ ಸುಮಾರು 70 ಮಂದಿ…

ಶಾಲಾ ಮಕ್ಕಳ ಸುರಕ್ಷತೆಗಾಗಿ ನಗರ ಪೊಲೀಸ್ ಆಯುಕ್ತರಿಂದ ಹಲವು ಮಾರ್ಗೋಪಾಯ
ಮೈಸೂರು

ಶಾಲಾ ಮಕ್ಕಳ ಸುರಕ್ಷತೆಗಾಗಿ ನಗರ ಪೊಲೀಸ್ ಆಯುಕ್ತರಿಂದ ಹಲವು ಮಾರ್ಗೋಪಾಯ

May 6, 2019

ಮೈಸೂರು: ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪೂರ್ವ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆವರೆಗಿನ ಮಕ್ಕಳ ಸುರಕ್ಷತೆಗಾಗಿ 9ಕ್ಕೂ ಹೆಚ್ಚು ಅಂಶಗಳ ಮಾರ್ಗೋಪಾಯಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಶುಕ್ರವಾರ ಆದೇಶಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಪೂರ್ವ ಪ್ರಾಥಮಿಕದಿಂದ ಪ್ರೌಢಶಿಕ್ಷಣ ದವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸುರಕ್ಷತೆಗಾಗಿ ಆಯಾಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಕೆಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದು, ವಿವರ ಇಂತಿದೆ. ಶಾಲಾ ವಾಹನಗಳು ಖಾಸಗಿಯವರ ನಿರ್ವಹಣೆಯಲ್ಲಿ ದ್ದಲ್ಲಿ, ಅಂತಹ ಪ್ರತಿವಾಹನದಲ್ಲಿ ಮಕ್ಕಳ ಪಿಕಪ್…

1 1,005 1,006 1,007 1,008 1,009 1,611
Translate »