ಮೈಸೂರು: ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ನಮ್ಮ ಮೈಸೂರು ಫೌಂಡೆಷನ್ ಹಾಗೂ ಐಸಿಐಸಿಐ ಬ್ಯಾಂಕ್ ಸ್ಕಿಲ್ ಡೆವಲಪ್ಮೆಂಟ್ ಸಂಸ್ಥೆ ಜಂಟಿ ಆಶ್ರಯ ದಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೂರು ಗಿಡಗಳನ್ನು ನೆಡಲಾಯಿತು. ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಎಂ.ಕೆ.ಸೋಮ ಶೇಖರ್, ಗಿಡ-ಮರ, ಪ್ರಾಣಿ-ಪಕ್ಷಿ ಸಂಕುಲ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಇಂದು ಗಿಡಗಳನ್ನು ನೆಡುವ ಕಾರ್ಯಕ್ರಮ ಏರ್ಪಡಿಸಿರುವುದು ಉತ್ತಮ ಕಾರ್ಯ. ಜೊತೆಗೆ ಎರಡೂ ಸಂಘಟನೆಗಳು ಚಾಮುಂಡಿಬೆಟ್ಟದಲ್ಲಿ ಗಿಡ-ಮರ ಹಾಗೂ ಪ್ರಾಣಿ-ಪಕ್ಷಿ ಸಂಕುಲಕ್ಕೆ ಬೇಸಿಗೆಯಲ್ಲಿ…
ಏ.26ರಿಂದ ಕಲಾಮಂದಿರದ ಕಿರುರಂಗಮಂದಿರದಲ್ಲಿ ರಂಗವಲ್ಲಿ ನಗೆಹಬ್ಬ
April 22, 2019ಮೈಸೂರು: ಹೆಸ ರಾಂತ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಜನ್ಮ ದಿನದ ಹಿನ್ನೆಲೆಯಲ್ಲಿ ಮೈಸೂರಿನ ರಂಗವಲ್ಲಿ ತಂಡ ಕಲಾಮಂದಿರದ ಕಿರು ರಂಗ ಮಂದಿರದಲ್ಲಿ ಏ.26ರಿಂದ 28 ರವರೆಗೆ `ರಂಗವಲ್ಲಿ ನಗೆಹಬ್ಬ-2019’ ಹಾಸ್ಯ ನಾಟಕ ಪ್ರದರ್ಶನ ಆಯೋಜಿಸಿದೆ. ಹಾಸ್ಯಭರಿತ ಕಥೆ ಹೊಂದಿರುವ ಮೂರು ನಾಟಕ ಪ್ರದರ್ಶಿಸುವ ಮೂಲಕ ರಂಗಾ ಸಕ್ತರನ್ನು ನಗೆಗಡಲಲ್ಲಿ ತೇಲಿಸಲು ಸಜ್ಜಾಗಿದೆ. ಕಳೆದ 13 ವರ್ಷಗಳಿಂದ ಮೈಸೂರು ರಂಗಭೂಮಿಯಲ್ಲಿ ನಿರಂತರ ರಂಗಚಟು ವಟಿಕೆಯಿಂದ ರಂಗಾಸಕ್ತರ ಗಮನ ಸೆಳೆ ದಿರುವ ನಮ್ಮ ರಂಗವಲ್ಲಿ ತಂಡ ಹೆಸ ರಾಂತ…
ಮೂವರು ಅರಣ್ಯ ಸಿಬ್ಬಂದಿ ಅಮಾನತು: ಎಸಿಎಫ್, ಆರ್ಎಫ್ಓಗೆ ನೋಟೀಸ್ ಜಾರಿ
April 22, 2019ಮೈಸೂರು: ನಾಗರ ಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ವಲಯದಲ್ಲಿ ಮರಗಳ ಹನನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವ ರನ್ನು ಅಮಾನತು ಮಾಡಿ, ಎಸಿಎಫ್ ಮತ್ತು ಆರ್ಎಫ್ಓಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿದೆ. ಹೆಚ್.ಡಿ.ಕೋಟೆ ತಾಲೂಕಿನ ವ್ಯಾಪ್ತಿ ಯಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನದ ಮೇಟಿಕುಪ್ಪೆ ವಲಯದ ಸೋರೆ ಕುಪ್ಪೆ ಬೀಟ್ನ ಕಲ್ಲಹಳ್ಳ-ಗುಡಿಹಳ್ಳದ ಬಳಿ ಲಕ್ಷಾಂತರ ರೂ. ಮೌಲ್ಯದ 8 ರಿಂದ 10 ಸಾಗುವಾನಿ ಮರಗಳ 3 ದಿನಗಳ ಹಿಂದೆ ಕಡಿಯಲಾಗಿದೆ. ಸ್ಥಳದಲ್ಲಿದ್ದ ಸುಮಾರು 8 ರಿಂದ 10 ಅಡಿ…
ಶ್ರೀಲಂಕಾದಲ್ಲಿ ಸರಣಿ ಸ್ಫೋಟ
April 22, 2019ಕೊಲಂಬೋ (ಶ್ರೀಲಂಕಾ): ಎಲ್ಟಿಟಿಇ ಪತನದ ನಂತರ ಹತ್ತು ವರ್ಷಗಳ ಕಾಲ ಶಾಂತಿ ಜೀವನ ನಡೆಸುತ್ತಿದ್ದ ಶ್ರೀಲಂಕಾ ಪ್ರಜೆಗಳು, ಇಂದು ಮತ್ತೊಂದು ಭಯೋತ್ಪಾದಕ ಸಂಘಟನೆಯ ದಾಳಿಯಿಂದಾಗಿ ಆಘಾತಗೊಂಡಿದ್ದಾರೆ. ಕ್ರೈಸ್ತರು ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದಾಗಲೇ ಭಯೋತ್ಪಾ ದಕರು ಶ್ರೀಲಂಕಾದ ಮೂರು ಚರ್ಚ್ಗಳು ಮತ್ತು ಮೂರು ಪಂಚತಾರಾ ಹೋಟೆಲ್ಗಳು ಸೇರಿದಂತೆ 8 ಕಡೆ ಸರಣಿ ಬಾಂಬ್ ಸ್ಫೋಟ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಭಾನುವಾರ ಬೆಳಿಗ್ಗೆ 8.45ರ ಸುಮಾರಿನಲ್ಲಿ ಚರ್ಚ್ಗಳಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯೇ ಬಾಂಬ್ಗಳು ಸ್ಫೋಟವಾಗಿವೆ. ಈ ಸರಣಿ ಸ್ಫೋಟದಲ್ಲಿ…
ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಪ್ರಧಾನಿ ಮೋದಿ ಶಪಥ!
April 22, 2019ಅಹ್ಮದಾಬಾದ್:ಭಯೋತ್ಪಾದನೆ ನಿರ್ಮೂ ಲನೆ ಮಾಡಿಯೇ ತೀರುವುದಾಗಿ ಶಪಥ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಒಂದೋ ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು ಎಂದು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಏ.23ರಂದು 3ನೇ ಹಂತದ ಮತದಾನ ನಡೆಯಲಿದ್ದು, ಗುಜರಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಾರ್ವಜನಿಕ ಸಭೆಯನ್ನುದ್ದೇ ಶಿಸಿ ಮಾತನಾಡಿದರು. ನನ್ನ ಪ್ರಧಾನಿ ಹುದ್ದೆ ಉಳಿಯು ತ್ತದೆಯೋ ಇಲ್ಲವೋ. ಆದರೆ ಭಯೋತ್ಪಾದಕರಿರಬೇಕು ಅಥವಾ ನಾನು ಇರಬೇಕು ಎಂಬುದನ್ನು ನಾನು ನಿರ್ಧ ರಿಸಿಯಾಗಿದೆ ಎಂದು ಮೋದಿ ಹೇಳಿದರು. ವಿಂಗ್ ಕಮಾಂಡರ್ ಅಭಿನಂದನ್…
ನಕಲಿ ಐಪಿಎಸ್ ಅಧಿಕಾರಿ ಜೈಲಿಗೆ
April 22, 2019ಮೈಸೂರು: ಇನ್ಸ್ಪೆಕ್ಟರ್ ಯಾಮಾರಿಸಲು ಮುಂದಾಗಿದ್ದ ಮೈಸೂರಿನ ನಕಲಿ ಐಪಿಎಸ್ ಅಧಿಕಾರಿಯನ್ನು ಕೆ.ಆರ್. ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮೈಸೂರಿನ ವಿಜಯನಗರ 3ನೇ ಹಂತ, 3ನೇ ಮೇನ್, ಎ-ಬ್ಲಾಕ್ ನಿವಾಸಿ ಲೇಟ್ ನಿಜಲಿಂಗಪ್ಪ ಅವರ ಮಗ ಸಿ.ಎನ್. ದಿಲೀಪ್ (35) ಎಂಬುವನೇ ಐಪಿಎಸ್ ಅಧಿಕಾರಿ ಸೋಗಿನಲ್ಲಿ ಪೊಲೀಸ್ ಕಾರು ವ್ಯವಸ್ಥೆ ಮಾಡುವಂತೆ ದುಂಬಾಲು ಬಿದ್ದು ಸಿಕ್ಕಿರುವ ಆಸಾಮಿ. ಮಂಡ್ಯದ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಓದಿ ವಿಶ್ವೇಶ್ವರಯ್ಯ ಟೆಕ್ನಿಕಲ್ ಯೂನಿವರ್ಸಿಟಿಯಿಂದ ಬಿಇ ಪದವಿ ಪಡೆದಿರುವ ದಿಲೀಪ್ ಐಎಎಸ್ ಮಾಡಲು ಪ್ರಯತ್ನಿಸಿ ವಿಫಲ ನಾಗಿದ್ದ…
ಪಶ್ಚಿಮ ಬಂಗಾಳ 15 ವರ್ಷಗಳ ಹಿಂದಿನ ಬಿಹಾರದಂತಾಗಿದೆ
April 22, 2019ಕೋಲ್ಕತಾ: ಹಾಲಿ ಪಶ್ಚಿಮ ಬಂಗಾಳ ರಾಜ್ಯ ಈ ಹಿಂದೆ ಅಂದರೆ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದ್ದು, ಇಲ್ಲಿನ ಪ್ರಜೆಗಳಿಗೆ ಚುನಾವಣೆ ಮತ್ತು ಜನಪ್ರತಿನಿಧಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷ ಕರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಆಯೋಗದ ವತಿಯಿಂದ ಪಶ್ಚಿಮ ಬಂಗಾಳಕ್ಕೆ ವಿಶೇಷ ವೀಕ್ಷಕ ರಾಗಿ ನೇಮಕರಾಗಿರುವ ಅಜಯ್ ವಿ. ನಾಯಕ್ ಅವರು ಖಾಸಗಿ ಮಾಧ್ಯಮದೊಂದಿಗೆ ಈ ಬಗ್ಗೆ ಮಾತನಾಡಿದ್ದು, ಚುನಾವಣಾ ಆಯೋಗದ ವಿಶೇಷ ವೀಕ್ಷಕನಾಗಿ ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ನನ್ನ…
ಮತದಾರರ ಪಟ್ಟಿಯಿಂದ 1.5 ಲಕ್ಷಕ್ಕೂ ಹೆಚ್ಚು ಹೆಸರು ನಾಪತ್ತೆ, ಆಯೋಗದಿಂದ ತನಿಖೆಗೆ ಆದೇಶ
April 22, 2019ಬೆಂಗಳೂರು: ಭಾರೀ ಸಂಖ್ಯೆಯ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ಹೋದಾಗ ಮತಪಟ್ಟಿಯಲ್ಲಿ ತಮ್ಮ ಹೆಸರು ನಾಪತ್ತೆಯಾಗಿರುವುದನ್ನು ಕಂಡು ಆತಂಕಿತರಾಗಿದ್ದಾರೆ. ಹಲವಾರು ಜನರು ಈ ಬಗ್ಗೆ ದೂರು ಸಲ್ಲಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗವು ಹೆಸರುಗಳ ನಾಪತ್ತೆ ಕುರಿತಂತೆ ವಿಚಾರಣೆಗೆ ಆದೇಶ ನೀಡಿದೆ. ನೂರಾರು ಜನರು ತಮ್ಮ ಹೆಸರನ್ನು ಯಾವ ಕಾರಣಕ್ಕಾಗಿ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನುವುದನ್ನೇ ತಿಳಿಯದೆ ಮತದಾನ ಮಾಡಲೂ ಅವಕಾಶವಿಲ್ಲದೆ ನಿರಾಸೆಯಿಂದ ಹಿಂತಿರುಗಬೇಕಾಗಿ ಬಂದಿತ್ತು. ಗುರುವಾರ (ಏ.18)ರಂದು ಕರ್ನಾಟಕ ದಲ್ಲಿ ಮೊದಲ ಹಂತದ ಮತದಾನ ನಡೆದಿದ್ದು ಆ…
7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು
April 22, 2019ಮೈಸೂರು: ಖಿನ್ನತೆಗೊಳಗಾಗಿದ್ದ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತನ್ನ ತನ್ನ ಹುಟ್ಟು ಹಬ್ಬದಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಜನತಾನಗರದಲ್ಲಿ ಶನಿ ವಾರ ಮಧ್ಯಾಹ್ನ ಸಂಭವಿಸಿದೆ. ಜನತಾನಗರ 10ನೇ ಕ್ರಾಸ್ ನಿವಾಸಿ ರವಿ ಎಂಬುವರ ಪುತ್ರ ಗಣೇಶ(13) ನೇಣಿಗೆ ಶರಣಾದ ವಿದ್ಯಾರ್ಥಿ. ಕೆಲ ಸಕ್ಕೆ ಹೋಗಿ ಸಂಜೆ ಹಿಂದಿರುಗಿದಾಗ ಪುತ್ರ ಮನೆಯ ಕೊಠಡಿಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿರುವುದು ತಂದೆ-ತಾಯಿಯರಿಗೆ ತಿಳಿಯಿತು. ಕಳೆದ ಒಂದು ವಾರದಿಂದ ಖಿನ್ನತೆ ಗೊಳಗಾಗಿ ಬಳಲುತ್ತಿದ್ದ ಗಣೇಶ ಶನಿ ವಾರ ಹುಟ್ಟುಹಬ್ಬ…
ನೀರಿನ ಪ್ರಮಾಣ ಕುಸಿದಿದ್ದರೂ ಕುಕ್ಕರಹಳ್ಳಿ ಕೆರೆಯಲ್ಲಿ ಮೀನುಗಾರಿಕೆ
April 22, 2019ಮೈಸೂರು: ಮಳೆ ಕೊರತೆ ಯಿಂದ ಮೈಸೂರಿನ ಪ್ರಮುಖ ಕೆರೆ ಗಳಾದ ಕಾರಂಜಿ ಹಾಗೂ ಲಿಂಗಾಂಬುಧಿ ಕೆರೆ ಸಂಪೂರ್ಣವಾಗಿ ಬತ್ತಿಹೋಗಿದ್ದು, ಪಕ್ಷಿಗಳು ವಲಸೆ ಬಂದಿರುವ ಕುಕ್ಕರಹಳ್ಳಿ ಕೆರೆಯಲ್ಲಿ ನೀರಿನ ಪ್ರಮಾಣ ಕುಸಿದಿದ್ದರೂ ಮೀನುಗಾರಿಕೆ ನಡೆಸುತ್ತಿರುವುದಕ್ಕೆ ಪಕ್ಷಿ ಪ್ರಿಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಕುಕ್ಕರಹಳ್ಳಿ ಕೆರೆ ಸೇರುತ್ತದೆಯಾದರೂ ಕರ್ನಾಟಕ ಮೀನು ಮಹಾಮಂಡಳಕ್ಕೆ ಮೀನುಗಾರಿಕೆ ನಡೆಸಲು ಟೆಂಡರ್ ನೀಡಿದೆ. ಇದರಿಂದ ಕುಕ್ಕರಹಳ್ಳಿ ಕೆರೆ ಸೇರಿದಂತೆ ಬಹುತೇಕ ಎಲ್ಲಾ ಕೆರೆಗಳಿಗೂ ಮೀನು ಮಹಾಮಂಡಳದ ವತಿಯಿಂದಲೇ ಮೀನಿನ ಮರಿ ಬಿಡಲಾಗುತ್ತದೆ….










