ಮೈಸೂರು: ವಚನ ಸಾಹಿತ್ಯ ಓದುವುದರಿಂದ ನಮ್ಮ ಬುದ್ಧಿ ಮತ್ತೆ ಯಲ್ಲಿನ ಕಶ್ಮಲ ತೊಳೆದು ಮನಸ್ಸು ಶುದ್ಧ ಗೊಳಿಸುತ್ತದೆ. ಹೀಗಾಗಿ ವಚನ ಸಾಹಿತ್ಯ ಓದುವುದನ್ನು ಪಠ್ಯದಲ್ಲಿ ಅಳವಡಿಸಬೇಕು ಎಂದು ಮೈಸೂರು ಜಿಪಂ ಸಿಇಓ ಕೆ.ಜ್ಯೋತಿ ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರ ಮನೆಯಂಗಳ ದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಯೋಜಿಸಿದ್ದ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯ ಕ್ರಮದಲ್ಲಿ ದಾಸಿಮಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎನ್ನಲಾಗುತ್ತದೆ. ಅದನ್ನು ವೇದ ಸುಳ್ಳಾ ದರೂ…
ಮೈಸೂರಿನ 6 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಆರಂಭ
April 11, 2019ಮೈಸೂರು: ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್ಎಸ್ ಎಲ್ಸಿ ವಾರ್ಷಿಕ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಮೈಸೂರಿನ 6 ಕೇಂದ್ರಗಳಲ್ಲಿ ಇಂದಿನಿಂದ ಆರಂಭವಾಯಿತು. ಮೈಸೂರು ಕುವೆಂಪುನಗರದಲ್ಲಿರುವ ಕಾವೇರಿ ಪ್ರೌಢಶಾಲೆ, ಜ್ಞಾನಗಂಗ ಪ್ರೌಢಶಾಲೆ, ಸರಸ್ವತಿ ಪುರಂನಲ್ಲಿರುವ ವಿಜಯವಿಠಲ, ವಿವಿ. ಮೊಹ ಲ್ಲಾದ ನಿರ್ಮಲಾ ಕಾನ್ವೆಂಟ್, ಜಯಲಕ್ಷ್ಮಿ ಪುರಂನ ಚಿನ್ಮಯಿ ಪ್ರೌಢಶಾಲೆ ಹಾಗೂ ಎನ್.ಆರ್.ಮೊಹ ಲ್ಲಾದ ಸೆಂಟ್ ಫಿಲೋಮಿನಾ ಪ್ರೌಢಶಾಲೆಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಎಲ್ಲಾ 6 ಕೇಂದ್ರಗಳ ಸುತ್ತ 200…
ರಫೆಲ್ ರಹಸ್ಯ ದಾಖಲೆಗಳ ಪರಿಶೀಲನೆಗೆ ಸುಪ್ರೀಂಕೋರ್ಟ್ ಅಸ್ತು
April 11, 2019ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದ್ದು, ಈ ಹೊತ್ತಿನಲ್ಲಿ ಆಡಳಿತಾರೂಢ ಎನ್ಡಿಎ ಸರ್ಕಾರಕ್ಕೆ ಭಾರೀ ಹಿನ್ನಡೆ ಯಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನೆ ಅರ್ಜಿ ಸಲ್ಲಿಕೆ ವೇಳೆ ಒದಗಿಸಲಾದ ಕೆಲವು ದಾಖಲೆಗಳು ಅಕ್ರಮವಾಗಿದ್ದು, ಪರಿಶೀಲನೆ ನಡೆಸಬಾರದೆಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಆಕ್ಷೇಪವನ್ನು ಸುಪ್ರೀಂಕೋರ್ಟ್ ಬುಧವಾರ ತಳ್ಳಿಹಾಕಿದೆ. ಇದರಿಂದ ಎನ್ಡಿಎ ಸರ್ಕಾರಕ್ಕೆ ಚುನಾವಣೆ ಹೊಸ್ತಿಲಿನಲ್ಲಿ ತೀವ್ರ ಮುಖ…
ಬಹುಕೋಟಿ ಮೇವು ಹಗರಣ: ಲಾಲುಪ್ರಸಾದ್ಗೆ ಜಾಮೀನು ನಿರಾಕರಿಸಿದ ಸುಪ್ರಿಂಕೋರ್ಟ್
April 11, 2019ನವದೆಹಲಿ: ಬಹುಕೋಟಿ ಮೇವು ಹಗರಣದ ರೂವಾರಿ ಲಾಲೂ ಪ್ರಸಾದ್ ಯಾದವ್ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯ ಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಾಪೀಠ ಲಾಲೂ ಗೆ ಜಾಮೀನು ನೀಡಲು ನಿರಾಕರಿಸಿದೆ. ಕಳೆದ 24 ತಿಂಗಳಿಂದ ಜೈಲಿನಲ್ಲೇ ಇದ್ದು, ಹೀಗಾಗಿ ಜಾಮೀನು ನೀಡಬೇಕೆಂದು ಲಾಲೂ ಮನವಿ ಮಾಡಿದ್ದರು, ನಿಮಗೆ ವರ್ಷ ಜೈಲು ಶಿಕ್ಷೆಯಾಗಿದೆ, ಅದರಲ್ಲಿ 24ತಿಂಗಳು ಏನೇನೂ ದೊಡ್ಡದಲ್ಲ ಎಂದು ಕೋರ್ಟ್ ತಿಳಿಸಿದೆ. ಯಾದವ್ ಪರ ವಾದ ಮಂಡಿಸಿದ ವಕೀಲ್ ಕಪಿಲ್ ಸಿಬಲ್ ಪ್ರಕರಣ ಸಂಬಂಧ…
ಮೈಸೂರಲ್ಲಿ ಮೋದಿ ಮೋಡಿ
April 10, 2019ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಯವರು, ‘ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಆದರಣೀಯ ನಾಗರಿಕ ಬಂಧುಗಳೇ, ಎಲ್ಲರಿಗೂ ನಿಮ್ಮ ಚೌಕಿ ದಾರ್ ಮೋದಿಯ ನಮಸ್ಕಾರಗಳು. ಚಾಮುಂಡಿ ನಾಡಿನಲ್ಲಿರುವ ನಿಮಗೆಲ್ಲರಿರೂ ನಮಿಸುವೆ. ಸರ್ ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ನಾಯಕರಿಗೂ ನನ್ನ ನಮನ’ ಎಂದರು. ಈ ಹಿಂದೆಯೂ ನಾನು ಮೈಸೂರಿಗೆ ಬಂದಿದ್ದೇನೆ. ಆದರೆ ಈ ದಿನ ಅತೀ ಹೆಚ್ಚು ಸಂಖ್ಯೆಯಲ್ಲಿ ನೀವು ಸೇರಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು. ಮತ್ತೊಮ್ಮೆ ಮೋದಿ ಸರ್ಕಾರ ಎಂಬ ದೃಢ…
ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ
April 10, 2019ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರದ್ದು ಕಳಂಕ ರಹಿತ ನಾಯಕತ್ವ. ಭ್ರಷ್ಟಾ ಚಾರ ಸುಳಿಯಲೂ ಅವಕಾಶ ನೀಡದೆ 5 ವರ್ಷ ಆಡಳಿತ ನಡೆಸಿರುವುದು ಅವರು ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಮಾತನಾಡಿದ ಅವರು, ವಿಶ್ವ ನಾಯಕರ ಸಮಾನರಾಗಿ ನಿಂತಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಮರ್ಪಿ ಸುತ್ತೇನೆ….
ರಾಜ್ಯದ 22ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವುದು ನಿಶ್ಚಿತ
April 10, 2019ಮೈಸೂರು: ದೇಶಾದ್ಯಂತ ಪ್ರಧಾನಿ ಮೋದಿ ಅಲೆಯಿದ್ದು, ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತ ನಾಡಿದ ಅವರು, 60 ವರ್ಷ ವಯೋಮಾನ ಮೀರಿದ ರೈತರಿಗೆ ಪಿಂಚಣಿ, ಎಲ್ಲಾ ರೈತರಿಗೆ ವಾರ್ಷಿಕ 6 ಸಾವಿರ ಪ್ರೋತ್ಸಾಹ ಧನ, 2022ರ ವೇಳೆಗೆ ರೈತರ ಆದಾಯ ದುಪ್ಪಟ್ಟಾಗಲು ಅಗತ್ಯ ವಾದ ಯೋಜನೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು,…
ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವರ ವಿರುದ್ಧ ದೂರು ನೀಡಿದ ಐಟಿ
April 10, 2019ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಆಪ್ತರ ಮನೆ ಮೇಲೆ ನಡೆಸಿದ್ದ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಉಭಯ ಪಕ್ಷಗಳ ನಾಯಕರ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಸಾ.ರಾ.ಮಹೇಶ್, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮತ್ತಿತರರ ವಿರುದ್ಧ ಆದಾಯ…
ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ
April 10, 2019ಮಂಡ್ಯ: ಬಿಸಿಲ ತಾಪಕ್ಕಿಂತಲೂ ತುಸು ಹೆಚ್ಚೇ ಕಾವೇರಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಹೊಸ ತಿರುವು, ಅಚ್ಚರಿಯ ಬೆಳವಣಿಗೆ ವರದಿಯಾಗುತ್ತಲೇ ಇವೆ. `ಏಕಪಕ್ಷೀಯ’ ನಡೆಯ ಆರೋಪಕ್ಕೆ ಒಳಗಾಗಿದ್ದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಡಾ.ಪಿ.ಸಿ.ಜಾಫರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಿಂಧುತ್ವದ ವಿಚಾರವಾಗಿ ವಿವಾದ ಉಂಟಾಗಿದ್ದ ಹಿನ್ನೆಲೆಯಲ್ಲಿ ಹಲವು ದೂರುಗಳು ದಾಖಲಾಗಿದ್ದ ರಿಂದ ಮಂಜುಶ್ರೀ ಅವರನ್ನು ಚುನಾವಣಾ ಆಯೋ ಗದ ನಿರ್ದೇಶನದ ಮೇರೆಗೆ…
ಮೈಸೂರಲ್ಲಿ ಇಂದು ಮೋದಿ ಹವಾ
April 9, 2019ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಮೈಸೂರು, ಚಾ.ನಗರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಏ. 9) ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದಿಂದ ವಿಶೇಷ ವಿಮಾನದಲ್ಲಿ ಸಂಜೆ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಸಂಜೆ 5 ಗಂಟೆಗೆ ಮೈಸೂರು-ಕೊಡಗು ಮತ್ತು ಚಾಮರಾಜನಗರ…









