ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ.ಶ್ರೀನಿವಾಸ್ಪ್ರಸಾದ್ ಭವಿಷ್ಯ ನಂಜನಗೂಡು: ಈ ಬಾರಿಯ ಲೋಕಸಭೆ ಚುನಾವಣೆಯನ್ನು ಇಡೀ ಜಗತ್ತೇ ಗಮನಿಸುತ್ತಿದ್ದು, 5 ವರ್ಷ ಸ್ಥಿರ ಸರ್ಕಾರ ನೀಡುವುದರೊಂದಿಗೆ ದೇಶವನ್ನು ಕಾಂತ್ರಿಕಾರಿಕವಾಗಿ ಬದಲಾವಣೆ ಮಾಡಿ, ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಚಾ.ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ವಿ.ಶ್ರೀನಿವಾಸ್ಪ್ರಸಾದ್ ಭವಿಷ್ಯ ನುಡಿದಿದ್ದಾರೆ. ನಗರದ ಎಸ್ಎಲ್ವಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 9ನೇ ಲೋಕಾಸಭಾ ಚುನಾವಣೆ ಎದುರಿಸುತ್ತಿದ್ದು, ಯಾವ ಯಾವ ಚುನಾವಣೆಯನ್ನು…
ಕೆ.ಆರ್.ನಗರ ಸಮಗ್ರ ಅಭಿವೃದ್ಧಿಗೆ ನಿಖಿಲ್ ಗೆಲುವು ಅಗತ್ಯ
April 2, 2019ಚುಂಚನಕಟ್ಟೆ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ರನ್ನು ಗೆಲ್ಲಿಸುವ ಮೂಲಕ ಕೆ.ಆರ್.ನಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತದಾರರು ಸಹಕಾರ ನೀಡಬೇಕು ಎಂದು ಪ್ರವಾಸೋದ್ಯಮ, ರೇಷ್ಮೆ ಸಚಿವ ಸಾ.ರಾ.ಮಹೇಶ್ ಕೋರಿದರು. ತಾಲೂಕಿನ ಚುಂಚನಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ಕುಮಾರಸ್ವಾಮಿ ಪರ ಮತಯಾಚಿಸಿ ಮಾತನಾಡಿದ ಅವರು, ಈಗಾಗಲೇ ಕುಮಾರಸ್ವಾಮಿ ಸಾಲಮನ್ನಾ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ ಜೆಡಿಎಸ್ ಬೆಂಬಲಿಸಬೇಕು. ಈಗಾಗಲೇ ತಾಲೂಕಿನ ಅಭಿವೃದ್ಧಿಗೆ ತಾವು ಸಚಿವರಾದ ಮೇಲೆ 800 ಕೋಟಿ ರೂ.ಗಳಷ್ಟು ಅನುದಾನ ಬಿಡುಗಡೆ ಮಾಡಿಸಿದ್ದು,…
ದೇಶಕ್ಕೆ ಮಹಾರಾಜರು ಬೇಕಿಲ್ಲ… ಚೌಕಿದಾರರು ಬೇಕಿದೆ
April 1, 2019ನವದೆಹಲಿ: ರಾಜಮನೆತನದ ನಾಯಕರೆಲ್ಲ ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಈ ದೇಶಕ್ಕೆ ಮಹಾರಾಜರು ಬೇಕಿಲ್ಲ. ಚೌಕಿದಾರರು ಬೇಕಾಗಿದ್ದಾರೆ. ಇಂದು ನಾವೆಲ್ಲರೂ ಕಾವಲು ಗಾರರಾಗಿ ದೇಶವನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯ ಟೌನ್ಹಾಲ್ನಲ್ಲಿ ಇಂದು `ಮೈ ಭೀ ಚೌಕಿದಾರ್’ ಸಂವಾದ ಕಾರ್ಯಕ್ರಮ ದಲ್ಲಿ ದೇಶದ ಮತದಾರರನ್ನುದ್ದೇಶಿಸಿ ಮಾತನಾ ಡಿದ ಅವರು, ದೇಶದ ಪ್ರತಿಯೊಬ್ಬರೂ ಚೌಕಿದಾರ ರಾಗಬೇಕು. ದೇಶವನ್ನು ಲೂಟಿ ಹೊಡೆಯುತ್ತಿರು ವವರ ವಿರುದ್ಧ ಒಂದಾಗಬೇಕು ಎಂದರು. ಸೈನಿಕರು, ಕಾರ್ಮಿಕರು ಹಾಗೂ ವಿದ್ಯಾರ್ಥಿ ಗಳು ಎಲ್ಲರೂ…
5 ವರ್ಷಗಳಲ್ಲಿ ಬಡತನ ಸಂಪೂರ್ಣ ನಿರ್ಮೂಲನೆ
April 1, 2019ಬೆಂಗಳೂರು: 2014ರ ಚುನಾವಣೆ ಮುನ್ನ ಪ್ರಧಾನಿ ಮೋದಿ ಎಲ್ಲರ ಖಾತೆಗೆ 15 ಲಕ್ಷ ನೀಡುತ್ತೇನೆ ಎಂದು ಸುಳ್ಳು ಆಶ್ವಾಸನೆ ನೀಡಿದರು. ಆದರೆ ಕಾಂಗ್ರೆಸ್ ನ್ಯಾಯ ಯೋಜನೆಯ ಮೂಲಕ ದೇಶದ ಶೇ.20 ಭಾಗವಿರುವ ಬಡವರಿಗೆ ವರ್ಷಕ್ಕೆ 72 ಸಾವಿರ ರೂ. ಹಣ ಹಾಕಲಿದೆ. ಈ ಯೋಜನೆ 5 ಕೋಟಿ ಫಲಾನುಭವಿಗಳಿಗೆ ಸಿಗಲಿದೆ. ಮುಂದಿನ ಐದು ವರ್ಷಗಳಲ್ಲಿ ಬಡತನವನ್ನು ಸಂಪೂರ್ಣವಾಗಿ ಹೋಗಲಾಡಿಸುವ ಕೆಲಸವನ್ನು ನಾವು ಮತ್ತು ನಮ್ಮ ಯೋಜನೆಗಳು ಮಾಡಲಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ…
ಭ್ರಷ್ಟಾಚಾರಿಗಳಿಗೆ ಮೋದಿ ಭಯ
April 1, 2019ಮಡಿಕೇರಿ: ಮೋದಿಯವರನ್ನು ಮತ್ತೊಮ್ಮೆ ದೇಶದ ಸೇವಕನನ್ನಾಗಿಸಲು ಪ್ರತೀ ಯೋರ್ವರ ಮತ ಕೂಡ ಮುಖ್ಯವಾಗಿದ್ದು, ಮಹಾ ಘಟಬಂಧನ್ ನಾಯಕರು ಈ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವುದೇ ಮೋದಿಯ ನಿಜವಾದ ಶಕ್ತಿಗೆ ನಿದರ್ಶನವಾಗಿದೆ ಎಂದು ಕೇಂದ್ರ ರೇಷ್ಮೆ ಸಚಿವೆ ಸ್ಮ್ರಿತಿ ಇರಾನಿ ಹೇಳಿದ್ದಾರೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತ ನಾಡಿದ ಸ್ಮ್ರಿತಿ ಇರಾನಿ, ಭ್ರಷ್ಟಾಚಾರದಲ್ಲಿಯೇ ಮುಳುಗೆದ್ದಿರುವ ಕಾಂಗ್ರೆಸ್ ಮುಖಂಡರು ಈಗಾಗಲೇ ಜಾಮೀನು ಪಡೆದುಕೊಂಡು ತಿರು ಗುತ್ತಿದ್ದಾರೆ. ಭ್ರಷ್ಟಾಚಾರಿಗಳಿಗೆ ಮೋದಿ ಅವರ ಭಯ ಕಾಡುತ್ತಿದೆ ಎಂದು ಟೀಕಿಸಿದರು….
ಮದುವೆ ಊಟ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ
April 1, 2019ಕೆ.ಆರ್.ನಗರ: ಮದುವೆ ಊಟ ಸೇವಿಸಿ ಮಹಿಳೆಯರು, ಮಕ್ಕಳು ಸೇರಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಭೇರ್ಯದಲ್ಲಿ ಇಂದು ನಡೆದಿದೆ. ಭೇರ್ಯದ ಎಎಲ್ಎಲ್ ಕಲ್ಯಾಣ ಮಂಟಪದಲ್ಲಿ ಭೇರ್ಯದ ವಧು ಸವಿತಾ, ಹಾಡಿ ಮೇರಲೂರಿನ ವರ ಪ್ರೇಮ್ಕುಮಾರ್ ಅವರ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಆಗಮಿಸಿ ವಧು-ವರರನ್ನು ಹರಸಿ ಮಧ್ಯಾಹ್ನದ ಭೂರಿ ಭೋಜನ ಸವಿದು ಹೋದ ಸಂಬಂಧಿಕರು, ಸ್ಥಳೀಯರು ಮನೆ ತಲುಪುವಷ್ಟರಲ್ಲೇ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆ ಸೇರಿದ್ದಾರೆ. ಮಕ್ಕಳು ಮತ್ತು ಮಹಿಳಾ ಆಸ್ಪತ್ರೆಯಲ್ಲಿ ಯೋಗೀಶ(6), ಇಂದು(2),…
ಮಂಡ್ಯದಲ್ಲಿ ನ್ಯಾಯ ಸಮ್ಮತ, ಮುಕ್ತ ಚುನಾವಣೆ ಅನುಮಾನ: ಸುಮಲತಾ
April 1, 2019ಮಂಡ್ಯ: ನಾನು ಕಣಕ್ಕಿಳಿದ ಮೊದಲ ದಿನದಿಂದಲೂ ನನಗೆ ಅನ್ಯಾಯವಾಗು ತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವೇ ಆಗುತ್ತಿಲ್ಲ. ನನಗೆ ನ್ಯಾಯ ಸಿಗುತ್ತಲೇ ಇಲ್ಲ. ಈ ಚುನಾವಣೆ ನ್ಯಾಯಸಮ್ಮತ ಹಾಗೂ ಮುಕ್ತ ರೀತಿಯಲ್ಲಿ ನಡೆಯುವುದೇ ಅನುಮಾನ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು. ನಗರದಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಚುನಾವಣೆ ನಡೆಸಲು ಇದೆಯೋ ಅಥವಾ ಮುಖ್ಯಮಂತ್ರಿಗಳ ಮಗನನ್ನು ಗೆಲ್ಲಿಸಲು…
ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ
April 1, 2019ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿನ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರವಾಗಿ ದೂರು ದಾಖಲಾಗಿದ್ದರಿಂದ ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮೈಸೂರು ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್ಕುಮಾರ್ ಅವರು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಭಾನುವಾರ ವಿಚಾರಣೆ ನಡೆಸಿದರು. ಪಕ್ಷೇತರ ಅಭ್ಯರ್ಥಿ ಎ.ಸುಮಲತಾ (ಅಂಬರೀಶ್ ಪತ್ನಿ) ಅವರ ಚುನಾವಣಾ ಏಜೆಂಟ್ ಮದನ್ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಶನಿವಾರ ಮಂಡ್ಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸಭೆ…
ಸುಮಲತಾ ವಾಹನ ಒಂದೇ ದಿನದಲ್ಲಿ 4 ಬಾರಿ ತಪಾಸಣೆ
April 1, 2019ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಾಹನ ವನ್ನು ಪ್ರಚಾರದ ವೇಳೆ ಚುನಾವಣಾ ಧಿಕಾರಿಗಳು ಪದೇ ಪದೆ ತಪಾಸಣೆ ನಡೆಸಿದ ಘಟನೆ ಮೇಲುಕೋಟೆ ಕ್ಷೇತ್ರದ ಬಳಿ ಭಾನುವಾರ ನಡೆದಿದೆ. ಮೇಲು ಕೋಟೆ ಕ್ಷೇತ್ರದ ದುದ್ದ, ಶಿವಳ್ಳಿ, ಬೇವು ಕಲ್ಲು ಸೇರಿದಂತೆ ಮೇಲುಕೋಟೆ ಮಾರ್ಗದ ವಿವಿಧ ಗ್ರಾಮಗಳಲ್ಲಿ ಇಂದು ಪ್ರಚಾರ ನಡೆಸುತ್ತಿದ್ದ ಸುಮಲತಾ ಅವ ರಿದ್ದ ವಾಹನವನ್ನು ಒಂದೇ ದಿನ 4 ಬಾರಿ ತಪಾಸಣೆ ನಡೆಸಿದರು ಎನ್ನಲಾ ಗಿದೆ. ಪಾಂಡವಪುರ ಉಪ ವಿಭಾಗಾ…
ಬಿಎಸ್ಪಿ ಅಭ್ಯರ್ಥಿಯಿಂದಲೂ ಮಂಡ್ಯ ಡಿಸಿ ವಿರುದ್ಧ ಆಯೋಗಕ್ಕೆ ದೂರು
April 1, 2019ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾದ ನನಗೆ ಕಾನೂನುಬದ್ಧವಾಗಿ ಸಿಗಬೇಕಿದ್ದ ಕ್ರಮಸಂಖ್ಯೆ ವಿಚಾರದಲ್ಲಿ ಮಂಡ್ಯ ಚುನಾವಣಾ ಧಿಕಾರಿಗಳಿಂದಲೇ ಲೋಪವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಬಿಎಸ್ಪಿ ಅಭ್ಯರ್ಥಿ ನಂಜುಂಡಸ್ವಾಮಿ ತಿಳಿಸಿದರು. ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾ ಧಿಕಾರಿಗೆ ದೂರು ನೀಡಲು ಬಂದಿದ್ದ ವೇಳೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾದ ನನಗೆ ಮತಯಂತ್ರದಲ್ಲಿ ಕ್ರಮಸಂಖ್ಯೆ 1 ನೀಡಬೇಕಿತ್ತು. ಆದರೆ ಕ್ರಮಸಂಖ್ಯೆ…










