ಮೈಸೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಸಿನಿಮಾ ನಟರು, ರಾಜಕಾರಣಿಗಳು, ಅಧಿಕಾರಿಗಳು, ಜನ ಸಾಮಾನ್ಯರು ಯಾರಾದರೇನು ಎಲ್ಲರೂ ಒಂದೇ. ಐಟಿ ಇಲಾಖೆ ಇರುವುದೇ ತೆರಿಗೆ ವಂಚನೆ ಕಂಡು ಬಂದಾಗ ಅವರ ಕರ್ತವ್ಯ ವನ್ನು ಅವರು ಮಾಡುತ್ತಾರೆ ಎಂದು 2 ತಿಂಗಳ ಹಿಂದಷ್ಟೇ ಸಿನಿಮಾ ನಟರ ಮೇಲಿನ ಐಟಿ ದಾಳಿ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೀಗ ತಮ್ಮ ಹೇಳಿಕೆಯನ್ನೇ ಮರೆತು ಐಟಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ಕಟುವಾಗಿ ಟೀಕಿಸಿದರು. ಮೈಸೂರು…
ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ 3 ವರ್ಷ ಶಿಕ್ಷೆ
March 30, 2019ಮೈಸೂರು: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಉಲ್ಲಂ ಘಿಸುವವರಿಗೆ ಮೂರು ವರ್ಷ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಇಂದಿಲ್ಲಿ ತಿಳಿಸಿದರು. ಮೈಸೂರಿನ ಜೆಎಸ್ಎಸ್ ಆಸ್ಪತ್ರೆ ರಾಜೇಂದ್ರ ಸಭಾಂಗಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರಗಳ (ನಿಷೇಧ ಕಾಯ್ದೆ) ಪ್ರಾಧಿಕಾರ, ಜಿಲ್ಲಾ…
ಟರ್ಬೋಸ್ಟೀಲ್ ಎಲ್ಪಿಎಸ್ ಟಿಎಂಟಿ ಬಾರ್ಸ್ ಬಿಡುಗಡೆ
March 30, 2019ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ರಾಜ್ಯದ ಮೊದಲ ಹಾಗೂ ಪ್ರಪ್ರಥಮ ಉತ್ಪನ್ನ ಟರ್ಬೋಸ್ಟೀಲ್ ಎಲ್ಪಿಎಸ್ ಟಿಎಂಟಿ ಬಾರ್ಸ್ ಅನ್ನು ಬ್ರ್ಯಾಂಡ್ ಅಂಬಾಸಿಡರ್ ಆದ ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ ಬಿಡುಗಡೆ ಮಾಡಿದರು. ಟರ್ಬೋಸ್ಟೀಲ್ ಎಲ್ಪಿಎಸ್ ಟಿಎಂಟಿ ಬಾರ್ಸ್ಗಳನ್ನು ಎಲ್ಪಿಎಸ್ (ಲೋ ಫಾಸ್ಪರಸ್ ಅಂಡ್ ಸಲ್ಫರ್) ಅನ್ನು ಬಳಸಿ ಅತ್ಯಾಧುನಿಕ ತಂತ್ರಜ್ಞಾನದಿಂದ ಉನ್ನತ ದರ್ಜೆಯ ಸ್ಟೀಲ್ ಬಾರ್ಗಳನ್ನು ಉತ್ಪಾದಿಸಲಾಗುತ್ತಿದೆ. ಟರ್ಬೋಸ್ಟೀಲ್ ಎಲ್ಪಿಎಸ್ ಟಿಎಂಟಿ ಬಾರ್ಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್ನ ಒಂದು…
ಕಾಂಗ್ರೆಸ್-ಜೆಡಿಎಸ್ ನಡುವೆ ಸಮನ್ವಯತೆ
March 30, 2019ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಕ್ರಮೇಣ ಸಮನ್ವಯತೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣಾ ಹಿನ್ನೆಲೆಯ ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಅವರು, ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಮ್ಮೆಲೆ ಸಮನ್ವಯತೆ ಮೂಡುವುದು ಸಾಧ್ಯ ವಾಗದಿದ್ದರೂ, ಕ್ರಮೇಣ ಅದು ಸಾಕಾರ ವಾಗುತ್ತದೆ. ಈ ಉಭಯ ಪಕ್ಷಗಳ ಕಾರ್ಯಕರ್ತರು, ಮತದಾರರು…
ಮೋದಿ ಸರ್ಕಾರದಿಂದ ಆಡಳಿತ ಯಂತ್ರ ದುರ್ಬಳಕೆ: ಯತೀಂದ್ರ ಟೀಕೆ
March 30, 2019ಮೈಸೂರು: ಪ್ರಧಾನಿ ಮೋದಿ ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಮಾಡಿಸಿ ನೈತಿಕ ಶಕ್ತಿ ಕುಗ್ಗಿಸಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಡಾ.ಯತೀಂದ್ರ ಆರೋಪಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ವಾಗಿ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದ ಕಡಕೊಳ, ಬೀರಿಹುಂಡಿ, ಡಿಎಂಜಿ ಹಳ್ಳಿ, ಹಿನಕಲ್ ಸೇರಿದಂತೆ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದ ಡಾ.ಯತೀಂದ್ರ, ಕಾಂಗ್ರೆಸ್, ಜೆಡಿಎಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಐಟಿ ದಾಳಿಗೆ…
‘ರಣಂ’ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ; ಮಹಿಳೆ, ಮಗು ಸಾವು
March 30, 2019ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ‘ರಣಂ’ ಸಿನಿಮಾ ಚಿತ್ರೀಕರಣ ವೇಳೆ ಸಿಲಿಂಡರ್ ಸ್ಫೋಟಗೊಂಡು ಶೂಟಿಂಗ್ ವೀಕ್ಷಿಸುತ್ತಿದ್ದ ತಾಯಿ, ಮಗು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ನಗರದ ಬಾಗಲೂರಿನ ಶೆಲ್ ಕಂಪನಿ ಬಳಿ ರೋಡ್ ಬ್ಲಾಕ್ ಮಾಡಿ ಚಿತ್ರದ ಫೈಟ್ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಬಾಗಲೂರಿನಿಂದ ಸೂಲಿಬೆಲೆಗೆ ತೆರಳುತ್ತಿದ್ದ 28 ವರ್ಷದ ಸುಬೇನಾ ಹಾಗೂ 8 ವರ್ಷದ ಅಹೀರಾ ಇಬ್ಬರು ರಸ್ತೆ ಬದಿ ನಿಂತು ಶೂಟಿಂಗ್ ನೋಡುತ್ತಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಮಾಹಿತಿ ತಂತ್ರಜ್ಞಾನ ಪ್ರಸ್ತುತ ಅವಶ್ಯ
March 30, 2019ಮೈಸೂರು: ಪ್ರಸ್ತುತ ಜಗತ್ತಿನಲ್ಲಿ ಗೂಗಲ್ ಯುಗ ಅದಿಪತ್ಯ ಸ್ಥಾಪಿಸಿದ್ದು, ಮಾಹಿತಿ ತಂತ್ರಜ್ಞಾನ ಹೆಚ್ಚು ಪ್ರಚಲಿತದಲ್ಲಿದೆ ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂ ಗಣದಲ್ಲಿ ಮೈಸೂರು ವಿವಿ ಬಿ.ಎನ್. ಬಹ ದ್ದೂರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್ನ (ಬಿಐ ಎಂಎಸ್) ವ್ಯವ ಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ `ನಾಲ್ಕನೇ ಕೈಗಾ ರಿಕಾ ಕ್ರಾಂತಿ’ ಕುರಿತಂತೆ ಹಮ್ಮಿಕೊಂಡಿದ್ದ ಅಂತಾ ರಾಷ್ಟ್ರೀಯ ಸಮ್ಮೇಳನದ ಸಮಾ ರೋಪ ದಲ್ಲಿ…
ತಾತ, ಅಪ್ಪನಂತೆ ಬಡವರು, ರೈತರ ಸೇವೆ ಮಾಡುವೆ ಕಾಂಗ್ರೆಸೆ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಹೇಳಿಕೆ
March 30, 2019ಭೇರ್ಯ: ತಾತ ದೇವೇಗೌಡರು, ಅಪ್ಪ ಕುಮಾರಸ್ವಾಮಿ ಅವರು ಅಧಿಕಾರ ಇರಲಿ, ಇಲ್ಲದಿರಲಿ ತಮ್ಮ ರಾಜಕೀಯ ಬದುಕಿನುದ್ದಕ್ಕೂ ಬಡವರು, ರೈತರಿಗಾಗಿ ಶ್ರಮಿಸಿದ್ದು, ಅವರ ಹಾದಿಯಲ್ಲೇ ಸಾಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರುವ ನನಗೆ ಹರಸಿ, ಹಾರೈಸಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಕೃಷ್ಣರಾಜನಗರ ತಾಲೂಕು ಹೊಸ ಅಗ್ರಹಾರ ಹೋಬಳಿಯ ಮಾರಗೌಡನಹಳ್ಳಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮತ್ತು ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದÀ ಅವರು…
ನಂಜನಗೂಡಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
March 30, 2019ಆರ್.ಧ್ರುವನಾರಾಯಣ್ ಭಾರೀ ಅಂತರದ ಗೆಲುವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನಂಜನಗೂಡು: ಕಳೆದ ಲೋಕಾಸಭಾ ಚುನಾವಣೆಯಲ್ಲಿ 1.4 ಲಕ್ಷ ಅಂತರದಿಂದ ವಿಜಯಶಾಲಿಯಾಗಿದ್ದ ಆರ್.ಧ್ರುವನಾರಾಯಣ್ ಈ ಬಾರಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಲೋಕಾಸಭಾ ಚುನಾವಣೆಯ ಹಿನೆÀ್ನಲೆಯಲ್ಲಿ ನಂಜನಗೂಡು ಸಮೀಪ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಹತ್ತು ವರ್ಷದಿಂದ ಚಾಮರಾಜನಗರ…
ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ
March 29, 2019ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ ಜೆಡಿಎಸ್ ಸಚಿವರು, ನಾಯಕರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್; ಹುಟ್ಟುಹಬ್ಬದ ದಿನವೇ ನಾಗನಹಳ್ಳಿ ಬಳಿಯ ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮೈಸೂರು: ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಪಿಡಬ್ಲ್ಯೂಡಿ ಕಂಟ್ರಾಕ್ಟರ್ಗಳ ಮೈಸೂರು, ಮಂಡ್ಯ, ಹಾಸನ ಸೇರಿದಂತೆ 15 ಕಡೆ ಸಚಿವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳ ಮತ್ತು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ…










