ಮಂಡ್ಯ: ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಇಂದು ಮಂಡ್ಯದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಅಸಮಾಧಾನಿತ ಕಾಂಗ್ರೆಸ್ಸಿಗರನ್ನು ಮನವೊಲಿಸುವ ಜವಾಬ್ದಾರಿ ತನ್ನದು ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರೆ, ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಘೋಷಿಸಿದರು. ಮಂಡ್ಯ ಪತ್ರಕರ್ತರ ಭವನದಲ್ಲಿ ಇಂದು ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಎಸ್. ಪುಟ್ಟರಾಜು, ಮಾ.25ರಂದು ಜನ ಸಾಗರದ ನಡುವೆ ಜೆಡಿಎಸ್ ಅಭ್ಯರ್ಥಿಯಾಗಿ…
ಪ್ರತ್ಯೇಕ ಅಪಘಾತ: ಏಳು ಮಂದಿ ಸಾವು
March 23, 2019ಮಂಡ್ಯ/ಸರಗೂರು: ಮಂಡ್ಯ ಮತ್ತು ಮೈಸೂರು ಜಿಲ್ಲೆ ಯಲ್ಲಿ ಇಂದು ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಅಣ್ಣ-ತಂಗಿ ಸೇರಿದಂತೆ 7 ಮಂದಿ ಮೃತಪಟ್ಟಿ ರುವ ಬಗ್ಗೆ ವರದಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಹೊರವಲಯದ ಶಂಕನಹಳ್ಳಿ ಬಳಿ ಜಲ್ಲಿ ತುಂಬಿದ ಟಿಪ್ಪರ್ ಮತ್ತು ಪ್ಯಾಸೆಂಜರ್ ಆಟೋ ನಡುವೆ ನಡೆದ ಮುಖಾಮುಖಿ ಡಿಕ್ಕಿ ಯಲ್ಲಿ ಐವರು ಸಾವನ್ನಪ್ಪಿದರೆ, ಮೈಸೂರು ಜಿಲ್ಲೆಯ ಸರಗೂರು ಸಮೀಪದ ಬಡಗಲಪುರ ಬಳಿ ಗೂಡ್ಸ್ ಆಟೋ ಮಗುಚಿ ಬಿದ್ದ ಪರಿ ಣಾಮ ಅಣ್ಣ-ತಂಗಿ ಸಾವಿಗೀಡಾಗಿದ್ದಾರೆ. ಮಂಡ್ಯ ವರದಿ: ಇಂದು ಸಂಜೆ…
ಪೌರಾಡಳಿತ ಸಚಿವ ಶಿವಳ್ಳಿ ನಿಧನ
March 23, 2019ಬೆಂಗಳೂರು: ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತ ದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಿಗ್ಗೆ ಅವ ರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಕೂಡಲೇ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಧಾರವಾಡದಲ್ಲಿ ಸಂಭವಿಸಿದ ಕಟ್ಟಡ ಕುಸಿತದ ಅವಶೇಷಗಳಡಿ ಸಿಲುಕಿದ್ದ ಜನರನ್ನು ರಕ್ಷಿಸುವ ಕಾರ್ಯಾ ಚರಣೆಯಲ್ಲಿ ಕಳೆದ ಎರಡು ದಿನಗಳಿಂದ ತಮ್ಮನ್ನು ತೊಡಗಿಸಿಕೊಂಡಿದ್ದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಕೋಟಾದಡಿ ಸಚಿವರಾಗಿ ಶಿವಳ್ಳಿ ಅಧಿಕಾರ ವಹಿಸಿಕೊಂಡಿದ್ದರು. ಚೆನ್ನಬಸಪ್ಪ ಸತ್ಯಪ್ಪ…
ಮೈತ್ರಿ ಧರ್ಮ ಪಾಲನೆ ಹಿನ್ನೆಲೆ: ಸಚಿವ ಸಾರಾ ಮಹೇಶ್ ಭೇಟಿ ಮಾಡಿದ ಮೈತ್ರಿ ಸಂಭಾವ್ಯ ಅಭ್ಯರ್ಥಿ ವಿಜಯಶಂಕರ್
March 23, 2019ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯ ಸಂಭಾವ್ಯ ಅಭ್ಯರ್ಥಿಯೂ ಆದ ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಶುಕ್ರವಾರ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವ ರನ್ನು ಭೇಟಿ ಮಾಡಿ, ಬೆಂಬಲ ಯಾಚಿಸಿದ್ದಾರೆ. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಿ.ಹೆಚ್.ವಿಜಯ ಶಂಕರ್, ಮೈತ್ರಿಧರ್ಮ ಪಾಲನೆ ವಿಚಾರ ಚರ್ಚಿಸಿದರು. ಇದೇ ವೇಳೆ ಮಾಧ್ಯಮದ ವರಿಗೆ ಪ್ರತಿಕ್ರಿಯೆ ನೀಡಿದ ಸಿ.ಹೆಚ್.ವಿಜಯ ಶಂಕರ್, ಕಳೆದ 9 ತಿಂಗಳಿಂದ ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದೆ. ಇದೀಗ ಜಾತ್ಯಾತೀತ ಶಕ್ತಿಗಳು…
ಕರೆ ಮಾಡಿದರೆ ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ, ಮತಗಟ್ಟೆ ಮಾಹಿತಿ ಕ್ಷಣಾರ್ಧದಲ್ಲಿ ಲಭ್ಯ
March 23, 2019ಮೈಸೂರು: ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಹಾಗೂ ಮತಗಟ್ಟೆಯ ಬಗ್ಗೆ ಮಾಹಿತಿ ಗಳನ್ನು ಪಡೆಯಲು ಮತದಾರರಿಗೆ ಅನು ಕೂಲವಾಗಲಿ ಎಂಬ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು 1950 ಸಂಖ್ಯೆಯ ಉಚಿತ ಸಹಾಯವಾಣಿ ತೆರೆದಿದೆ. ಇಡೀ ದೇಶದಲ್ಲಿ ಈ ಒಂದು ಸಂಖ್ಯೆಯ ಸಹಾಯವಾಣಿಗೆ ಮತದಾ ರರು ಉಚಿತ ಕರೆ ಮಾಡಿ ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರು, ವಿಳಾಸ, ಮತಗಟ್ಟೆಯ ಮಾಹಿತಿ ಪಡೆಯಬಹುದಾಗಿದೆ. ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿ ಗಳ ಕಚೇರಿಯಲ್ಲಿ ಇದರ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದೆ. ಮತದಾ…
ಭಾರತದ ದಾಸ್ಯ ಮನೋಭಾವನೆಗೆ 70 ವರ್ಷ ಆಳಿದ ಸರ್ಕಾರಗಳೇ ಕಾರಣ
March 23, 2019ಮೈಸೂರು: 100 ಕೋಟಿ ಮಾನವ ಸಂಪನ್ಮೂಲ ಹೊಂದಿರುವ ರಾಷ್ಟ್ರವೊಂದು ಕಳೆದ 70 ವರ್ಷಗಳಿಂದ ಜಗತ್ತಿನ ಇತರೆ ರಾಷ್ಟ್ರ ಗಳೊಂದಿಗೆ ದಾಸ್ಯ ಮನೋಭಾವನೆಯಲ್ಲಿ ಬದುಕುತ್ತಿದೆ ಎಂದರೆ, ನಮ್ಮಲ್ಲಿರುವ ಕುಟುಂಬ ಹಾಗೂ ವಂಶಾಡಳಿತ ಕೇಂದ್ರಿತ ಆಡಳಿತ ಅವ್ಯವಸ್ಥೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಬಿಜೆಪಿ ಯುವ ಮೋರ್ಚಾ ಮುಖಂಡ ತೇಜಸ್ವಿ ಸೂರ್ಯ ಆರೋಪಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿವಿ ಆವರಣದ ಘಟಿಕೋತ್ಸವ ಭವನದಲ್ಲಿ ವ್ಯಾಲಂಟಿಯರ್ಸ್ ಫಾರ್ ನೇಷನ್ ಸ್ಟೂಡೆಂಟ್ಸ್ ಕಾನ್ ಕ್ಲೇವ್-2ಕೆ19 ಮೈಸೂರು ಶೀರ್ಷಿಕೆಯಡಿ ಆಯೋಜಿಸಿದ್ದ `ಯುವಕರಲ್ಲಿ ಮತದಾನ ಜಾಗೃತಿ’…
ವಿದ್ಯಾರ್ಥಿಗಳ ಸಾಂಪ್ರದಾಯಿಕ ಉಡುಗೆ-ಅಡುಗೆ
March 23, 2019ಮೈಸೂರು: ಸದಾ ಹೊಸ ಹೊಸ ವಿನ್ಯಾಸದ ಉಡುಪು ಧರಿಸಿ, ನಾಜೂಕಾದ ಹೆಜ್ಜೆ ಹಾಕಿ ಗಮನ ಸೆಳೆಯುತ್ತಿದ್ದ ವಿದ್ಯಾರ್ಥಿಗಳು ಶುಕ್ರವಾರ ಸಾಂಪ್ರದಾಯಿಕ ತೊಡುಗೆ ತೊಟ್ಟು ಗಮನ ಸೆಳೆದರು. ಮೈಸೂರಿನ ಮಹಾರಾಜ ಕಾಲೇ ಜಿನ ಕನ್ನಡ ವಿಭಾಗದ ಕನ್ನಡ ಸಂಘ ಶುಕ್ರ ವಾರ ಕಾಲೇಜಿನ ಶತಮಾನೋತ್ಸವ ಭವ ನದ ಬಳಿ ಆಯೋಜಿಸಿದ್ದ ಜಾನಪದ ಜಾತ್ರೆ, ಪಾರಂಪರಿಕ ದಿನ ಮತ್ತು ಒಲೆರಹಿತ ಅಡುಗೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಗಳು ಸಾಂಪ್ರದಾಯಿಕ ಉಡುಪು ಧರಿಸಿ ಸಂಭ್ರಮಿಸಿದರು. ಕಾಲೇಜಿನ ಆವರಣ ದಲ್ಲಿ ಜನಪದ ಸೊಗಡು…
ಯುಗಾದಿ ಪ್ರಯುಕ್ತ ಕಲಾವೈಭವ, ಸಿಲ್ಕ್ ಉತ್ಸವ
March 23, 2019ಮೈಸೂರು: ಮೈಸೂರಿನ ರಿಂಗ್ ರಸ್ತೆಯಲ್ಲಿರುವ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ `ಕಲಾವೈಭವ’ ಹಾಗೂ `ಸಿಲ್ಕ್ ಉತ್ಸವ’ವನ್ನು ಏರ್ಪಡಿಸಲಾಗಿದೆ. ರಾಜ್ಯ ಬೃಹತ್, ಮೆಗಾ ಕೈಗಾರಿಕಾ ನಿರ್ದೇಶನಾ ಲಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂ ದಿಗೆ ಜಿಲ್ಲಾ ಮಟ್ಟದ ಗುಡಿ ಕೈಗಾರಿಕೆಗಳ ವಸ್ತು ಪ್ರದರ್ಶನ ಹಾಗೂ ಮಾರಾಟದ ಜೊತೆಗೆ ಸಿಲ್ಕ್ ಉತ್ಸವವನ್ನೂ ಏರ್ಪಡಿಸಲಾಗಿದ್ದು, ಇಂದು ಚಾಲನೆ ದೊರಕಿತು. ಸ್ಥಳೀಯ ಹಾಗೂ ರಾಜ್ಯದ ವಿವಿಧೆಡೆಯ ಕೈಗಾರಿಕೆ ಗಳು, ಗುಡಿ ಕೈಗಾರಿಕೆಗಳು, ಸ್ವ-ಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಆಕರ್ಷಕ…
ಜ್ಞಾನದಿಂದ ಮಾತ್ರವೇ ಸಮಾಜದ ವಿಕಾಸ
March 23, 2019ಮೈಸೂರು: ಜ್ಞಾನದ ಬಲದಿಂದ ಮಾತ್ರ ಸಮಾಜದ ವಿಕಾಸವೇ ಹೊರತು ಹಣ-ಅಧಿಕಾರದಿಂದಲ್ಲ ಎಂದು ನಿವೃತ್ತ ಪ್ರಾಂಶುಪಾಲ, ಅಂಕಣ ಕಾರ ಹಾಗೂ ವಾಗ್ಮಿಗಳೂ ಆದ ಪ್ರೊ. ಎಂ.ಕೃಷ್ಣೇಗೌಡ ಹೇಳಿದರು. ಮೈಸೂರಿನ ವಾಲ್ಮೀಕಿ ರಸ್ತೆಯ ಮಹಾ ರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವ ಹಣಾ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ 2018-19ನೇ ಸಾಲಿನ ಸಾಂಸ್ಕøತಿಕ, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟು ವಟಿಕೆಗಳ ಸಮಾರೋಪ ಸಮಾರಂಭ ದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಮಾನವ ಕುಲದ ಪ್ರಗತಿಗೆ ಬೇಕಿ ರುವುದು ಶಿಕ್ಷಣ,…
ಬೆಂಗಳೂರು ಕೇಂದ್ರದಿಂದ ಪ್ರಕಾಶ್ ರೈ ನಾಮಪತ್ರ ಸಲ್ಲಿಕೆ
March 23, 2019ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ಜನವಿರೋಧಿ ನೀತಿ ಗಳನ್ನು ಟೀಕಿಸುತ್ತಿದ್ದ ಬಹುಭಾಷಾ ನಟ ಪ್ರಕಾಶ್ ರೈ ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸಂಸತ್ಗೆ ಆಯ್ಕೆ ಬಯಸಿ ರೈ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿ ದರು. ಆಸ್ಟಿನ್ ಟೌನ್ನಲ್ಲಿರುವ ನಂದ ಕ್ರಿಡಾಂಗಣದಿಂದ ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳೊಂದಿಗೆ ಮೆರವಣಿಗೆ ಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನಗೆ…










