ನವದೆಹಲಿ: ರಾಷ್ಟ್ರಪತಿ ಭವನದ ಸಭಾಂಗಣ ಇಂದು ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕನ್ನಡಿಗ ಶತಾಯುಷಿಯೊಬ್ಬರು ಶಿರಮುಟ್ಟಿ ಆಶೀರ್ವದಿಸಿದರು. ಈ ಅನಿರೀಕ್ಷಿತ ಘಟನೆಯಿಂದ ಸಭಾಂಗಣ ಒಂದು ಕ್ಷಣ ಅಚ್ಚರಿಗೊಳಗಾಯಿತು. ಕ್ಯಾಮರಾಗಳ ಫ್ಲ್ಯಾಷ್ಗಳು ತುಸು ಹೆಚ್ಚೇ ಬೆಳಕು ಚೆಲ್ಲಿದವು. ಈ ಪ್ರಸಂಗಕ್ಕೆ ಕಾರಣವಾಗಿದ್ದು, ಕರ್ನಾಟಕದ ಸಾಲು ಮರದ ತಿಮ್ಮಕ್ಕ! ರಾಷ್ಟ್ರಪತಿಗಳು ಶನಿವಾರ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ ಬಚೇಂದ್ರಿ ಪಾಲ್, ಜಾನಪದ ಗಾಯಕಿ ತೀಜನ್ ಬಾಯಿ, ಪರಿಸರ ಪ್ರೇಮಿ,…
ಲೋಕ ಚುನಾವಣೆ: ವರ್ಗಾವಣೆಯಾದಲ್ಲಿ ವರದಿ ಮಾಡಿಕೊಳ್ಳದ ಅಧಿಕಾರಿಗಳ ಮಾಹಿತಿ ನೀಡಿ
March 17, 2019ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿರುವ ಅಧಿಕಾರಿಗಳು ನಿಯೋಜಿತ ಸ್ಥಳಕ್ಕೆ ತೆರಳದಿದ್ದರೆ ಅಂತಹವರ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಡಳಿತಗಳಿಗೆ ಚುನಾ ವಣಾ ಆಯೋಗ ಸೂಚಿಸಿದೆ. ಈ ಅಧಿಕಾರಿಗಳು ಹಾಜರಾಗದಿರುವುದಕ್ಕೆ ಸೂಕ್ತ ಮಾಹಿತಿ ನೀಡಿದ್ದರೆ ಅದನ್ನೂ ಆಯೋಗದ ಗಮನಕ್ಕೆ ತರುವಂತೆ ಹೇಳಿದೆ. ಅತಿವೃಷ್ಟಿ, ಅನಾವೃಷ್ಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗದು ಎಂದು ಆಯೋಗ ಸ್ಪಷ್ಟ ಪಡಿಸಿದೆ. ಆಯೋಗವು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆ ಸಿದ ಕಾರ್ಯಾಗಾರದಲ್ಲಿ ರಾಜ್ಯ…
ನಾಳೆ ಬಿಜೆಪಿ ಪಟ್ಟಿ ಪ್ರಕಟ
March 17, 2019ಬೆಂಗಳೂರು: ರಾಜ್ಯದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಬಿಜೆಪಿ ಹುರಿಯಾಳುಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಂದಾಗಿದ್ದ ಕಾಂಗ್ರೆಸ್ ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಅಭ್ಯರ್ಥಿ ಆಯ್ಕೆ ಸಮಿತಿ ಸಭೆಯನ್ನು ಮಂಗಳ ವಾರಕ್ಕೆ ಮುಂದೂಡಿದೆ. ಮೈತ್ರಿ ಪಕ್ಷದೊಂದಿ ಗಿನ ಸೀಟು ಹೊಂದಾಣಿಕೆ ನಂತರ ಪಕ್ಷದಲ್ಲಿ ಉಂಟಾಗಿರುವ ಗೊಂದಲದಿಂದ ಆಯ್ಕೆ ಸಮಿತಿ ಸಭೆ ಮುಂದೂಡಲಾಗಿದೆ. ಬಿಜೆಪಿ 20ರಿಂದ 22 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಘಟಕಕ್ಕೆ ಶಿಫಾರಸು…
ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು
March 17, 2019ನವದೆಹಲಿ: ಹಣದ ದುರ್ಬಳಕೆಯಿಂದ ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಗುಪ್ತಚರಕ್ಕೆ ಸಂಬಂಧಿಸಿದ ಬಹು ಇಲಾಖೆಗಳ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮಾಡುವ ವೆಚ್ಚಕ್ಕೆ ಸಂಬಂಧಿಸಿದಂತೆ ವಿಸ್ತೃತ ಮಾರ್ಗಸೂತ್ರವನ್ನು ಹೊರಡಿಸ ಲಾಗಿದೆ ಎಂದು ಅವರು ತಿಳಿಸಿದರು. ವೆಚ್ಚದ ಮೇಲ್ವಿಚಾರಣಾ ವ್ಯವಸ್ಥೆಯು ಪ್ರಬಲವಾಗಿದೆ ಮತ್ತು ಯಶಸ್ಸಿನ ಚುನಾವಣೆಗಳಲ್ಲಿ ನಮ್ಮ ಜಾರಿ ತಂಡಗಳು…
ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?
March 17, 2019ಮೈಸೂರು: ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಆಹ್ವಾನಿಸಿರುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿ ವ್ಯಕ್ತವಾಗಿದ್ದು, ಒಂದೊಮ್ಮೆ ರಾಹುಲ್ಗಾಂಧಿ ಒಪ್ಪಿದರೆ ಯಾವ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಬಹುದು ಎಂಬುದರ ಬಗ್ಗೆ ಈಗ ಕುತೂಹಲ ಮೂಡಿ ಈಗಾಗಲೇ ಸ್ಪರ್ಧಿಸಲು ನಿರ್ಧರಿಸಿರುವ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರ ದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ಧಿಸುವುದು ಅನಿವಾರ್ಯ ಎಂದು ನಿರ್ಧಸಿರುವ ಕಾಂಗ್ರೆಸ್ ವರಿಷ್ಠರು ಅದಕ್ಕಾಗಿ ಸುರಕ್ಷಿತ ಕ್ಷೇತ್ರವೊಂದರ ತಲಾಷೆಯಲ್ಲಿದ್ದಾರೆ….
ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
March 17, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ…
`ಕೈ’ ನಾಯಕರ ಮೊರೆ ಹೋದ ತಾಯಿ-ಮಗ
March 17, 2019ಮಂಡ್ಯ: ಸಕ್ಕರೆ ನಾಡು ಮಂಡ್ಯ ಲೋಕಸಭಾ ಚುನಾವಣಾ ರಾಜಕೀಯ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಮತ್ತು ಅಂಬರೀಶ್ ಪತ್ನಿ ಸುಮಲತಾ ನಡುವಿನ ಸ್ಪರ್ಧೆ ಜಿಲ್ಲೆಯಲ್ಲಿ ಹೈ ವೊಲ್ಟೇಜ್ ಸೃಷ್ಟಿ ಮಾಡಿದೆ. ಜಿಲ್ಲೆಯಲ್ಲಿ ಇಬ್ಬರೂ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಿಎಂ ಪುತ್ರ ನಿಖಿಲ್ ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ಘೋಷಣೆಯಾಗುತ್ತಿದ್ದಂತೆ ಸಖತ್ ಆಕ್ಟೀವ್ ಆಗಿದ್ದಾರೆ. ಇದರ ಭಾಗವಾಗಿ ಇಂದು ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಅವ ರೊಟ್ಟಿಗೆ ಕಾಂಗ್ರೆಸ್ ನಾಯಕರನ್ನು…
ವಿಶ್ವನಾಥ್ಗೆ ಲಘು ಹೃದಯಾಘಾತ: ಚೇತರಿಕೆ
March 17, 2019ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರಿಗೆ ಹೈದರಾಬಾದ್ನಲ್ಲಿಂದು ಲಘು ಹೃದಯಾಘಾತವಾಗಿದ್ದು, ಅಲ್ಲಿನ ಓಜೋನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇದೀಗ ಅವರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶುಕ್ರವಾರ ತಮ್ಮ ಸಮುದಾಯ ದವರ ಸಮಾವೇಶದಲ್ಲಿ ಭಾಗವಹಿ ಸಲು ವಿಶ್ವನಾಥ್ ಹೈದರಾಬಾದ್ಗೆ ತೆರಳಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿದೆ. ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜು ನಾಥ್ ಅವರು ಓಜೋನ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಚಿಕಿತ್ಸೆಗೆ ಸಹಕರಿಸಿದರು.
ದ್ವಿತೀಯ ಪಿಯುಸಿ ಜೀವಶಾಸ್ತ್ರ ಪತ್ರಿಕೆ ಗೊಂದಲ: ಸಮಿತಿ ರಚನೆ
March 17, 2019ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಜೀವ ಶಾಸ್ತ್ರ ವಿಷಯಕ್ಕೆ ಸಂಬಂಧಪಡದ ಮತ್ತು ಗೊಂದಲ ಮೂಡಿಸುವ ಪ್ರಶ್ನೆ ಗಳ ಬಗ್ಗೆ ವಿದ್ಯಾರ್ಥಿಗಳು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಅರಿಯಲು ಪದವಿ ಪೂರ್ವ ಶಿಕ್ಷಣ ಮಂಡಳಿ ಮೂವರು ಸದಸ್ಯರ ಸಮಿತಿ ರಚಿಸಿ, ವರದಿ ನೀಡುವಂತೆ ತಜ್ಞರಿಗೆ ಸೂಚಿಸಿದೆ. ಗುರುವಾರ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆದಿತ್ತು, ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ವಿದ್ಯಾರ್ಥಿ ಗಳು ಸಹಾಯವಾಣಿ ಮೂಲಕ ಪಿಯುಸಿ ಮಂಡಳಿಗೆ ದೂರು ನೀಡಿದ್ದರು. ಪ್ರಶ್ನೆ ಗಳು ಪಠ್ಯದ ಒಳಗೆ ನೀಡಲಾಗಿದೆಯೇ ಅಥವಾ…
ಪ್ರಣಾಳಿಕೆಗೂ ಸಮಯದ ನಿರ್ಬಂಧ
March 17, 2019ನವದೆಹಲಿ: ರಾಜ ಕೀಯ ಪಕ್ಷಗಳ ಚುನಾವಣಾ `ಪ್ರಣಾ ಳಿಕೆ’ ಮೇಲೆಯೂ ಕೇಂದ್ರ ಚುನಾ ವಣಾ ಆಯೋಗ ಈಗ ವಾರೆನೋಟ ಬೀರಿದೆ. ಮತದಾನಕ್ಕೆ 48 ಗಂಟೆಗಳ ಮುನ್ನ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವಂತಿಲ್ಲ ಎಂಬ ನಿರ್ಬಂಧ ವಿಧಿಸಿದೆ. ಈ ಸಂಬಂಧ ಶನಿವಾರ ಸಂಜೆ ಸುತ್ತೋಲೆ ಹೊರಡಿಸಿರುವ ಚುನಾ ವಣಾ ಆಯೋಗ, ಪ್ರಣಾಳಿಕೆಯೂ `ಚುನಾವಣಾ ನೀತಿ ಸಂಹಿತೆ’ ವ್ಯಾಪ್ತಿಗೇ ಒಳಪಡುತ್ತದೆ. ಹಾಗಾಗಿ, ಮತದಾನಕ್ಕೆ ಮುಂಚಿನ 48 ಗಂಟೆಗಳ ಅವಧಿಯು ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 126ರ ಪ್ರಕಾರ, `ನಿಶ್ಶಬ್ದದ ಅವಧಿ’. ಈ ಅವಧಿಯಲ್ಲಿ…










