ಮೈಸೂರು: ವೈದ್ಯಕೀಯ ಸ್ನಾತಕೋತ್ತರ ಪದವಿ ಪ್ರವೇಶದಲ್ಲಿ ಹೊರ ರಾಜ್ಯದವರಿಗೆ ಮಣೆ ಹಾಕುತ್ತಿದ್ದು, ಇದರಿಂದ ರಾಜ್ಯದವರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘದ ರಾಜ್ಯಾಧ್ಯಕ್ಷ ಡಾ.ಭರತ್ ಕುಮಾರ್ ಬೇಸರ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಿರುವ ಪಿಜಿ (ಸ್ನಾತಕೋತ್ತರ ಪದವಿ) ಸೀಟುಗಳಲ್ಲಿ ಶೇ.50ರಷ್ಟು ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದರಿಂದ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗುತ್ತಿದೆ. ಹಣದಾಸೆಗಾಗಿ ಖಾಸಗಿ ಕಾಲೇಜುಗಳು ತಮ್ಮಲ್ಲಿರುವ ಸೀಟ್ಗಳನ್ನು ಹೆಚ್ಚಾಗಿ…
ಮಾ.14, 16ರಂದು ಮೆದುಳು ಕುರಿತು ಅಂತರರಾಷ್ಟ್ರೀಯ ಸಮ್ಮೇಳನ
March 13, 2019ಮೈಸೂರು: ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಮತ್ತು ಸೊಸೈಟಿ ಫಾರ್ ನ್ಯೂರೋಕೆಮಿಸ್ಟ್ರಿ ಇಂಡಿಯಾ (ಎಸ್ಎನ್ಸಿಐ) ಜಂಟಿ ಆಶ್ರಯದಲ್ಲಿ ಮಾ.14 ಮತ್ತು 16ರಂದು ಆರೋಗ್ಯಕರ ಮಿದುಳಿಗೆ ಸಂಬಂಧಿಸಿ ದಂತೆ ಅಂತಾರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜೆಎಸ್ಎಸ್ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಟಿ.ಎಂ.ಪ್ರಮೋದ್ ಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್ಎಸ್ ಔಷಧ ಮಹಾವಿದ್ಯಾಲಯದ ಶ್ರೀ ರಾಜೇಂದ್ರ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದ್ದು, ಇದರೊಂದಿಗೆ ಸೊಸೈಟಿ ಫಾರ್ ನ್ಯೂರೋ ಕೆಮಿಸ್ಟ್ರಿ ಇಂಡಿಯಾದ…
ವಿದ್ಯುತ್ ನಿಲುಗಡೆ
March 13, 2019ಮೈಸೂರು: ನಂಜನಗೂಡು ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಮಾರ್ಚ್ 13 ರಂದು 66/11 ಕೆ.ವಿ ಮಲಿ ಯೂರು ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾರ್ಚ್ 14 ರಂದು 66/11 ಕೆ.ವಿ. ಪರಿಣಾಮಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮ ಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 13 ಮತ್ತು 14 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ತಲಕಾಡು, ಬಿ.ಶೆಟ್ಟಳ್ಳಿ, ಬನವೆ, ದೊಡ್ಡಪುರ, ಹೆಮ್ಮಿಗೆ, ಕರವಟ್ಟಿ. ಚಿದ್ರವಳ್ಳಿ ಮತ್ತು ದೊಡ್ಡಬಾಗಿಲು ಗ್ರಾಮ ಪಂಚಾಯ್ತಿ…
ಸಂವಿಧಾನ ಅಸ್ವಿತ್ವಕ್ಕೆ ಬಂದೂ ಇನ್ನೂ ಸಿಗದ ಸ್ತ್ರೀ ಸಮಾನತೆ
March 13, 2019ಮೈಸೂರು: ನೂರು ವರ್ಷ ಕಳೆದರೂ ಸ್ತ್ರೀ ಸಮಾನತೆ ಸಾಧ್ಯ ವಾಗಿಲ್ಲ. ಇಂದಿಗೂ ಶೋಷಣೆ, ದಬ್ಬಾಳಿಕೆ, ದೌರ್ಜನ್ಯದಂತಹ ಸಮಸ್ಯೆಗಳ ಸುಳಿಯಲ್ಲಿ ಮಹಿಳೆಯರು ಸಿಲುಕಿ ದ್ದಾರೆ ಎಂದು ಮೈಸೂರು ಜಿಲ್ಲಾ ಪಂಚಾಯತಿ ಸಿಇಓ ಕೆ.ಜ್ಯೋತಿ ಬೇಸರ ವ್ಯಕ್ತಪಡಿದರು. ಮೈಸೂರಿನ ಸಂತ ಫಿಲೋ ಮಿನಾ ಕಾಲೇಜು ಸಭಾಂಗಣದಲ್ಲಿ ಓಡಿಪಿ ಸಂಸ್ಥೆ ಮತ್ತು ಮಹಿಳೋದಯ ಮಹಿಳಾ ಒಕ್ಕೂಟ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ `ಉತ್ತಮ ಸಮತೋಲನಕ್ಕಾಗಿ ಮಹಿಳಾ ನಡಿಗೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾನತೆ ಸಾರುವ ಸಂವಿಧಾನವಿದ್ದರೂ ಮಹಿಳೆಯರಿಗೆ,…
ಗುರುವಾರ ಇಲ್ಲವೇ ಶುಕ್ರವಾರ ದೋಸ್ತಿ ಪಟ್ಟಿ ಪ್ರಕಟ
March 12, 2019ಬೆಂಗಳೂರು: ಕರ್ನಾಟಕದಲ್ಲಿ ಜಾತ್ಯಾತೀತ ಜನತಾದಳದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡು ಉಭಯ ಪಕ್ಷಗಳಿಗೆ ದೊರೆಯುವ ಕ್ಷೇತ್ರಗಳ ಪಟ್ಟಿ ಬರುವ ಗುರುವಾರ ಇಲ್ಲವೇ ಶುಕ್ರವಾರ ಪ್ರಕಟಿಸಲು ರಾಷ್ಟ್ರೀಯ ಕಾಂಗ್ರೆಸ್ ನಿರ್ಧರಿಸಿದೆ. ದೆಹಲಿಯಲ್ಲಿಂದು ಪಕ್ಷದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಅಭ್ಯರ್ಥಿಗಳ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಿಎಲ್ಪಿ ನಾಯಕ ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಸಂಬಂಧಪಟ್ಟಂತೆ ತಮ್ಮ ಅನಿಸಿಕೆಗಳನ್ನು ವರಿಷ್ಠರ ಮುಂದೆ ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. ಕರ್ನಾಟಕದ ನಾಯಕರು ನೀಡಿದ ಮಾಹಿತಿ…
ಬೆಂಗಳೂರು ಉತ್ತರ ಸಹವಾಸ ಬೇಡ
March 12, 2019ಬೆಂಗಳೂರು: ಬೆಂಗಳೂರು ನಗರ ಮತದಾರರನ್ನು ನಂಬಿ ನೀವು ಉತ್ತರ ಕ್ಷೇತ್ರದಿಂದ ಸ್ಪರ್ಧಿಸ ಬೇಡಿ. ಮೈಸೂರು ಕ್ಷೇತ್ರದಿಂದ ಕಣಕ್ಕಿಳಿ ಯಿರಿ, ನಾವು ನಿಮ್ಮನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿಕೊಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮನವಿ ಮಾಡಿಕೊಂಡಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸ್ಪಷ್ಟವಾಗಿ ತಮ್ಮ ತಂದೆ ಯವರಿಗೆ ತಿಳಿಸಿರುವುದಲ್ಲದೆ, ನೀವು ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯಿರಿ ಎಂದು ಸಲಹೆ ಮಾಡಿದ್ದಾರೆ. ಆದರೆ…
ಮಾ.18ಕ್ಕೆ ನನ್ನ ನಿರ್ಧಾರ
March 12, 2019ಮಂಡ್ಯ: ರಾಜಕೀಯದಲ್ಲಿ ಕೊನೆ ಗಳಿಗೆವರೆಗೂ ಏನು ಬೇಕಾದರೂ ಆಗಬಹುದು. ನನ್ನ ನಿರ್ಧಾರ ಏನು ಎನ್ನುವುದನ್ನು ಮಾರ್ಚ್ 18 ರಂದು ಅಧಿಕೃತವಾಗಿ ಘೋಷಿಸುತ್ತೇನೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು. ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಈಗಾಗಲೇ ಊಹಾಪೋಹಗಳು ಬರುತ್ತಿವೆ. ಅವುಗಳನ್ನೆಲ್ಲಾ ನಂಬಬೇಡಿ. ಇವತ್ತು ಸಹ ದೇವಸ್ಥಾನಕ್ಕೆ ಭೇಟಿ ಕೊಟ್ಟು ಬಂದಿದ್ದೇನೆ. ನಾನು ಹೋದ ಕಡೆಯಲ್ಲೆಲ್ಲ ಅಭಿಮಾನಿ ಗಳು ಸೇರಿದಂತೆ ಅಪಾರ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆ ಯಲ್ಲಿ…
ಮೋದಿ ಮತ್ತೆ ಪ್ರಧಾನಿಯಾಗ್ತಾರೆ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಭವಿಷ್ಯ
March 12, 2019ಬೆಂಗಳೂರು: ಪ್ರಧಾನಿ ಮೋದಿ ಮತ್ತೆ ಪ್ರಧಾನಿ ಆಗ್ತಾರೆ. ಇದು ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಶ್ವಾಸ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸ ಬೇಕೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಮಾಜಿ ಕೇಂದ್ರ ಸಚಿವ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಲ್ಲಿ ವಿನಂತಿಸಿಕೊಂಡಿದ್ದು, ಅದಕ್ಕೆ ಸಮ್ಮತಿಸಿದ್ದಾರೆ. ಸೋಮವಾರ ಆರ್.ಅಶೋಕ್ ಅವರು ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ತೆರಳಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಮಂಡ್ಯ, ತುಮ ಕೂರು, ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಪಾಲ್ಗೊಳ್ಳಬೇಕೆಂದು ಮನವಿ…
ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ V/s ರೋಹಿಣಿ
March 12, 2019ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದ್ದು, ಇವರ ವಿರುದ್ಧ ‘ಆಧಾರ್’ ಖ್ಯಾತಿಯ ನಂದನ್ ನಿಲೇಕಣಿ ಪತ್ನಿ ರೋಹಿಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಕ್ಷೇತ್ರದಲ್ಲಿ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದ್ದ ಅನಂತಕುಮಾರ್ ಅವರ ನಿಧನದ ನಂತರ ಅವರ ಪತ್ನಿ ತೇಜಸ್ವಿನಿಯವರನ್ನು ಈ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ದಿವಂಗತ ಅನಂತಕುಮಾರ್ ಅವರ ಪ್ರಭಾವ ಹಾಗೂ…
ಮಾ. 19ರಿಂದ ನಾಮಪತ್ರ ಸಲ್ಲಿಕೆ ಆರಂಭ
March 12, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡು ತ್ತಿದ್ದ ಅವರು, ಭಾರತದ ಚುನಾವಣಾ ಆಯೋಗವು ಮಾರ್ಚ್ 10 ರಂದು ಲೋಕಸಭಾ ಚುನಾವಣಾ ವೇಳೆ ಪ್ರಕಟಿಸಿರುವಂತೆ ಚುನಾವಣಾ ಪ್ರಕ್ರಿಯೆಗೆ ತಾವು ಮೈಸೂರು-ಕೊಡಗು ಲೋಕಸಭಾ ವ್ಯಾಪ್ತಿಯಲ್ಲಿ ಸರ್ವಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಮಡಿ ಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣ…










