ಹಾಸನ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಯಶವಂತಪುರ ನಿವಾಸಿಗಳಾದ ಚಾಲಕ ಜಗದೀಶ್(30), ಗೌರಮ್ಮ(45), ಚಿನ್ನಯ್ಯ (50) ಹಾಗೂ ಭುವನೇಶ್(6) ಸಾವನ್ನಪ್ಪಿದ್ದರೆ, ಭವ್ಯ(16) ಮತ್ತು ನಾಗರತ್ನ(38) ಗಂಭೀರವಾಗಿ ಗಾಯಗೊಂಡು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ:…
ಬೆವರಿಳಿಸುತ್ತಿದೆ ಬಿರು ಬಿಸಿಲು: ಮೈಸೂರಿನ ಜನತೆ ಕಂಗಾಲು
March 11, 2019ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಸುಡು ಬಿಸಿಲು ಹೆಚ್ಚಾಗುತ್ತಿದ್ದು, ಜನರನ್ನು ಕಂಗೆಡಿಸುತ್ತಿದೆ. ರಣ ಬಿಸಿಲಿನ ತಾಪಕ್ಕೆ ಕಂಗಾಲಾಗಿರುವ ಜನತೆ ತಂಪು-ಪಾನೀಯ ಹಾಗೂ ಎಳನೀರಿನ ಮೊರೆ ಹೋಗುತ್ತಿದ್ದಾರೆ. ಬೇಸಿಗೆ ಕಾಲ ಸುಡುವ ಬಿಸಿಲಿನ ಝಳ ವನ್ನು ಸೂಸುತ್ತಿದ್ದು, ಜನರನ್ನು ಹಿಂಡಿ ಹಿಪ್ಪೆಗೊಳಿಸುತ್ತಿದೆ. ಈ ಸಾಲಿನ ಫೆಬ್ರವರಿ ತಿಂಗಳಿಂದಲೂ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್ ತಿಂಗಳ ಆರಂಭದಲ್ಲಿ ತೀವ್ರ ಸ್ವರೂಪದಿಂದ ಕಾಡತೊಡಗಿದೆ. ಈ ತಿಂಗಳ ಆರಂಭದಲ್ಲಿಯೇ ತಾಪ ಮಾನ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ…
ತಕ್ಷಣದಿಂದ ನೀತಿ ಸಂಹಿತೆ ಜಾರಿ ಹಿನ್ನೆಲೆ: ಜನಪ್ರತಿನಿಧಿಗಳ ಸರ್ಕಾರಿ ವಾಹನ ವಶಕ್ಕೆ ಡಿಸಿ ಸೂಚನೆ
March 11, 2019ಮೈಸೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳು, ನಿಗಮ ಮಂಡಳಿಗಳು, ಸರ್ಕಾರಿ ಉದ್ದಿಮೆಗಳು, ಸಹಕಾರ ಸಂಘಗಳ ಒಕ್ಕೂಟ, ಮಾರುಕಟ್ಟೆ ವಲಯದ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆಯು ವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಜಿಪಂ ಸಿಇಓ, ನಗರ ಪಾಲಿಕೆ, ಮುಡಾ ಆಯುಕ್ತರು, ಮೈಸೂರು ಮೃಗಾಲಯ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ, ಕಾಡಾ ಆಡಳಿ ತಾಧಿಕಾರಿ, ವಸ್ತು…
ರಾಜ್ಯ ಮಟ್ಟದ ವಿಶೇಷ ಚೇತನರ ಬಾಸ್ಕೆಟ್ ಬಾಲ್ ಪಂದ್ಯಾವಳಿ
March 11, 2019ಮೈಸೂರು: ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಹಾಗೂ ಕರ್ನಾಟಕ ರಾಜ್ಯ ವ್ಹೀಲ್ಚೇರ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ರಾಜ್ಯ ಮಟ್ಟದ ವ್ಹೀಲ್ಚೇರ್ ಬಾಸ್ಕೆಟ್ಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ 30 ತಂಡಗಳ ವಿಶೇಷ ಆಟಗಾರರು ತಮ್ಮ ವಿಶಿಷ್ಟ ಸಾಮಥ್ರ್ಯ ಸಾದರಪಡಿಸಿದರು. ಮೈಸೂರಿನ ಜೆಸಿ ಕಾಲೇಜು ಆವ ರಣದ ಸ್ಪೋಟ್ರ್ಸ್ ಕಾಂಪ್ಲೆಕ್ಸ್ನಲ್ಲಿ ಏರ್ಪ ಡಿಸಿದ್ದ ಒಂದು ದಿನದ ಪಂದ್ಯಾವಳಿಗೆ ಅಂತಾರಾಷ್ಟ್ರೀಯ ಬಾಸ್ಕೆಟ್ಬಾಲ್ ಪಟು ಹೆಚ್.ಎಂ.ಬಾಂಧವ್ಯ ಚಾಲನೆ ನೀಡಿದರು. ಅರ್ಧ ಭಾಗದ ಬಾಸ್ಕೆಟ್ಬಾಲ್ ಕೋರ್ಟ್ ನಲ್ಲಿ ತಂಡವೊಂದರಲ್ಲಿ ಮೂವರು…
ನಾಳೆಯಿಂದ ಗಣಪತಿ ಸಚ್ಚಿದಾನಂದ ಶ್ರೀಗಳ ಪ್ರವಚನ
March 11, 2019ಮೈಸೂರು: ಮೈಸೂರು-ಊಟಿ ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠದಲ್ಲಿ ನಾಳೆ(ಮಾ.11)ಯಿಂದ ಏ.17ರವರೆಗೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಂದ ಶ್ರೀಮದ್ಭಾಗವತ ದಶಮ ಸ್ಕಂದ ಸಪ್ತಾಹ ಪ್ರವಚನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 7ರಿಂದ 9 ನಡೆಯುವ ಪ್ರವಚನ ದಲ್ಲಿ ಶ್ರೀಗಳು, ಭಗವಾನ್ ಶ್ರೀಕೃಷ್ಣನ ಕಥೆಗಳನ್ನು ಕನ್ನಡದಲ್ಲಿ ಮಹಾ ಉಪಮೆಗಳು ಮತ್ತು ಸುಂದರವಾದ ವ್ಯಾಖ್ಯಾನಗಳಿಂದ ವರ್ಣಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ತೆರಳಲು ಪ್ರತಿದಿನ ಚಾಮುಂಡಿಪುರಂ ವೃತ್ತದಿಂದ ಆಶ್ರಮದವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮೈಸೂರು ನಗರ ಮತ್ತು ಜಿಲ್ಲಾ…
ಮೈಸೂರಲ್ಲೂ 4 ದಿನಗಳ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
March 11, 2019ಮೈಸೂರು: ಪೋಲಿಯೋ ನಿರ್ಮೂಲನೆ ನಿಟ್ಟಿನಲ್ಲಿ ಭಾನುವಾರ ದೇಶಾದ್ಯಂತ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಮೈಸೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ.92.14ರಷ್ಟು ಐದು ವರ್ಷದೊಳಗಿನ 230298 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಬಿ.ಬಸವರಾಜು ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 2,49,954 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ವಿವಿಧ ತಾಲೂಕುಗಳಲ್ಲಿ 1,11,367 ಹಾಗೂ ಮೈಸೂರು ನಗರದಲ್ಲಿ 1,38,587 ಮಕ್ಕ ಳಿಗೆ ಲಸಿಕೆ ಹಾಕಬೇಕಾಗಿದೆ….
ಮೈಸೂರಲ್ಲಿ ವಿದೇಶಿಯರಿಗೆ ಯೋಗ ಕಾರ್ಯಾಗಾರ
March 11, 2019ಮೈಸೂರು: ರಾಮಕೃಷ್ಣ ಪರಮಹಂಸರ ಜನ್ಮ ಶತ ಮಾನೋತ್ಸವದ ಹಿನ್ನೆಲೆಯಲ್ಲಿ ಮೈಸೂ ರಿನ ರಾಮಕೃಷ್ಣ ಆಶ್ರಮದಲ್ಲಿ ಭಾನುವಾರ ನಡೆದ `ವಿದೇಶಿಗರಿಗೆ ಯೋಗ’ ಕುರಿತ ಕಾರ್ಯಾಗಾರದಲ್ಲಿ 12 ದೇಶಗಳ 58 ವಿದೇಶಿಗರು ಪಾಲ್ಗೊಂಡು ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು. ರಾಮಕೃಷ್ಣ ಆಶ್ರಮದ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಾಗಾರ ದಲ್ಲಿ ಮೈಸೂರಿನ ವಿವಿಧ ಯೋಗಶಾಲೆ ಗಳಲ್ಲಿ ಯೋಗ ಕಲಿಯುತ್ತಿರುವ ವಿದೇಶಿ ಗರಿಗೆ ಮೊದಲು ಆಶ್ರಮದ ಆತ್ಮನಂದಜಿ ಮಹಾರಾಜ್ ಭಜನೆ ಹಾಗೂ ಪ್ರಾರ್ಥನೆ ನಡೆಸಿಕೊಟ್ಟರು. ನಂತರ ಸ್ವಾಮಿ ಮುಕ್ತಿ ದಾನಂದಜೀ…
ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೂ ಬೆಂಬಲಿಸುತ್ತೇವೆ
March 11, 2019ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಯಾರೆಂದು ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳ ಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಘೋಷಿಸಿದರು. ನಗರದ ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ಕೃಷ್ಣರಾಜಪೇಟೆ ತಾಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯನ್ನು ಜೆಡಿಎಸ್ -ಕಾಂಗ್ರೆಸ್ ಒಟ್ಟಾಗಿ ಎದುರಿಸಲಿದೆ….
ಮೈಸೂರಲ್ಲಿ ಟಿಬೆಟಿಯನ್ನರ ಧರಣಿ
March 11, 2019ಮೈಸೂರು:60ನೇ ರಾಷ್ಟ್ರೀಯ ಟಿಬೆಟಿಯನ್ ದಂಗೆ ದಿನದ ಅಂಗವಾಗಿ ಮೈಸೂರಿನಲ್ಲಿ ಭಾನುವಾರ ಟಿಬೆಟಿಯನ್ನರು ಬೃಹತ್ ಮೆರವಣಿಗೆ ನಡೆಸಿ ಟಿಬೆಟಿಯನ್ನರ ಮೇಲೆ ನಡೆಯು ತ್ತಿರುವ ದೌರ್ಜನ್ಯ ತಡೆಗೆ ವಿಶ್ವಸಂಸ್ಥೆ ಮುಂದಾಗಬೇಕೆಂದು ಆಗ್ರಹಿಸಿದರು. ಮೈಸೂರಿನ ಅರಮನೆಯ ಉತ್ತರ ದ್ವಾರದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ಮುಂಭಾಗದಿಂದ ಬೃಹತ್ ಮೆರ ವಣಿಗೆ ಹೊರಟ ಟಿಬೆಟಿಯನ್ನರು ದೊಡ್ಡ ಗಡಿಯಾರ, ಚಿಕ್ಕ ಗಡಿಯಾರ ವೃತ್ತ, ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಶಾಂತಿಯುತವಾಗಿ ಧರಣಿ ನಡೆಸಿದರು. ಟಿಬೆಟ್ನಲ್ಲಿ ಟಿಬೆಟಿ ಯನ್ನರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ….
ಒಕ್ಕಲೆಬ್ಬಿಸುವುದರ ವಿರುದ್ಧ ಮಾ.27ರಂದು ಬೆಂಗಳೂರಲ್ಲಿ ಆದಿವಾಸಿಗಳ ಬೃಹತ್ ಮೆರವಣಿಗೆ
March 11, 2019ಮೈಸೂರು: ಆದಿ ವಾಸಿಗಳ ಪಾಲಿಗೆ ಮರಣ ಶಾಸನವಾಗಿ ರುವ ಫೆ.13ರ ಸುಪ್ರೀಂಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂದು ರಾಜ್ಯ ಸರ್ಕಾರ ವನ್ನು ಆಗ್ರಹಿಸಲು ಮಾ.27 ರಂದು ಬೆಂಗಳೂರಿನಲ್ಲಿ ಆದಿವಾಸಿಗಳ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಅಧ್ಯಕ್ಷ ಪಿ.ಕೆ.ರಾಮು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಲ್ಡ್ ಲೈಫ್ ಫಸ್ಟ್ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಆಧರಿಸಿ ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ. ಒಂದು…










