ನವದೆಹಲಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನಪಿಗಾಗಿ ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಲೋಕಾರ್ಪಣೆ ಮಾಡಿದರು. ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿ, ನಿವೃತ್ತ ಯೋಧರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಷ್ಟು ವರ್ಷ ಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯೋಧರನ್ನು ಕಡೆಗಣಿಸಿತ್ತು. ಆದರೆ 6 ದಶಕಗಳ ನಂತರ ಹುತಾತ್ಮ ಯೋಧರನ್ನು ಸ್ಮರಿಸುತ್ತಿದ್ದೇವೆ….
ಮೈಸೂರು ಜಲದರ್ಶಿನಿ ಆವರಣದಲ್ಲಿ 13 ಕೋಟಿ ವೆಚ್ಚದ ಅಭಿವೃದ್ಧಿ
February 26, 2019ಬೆಂಗಳೂರು: ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿ ಗೃಹವನ್ನು 13 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಅತಿಥಿ ಗೃಹಕ್ಕೆ ಹೊಂದಿಕೊಂಡಂತೆ ಹತ್ತು ಕೋಟಿ ರೂ. ವೆಚ್ಚದಲ್ಲಿ 500 ಆಸನವುಳ್ಳ ಅತ್ಯಾಧುನಿಕ ಸಭಾಂಗಣ ನಿರ್ಮಾಣಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತ ಜಿ.ಟಿ. ದೇವೇಗೌಡ, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಜೊತೆ ಇಂದು ಮಾತುಕತೆ ನಡೆಸಿದ ನಂತರ ಜಲದರ್ಶಿನಿಗೆ ಮೂಲ ಸೌಕರ್ಯ ಕಲ್ಪಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನವೆ ಸಭಾಂಗಣಕ್ಕೆ ಮುಖ್ಯಮಂತ್ರಿ ಹೆಚ್.ಡಿ….
ಹಳೇ ಉಂಡವಾಡಿ ಯೋಜನೆಗೆ ಅಂತೂ ಆಡಳಿತಾತ್ಮಕ ಅನುಮೋದನೆ
February 26, 2019ಮೈಸೂರು: ಮೈಸೂರು ನಗರ ಮತ್ತು ಸುತ್ತಲಿನ 92 ಗ್ರಾಮಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಪೂರೈಸುವ ಮಹತ್ವಪೂರ್ಣ ಹಳೆ ಉಂಡವಾಡಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ನಗರಾಭಿವೃದ್ಧಿ ಇಲಾಖೆ(ಎಂಎ-2 ಮತ್ತು ಮಂಡಳಿ) ಅಧೀನ ಕಾರ್ಯದರ್ಶಿ ಎಸ್.ವೀಣಾ ಅವರು 545 ಕೋಟಿ ರೂ. ಅಂದಾಜು ವೆಚ್ಚದ ಹಳೆ ಉಂಡವಾಡಿ ಕುಡಿಯುವ ನೀರು ಸರಬರಾಜು ಯೋಜ ನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಫೆಬ್ರವರಿ 21 ರಂದು ಆದೇಶ ಹೊರಡಿಸಿದ್ದಾರೆ. ಜನಪ್ರತಿನಿಧಿಗಳ ಶ್ರಮ: ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿದ್ದ…
ಚಾಮುಂಡಿಬೆಟ್ಟದಲ್ಲೂ ಅಗ್ನಿ ಹಾವಳಿ: ತಪ್ಪಿದ ಭಾರೀ ಹಾನಿ
February 26, 2019ಮೈಸೂರು: ಕಿಡಿಗೇಡಿಗಳು ಹಚ್ಚಿದ ಕಿಚ್ಚಿಗೆ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಭಾರೀ ಪ್ರಮಾಣದ ವನ್ಯ ಸಂಪತ್ತು ಅಗ್ನಿಗಾಹುತಿ ಯಾಗುತ್ತಿರುವ ಸಂದರ್ಭದಲ್ಲಿಯೇ ಮೈಸೂರಿನಲ್ಲಿಯೂ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಬಿಜಿಎಸ್ ಸಂಸ್ಥೆ ಖಾಲಿ ಜಾಗದಲ್ಲಿ ಕಿಡಿಗೇಡಿ ಗಳು ಬೆಂಕಿ ಹಾಕಿ ಪರಾರಿಯಾಗಿದ್ದರು. ಮಧ್ಯಾಹ್ನ 12.30ರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಿಸಿಲಿನ ಬೇಗೆಗೆ ತೀವ್ರ ಸ್ವರೂಪ ಪಡೆಯಿತು. ಗಾಳಿ ರಭಸ ವಾಗಿ ಬೀಸಲಾರಂಭಿಸಿದ ಪರಿಣಾಮ ಬೆಂಕಿ…
ಅಧಿಕಾರ ಮತ್ತೆ ದುಷ್ಟಕೂಟದ ಪಾಲಾಗದಂತೆ ಎಚ್ಚರ ವಹಿಸಬೇಕು
February 26, 2019ಮೈಸೂರು: ಬಿಜೆಪಿ ಯುವ ಮೋರ್ಚಾ ಮೈಮರೆತರೆ, ಕೇಂದ್ರದ ಅಧಿಕಾರದ ಚುಕ್ಕಾಣಿ ಮತ್ತೆ ದುಷ್ಟಕೂಟದ ವಶವಾಗುತ್ತದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ ವಿಶ್ವ ಮಟ್ಟದಲ್ಲಿ ಭಾರತ ಸಂಪಾದಿಸಿರುವ ಗೌರವ ಕುಸಿಯುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ತಿಳಿಸಿದರು. ಯುವ ಮೋರ್ಚಾ ಕಾರ್ಯಕರ್ತರ ಸಮಾ ವೇಶದಲ್ಲಿ ಮಾತನಾಡುತ್ತ, 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಅಧಿ ಕಾರದಲ್ಲಿತ್ತು. ಆ ವರ್ಷ ನಡೆದ ಚುನಾವಣೆಯಲ್ಲಿ ಯುವ ಮೋರ್ಚಾ ಮೈಮರೆತ ಪರಿಣಾಮ ಅಧಿ ಕಾರ ಕಳೆದುಕೊಳ್ಳಬೇಕಾಯಿತು. ಈ ಬಾರಿ ಹಾಗಾಗಬಾರದು. 2014ರ…
2014ರಲ್ಲಿ ಗುಜರಾತ್ ಮಾದರಿ ಈಗ ವಿಶ್ವಕ್ಕೆ ಭಾರತವೇ ಮಾದರಿಯಾಗಿದೆ
February 26, 2019ಮೈಸೂರು: 2014ರ ಲೋಕ ಸಭಾ ಚುನಾವಣೆಯಲ್ಲಿ ಮೋದಿ ಅವರ ಸಾಧನೆ ಬಿಂಬಿ ಸಲು ಗುಜರಾತ್ ಮಾದರಿ ಎಂದು ಹೇಳುತ್ತಿದ್ದೆವು. ಈ ಚುನಾವಣೆಯಲ್ಲಿ ಭಾರತದ ಅಭಿವೃದ್ಧಿ ಬಗ್ಗೆ ಇಡೀ ವಿಶ್ವವೇ ಕೊಂಡಾಡುತ್ತಿರುವುದು ನಮ್ಮ-ನಿಮ್ಮೆಲ್ಲರ ಸುದೈವ ಎಂದು ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟರು. ಮೈಸೂರಿನ ರಾಜೇಂದ್ರಭವನದಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ವಿಜಯ ಲಕ್ಷ್ಯ-2019ರ ಶೀರ್ಷಿಕೆಯಡಿ ಆಯೋಜಿಸಿದ್ದ ಯುವ ಮೋರ್ಚಾ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಹಿಂದಿನ ಚುನಾವಣೆಯಲ್ಲಿ ಮೋದಿ ಗುಜರಾತಿನ ಮುಖ್ಯ ಮಂತ್ರಿಯಾಗಿದ್ದರು. ಆಗ ದೇಶಕ್ಕೆ ಗುಜರಾತ್…
ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರಕ್ಕೆ ಹೊರಟಿದೆ ಮಾಧ್ಯಮ ರಥ
February 26, 2019ಮೈಸೂರು: ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ಮಾ.1 ಮತ್ತು 2ರಂದು ನಡೆಯಲಿರುವ 34ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಪ್ರಚಾರಕ್ಕಾಗಿ ಸೋಮವಾರ `ಮಾಧ್ಯಮ ರಥ’ಕ್ಕೆ ಸಂಸದರಾದ ಆರ್. ಧ್ರುವನಾರಾಯಣ್, ಪ್ರತಾಪ್ ಸಿಂಹ ಚಾಲನೆ ನೀಡಿದರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನದ ಎದುರು ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಮಾಜದ ಅಭದ್ರತೆ-ಅನ್ಯಾಯಗಳನ್ನು ಬೆಳ ಕಿಗೆ ತರುವ ಪತ್ರಕರ್ತರು ಮಾತ್ರ ಅಭದ್ರತೆ ಯಲ್ಲೇ ಕೆಲಸ ಮಾಡುವ ಸನ್ನಿವೇಶವಿದೆ. ಇಂತಹ…
ವಿದ್ಯಾರ್ಥಿನಿ ಹತ್ಯೆ ಯತ್ನ: ಯುವರಾಜ ಕಾಲೇಜು ವಿದ್ಯಾರ್ಥಿ ಅಮಾನತಿಗೆ ನಿರ್ಧಾರ
February 26, 2019ಮೈಸೂರು: ಪ್ರೀತಿ ನಿವೇದನೆಯನ್ನು ತಿರಸ್ಕರಿಸಿದ್ದ ವಿದ್ಯಾ ರ್ಥಿನಿಗೆ ಕಟ್ಟರ್ ಬ್ಲೇಡ್ನಿಂದ ಕೊಯ್ದು ಹತ್ಯೆಗೈಯ್ಯಲು ಯತ್ನಿಸಿದ್ದ ಯುವ ರಾಜು ಕಾಲೇಜು ವಿದ್ಯಾರ್ಥಿ ರೋಹಿತ್ (21) ಎಂಬಾತನನ್ನು ಕಾಲೇಜಿನಿಂದ ಅಮಾನತು ಮಾಡಲು ನಿರ್ಧರಿಸಲಾ ಗಿದೆ. ಗುಂಡ್ಲುಪೇಟೆಯ ನಿವಾಸಿಯಾದ ರೋಹಿತ್, ಯುವರಾಜ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿ ಯಾಗಿದ್ದು, ಫೆ.15ರಂದು ಈತನ ಜೊತೆ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದ. ಇದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದರಿಂದ ತರಗತಿ ಯ¯್ಲÉೀ ಹತ್ಯೆಗೈಯ್ಯಲು ಯತ್ನಿಸಿದ್ದಲ್ಲದೆ, ರಕ್ಷಿಸಲು ಬಂದ ಮತ್ತೊಬ್ಬ ವಿದ್ಯಾ ರ್ಥಿನಿ ಕೈಗೂ ಗಾಯ ಮಾಡಿದ್ದ….
ಬೇಲೂರು ಸೇರಿದಂತೆ ನಾಲ್ಕು ಪ್ರವಾಸಿ ತಾಣದಲ್ಲಿ ತ್ರೀ-ಸ್ಟಾರ್ ಹೋಟೆಲ್ ನಿರ್ಮಾಣ
February 26, 2019ಮೈಸೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿ ಯಿಂದ ರಾಜ್ಯದ ನಾಲ್ಕು ಪ್ರವಾಸಿ ತಾಣಗಳಲ್ಲಿ ತ್ರೀ-ಸ್ಟಾರ್ ಹೋಟೆಲ್ ಗಳ ನಿರ್ಮಾಣಕ್ಕೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಅನುಮೋದಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರಿನಲ್ಲಿ 20.71 ಕೋಟಿ ರೂ., ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ 18.32 ಕೋಟಿ ರೂ., ವಿಜಯಪುರದಲ್ಲಿ 16.74 ಕೋಟಿ ರೂ. ಹಾಗೂ ಹಂಪಿಯಲ್ಲಿ 28.20 ಕೋಟಿ ರೂ. ಸೇರಿದಂತೆ ಒಟ್ಟು 84 ಕೋಟಿ ಅಂದಾಜು ಮೊತ್ತದಲ್ಲಿ ಹೋಟೆಲ್ಗಳ ನಿರ್ಮಾಣಕ್ಕೆ ಸಮಗ್ರ ಯೋಜನಾ ಸಿದ್ಧಪಡಿಸಿ…
ಮೂರು ವಾರ್ಡ್ಗಳಲ್ಲಿ 1.18 ಕೋಟಿ ರೂ. ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಲ್.ನಾಗೇಂದ್ರ
February 26, 2019ಮೈಸೂರು: ಚಾಮರಾಜ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.2, 20, 22ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಲ್. ನಾಗೇಂದ್ರ ಚಾಲನೆ ನೀಡಿದರು. ವಾರ್ಡ್ ನಂ.2ರ ಮಂಚೇಗೌಡನ ಕೊಪ್ಪಲಿನಲ್ಲಿ ಶಾಸಕರು ಈ ಹಿಂದೆ ಪಾದ ಯಾತ್ರೆ ನಡೆಸುವ ವೇಳೆ ರಸ್ತೆ ಹಾಗೂ ಚರಂಡಿ ದುರಸ್ತಿಯಾಗದಿರುವ ಬಗ್ಗೆ ನಾಗರಿ ಕರು ದೂರು ನೀಡಿದ್ದರು. ಇದಕ್ಕೆ ಸ್ಪಂದಿ ಸಿದ ಶಾಸಕರು, 50 ಲಕ್ಷ ರೂ. ವೆಚ್ಚದಲ್ಲಿ ಆಯ್ದ ರಸ್ತೆಗಳ ಡಾಂಬರೀಕರಣ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. 20ನೇ ವಾರ್ಡ್ನಲ್ಲಿ ವಿಜಯನಗರದ…










