ಮೈಸೂರು: ಮೈಸೂ ರಿನ ಜೆಎಲ್ಬಿ ರಸೆಯಲ್ಲಿರುವ ಶಿವಾನಂದ ಜ್ಞಾನಾಲಯದಲ್ಲಿ ತಿರುಪತಿ ತಿರುಮಲ ದೇವ ಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್ ಹಾಗೂ ಶ್ರೀ ದುರ್ಗಾ ನೃತ್ಯ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಶ್ರೀ ಪುರಂದರ ನಮನ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದಾಸ ಸಾಹಿತ್ಯ ಪ್ರಾಜೆಕ್ಟ್ ವ್ಯವಸ್ಥಾಪಕಿ ಆರ್. ಶಾಂತಿ ಸರ್ವೋತ್ತಮನ್ ಮಾತನಾಡಿ, ಪುರಂದರ ದಾಸರು 75 ಸಾವಿರ ಹಾಡುಗಳನ್ನು ರಚಿ ಸಿದ್ದು, ಸುಮಾರು 2 ಸಾವಿರ ಹಾಡುಗಳು ನಮಗೆ ದೊರೆತಿವೆ. ಪುರಂದರ ದಾಸರು ದಾಸ ಸಾಹಿತ್ಯಕ್ಕೆ ಅಪಾರ…
ಹುತಾತ್ಮ ಯೋಧರಿಗೆ ಅವಮಾನ: ಮೈಸೂರಲ್ಲಿ ತ್ರಿಪುರ ಪೊಲೀಸರಿಂದ ಯುವಕ ಸೆರೆ
February 25, 2019ಮೈಸೂರು: ಪುಲ್ವಾಮ ದಾಳಿಯ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದ ಯುವಕ ನನ್ನು ತ್ರಿಪುರ ಪೊಲೀಸರು ಮೈಸೂರಲ್ಲಿ ಬಂಧಿಸಿದ್ದಾರೆ. ಮಂಡಿ ಠಾಣಾ ವ್ಯಾಪ್ತಿಯ ಮೊಘಲ್ ದರ್ಬಾರ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಪ್ರಮೇಶ್ ಡೆಬ್ಬಾರ್ಮ(24) ಪುಲ್ವಾಮ ದಾಳಿಯ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತ್ರಿಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆತನ ಬಗ್ಗೆ ನಿಖರ ಮಾಹಿತಿಯನ್ನು ಪಡೆದ ತ್ರಿಪುರ ಪೊಲೀಸರು, ಮೈಸೂರಿಗೆ ಆಗಮಿಸಿ ಮಂಡಿ ಠಾಣೆ ಇನ್ಸ್ಪೆಕ್ಟರ್ ಅರುಣ್ ಅವರ…
ಇಂದು ರಾಷ್ಟ್ರೀಯ ಯುದ್ಧ ಸ್ಮಾರಕ ದೇಶಕ್ಕೆ ಸಮರ್ಪಣೆ
February 25, 2019ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಹಾಗೂ ಅಮರ್ ಜವಾನ್ ಜ್ಯೋತಿ ಸಮೀಪ ರಾಷ್ಟ್ರೀಯ ಯುದ್ಧ ಸ್ಮಾರಕ ನಿರ್ಮಾಣ ಆಗಿದೆ. ನಾಳೆ (ಫೆ.25) ಅದನ್ನು ದೇಶಕ್ಕೆ ಸಮರ್ಪಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ತಮ್ಮ 53ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ ದ್ದಾರೆ. ಇದು ಈ ವರ್ಷ ಪ್ರಧಾನಿ ಮೋದಿಯವರ 2ನೇ ಮನ್ ಕಿ ಬಾತ್ ಕಾರ್ಯಕ್ರಮವಾಗಿದೆ. ಅಲ್ಲದೆ ದೇಶವನ್ನು ಬೆಚ್ಚಿ ಬೀಳಿಸಿದ್ದ ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ಇದು ಮೋದಿಯವರ ಮೊದಲ…
ಇಂದು ಶಾರದಾ ಫೆಸ್ಟ್-2019
February 25, 2019ಮೈಸೂರು: ಮೈಸೂರಿನ ಶಾರದಾ ವಿಲಾಸ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಮತ್ತು ಸ್ನಾತಕೋತ್ತರ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆ.25ರಂದು ಕಾಲೇಜು ಆವರಣದಲ್ಲಿ ಶಾರದಾ ಫೆಸ್ಟ್-2019, ಅಂತರ ಕಾಲೇಜು ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ ಅನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಮೈಸೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎನ್.ನಾಗರಾಜ ಉದ್ಘಾಟಿಸುವರು. ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಡೀನ್ ಪ್ರೊ. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಗೌರವ ಅತಿಥಿಗಳಾಗಿ ಶಾರದಾ ವಿಲಾಸ…
ಮನಸ್ಸೇ ಗುರಿ ಸಾಧನೆಗೆ ಮಾರ್ಗದರ್ಶಕ: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಬಂತೇಜಿ ಹಿತನುಡಿ
February 24, 2019ನಂಜನಗೂಡು: ಏಕಾಗ್ರತೆ ಯೊಂದಿಗೆ ಪರಿಶ್ರಮದಿಂದ ಅಧ್ಯಯನ ನಡೆಸಿದರೆ ಮೂಲಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಕೊಳ್ಳಬಹುದು ಎಂದು ಕೊಳ್ಳೇಗಾಲ ಚೇತವನದ ಮನೋರಖ್ಖಿತ ಬಂತೇಜಿ ಹೇಳಿದರು. ಅವರು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಶನಿ ವಾರ ಆಯೋಜಿಸಿದ್ದ ಪರೀಕ್ಷಾಪೂರ್ವ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ ಮಾನವ ಅಭಿವೃದ್ಧಿ ಹಾಗೂ ದೇಶದ ಪ್ರಗತಿ ಸಾಧಿಸಲು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಡಾ.ಬಬಾಸಾಹೇಬ್…
ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ
February 24, 2019ಮೂಗೂರು: ಬಾಲ್ಯ ಜೀವನದಿಂದಲೂ ತ್ಯಾಗದ ಮೂರ್ತಿ ಗಳಾಗಿ ಹೊರಹೊಮ್ಮಿದ ಸಿದ್ಧಗಂಗಾ ಶ್ರೀ ಗಳು ವಿಶ್ವಕ್ಕೆ ಶ್ರೇಷ್ಠರು ಎಂದು ತಾ.ಪಂ. ಸದಸ್ಯ ಎಂ.ಪಿ.ಚಂದ್ರಶೇಖರ್ ಹೇಳಿದರು. ಗ್ರಾಮದ ಬಂಡಿ ಬೀದಿಯ ಬಂಡಿ ಮಂಟಪದ ಆವರಣದಲ್ಲಿ ನಡೆದ ಸಿದ್ಧ ಗಂಗಾ ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಶ್ರೀಗಳು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಕನ್ನಡ ಚಳವಳಿಗಾರ ಮೂಗೂರು ನಂಜುಂಡಸ್ವಾಮಿ, ವಾಟಾಳ್ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯಸ್ವಾಮೀಜಿ ಅವರು ಶ್ರೀಗಳು ನಡೆದು ಬಂದ ದಾರಿ, ಶಿಕ್ಷಣ ಕ್ಷೇತ್ರಕ್ಕೆ ಅವರು…
ಏರ್ ಶೋ ವೇಳೆ ಯಲಹಂಕ ವಾಯು ನೆಲೆಯಲ್ಲಿ ಅಗ್ನಿ ದುರಂತ
February 24, 2019ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ ಸಮೀಪ ಭಾರೀ ಬೆಂಕಿ ಅವಘಡ ಸಂಭವಿಸಿ, ನೂರಾರು ಕೋಟಿ ರೂ. ಮೌಲ್ಯದ ಕಾರು ಮತ್ತು ದ್ವಿಚಕ್ರ ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ. ಗೇಟ್ ನಂಬರ್ 5ರ ಬಳಿ ಶನಿವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ಅನಾ ಹುತ ಸಂಭವಿಸುತ್ತಿ ದ್ದಂತೆ ಬೆಂಗಳೂರು ನಗರದ ವಿವಿಧೆಡೆ ಹಾಗೂ ಸಮೀಪದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದ 25ಕ್ಕೂ ಹೆಚ್ಚು…
ಕಿಡಿಗೇಡಿಗಳ ಕಿಚ್ಚಿಗೆ ನಲುಗಿದ ಬಂಡೀಪುರ ಅರಣ್ಯ
February 24, 2019ಬಂಡೀಪುರ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ದಿನಗಳಿಂದ ಉಂಟಾದ ಕಾಡ್ಗಿಚ್ಚು ತೀವ್ರ ಸ್ವರೂಪ ಪಡೆದಿದ್ದು, ಶನಿವಾರ ಬೆಳಿಗ್ಗೆ ಕಿಡಿಗೇಡಿಗಳು ಇಟ್ಟ ಕಿಚ್ಚಿನ ಕಿಡಿಗೆ ಅಪಾರ ಪ್ರಮಾಣದ ಅರಣ್ಯ ಸಂಪತ್ತು ಭಸ್ಮವಾಗಿ ಆತಂಕದ ವಾತಾವರಣ ಸೃಷ್ಟಿಸಿದೆ. ಗುರುವಾರ ಮತ್ತು ಶುಕ್ರವಾರ ಬಂಡೀಪುರ ಕುಂದಕೆರೆ ವಲಯದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಸುಮಾರು 1 ಸಾವಿರ ಎಕರೆ ಭೂಮಿ ಅರಣ್ಯವನ್ನು ಆಹುತಿ ಪಡೆದಿತ್ತು. ಅರಣ್ಯ ಸಿಬ್ಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಕಿ ಹತೋಟಿಗೆ ಬಂದಿತ್ತು. ಆದರೆ ಶನಿವಾರ ಬೆಳಿಗ್ಗೆ ಗೋಪಾಲಸ್ವಾಮಿ ಬೆಟ್ಟದ ವಲಯಕ್ಕೆ…
ಕೆಎಸ್ಆರ್ಟಿಸಿಯಲ್ಲಿ ಕೋಟ್ಯಾಂತರ ಅವ್ಯವಹಾರ
February 24, 2019ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ನಡೆದಿರುವ ಅವ್ಯವ ಹಾರ-ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸ ಲಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮಗಳಲ್ಲಿ ಬಿಡಿ ಭಾಗಗಳು, ರೆಕ್ಸಿನ್, ಕಂಪ್ಯೂಟರ್ ಹಾಗೂ ಸರ್ವರ್ ಗಳ ಖರೀದಿಯಲ್ಲಿ ಅವ್ಯವಹಾರ ಆಗಿರು ವುದು, ಅಗತ್ಯಕ್ಕಿಂತ ಹೆಚ್ಚು ಖರೀದಿಸಿರು ವುದು, ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ನೀಡಿರುವುದು ಪತ್ತೆಯಾಗಿದೆ. ಹೀಗಾಗಿ ಎಲ್ಲದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು. ಸಾರಿಗೆ ನಿಗಮಗಳು ಕಳೆದ ಮೂರು…
ಜೆಡಿಎಸ್ನ ಪರಿಮಳಾ ಅಧ್ಯಕ್ಷೆ ಕಾಂಗ್ರೆಸ್ನ ಗೌರಮ್ಮ ಉಪಾಧ್ಯಕ್ಷೆ
February 24, 2019ಮೈಸೂರು: ತೀವ್ರ ಕುತೂ ಹಲ ಕೆರಳಿಸಿದ್ದ ಮೈಸೂರು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಅಂತಿಮವಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಏರ್ಪಟ್ಟು, ಬಿಜೆಪಿಗೆ ಭಾರೀ ಆಘಾತ ಉಂಟಾಗಿದೆ. ಜೆಡಿಎಸ್ನ ಬಿ.ಪಿ.ಪರಿ ಮಳಾ ಶ್ಯಾಂ (ಅಧ್ಯಕ್ಷೆ) ಹಾಗೂ ಕಾಂಗ್ರೆಸ್ನ ಎಂ.ವಿ. ಗೌರಮ್ಮ ಸೋಮಶೇಖರ್ (ಉಪಾಧ್ಯಕ್ಷೆ) ಅವಿರೋಧವಾಗಿ ಆಯ್ಕೆಯಾದರು. ಬೆಳಿಗ್ಗೆ 8 ಗಂಟೆಯಿಂದ 10ರವರೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನ ಬಿ.ಪಿ.ಪರಿಮಳಾ ಶ್ಯಾಂ (ಅಂತರ ಸಂತೆ ಕ್ಷೇತ್ರ), ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಎಂ.ವಿ.ಗೌರಮ್ಮ ಸೋಮಶೇಖರ್ (ಬಿಳಿಕೆರೆ ಕ್ಷೇತ್ರ) ಮತ್ತು ಬಿಜೆಪಿಯ…