ಮೈಸೂರು: ಜಿಲ್ಲೆ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆಗಾಗಿ ಹೆಲ್ಮೆಟ್, ಕೈ ಗಳಿಗೆ ಗ್ಲೌಸ್ ಮತ್ತು ಶೂ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಧಿಕಾರಿಗಳು ಮಾಡ ಬೇಕು ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್.ಮುರು ಗನ್ ಇಂದಿಲ್ಲಿ ತಾಕೀತು ಮಾಡಿದರು. ಮೈಸೂರು ಜಿಲ್ಲಾ ಪಂಚಾಯತಿ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಗುರುವಾರ ಮೈಸೂರು ವಿಭಾಗ ಮಟ್ಟದ ಉನ್ನತಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಾತಿ ನಿಂದನೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಹಾಗೂ ಆಯ…
ಅರಮನೆ ಪಂಚಗವಿ ಮಠ ಉಳಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
February 22, 2019ಮೈಸೂರು: ಅರಮನೆ ಪಂಚಗವಿ ಮಠ ಉಳಿಸಲು ಆಗ್ರಹಿಸಿ ಕರ್ನಾ ಟಕ ರಕ್ಷಣಾ ವೇದಿಕೆ ಆಶ್ರಯದಲ್ಲಿ ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ರಸ್ತೆಯ ಗೌರಿಶಂಕರ ಬಡಾ ವಣೆಯಲ್ಲಿರುವ ನೂರಾರು ಕೋಟಿ ರೂ. ಬೆಲೆ ಬಾಳುವ ಜಮೀನನ್ನು ಕೆಲವರು 5 ರೂ. ಛಾಪಾ ಕಾಗದದಲ್ಲಿ ಹಳೆಯ ದಿನಾಂಕ ನಮೂದಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಮಹಾರಾಜರು ಸರ್ವೆ ನಂ. 160, 161, 162, 163 ಸರ್ಕಾರದ ಆಸ್ತಿಯನ್ನು ಮಠಕ್ಕೆ ದಾನವಾಗಿ ನೀಡಿದ್ದರು….
ಕೆಲವು ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಳ
February 22, 2019ಮೈಸೂರು: ಕೆಲವು ಜಿಲ್ಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿದ್ದು, ್ಲ ಇದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಉಪಾಧ್ಯಕ್ಷ ಎಲ್.ಮುರುಗನ್ ತಿಳಿಸಿದರು. ಮೈಸೂರು ಜಿಪಂ ಸಭಾಂ ಗಣದಲ್ಲಿ ಗುರುವಾರ ಮೈಸೂರು, ಮಂಡ್ಯ, ಕೊಡಗು, ಚಾಮರಾಜ ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವು ದಾಗಿ ತಿಳಿಸಿದರು. ಮೈಸೂರು, ಚಾಮರಾಜನಗರ, ಮಂಡ್ಯ,…
ಬೆಂಗಳೂರಲ್ಲಿ ಲೋಹದ ಹಕ್ಕಿಗಳ ಹಾರಾಟ `ಏರ್ ಶೋ’ಗೆ ಚಾಲನೆ!
February 21, 2019ಬೆಂಗಳೂರು: ಸೂರ್ಯಕಿರಣ್ ಆಗಸದಿಂದ ಧರೆಗುರುಳಿದ ಕಹಿ ನೆನಪಿನ ನಡುವೆ ಇಂದು ಏರ್ ಶೋ-2019ಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಯಲಹಂಕ ವಾಯು ನೆಲೆಯಲ್ಲಿ ದೇಶ-ವಿದೇಶದ ಯುದ್ಧ ವಿಮಾನಗಳ ಸಾಹಸದ ನಡುವೆಯೇ ನಭೋ ಮಂಡಲದಲ್ಲಿ ತ್ರಿವರ್ಣ ಧ್ವಜದ ಚಿತ್ತಾರ ಮೂಡಿಸುತ್ತಿದ್ದ ಸೂರ್ಯ ಕಿರಣ್ ಇಲ್ಲದೆಯೇ ಈ ಬಾರಿಯ ಏರ್ ಶೋ ಆರಂಭಗೊಂಡಿದೆ. ಆಗಸದಲ್ಲಿ ಯುದ್ಧ ವಿಮಾನಗಳ ಘರ್ಜನೆ ಕಿವಿಗಡಚಿಕ್ಕುವಂತಿತ್ತು. ಗ್ಲೋಬ್ ಮಾಸ್ಟರ್ ದೈತ್ಯ ವಿಮಾನ, ಎಚ್ಎಎಲ್ನ ಅತ್ಯಂತ ಪುಟ್ಟ ವಿಮಾನಗಳು ಸ್ವೀಡನ್ ಗ್ರೈಪೇನ್ ಯುದ್ಧ ವಿಮಾನಗಳು ವಿವಿಧ ಸಾಹಸ ಪ್ರದರ್ಶನಗಳ…
60 ದಿನದಲ್ಲೇ ಭೂಪರಿವರ್ತನೆ
February 21, 2019ಮನೆಯಲ್ಲೇ ಕುಳಿತು ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಿದರೆ ಸಾಕು 200 ರೂ. ಅಫಿಡವಿಟ್, ಮ್ಯುಟೇಶನ್, ಹಲವು ಮಾಲೀಕರಿದ್ದರೆ 11-ಇ ಆನ್ಲೈನ್ನಲ್ಲಿ ಸಲ್ಲಿಸಿದರೆ ಮುಗಿಯಿತು; ಅಲೆಯಬೇಕಾದ ಅಗತ್ಯವಿಲ್ಲ 60 ದಿನದಲ್ಲಿ ಮನೆ ಬಾಗಿಲಿಗೆ ಆದೇಶ ಬರದಿದ್ದರೂ ಪರಿವರ್ತನೆ ಆಗಿದೆ ಎಂದೇ ಮುಂದಿನ ಪ್ರಕ್ರಿಯೆ ಆರಂಭಿಸಬಹುದು ಬೆಂಗಳೂರು: ಕೃಷಿ ಭೂಮಿ ಯನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿ ಸಲು ಇನ್ನು ಮುಂದೆ ಅಧಿಕಾರಿಗಳಿಗೆ ಲಂಚ ನೀಡುವ ಅಗತ್ಯವಿಲ್ಲ. ಮನೆಯಲ್ಲೇ ಕುಳಿತು ಸರ್ಕಾರ ಕೇಳಿದ ಸೂಕ್ತ ದಾಖಲೆಗಳನ್ನು ಆನ್ಲೈನ್ ಮೂಲಕ ಸಂಬಂಧಪಟ್ಟ ಇಲಾಖೆಗೆ…
ಬತ್ತಿದ ಕಾರಂಜಿಕೆರೆಗೆ ಶುದ್ಧೀಕರಿಸಿದ ಒಳಚರಂಡಿ ನೀರು
February 21, 2019ಮೈಸೂರು: ಮೈಸೂರಿನ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕಾರಂಜಿಕೆರೆ ಮಳೆ ಕೊರತೆ ಹಾಗೂ ಬೇಸಿಗೆಯಿಂದ ಬತ್ತಿ ಹೋಗುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಮುಂದಾಗಿರುವ ಮೃಗಾಲಯ ಪ್ರಾಧಿಕಾರ, ವಿದ್ಯಾರಣ್ಯ ಪುರಂನಲ್ಲಿರುವ ಒಳಚರಂಡಿ ನೀರು ಶುದ್ಧೀಕರಣ ಘಟಕದಿಂದ ಶುದ್ಧೀಕರಿಸಿದ ನೀರನ್ನು ಕೆರೆಗೆ ತುಂಬಿ ಸುವ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಕಳೆದ ಸಾಲಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ ಕಾರಂಜಿಕೆರೆಯಲ್ಲಿ ಕಡಿಮೆ ನೀರು ಸಂಗ್ರಹ ವಾಗಿತ್ತು. ಬಿಸಿಲ ಬೇಗೆ ಹೆಚ್ಚಾಗಿರುವುದರಿಂದ ಜನವರಿ ಯಿಂದಲೇ ಕಾರಂಜಿಕೆರೆಯಲ್ಲಿ ನೀರಿನ ಪ್ರಮಾಣ ಕುಸಿಯಲಾರಂಭಿಸಿತ್ತು. ಕೆರೆಯಲ್ಲಿ…
ಶಾಸಕ ಆನಂದ ಸಿಂಗ್ ಹಲ್ಲೆ ಆರೋಪಿ ಕಂಪ್ಲಿ ಶಾಸಕ ಗಣೇಶ್ ಬಂಧನ
February 21, 2019ಬೆಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಕೊನೆಗೂ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಿಜೆಪಿ ಆಡಳಿತವಿರುವ ಮಹಾ ರಾಷ್ಟ್ರ, ಗುಜರಾತ್ ರಾಜ್ಯಗಳಲ್ಲೇ ತಲೆ ಮರೆಸಿಕೊಂಡಿದ್ದ ಗಣೇಶ್ ಅವರನ್ನು ನಿನ್ನೆ ಬಿಡದಿ ಪೊಲೀಸರು ಅಹಮದಾ ಬಾದ್ ಹೊರವಲಯದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬಹುತೇಕ ಬುಧ ವಾರ ತಡರಾತ್ರಿ ಇಲ್ಲ ಗುರುವಾರ ಮುಂಜಾನೆ ವಿಶೇಷ ವಿಮಾನದಲ್ಲಿ ನಗರಕ್ಕೆ ಕರೆತರುತ್ತಿದ್ದು, ನಾಳೆ ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಿ, ನಂತರ ತಮ್ಮ…
ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ ಮುಂದಿನ ವರ್ಷ ನೀರು : ಜಿಟಿಡಿ ಭರವಸೆ
February 21, 2019ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕೆರೆಕಟ್ಟೆಗಳಿಗೆ ಕೆಆರ್ಎಸ್ ಜಲಾಶಯದಿಂದ ನೀರು ಹರಿಸುವ ಉದ್ದೇಶಿತ ಯೋಜನೆ ಮುಂದಿನ ವರ್ಷ ಈಡೇರುವ ಮೂಲಕ ಕ್ಷೇತ್ರದ ಗ್ರಾಮಗಳ ನೀರಿನ ಸಮಸ್ಯೆ ಪರಿಹಾರವಾಗ ಲಿದೆ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಲು ವಾಗಿ ಬುಧವಾರ ಪ್ರವಾಸ ಕೈಗೊಂಡಿದ್ದ ಅವರು, ನಾಗವಾಲದಲ್ಲಿ ಪ್ರವಾಸೋದ್ಯಮ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಕೈಗೆತ್ತಿಕೊಳ್ಳುತ್ತಿರುವ ಶ್ರೀ…
ಜಿಲ್ಲಾಧಿಕಾರಿಗಳಿಂದ ಚುನಾವಣಾ ನೀತಿ ಸಂಹಿತೆ ತರಬೇತಿ ಸಭೆ
February 21, 2019ಮೈಸೂರು: ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ನೀತಿ ಸಂಹಿತೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ತಡವಾಗಿ ಬಂದ ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರು ಹೊರಗಿರಿ ಸಿದ ಪ್ರಸಂಗ ನಡೆಯಿತು. ಬೆಳಿಗ್ಗೆ 11 ಗಂಟೆಗೆ ಕಾರ್ಯಾಗಾರ ಆರಂಭವಾಯಿತಾದರೂ, ಜಿಲ್ಲಾಧಿಕಾರಿ ಗಳು ಭಾರತ ಚುನಾವಣಾ ಆಯೋಗ ದಿಂದ ಆಗಿಂದಾಗ್ಗೆ ಬರುತ್ತಿರುವ ಮಾರ್ಗ ಸೂಚಿ ಹಾಗೂ ನೀತಿ ಸಂಹಿತೆ ಬಗ್ಗೆ ನೋಡಲ್ ಅಧಿಕಾರಿಗಳಿಗೆ ವಿವರಿಸಿದರು. ನೋಡಲ್ ಅಧಿಕಾರಿಗಳು ಲೋಕ ಸಭಾ ಚುನಾವಣೆ ಕರ್ತವ್ಯ…
ಕಬಿನಿ, ಕಾವೇರಿ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ
February 21, 2019ಮೈಸೂರು: ಕೃಷಿ ಚಟುವಟಿಕೆ ನಡೆಸಲು ಕಬಿನಿ, ಕಾವೇರಿ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ರೈತ ಸಮುದಾಯ ಹಲವು ಸಮಸ್ಯೆ ಗಳಿಗೆ ತುತ್ತಾಗಿದೆ. ಬೆಳೆ ನಷ್ಟ, ಬೆಂಬಲ ಬೆಲೆ ಸಿಗದೇ ಇರುವುದು ಸೇರಿದಂತೆ ಹಲವು ಸಮಸ್ಯೆ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ನಾಲೆ ಗಳಿಗೆ ಕೂಡಲೇ ನೀರು ಬಿಡಬೇಕು. ಆ ಮೂಲಕ ರೈತರು ಹಾಗೂ ಜಾನುವಾರು ಗಳಿಗೆ ನೆರವಾಗಬೇಕೆಂದು…